Homeಚಳವಳಿನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ- ಲವ್ ಜಿಹಾದ್ ವಿರೋಧಿಸಿ, ಪ್ರೀತಿಗಾಗಿ ಪ್ರತಿಭಟನೆ!

ನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ- ಲವ್ ಜಿಹಾದ್ ವಿರೋಧಿಸಿ, ಪ್ರೀತಿಗಾಗಿ ಪ್ರತಿಭಟನೆ!

ದ್ವೇಷ ಬಿಟ್ಟು ಪ್ರೀತಿಯನ್ನು ಆಯ್ಕೆ ಮಾಡೋಣ. ಪ್ರೀತಿಯಿಂದ ಮಾತ್ರ ಸಮಾನತೆಯ ಸಮಾಜ ಕಟ್ಟಲು ಸಾಧ್ಯ, ಪ್ರೀತಿ ಬೇಕು, ದ್ವೇಷ ಬೇಡ.

- Advertisement -
- Advertisement -

ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತದ ಸರ್ಕಾರವಿರುವ ರಾಜ್ಯಗಳಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ತರುವುದಾಗಿ ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ಹೇಳಿಕೆ ನೀಡುತ್ತಿರುವುದನ್ನು ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಪ್ರೀತಿಗಾಗಿ ಪ್ರತಿಭಟನೆ ನಡೆಯುತ್ತಿದೆ.

ನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ, ದ್ವೇಷ ಬಿಟ್ಟು ಪ್ರೀತಿಯನ್ನು ಆಯ್ಕೆ ಮಾಡೋಣ. ಪ್ರೀತಿಯಿಂದ ಮಾತ್ರ ಸಮಾನತೆಯ ಸಮಾಜ ಕಟ್ಟಲು ಸಾಧ್ಯ, ಪ್ರೀತಿ ಬೇಕು, ದ್ವೇಷ ಬೇಡ ಎಂಬ ಭಿತ್ತಿಪತ್ರಗಳನ್ನು ಹಿಡಿದು ನೂರಾರು ಮಂದಿ ಇಂದು ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕದ ಮಹಿಳಾ, ದಲಿತ, ಮುಸ್ಲಿಂ, ಲಿಂಗತ್ವ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ, ಮಾನವ ಹಕ್ಕುಗಳ ಸಂಘಟನೆಗಳು ಜಂಟಿ ಆಂದೋಲನ ಸಮಿತಿ ಜಂಟಿಯಾಗಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿವೆ.

ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

 

ಲವ್ ಜಿಹಾದ್ ನಡೆಯುತ್ತಿದೆ ಎಂದು ಆರೋಪಿಸಿ, ಕಾನೂನು ತರುವ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಸಿ.ಟಿ.ರವಿ, ಶಶಿಕಲಾ ಜೊಲ್ಲೆ ಇವರುಗಳನ್ನು ಟ್ಯಾಗ್ ಮಾಡಿ, “ಪ್ರೀತಿ ಸಂವಿಧಾನದ ಸರಳ ಪಾಠ. ಆದರೆ ನೀವು ಸಂವಿಧಾನವನ್ನು ಇಷ್ಟಪಡುವುದಿಲ್ಲ ಅಥವಾ ಅರ್ಥಮಾಡಿಕೊಳ್ಳುವುದಿಲ್ಲ. ಆದ್ದರಿಂದ, ನೀವು ಅದನ್ನು ತಿಳಿದುಕೊಳ್ಳುವವರೆಗೆ ನಾವು ಪ್ರತಿಭಟನೆ ಪುನರಾವರ್ತಿಸುತ್ತೇವೆ!” ಎಂದಿದ್ದಾರೆ.
ದೇಶದ ಆರ್ಥಿಕತೆ ಕುಸಿದಿದೆ. ಕೃಷಿ ಮಸೂದೆಗಳ ವಿರುದ್ಧ ರೈತರು ದೆಹಲಿಯಲ್ಲಿ ಹೋರಾಡುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಇಲ್ಲದ ಲವ್ ಜಿಹಾದ್ ಚರ್ಚೆಯನ್ನು ಮುನ್ನಲೆಗೆ ತಂದಿದೆ ಎಂದು ಸಮಿತಿ ಕಿಡಿಕಾರಿದೆ.

ಮಹಿಳೆಯರ ರಕ್ಷಣೆಯ ಹೆಸರಿನಲ್ಲಿ ಮಹಿಳೆಯರು ಯಾರನ್ನು ಪ್ರೀತಿಸಬೇಕು, ಯಾರನ್ನು ಮದುವೆಯಾಗಬೇಕು ಎಂದು ಬಿಜೆಪಿ ನಿಯಂತ್ರಿಸುವ ಹುನ್ನಾರ ನಡೆಸುತ್ತಿದೆ. ಇಂತಹ ಕಾನೂನುಗಳ ಮೂಲಕ ನಮ್ಮ ಸಮಾಜವನ್ನು ಜಾತಿ, ಧರ್ಮಗಳ ಆಧಾರಲ್ಲಿ ಮತ್ತಷ್ಟು ವಿಭಜಿಸುವ, ಸಮುದಾಯದ ನಾಗರಿಕತೆಗೆ ಧಕ್ಕೆ ತರುವುದನ್ನು ನಾವು ವಿರೋಧಿಸುತ್ತೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಘಟನೆಗಳು ಪ್ರೀತಿಸೋದು ತಪ್ಪಾ? ಎಂಬ ಟ್ವಿಟರ್‌ ಖಾತೆಯ ವೇದಿಕೆಯಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಾರೆ.  ’ಅಂತರ ಧಾರ್ಮಿಕ ಪ್ರೀತಿಯ ಅಪರಾಧೀಕರಣದ ವಿರುದ್ಧ ಅಭಿಯಾನ’ ಎಂಬ ಶೀರ್ಷಿಕೆಯಡಿ ತಮ್ಮ ಖಾತೆಯನ್ನು ಲವ್ ಜಿಹಾದ್ ವಿರುದ್ಧದ ಅಭಿಯಾನ ಎಂದು ಕರೆದಿದ್ದಾರೆ.

ಇಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡ ‘ಲವ್ ಜಿಹಾದ್’ ತಡೆಗೆ ಕಾನೂನು ರೂಪಿಸುವ ಮುಖ್ಯಮಂತ್ರಿ ಅವರ ಘೋಷಣೆ, ತಮ್ಮ ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನಲ್ಲ. ಕೋಮುದ್ವೇಷವನ್ನು ಹುಟ್ಟುಹಾಕಿ ರಾಜಕೀಯದ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಈ ಘೋಷಣೆಗೆ ಇಲ್ಲ ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...