Homeಚಳವಳಿದೆಹಲಿ ಚಲೋ ಬೆಂಬಲಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ: ರೈತರ ಮೇಲಿನ ಹಲ್ಲೆಗೆ ಖಂಡನೆ

ದೆಹಲಿ ಚಲೋ ಬೆಂಬಲಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ: ರೈತರ ಮೇಲಿನ ಹಲ್ಲೆಗೆ ಖಂಡನೆ

ಕೋಲಾರ, ಚಿತ್ರದುರ್ಗ, ಉಡುಪಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದೆಹಲಿ ರೈತರನ್ನು ಬೆಂಬಲಿಸಿ ಪ್ರತಿಭಟನೆಗಳು ದಾಖಲಾಗಿವೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ದೆಹಲಿಯಲ್ಲಿ ಒಂದು ವಾರದಿಂದ ಲಕ್ಷಾಂತರ ರೈತರು ನಡೆಸುತ್ತಿರುವ ದೆಹಲಿ ಚಲೋ ಹೋರಾಟಕ್ಕೆ ಕರ್ನಾಟಕದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ದೆಹಲಿ ಚಲೋ ಬೆಂಬಲಿಸಿ ಪ್ರತಿಭಟನೆಗಳು ನಡೆದಿದ್ದು, ರೈತರ ಮೇಲಿನ ಹಲ್ಲೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಕೇಂದ್ರ ಸರ್ಕಾರ ಚಳವಳಿಯನ್ನು ಹತ್ತಿಕ್ಕಲು ರೈತರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ತುಮಕೂರಿನಲ್ಲಿ ಪ್ರಗತಿಪರ ಸಂಘಟನೆಗಳು ಪ್ರತಿಭಟನಾ ಧರಣಿ ನಡೆಸಿದವು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಕುಳಿತ ಪ್ರತಿಭಟನಾಕಾರರು ಕೂಡಲೇ ರೈತ-ಕಾರ್ಮಿಕ ವಿರೋಧಿ ನೀತಿಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು. ರೈತರ ಬೇಡಿಕೆ ಒಂದೇ. ಅದು ಕೃಷಿ ಸಂಬಂಧಿ ಸುಗ್ರಿವಾಜ್ಞೆಗಳನ್ನು ವಾಪಸ್ ಪಡೆಯಬೇಕೆಂಬುದು. ಅದನ್ನು ಬಿಟ್ಟು ಬೇರೆ ಯಾವುದೇ ಬೇಡಿಕೆಗಳನ್ನು ಮುಂದಿಟ್ಟಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ರೈತರ ಸಮಸ್ಯೆಯನ್ನು ಆಲಿಸುತ್ತಿಲ್ಲ. ಬದಲಿಗೆ ಹಿಟ್ಲರ್ ರೀತಿ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಧರಣಿಯನ್ನು ಉದ್ದೇಶಿಸಿ ಮಾತನಾಡಿದ ಜನಪರ ಚಿಂತಕ ಕೆ.ದೊರೈರಾಜ್, ಕೇಂದ್ರ ಸರ್ಕಾರ ರೈತ ಕಾರ್ಮಿಕರ ಮೇಲೆ ದಬ್ಬಾಳಿಕೆ, ದೌರ್ಜನ್ಯ ನಡೆಸುತ್ತಿದೆ. ಜನವಿರೋಧಿ ನೀತಿಗಳನ್ನು ಜಾರಿಗೊಳಿಸಿ ಸಾಮಾನ್ಯ ಜನರನ್ನು ಸಂಕಷ್ಟಕ್ಕೆ ದೂಡುತ್ತಿದ್ದು, ಅಮಾನವೀಯವಾಗ ವರ್ತಿಸುತ್ತಿದೆ. ರೈತರ ಬೇಡಿಕೆಯ ಕುರಿತು ಮಾತುಕತೆ ನಡೆಸಲು ಹಿಂದೇಟು ಹಾಕುತ್ತಿದೆ. ಸಂವಿಧಾನ ವಿರೋಧಿ ನೀತಿಗಳನ್ನು ಜಾರಿಗೊಳಿಸಿ ಸಂವಿಧಾನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಕಿಡಿಕಾರಿದರು.

ಎಐಕೆಎಸ್‌ಸಿಸಿ ಜಿಲ್ಲಾ ಕಾರ್ಯದರ್ಶಿ ಹಾಗೂ ಹಿರಿಯ ಹೋರಾಟಗಾರ ಸಿ.ಯತಿರಾಜು ಮಾತನಾಡಿ ಕೇಂದ್ರ ಹೋರಾಟನಿರತ ರೈತರನ್ನು ಮಾತುಕತೆಗೆ ಆಹ್ವಾನಿಸಿದೆ. ಆದರೆ ಷರತ್ತುಗಳನ್ನು ವಿಧಿಸುತ್ತಿದೆ. ಕೃಷಿನೀತಿಗಳ ಬಗ್ಗೆ ಪುನರ್ ಪರಿಶೀಲನೆ ಮಾಡುವುದಿಲ್ಲ ಎನ್ನುತ್ತಿದೆ. ಮಾತುಕತೆಗೆ ಆಹ್ವಾನಿಸುವುದು ಮತ್ತು ಕೃಷಿನೀತಿಗಳ ಬದಲಾವಣೆ ಮಾಡುವುದಿಲ್ಲ ಎಂದು ಹೇಳುವುದು ಕೇಂದ್ರ ಸರ್ಕಾರದ ದ್ವಂದ್ವ ಧೋರಣೆಗೆ ಹಿಡಿದ ಕನ್ನಡಿ ಆಗಿದೆ. ದೆಹಲಿ ಬುಕಾರಿ ಮೈದಾನವನ್ನೇ ಓಪನ್ ಜೈಲು ಮಾಡಲು ಸಚಿವ ಅಮಿತ್ ಶಾ ನಿರ್ಧರಿಸಿದಂತಿದೆ. ಕೇಂದ್ರದ ಈ ನಡೆ ಖಂಡನೀಯ. ಕೇಂದ್ರ ತನ್ನ ಧೋರಣೆಯನ್ನು ಬದಲಿಸಿಕೊಳ್ಳದಿದ್ದರೆ ಹೋರಾಟ ತೀವ್ರ ಗೊಳ್ಳಲಿದೆ. ಬೀದಿಬೀದಿಗಳಲ್ಲೂ ರೈತರು ಚಳವಳಿ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ವೈದ್ಯ ಡಾ.ಬಸವರಾಜು ಮಾತನಾಡಿ, ಕೇಂದ್ರ ಸರ್ಕಾರ ರೈತರನ್ನು ಉಗ್ರರಂತೆ ಬಿಂಬಿಸುವುದು ಸರಿಯಲ್ಲ. ರೈತರು ಹಕ್ಕುಗಳಿಗಾಗಿ ಬೀದಿಗೆ ಇಳಿದಿದ್ದಾರೆ. ಕೇಂದ್ರ ಸರ್ಕಾರ ಮುಕ್ತಮನಸ್ಸಿನಿಂದ ರೈತರ ಜೊತೆ ಮಾತುಕತೆ ಮಾಡಬೇಕು. ರೈತರು ದೇಶಕ್ಕೆ ಅನ್ನ ನೀಡುವವರು. ಅವರ ಸಮಸ್ಯೆಯನ್ನು ಆಲಿಸಿ ಬಗೆಹರಿಸಲು ಮುಂದಾಗಬೇಕು. ರೈತರು ಇಲ್ಲದಿದ್ದರೆ ಅನ್ನವೇ ಸಿಗದಂತಹ ವಾತಾವರಣ ನಿರ್ಮಾಣವಾಗುತ್ತದೆ. ಇದನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು. ರೈತ ವಿರೋಧಿ ನೀತಿಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಮಾತನಾಡಿ “ಕೇಂದ್ರದ ಮೋದಿ ಸರ್ಕಾರ ರೈತರನ್ನು ಶತ್ರುಗಳಂತೆ ನೋಡುತ್ತಿದೆ. ರೈತರೇ ಇಂದು ಜಿಡಿಪಿ ಹೆಚ್ಚಳಕ್ಕೆ ಕಾರಣ ಎಂಬುದನ್ನು ಮರೆಯಬಾರದು. ಆದರೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸೇನೆಯನ್ನು ಇಳಿಸಿದೆ. ಶತ್ರುಗಳ ವಿರುದ್ಧ ಸೇನೆಯನ್ನು ಇಳಿಸಬೇಕಿತ್ತು. ಆದರೆ ಇಲ್ಲಿ ಉಲ್ಟಾ ಆಗಿದೆ. ರೈತರ ಮೇಲೆ ಆಶ್ರುವಾಯು, ಜಲಪಿರಂಗಿ, ಲಾಠೀ ಚಾರ್ಜ್ ಮಾಡಿದರು. ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ, ಕೇಂದ್ರ ಮಾನವ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು. ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಬೇಕು. ಸುಪ್ರೀಂಕೋರ್ಟ್ ಕೇಂದ್ರಕ್ಕೆ ಎಚ್ಚರಿಕೆ ನೀಡಬೇಕು. ಇದು ಆಗದಿರುವುದು ಕಳವಳಕಾರಿ ಎಂದರು.

ಪ್ರತಿಭಟನೆಯಲ್ಲಿ ತುಮಕೂರು ಜಿಲ್ಲಾ  ಕೊಳಗೇರಿ ನಿವಾಸಿಗಳ ಹಿತಕ್ಷಣಾ ವೇದಿಕೆಯ ಎ.ನರಸಿಂಹಮೂರ್ತಿ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ಸಮತಾ ವೇದಿಕೆಯ ನಾಯಕಿ ಡಾ.ಅರುಂಧತಿ, ಮಹಿಳಾಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಕೋಲಾರದಲ್ಲಿ ಪ್ರತಿಭಟನೆ
ಚಿತ್ರದುರ್ಗದಲ್ಲಿ ಪ್ರತಿಭಟನೆ

ಕೋಲಾರ, ಚಿತ್ರದುರ್ಗ, ಉಡುಪಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದೆಹಲಿ ರೈತರನ್ನು ಬೆಂಬಲಿಸಿ ಪ್ರತಿಭಟನೆಗಳು ದಾಖಲಾಗಿವೆ.


ಇದನ್ನೂ ಓದಿ: ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಶಾಹೀನ್‌ಬಾಗ್ ಅಜ್ಜಿ ಬಿಲ್ಕೀಸ್‌ರನ್ನು ಬಂಧಿಸಿದ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...