Homeಅಂತರಾಷ್ಟ್ರೀಯರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಕೆನಡಾ ಪ್ರಧಾನಿ: ಅನಪೇಕ್ಷಿತ, ಅನಗತ್ಯ ಎಂದ ಭಾರತ ಸರ್ಕಾರ!

ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಕೆನಡಾ ಪ್ರಧಾನಿ: ಅನಪೇಕ್ಷಿತ, ಅನಗತ್ಯ ಎಂದ ಭಾರತ ಸರ್ಕಾರ!

ಭಾರತದ ರೈತರ ಬಗೆಗೆನ ಕೆನಡಾದ ನಾಯಕರ ಅನಪೇಕ್ಷಿತ ಪ್ರತಿಕ್ರಿಯೆಗಳು ಗಮನಕ್ಕೆ ಬಂದಿವೆ. ವಿಶೇಷವಾಗಿ ಪ್ರಜಾಪ್ರಭುತ್ವ ದೇಶದ ಆಂತರಿಕ ವ್ಯವಹಾರಗಳಿಗೆ ಸಂಬಂಧಿಸಿದಂತೆ ಇವು ಅನಗತ್ಯ.

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಒಂದು ವಾರದಿಂದ ದೆಹಲಿಯಲ್ಲಿ ದೇಶದ ರೈತರ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ದಬ್ಬಾಳಿಕೆಯಿಂದ ರೈತ ಹೋರಾಟ ದಮನ ಮಾಡಲು ಪ್ರಯತ್ನಿಸಿ ವಿಫಲವಾಗಿದೆ. ಈಗ ರೈತರ ಹೋರಾಟದಕ್ಕೆ ದೇಶ-ವಿದೇಶಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಅದೇ ರೀತಿಯಲ್ಲಿ ಸರ್ಕಾರದ ರೈತರೊಂದಿಗಿನ ವರ್ತನೆ ತೀವ್ರ ಖಂಡನೆ ವ್ಯಕ್ತವಾಗಿದೆ. ಇದೇ ಸಂದರ್ಭದಲ್ಲಿ ಭಾರತೀಯ ರೈತರ ಹೋರಾಟಕ್ಕೆ ಬಹಿರಂಗ ಬೆಂಬಲ ವ್ಯಕ್ತಪಡಿಸಿದ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ವಿರುದ್ಧ ಭಾರತದ ವಿದೇಶಾಂಗ ಸಚಿವಾಲಯ ಕಿಡಿಕಾರಿದೆ.

“ರೈತರ ಪ್ರತಿಭಟನೆಯ ಕುರಿತು ಭಾರತದಿಂದ ಬರುತ್ತಿರುವ ಸುದ್ದಿಗಳನ್ನು ನಮ್ಮನ್ನು ಆತಂಕಕ್ಕೀಡುಮಾಡಿವೆ. ಅಲ್ಲಿನ ಪರಿಸ್ಥಿತಿಯಿಂದ ನಾವೆಲ್ಲರೂ ಕುಟುಂಬ ಮತ್ತು ಸ್ನೇಹಿತರ ಬಗ್ಗೆ ಚಿಂತಿತರಾಗಿದ್ದೇವೆ. ನಿಮ್ಮಲ್ಲಿ ಅನೇಕರಿಗೆ ಇದು ನಿಜವೆಂದು ತಿಳಿದಿದೆ. ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ಕೆನಡಾ ಯಾವಾಗಲೂ ಬೆಂಬಲಿಸುತ್ತದೆ ಎಂದು ಹೇಳು ಇಚ್ಛಿಸುತ್ತೇನೆ. ಸಂವಾದದಲ್ಲಿ ನಂಬಿಕೆಯುಳ್ಳವರು ನಾವು. ರೈತರ ಬಗೆಗಿನ ನಮ್ಮ ಕಾಳಜಿಯನ್ನು ನೇರವಾಗಿ ಎಲ್ಲಾ ಮಾರ್ಗಗಳಲ್ಲಿ ಭಾರತದ ಸರ್ಕಾರದ ಗಮನಕ್ಕೆ ತರುತ್ತೇವೆ. ಇದು ನಾವೆಲ್ಲರೂ ರೈತರೊಂದಿಗೆ ನಿಲ್ಲುವ ಸಮಯ” ಎಂದು ಗುರುನಾನಕ್ ಜಯಂತಿಯಂದು ಬಿಡುಗಡೆಗೊಳಿಸಿದ ವಿಡಿಯೋದಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಮಾತಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ವಿದೇಶಾಂಗ ಇಲಾಖೆಯು “ಭಾರತದ ರೈತರ ಬಗೆಗೆನ ಕೆನಡಾದ ನಾಯಕರ ಅನಪೇಕ್ಷಿತ ಪ್ರತಿಕ್ರಿಯೆಗಳು ಗಮನಕ್ಕೆ ಬಂದಿವೆ. ವಿಶೇಷವಾಗಿ ಪ್ರಜಾಪ್ರಭುತ್ವ ದೇಶದ ಆಂತರಿಕ ವ್ಯವಹಾರಗಳಿಗೆ ಸಂಬಂಧಿಸಿದಂತೆ ಇವು ಅನಗತ್ಯ. ರಾಜಕೀಯ ಉದ್ದೇಶಗಳಿಗಾಗಿ ರಾಜತಾಂತ್ರಿಕ ಸಂಭಾಷಣೆಗಳನ್ನು ತಪ್ಪಾಗಿ ನಿರೂಪಿಸದಿರುವುದು ಉತ್ತಮ”ಎಂದು ವಿದೇಶಾಂಗ ಸಚಿವಾಲಯ ಬುಲೆಟಿನ್‌‌ನಲ್ಲಿ ತಿಳಿಸಲಾಗಿದೆ.

ಶಿವಸೇನೆ ನಾಯಕಿ ಪ್ರಿಯಾಂಕ ಚರ್ತುವೇದಿ ಸಹ ಕೆನಡಾ ಪ್ರಧಾನಿ ಮಾತುಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ನಿಮ್ಮ ಕಾಳಜಿಗೆ ಧನ್ಯವಾದಗಳು. ಆದರೆ ಇದು ಭಾರತದ ಆಂತರೀಕ ವಿಷಯ. ದಯವಿಟ್ಟು ರಾಜಕೀಯ ಮಾಡಬೇಡಿ. ಅಲ್ಲದೇ ಪ್ರಧಾನಿ ಮೋದಿಯವರು ಬೇರೆ ದೇಶಗಳು ಸಹ ಇದಕ್ಕೆ ಪ್ರತಿಕ್ರಿಯೆ ನೀಡುವ ಮೊದಲು ರೈತರ ಸಮಸ್ಯೆಗಳನ್ನು ಬಗೆಹರಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ. ಬಹಳಷ್ಟು ಜನ ಭಾರತದ ಆಂತರೀಕ ವಿಷಯಗಳಲ್ಲಿ ಕೆನಡಾದ ಪ್ರಧಾನಿ ಮಧ್ಯಪ್ರವೇಶಿಸಬಾರದು ಎಂದು ತಾಕೀತು ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಕನ್ನಡದ ಚಿಂತಕ ಪುರುಷೋತ್ತಮ ಬಿಳಿಮಲೆಯವರು “ಮಾನ್ಯ ಪ್ರಧಾನಿಗಳು ಅಮೇರಿಕಾಕ್ಕೆ ಹೋಗಿ ʼಅಬ್ಕಿ ಬಾರ್‌ ಟ್ರಂಪ್‌ ಸರ್ಕಾರ್‌ʼ ಎಂದು ಘೋಷಿಸುವಾಗ ಮಾಧ್ಯಮಗಳಲ್ಲಿದ್ದ ಹಲವರ ಕಿವಿಗೆ ಅದು ಬೀಳಲೇ ಇಲ್ಲ. ಈಗ ಕೆನಡಾದ ಪ್ರಧಾನ ಮಂತ್ರಿಗಳು ಭಾರತದ ರೈತರ ಪರ ಮಾತನ್ನಾಡಿದಾಗ ಮಾಧ್ಯಮದವರಿಗೆ ಅದು ‘ದೇಶದ ಆಂತರಿಕ ವಿಷಯದಲ್ಲಿ ಕೈ ಹಾಕಿದ ಹಾಗೆʼ ಭಾಸವಾಗಿದೆ. ಬೆತ್ತಲಾದದ್ದು ಪತ್ರಕರ್ತರೇ ವಿನಾ ಬೇರಾರೂ ಅಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ರೈತರ ಪ್ರತಿಭಟನೆಗೆ ಹರಿದು ಬಂತು ವಿದೇಶಿ ರಾಜಕೀಯ ನಾಯಕರ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...