Homeಚಳವಳಿದೆಹಲಿ ಚಲೋ ಬೆಂಬಲಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ: ರೈತರ ಮೇಲಿನ ಹಲ್ಲೆಗೆ ಖಂಡನೆ

ದೆಹಲಿ ಚಲೋ ಬೆಂಬಲಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ: ರೈತರ ಮೇಲಿನ ಹಲ್ಲೆಗೆ ಖಂಡನೆ

ಕೋಲಾರ, ಚಿತ್ರದುರ್ಗ, ಉಡುಪಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದೆಹಲಿ ರೈತರನ್ನು ಬೆಂಬಲಿಸಿ ಪ್ರತಿಭಟನೆಗಳು ದಾಖಲಾಗಿವೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ದೆಹಲಿಯಲ್ಲಿ ಒಂದು ವಾರದಿಂದ ಲಕ್ಷಾಂತರ ರೈತರು ನಡೆಸುತ್ತಿರುವ ದೆಹಲಿ ಚಲೋ ಹೋರಾಟಕ್ಕೆ ಕರ್ನಾಟಕದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ದೆಹಲಿ ಚಲೋ ಬೆಂಬಲಿಸಿ ಪ್ರತಿಭಟನೆಗಳು ನಡೆದಿದ್ದು, ರೈತರ ಮೇಲಿನ ಹಲ್ಲೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಕೇಂದ್ರ ಸರ್ಕಾರ ಚಳವಳಿಯನ್ನು ಹತ್ತಿಕ್ಕಲು ರೈತರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ತುಮಕೂರಿನಲ್ಲಿ ಪ್ರಗತಿಪರ ಸಂಘಟನೆಗಳು ಪ್ರತಿಭಟನಾ ಧರಣಿ ನಡೆಸಿದವು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಕುಳಿತ ಪ್ರತಿಭಟನಾಕಾರರು ಕೂಡಲೇ ರೈತ-ಕಾರ್ಮಿಕ ವಿರೋಧಿ ನೀತಿಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು. ರೈತರ ಬೇಡಿಕೆ ಒಂದೇ. ಅದು ಕೃಷಿ ಸಂಬಂಧಿ ಸುಗ್ರಿವಾಜ್ಞೆಗಳನ್ನು ವಾಪಸ್ ಪಡೆಯಬೇಕೆಂಬುದು. ಅದನ್ನು ಬಿಟ್ಟು ಬೇರೆ ಯಾವುದೇ ಬೇಡಿಕೆಗಳನ್ನು ಮುಂದಿಟ್ಟಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ರೈತರ ಸಮಸ್ಯೆಯನ್ನು ಆಲಿಸುತ್ತಿಲ್ಲ. ಬದಲಿಗೆ ಹಿಟ್ಲರ್ ರೀತಿ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಧರಣಿಯನ್ನು ಉದ್ದೇಶಿಸಿ ಮಾತನಾಡಿದ ಜನಪರ ಚಿಂತಕ ಕೆ.ದೊರೈರಾಜ್, ಕೇಂದ್ರ ಸರ್ಕಾರ ರೈತ ಕಾರ್ಮಿಕರ ಮೇಲೆ ದಬ್ಬಾಳಿಕೆ, ದೌರ್ಜನ್ಯ ನಡೆಸುತ್ತಿದೆ. ಜನವಿರೋಧಿ ನೀತಿಗಳನ್ನು ಜಾರಿಗೊಳಿಸಿ ಸಾಮಾನ್ಯ ಜನರನ್ನು ಸಂಕಷ್ಟಕ್ಕೆ ದೂಡುತ್ತಿದ್ದು, ಅಮಾನವೀಯವಾಗ ವರ್ತಿಸುತ್ತಿದೆ. ರೈತರ ಬೇಡಿಕೆಯ ಕುರಿತು ಮಾತುಕತೆ ನಡೆಸಲು ಹಿಂದೇಟು ಹಾಕುತ್ತಿದೆ. ಸಂವಿಧಾನ ವಿರೋಧಿ ನೀತಿಗಳನ್ನು ಜಾರಿಗೊಳಿಸಿ ಸಂವಿಧಾನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಕಿಡಿಕಾರಿದರು.

ಎಐಕೆಎಸ್‌ಸಿಸಿ ಜಿಲ್ಲಾ ಕಾರ್ಯದರ್ಶಿ ಹಾಗೂ ಹಿರಿಯ ಹೋರಾಟಗಾರ ಸಿ.ಯತಿರಾಜು ಮಾತನಾಡಿ ಕೇಂದ್ರ ಹೋರಾಟನಿರತ ರೈತರನ್ನು ಮಾತುಕತೆಗೆ ಆಹ್ವಾನಿಸಿದೆ. ಆದರೆ ಷರತ್ತುಗಳನ್ನು ವಿಧಿಸುತ್ತಿದೆ. ಕೃಷಿನೀತಿಗಳ ಬಗ್ಗೆ ಪುನರ್ ಪರಿಶೀಲನೆ ಮಾಡುವುದಿಲ್ಲ ಎನ್ನುತ್ತಿದೆ. ಮಾತುಕತೆಗೆ ಆಹ್ವಾನಿಸುವುದು ಮತ್ತು ಕೃಷಿನೀತಿಗಳ ಬದಲಾವಣೆ ಮಾಡುವುದಿಲ್ಲ ಎಂದು ಹೇಳುವುದು ಕೇಂದ್ರ ಸರ್ಕಾರದ ದ್ವಂದ್ವ ಧೋರಣೆಗೆ ಹಿಡಿದ ಕನ್ನಡಿ ಆಗಿದೆ. ದೆಹಲಿ ಬುಕಾರಿ ಮೈದಾನವನ್ನೇ ಓಪನ್ ಜೈಲು ಮಾಡಲು ಸಚಿವ ಅಮಿತ್ ಶಾ ನಿರ್ಧರಿಸಿದಂತಿದೆ. ಕೇಂದ್ರದ ಈ ನಡೆ ಖಂಡನೀಯ. ಕೇಂದ್ರ ತನ್ನ ಧೋರಣೆಯನ್ನು ಬದಲಿಸಿಕೊಳ್ಳದಿದ್ದರೆ ಹೋರಾಟ ತೀವ್ರ ಗೊಳ್ಳಲಿದೆ. ಬೀದಿಬೀದಿಗಳಲ್ಲೂ ರೈತರು ಚಳವಳಿ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ವೈದ್ಯ ಡಾ.ಬಸವರಾಜು ಮಾತನಾಡಿ, ಕೇಂದ್ರ ಸರ್ಕಾರ ರೈತರನ್ನು ಉಗ್ರರಂತೆ ಬಿಂಬಿಸುವುದು ಸರಿಯಲ್ಲ. ರೈತರು ಹಕ್ಕುಗಳಿಗಾಗಿ ಬೀದಿಗೆ ಇಳಿದಿದ್ದಾರೆ. ಕೇಂದ್ರ ಸರ್ಕಾರ ಮುಕ್ತಮನಸ್ಸಿನಿಂದ ರೈತರ ಜೊತೆ ಮಾತುಕತೆ ಮಾಡಬೇಕು. ರೈತರು ದೇಶಕ್ಕೆ ಅನ್ನ ನೀಡುವವರು. ಅವರ ಸಮಸ್ಯೆಯನ್ನು ಆಲಿಸಿ ಬಗೆಹರಿಸಲು ಮುಂದಾಗಬೇಕು. ರೈತರು ಇಲ್ಲದಿದ್ದರೆ ಅನ್ನವೇ ಸಿಗದಂತಹ ವಾತಾವರಣ ನಿರ್ಮಾಣವಾಗುತ್ತದೆ. ಇದನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು. ರೈತ ವಿರೋಧಿ ನೀತಿಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಮಾತನಾಡಿ “ಕೇಂದ್ರದ ಮೋದಿ ಸರ್ಕಾರ ರೈತರನ್ನು ಶತ್ರುಗಳಂತೆ ನೋಡುತ್ತಿದೆ. ರೈತರೇ ಇಂದು ಜಿಡಿಪಿ ಹೆಚ್ಚಳಕ್ಕೆ ಕಾರಣ ಎಂಬುದನ್ನು ಮರೆಯಬಾರದು. ಆದರೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸೇನೆಯನ್ನು ಇಳಿಸಿದೆ. ಶತ್ರುಗಳ ವಿರುದ್ಧ ಸೇನೆಯನ್ನು ಇಳಿಸಬೇಕಿತ್ತು. ಆದರೆ ಇಲ್ಲಿ ಉಲ್ಟಾ ಆಗಿದೆ. ರೈತರ ಮೇಲೆ ಆಶ್ರುವಾಯು, ಜಲಪಿರಂಗಿ, ಲಾಠೀ ಚಾರ್ಜ್ ಮಾಡಿದರು. ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ, ಕೇಂದ್ರ ಮಾನವ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು. ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಬೇಕು. ಸುಪ್ರೀಂಕೋರ್ಟ್ ಕೇಂದ್ರಕ್ಕೆ ಎಚ್ಚರಿಕೆ ನೀಡಬೇಕು. ಇದು ಆಗದಿರುವುದು ಕಳವಳಕಾರಿ ಎಂದರು.

ಪ್ರತಿಭಟನೆಯಲ್ಲಿ ತುಮಕೂರು ಜಿಲ್ಲಾ  ಕೊಳಗೇರಿ ನಿವಾಸಿಗಳ ಹಿತಕ್ಷಣಾ ವೇದಿಕೆಯ ಎ.ನರಸಿಂಹಮೂರ್ತಿ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ಸಮತಾ ವೇದಿಕೆಯ ನಾಯಕಿ ಡಾ.ಅರುಂಧತಿ, ಮಹಿಳಾಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಕೋಲಾರದಲ್ಲಿ ಪ್ರತಿಭಟನೆ
ಚಿತ್ರದುರ್ಗದಲ್ಲಿ ಪ್ರತಿಭಟನೆ

ಕೋಲಾರ, ಚಿತ್ರದುರ್ಗ, ಉಡುಪಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದೆಹಲಿ ರೈತರನ್ನು ಬೆಂಬಲಿಸಿ ಪ್ರತಿಭಟನೆಗಳು ದಾಖಲಾಗಿವೆ.


ಇದನ್ನೂ ಓದಿ: ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಶಾಹೀನ್‌ಬಾಗ್ ಅಜ್ಜಿ ಬಿಲ್ಕೀಸ್‌ರನ್ನು ಬಂಧಿಸಿದ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...