Homeಅಂತರಾಷ್ಟ್ರೀಯರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಕೆನಡಾ ಪ್ರಧಾನಿ: ಅನಪೇಕ್ಷಿತ, ಅನಗತ್ಯ ಎಂದ ಭಾರತ ಸರ್ಕಾರ!

ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಕೆನಡಾ ಪ್ರಧಾನಿ: ಅನಪೇಕ್ಷಿತ, ಅನಗತ್ಯ ಎಂದ ಭಾರತ ಸರ್ಕಾರ!

ಭಾರತದ ರೈತರ ಬಗೆಗೆನ ಕೆನಡಾದ ನಾಯಕರ ಅನಪೇಕ್ಷಿತ ಪ್ರತಿಕ್ರಿಯೆಗಳು ಗಮನಕ್ಕೆ ಬಂದಿವೆ. ವಿಶೇಷವಾಗಿ ಪ್ರಜಾಪ್ರಭುತ್ವ ದೇಶದ ಆಂತರಿಕ ವ್ಯವಹಾರಗಳಿಗೆ ಸಂಬಂಧಿಸಿದಂತೆ ಇವು ಅನಗತ್ಯ.

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಒಂದು ವಾರದಿಂದ ದೆಹಲಿಯಲ್ಲಿ ದೇಶದ ರೈತರ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ದಬ್ಬಾಳಿಕೆಯಿಂದ ರೈತ ಹೋರಾಟ ದಮನ ಮಾಡಲು ಪ್ರಯತ್ನಿಸಿ ವಿಫಲವಾಗಿದೆ. ಈಗ ರೈತರ ಹೋರಾಟದಕ್ಕೆ ದೇಶ-ವಿದೇಶಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಅದೇ ರೀತಿಯಲ್ಲಿ ಸರ್ಕಾರದ ರೈತರೊಂದಿಗಿನ ವರ್ತನೆ ತೀವ್ರ ಖಂಡನೆ ವ್ಯಕ್ತವಾಗಿದೆ. ಇದೇ ಸಂದರ್ಭದಲ್ಲಿ ಭಾರತೀಯ ರೈತರ ಹೋರಾಟಕ್ಕೆ ಬಹಿರಂಗ ಬೆಂಬಲ ವ್ಯಕ್ತಪಡಿಸಿದ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ವಿರುದ್ಧ ಭಾರತದ ವಿದೇಶಾಂಗ ಸಚಿವಾಲಯ ಕಿಡಿಕಾರಿದೆ.

“ರೈತರ ಪ್ರತಿಭಟನೆಯ ಕುರಿತು ಭಾರತದಿಂದ ಬರುತ್ತಿರುವ ಸುದ್ದಿಗಳನ್ನು ನಮ್ಮನ್ನು ಆತಂಕಕ್ಕೀಡುಮಾಡಿವೆ. ಅಲ್ಲಿನ ಪರಿಸ್ಥಿತಿಯಿಂದ ನಾವೆಲ್ಲರೂ ಕುಟುಂಬ ಮತ್ತು ಸ್ನೇಹಿತರ ಬಗ್ಗೆ ಚಿಂತಿತರಾಗಿದ್ದೇವೆ. ನಿಮ್ಮಲ್ಲಿ ಅನೇಕರಿಗೆ ಇದು ನಿಜವೆಂದು ತಿಳಿದಿದೆ. ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ಕೆನಡಾ ಯಾವಾಗಲೂ ಬೆಂಬಲಿಸುತ್ತದೆ ಎಂದು ಹೇಳು ಇಚ್ಛಿಸುತ್ತೇನೆ. ಸಂವಾದದಲ್ಲಿ ನಂಬಿಕೆಯುಳ್ಳವರು ನಾವು. ರೈತರ ಬಗೆಗಿನ ನಮ್ಮ ಕಾಳಜಿಯನ್ನು ನೇರವಾಗಿ ಎಲ್ಲಾ ಮಾರ್ಗಗಳಲ್ಲಿ ಭಾರತದ ಸರ್ಕಾರದ ಗಮನಕ್ಕೆ ತರುತ್ತೇವೆ. ಇದು ನಾವೆಲ್ಲರೂ ರೈತರೊಂದಿಗೆ ನಿಲ್ಲುವ ಸಮಯ” ಎಂದು ಗುರುನಾನಕ್ ಜಯಂತಿಯಂದು ಬಿಡುಗಡೆಗೊಳಿಸಿದ ವಿಡಿಯೋದಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಮಾತಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ವಿದೇಶಾಂಗ ಇಲಾಖೆಯು “ಭಾರತದ ರೈತರ ಬಗೆಗೆನ ಕೆನಡಾದ ನಾಯಕರ ಅನಪೇಕ್ಷಿತ ಪ್ರತಿಕ್ರಿಯೆಗಳು ಗಮನಕ್ಕೆ ಬಂದಿವೆ. ವಿಶೇಷವಾಗಿ ಪ್ರಜಾಪ್ರಭುತ್ವ ದೇಶದ ಆಂತರಿಕ ವ್ಯವಹಾರಗಳಿಗೆ ಸಂಬಂಧಿಸಿದಂತೆ ಇವು ಅನಗತ್ಯ. ರಾಜಕೀಯ ಉದ್ದೇಶಗಳಿಗಾಗಿ ರಾಜತಾಂತ್ರಿಕ ಸಂಭಾಷಣೆಗಳನ್ನು ತಪ್ಪಾಗಿ ನಿರೂಪಿಸದಿರುವುದು ಉತ್ತಮ”ಎಂದು ವಿದೇಶಾಂಗ ಸಚಿವಾಲಯ ಬುಲೆಟಿನ್‌‌ನಲ್ಲಿ ತಿಳಿಸಲಾಗಿದೆ.

ಶಿವಸೇನೆ ನಾಯಕಿ ಪ್ರಿಯಾಂಕ ಚರ್ತುವೇದಿ ಸಹ ಕೆನಡಾ ಪ್ರಧಾನಿ ಮಾತುಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ನಿಮ್ಮ ಕಾಳಜಿಗೆ ಧನ್ಯವಾದಗಳು. ಆದರೆ ಇದು ಭಾರತದ ಆಂತರೀಕ ವಿಷಯ. ದಯವಿಟ್ಟು ರಾಜಕೀಯ ಮಾಡಬೇಡಿ. ಅಲ್ಲದೇ ಪ್ರಧಾನಿ ಮೋದಿಯವರು ಬೇರೆ ದೇಶಗಳು ಸಹ ಇದಕ್ಕೆ ಪ್ರತಿಕ್ರಿಯೆ ನೀಡುವ ಮೊದಲು ರೈತರ ಸಮಸ್ಯೆಗಳನ್ನು ಬಗೆಹರಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ. ಬಹಳಷ್ಟು ಜನ ಭಾರತದ ಆಂತರೀಕ ವಿಷಯಗಳಲ್ಲಿ ಕೆನಡಾದ ಪ್ರಧಾನಿ ಮಧ್ಯಪ್ರವೇಶಿಸಬಾರದು ಎಂದು ತಾಕೀತು ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಕನ್ನಡದ ಚಿಂತಕ ಪುರುಷೋತ್ತಮ ಬಿಳಿಮಲೆಯವರು “ಮಾನ್ಯ ಪ್ರಧಾನಿಗಳು ಅಮೇರಿಕಾಕ್ಕೆ ಹೋಗಿ ʼಅಬ್ಕಿ ಬಾರ್‌ ಟ್ರಂಪ್‌ ಸರ್ಕಾರ್‌ʼ ಎಂದು ಘೋಷಿಸುವಾಗ ಮಾಧ್ಯಮಗಳಲ್ಲಿದ್ದ ಹಲವರ ಕಿವಿಗೆ ಅದು ಬೀಳಲೇ ಇಲ್ಲ. ಈಗ ಕೆನಡಾದ ಪ್ರಧಾನ ಮಂತ್ರಿಗಳು ಭಾರತದ ರೈತರ ಪರ ಮಾತನ್ನಾಡಿದಾಗ ಮಾಧ್ಯಮದವರಿಗೆ ಅದು ‘ದೇಶದ ಆಂತರಿಕ ವಿಷಯದಲ್ಲಿ ಕೈ ಹಾಕಿದ ಹಾಗೆʼ ಭಾಸವಾಗಿದೆ. ಬೆತ್ತಲಾದದ್ದು ಪತ್ರಕರ್ತರೇ ವಿನಾ ಬೇರಾರೂ ಅಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ರೈತರ ಪ್ರತಿಭಟನೆಗೆ ಹರಿದು ಬಂತು ವಿದೇಶಿ ರಾಜಕೀಯ ನಾಯಕರ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...