Homeಮುಖಪುಟಇದು ನಮ್ಮೆಲ್ಲರ ಭಾರತವಲ್ಲ, ಬದಲಿಗೆ ಅಂಬಾನಿಯ ಭಾರತವಷ್ಟೆ

ಇದು ನಮ್ಮೆಲ್ಲರ ಭಾರತವಲ್ಲ, ಬದಲಿಗೆ ಅಂಬಾನಿಯ ಭಾರತವಷ್ಟೆ

- Advertisement -
- Advertisement -

ಆತನ ಹೆಸರು ಕುನಾಲ್ ಕಮ್ರ. ಭಾರತದ ಹೆಸರಾಂತ ಸ್ಟ್ಯಾಂಡಪ್ ಕಾಮಿಡಿಯನ್. ಜನರ ಪರ ಮಿಡಿಯುವ ಆತನ ಮನಸ್ಸು ಸಹಜವಾಗಿಯೇ ಮೋದಿ ಆಡಳಿತದ ವಿರುದ್ಧ. ಈತ ತನ್ನ ಒಂದು ಶೋನಲ್ಲಿ ‘ಅಲ್ಲ ನಾವು ನೇರವಾಗಿ ಅಂಬಾನಿಗೆ ಯಾಕ್ ಓಟ್ ಹಾಕೋಕೆ ಆಗೋಲ್ಲ. ಮಧ್ಯದಲ್ಲಿ ಈ ಮೋದಿ ಯಾಕೆ? ನೇರವಾಗಿ ಅಂಬಾನಿಯೇ ಪ್ರಧಾನಮಂತ್ರಿ ಆಗಬಹುದಲ್ಲ?’ ಎಂದು ಪ್ರಶ್ನೆ ಮಾಡುತ್ತಾನೆ. ಇದು ಕಾಮಿಡಿ ಶೋ ಆದರೂ ಆತ ಹೇಳಿದ ಆ ಮಾತು ಮಾತ್ರ ಅಕ್ಷರಶಃ ಸತ್ಯ. ಇಂದು ಈ ನಮ್ಮ ದೇಶವನ್ನಾಳುತ್ತಿರುವುದು ಹೆಸರಿಗೆ ಮಾತ್ರ ಮೋದಿ, ಮನಮೋಹನ್ ಸಿಂಗ್ ಆದರೂ ನಿಜವಾಗಿಯೂ ಆಳುತ್ತಿರುವುದು ಮತ್ತು ಬೃಹತ್ ಮಟ್ಟದಲ್ಲಿ ಕೊಳ್ಳೆ ಹೊಡೆಯುತ್ತಿರುವುದು ಅಂಬಾನಿ, ಅದಾನಿ, ಟಾಟಾ ಥರದ ಬೆರಳೆಣಿಕೆಯ ಕ್ರೋನಿ ಬಂಡವಾಳಿಗರು ಎಂಬುದರಲ್ಲಿ ಯಾವುದೇ ಸಂದೇಹವೇ ಇಲ್ಲ. ಬನ್ನಿ ಇದರ ಸತ್ಯಾಸತ್ಯತೆ ಬಗ್ಗೆ ವಿಚಾರ ಮಾಡೋಣ.

ಬಡವನಾಗಿ ಹುಟ್ಟುವುದು ನಿಮ್ಮ ತಪ್ಪಲ್ಲ, ಆದರೆ ಬಡವನಾಗಿ ಸಾಯುವುದು ನಿಮ್ಮ ತಪ್ಪು ಎಂಬ ಹೇಳಿಕೆಗಳ ಮೂಲಕ ಯಾವುದೇ ಮಾರ್ಗವಾದರೂ ಸರಿ ಹಣ ಸಂಪಾದಿಸಿ ಎಂಬ ಕಡುಬಡತನದಿಂದ ಸಿರಿವಂತರಾದವರ ಕಥೆಗಳಲ್ಲಿ ಅಂಬಾನಿಯ ಕಥೆಯೂ ಒಂದಿದೆ. ಈ ದೇಶದಲ್ಲಿ ಭ್ರಷ್ಟಾಚಾರ ಇಲ್ಲದಿದ್ದರೆ ಏನಾಗುತ್ತಿತ್ತು? ಎಂಬ ಪ್ರಶ್ನೆಯನ್ನು ಪತ್ರಕರ್ತರೊಬ್ಬರು 1990ರ ದಶಕದಲ್ಲಿ ಧೀರೂಬಾಯಿ ಅಂಬಾನಿ ಎಂಬ ದೊಡ್ಡ ಉದ್ಯಮಿಗೆ ಕೇಳುತ್ತಾರೆ. ಆಗ ಆತ ‘ಭ್ರಷ್ಟಾಚಾರ ಇಲ್ಲದಿದ್ದರೆ ಈ ಧೀರೂಬಾಯಿ ಅಂಬಾನಿ ಇನ್ನೂ ಕೂಡ ಪೆಟ್ರೋಲ್ ಬಂಕ್‍ನಲ್ಲಿ ಪೆಟ್ರೋಲ್ ಹಾಕುವ ಕೆಲಸ ಮಾಡಿಕೊಂಡು ಇರಬೇಕಿತ್ತು ಅಷ್ಟೇ’ ಎನ್ನುತ್ತಾನೆ. ಅಂದರೆ ಅಷ್ಟರ ಮಟ್ಟಿಗೆ ಆತ ನೇರವಾಗಿ ಭ್ರಷ್ಟಾಚಾರವನ್ನು ಸಮರ್ಥಿಸಿಕೊಂಡು ಅದರಿಂದಲೇ ನಾನಿಂದು ದೊಡ್ಡ ಉದ್ಯಮಿಯಾಗಿದ್ದೇನೆಂದು ಹೇಳಿದರೂ ಕೂಡ ಬಹುತೇಕ ಮಾಧ್ಯಮಗಳು ಆತನಿಗೆ ಬಹಪರಾಕ್ ಹೇಳಿ, ಆತನನ್ನು ನಮ್ಮೆಲ್ಲರ ಉದ್ದಾರಕನೆಂಬಂತೆ ಬಿಂಬಿಸಿ ಹೊಗಳಿ ಅಟ್ಟಕೇರಿಸುತ್ತಿವೆ. ಆ ಕಡು ಭ್ರಷ್ಟಾಚಾರಿಯ ಮಕ್ಕಳೇ ಇಂದು ಹೆಚ್ಚು ಸುದ್ದಿಯಲ್ಲಿರುವ ಮುಖೇಶ್ ಅಂಬಾನಿ ಮತ್ತು ಅನಿಲ್ ಅಂಬಾನಿ.

 

ಸಾವಿರಾರು ಜನರ ಷೇರುಗಳ ಆಧಾರದಲ್ಲಿ ಧೀರೂಬಾಯಿ ಅಂಬಾನಿ 1977ರಲ್ಲಿ ಕಟ್ಟಿದ ವಾಣಿಜ್ಯ ಕಂಪನಿಯ ಹೆಸರೇ ರಿಲಯನ್ಸ್ ಇಂಡಸ್ಟ್ರೀಸ್. ಷೇರುಗಳು, ಮೊಬೈಲ್, ಸಿಮ್, ಟಿವಿಯಿಂದ ಆರಂಭವಾಗಿ ಕೊತ್ತಂಬರಿ ಸೊಪ್ಪು, ಮೀನು ಮಾಂಸದವರೆಗೂ ಸಾವಿರಾರು ವಸ್ತುಗಳನ್ನು ಮಾರಟ ಮಾಡುವಷ್ಟರ ಮಟ್ಟಿಗೆ ಈ ಕಂಪನಿ ಬೆಳೆದು ನಿಂತಿದೆ. ಅಪರಿಮಿತ ಭ್ರಷ್ಟಾಚಾರ, ಆಳುವವರೊಂದಿಗಿನ ಅಪವಿತ್ರ ಮೈತ್ರಿ, ಸ್ವಜನ ಪಕ್ಷಪಾತತನದಿಂದ ಹೆಚ್ಚು ಲಾಭ ಗಳಿಸಿ ಬೆಳೆದ ಕಂಪನಿ 2002ರಲ್ಲಿ ಧೀರೂಭಾಯಿ ಅಂಬಾನಿಯ ಮರಣದ ನಂತರ ಅವರ ಮಕ್ಕಳಿಬ್ಬರ ನಡುವೆ ಪಾಲಾಯಿತು. ರಿಲಯನ್ಸ್ ಇಂಡಸ್ಟ್ರಿಸ್, ಪೆಟ್ರೋಲಿಯಂ ಮುಖೇಶ್ ಪಾಲಿಗೆ ಬಂದರೆ, ರಿಲಯನ್ಸ್ ಕಮ್ಯುನಿಕೇಶನ್ಸ್, ಟೆಲಿಕಾಂ ಅನಿಲ್ ಪಾಲಾಯಿತು. ಇನ್ನು ನೀನಾ ಕೊಥಾರಿ ಮತ್ತು ದೀಪ್ತಿ ಸಾಲ್ಗೋಂಕರ್ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದರೂ ಸಹ ಯಥಾ ಭಾರತೀಯರಂತೆ ಅವರಿಗೇನೂ ಆಸ್ತಿಯಲ್ಲಿ ಪಾಲು ದಕ್ಕಲಿಲ್ಲ ಅಷ್ಟೆ.

ಧೀರೂಭಾಯಿ ಅಂಬಾನಿ ಸಾಮಾನ್ಯ ಮನುಷ್ಯನಾಗಿದ್ದವನು ತಾನು ಸಾಯುವ 2002ರ ವೇಳೆಗೆ 6.1 ಬಿಲಿಯನ್ ಡಾಲರ್ (ಆಗಲೇ ಸುಮಾರು 60ಸಾವಿರ ಕೋಟಿ ರುಪಾಯಿಗಳು) ಆಸ್ತಿಯ ಒಡೆಯನಾಗಿದ್ದನು. ಇದು ಹೇಗೆ ಸಾಧ್ಯ ಎಂದು ಅನುಮಾನ ಬಂದರೆ ಗೂಗಲ್‍ನಲ್ಲಿ ಧೀರೂಭಾಯಿ ಅಂಬಾನಿ ಬಗೆಗಿನ ಟೀಕೆಗಳು ಎಂದು ಟೈಪ್ ಮಾಡಿ ನೊಡಿ ಸಾಕು. ಭ್ರಷ್ಟ ವ್ಯಾವಹಾರಿಕ ನಡವಳಿಕೆಗಳು, ತನ್ನ ಅಗತ್ಯಗಳಿಗಾಗಿ ಸರ್ಕಾರಿ ನೀತಿಗಳ ತಿರುಚುವಿಕೆ, ದಬ್ಬಾಳಿಕೆ ವರ್ತನೆ, ಚುನಾವಣೆಗಳಲ್ಲಿ ರಾಜಕೀಯ ಪ್ರಭಾವ ಬೀರುವುದು, ತನ್ನ ಪರವಾಗಿ ಮಾಧ್ಯಮಗಳಿಂದ ರಕ್ಷಣೆ ಮುಂತಾದ ಕ್ರಮಗಳಿಂದಲೇ ಮತ್ತು ತಾನೇ ಒಪ್ಪಿಕೊಂಡಂತೆ ಪರಮ ಭ್ರಷ್ಟಾಚಾರದ ಕಾರಣಕ್ಕಾಗಿ ಅವರು ಅಷ್ಟು ದೊಡ್ಡ ಮಟ್ಟದ ಆಸ್ತಿ ಮಾಡಲು ಸಾಧ್ಯವಾಯಿತು.

ಒಬ್ಬರನ್ನು ಮುಗಿಸಿ ಮತ್ತೊಬ್ಬರು ಏಕಾಧಿಪತ್ಯ ಸಾಧಿಸುವುದೇ ಬಂಡವಾಳಶಾಹಿ ವ್ಯವಸ್ಥೆ ಇರುವ್ಯದರಿಂದಲೇ ಆಗ ಧೀರೂಭಾಯಿ ತನ್ನ ಪ್ರತಿಸ್ಪರ್ಧಿ ನುಸ್ಲಿ ವಾಡಿಯಾರೊಂದಿಗೆ ಹಣಾಹಣಿ ನಡೆಸಿದ್ದರು. ಆನಂತರ ಇಂಡಿಯನ್ ಎಕ್ಸ್‍ಪ್ರೆಸ್‍ನ ಪ್ರಕಾಶಕ ರಾಮನಾಥ್ ಗೋಯೆಂಕಾ ನಡುವೆಯೂ ಗುದ್ದಾಟ ನಡೆದಿತ್ತು. ಇದರ ಕುರಿತ ಹೇರಳ ದಾಖಲೆಗಳು ಇತಿಹಾಸದಲ್ಲಿ ಸಿಕ್ಕಿದರೂ, ಈಗ ಅವರ ಮಕ್ಕಳು ಅದರ ಹತ್ತು ಪಟ್ಟು ಅಂದರೆ ಸುಮಾರ 6 ಲಕ್ಷಕೋಟಿ ರೂಗಳಷ್ಟು ಆಸ್ತಿಯ ಒಡೆಯರಾಗಿದ್ದಾರೆ. ಹಾಗಾಗಿ ಗತಿಸಿಹೋದವನ ಹಗರಣಗಳಿಗಿಂತ ಪ್ರಸ್ತುತ ಲೂಟಿಕೋರರ ಬಗೆಗೆ ಹೆಚ್ಚು ಚರ್ಚಿಸುವುದು ಒಳಿತು.

ಭಾರತದ ಅತಿದೊಡ್ಡ ಲೂಟಿಕೋರ ಅಂಬಾನಿ ಮಕ್ಕಳು

ತನ್ನ ತಂದೆಯ ಹಾದಿಯಲ್ಲಿ ಮತ್ತಷ್ಟು ಮುನ್ನಡೆದ ಮಕ್ಕಳು ಸಾಮ್ರಾಜ್ಯ ವಿಸ್ತರಣೆಗೆ ಹಲವು ಬಗೆಯ ಭ್ರಷ್ಟ ದಾರಿಗಳನ್ನು ಹಿಡಿದರು. ನೋಡುನೋಡುತ್ತಲೇ ಮುಖೇಶ್ ಅಂಬಾನಿ ದೇಶದ ನಂ.1 ಶ್ರೀಮಂತನಾಗಿ ಬೆಳೆದ. ಮೊದಮೊದಲು ಮೊದಲ 20 ಶ್ರೀಮಂತರ ಪಟ್ಟಿಯಲ್ಲಿರುತ್ತಿದ್ದ ಅಣ್ಣನಿಂದ ಪೂರ್ಣವಾಗಿ ದೂರ ಸರಿದ ಅನಿಲ್ ಅಂಬಾನಿ, ನಿಧಾನಕ್ಕೆ ಕೆಳಗಿಳಿದಿದ್ದಾನೆ. ಆ ರೀತಿ ದೂರ ಸರಿಯಲು ಕಾರಣವಾದ ಒಂದು ಮುಖ್ಯವಾದ ಸಂಗತಿಯನ್ನು ನೋಡೋಣ.

ಭಾರತದ ಕೃಷ್ಣ ಗೋದಾವರಿ ನದಿ ಪಾತ್ರದಲ್ಲಿರುವ ಹೇರಳವಾದ ನೈಸರ್ಗಿಕ ಮತ್ತು ತೈಲೋತ್ಪನ್ನ ಸಂಪನ್ಮೂಲಗಳ ಮೇಲೆ ಈ ಅಂಬಾನಿ ಸಹೋದರರ ಕಣ್ಣು ಬಿದ್ದಿತು. ನೆಹರೂರವರು ಪ್ರಧಾನಿಯಾಗಿದ್ದಾದ ಸ್ಥಾಪಿಸಿದ್ದ ಸರ್ಕಾರಿ ಸ್ವಾಮ್ಯದ ಒಎನ್‍ಜಿಸಿ ಅಲ್ಲಿ ತೈಲ ಮತ್ತು ಅನಿಲ ಸಂಪನ್ಮೂಲಗಳನ್ನು ಹೊರತೆಗೆದು ಸಂಸ್ಕರಣೆ ಮತ್ತು ಮಾರಾಟದ ಕಾರ್ಯನಿರ್ವಹಿಸುವ ಮೂಲಕ ಅಪಾರ ಲಾಭದ ಉದ್ದಿಮೆಯಾಗಿತ್ತು. ಅಲ್ಲಿ 2006-07 ರಿಂದ ನೆಲಬಗೆದು ಲೂಟಿ ಹೊಡೆಯಲು ಆರಂಭಿಸಿತು ಮುಖೇಶ್ ಅಂಬಾನಿ ನೇತೃತ್ವದ ರಿಲೆಯನ್ಸ್. ಅಲ್ಲಿನ ತೈಲಸಂಸ್ಕರಣಗೆ ನನಗೆ ಅವಕಾಶಕೊಡಬೇಕೆಂದು ತಮ್ಮ ಅನಿಲ್ ಅಂಬಾನಿ ತಗಾದೆ ತೆಗೆದನು. ಅಣ್ಣ ತಮ್ಮಂದಿರಿಬ್ಬರ ನಡುವೆ ಜಗಳ ಅಲ್ಲಿಂದ ಆರಂಭವಾದ ಜಗಳ ಯಾವ ಮಟ್ಟ ಹೋಯಿತೆಂದರೆ ಅದನ್ನು ಬಗೆಹರಿಸಲು ಲಾಲ್ ಕೃಷ್ಣ ಅಡ್ವಾಣಿ ಥರದವರು ಮಧ್ಯಸ್ಥಿಕೆ ವಹಿಸಬೇಕಾಗಿ ಬಂದಿತ್ತು. ಅಂದರೆ ಈ ದೇಶದ ಸಮಸ್ತ ಜನರಿಗೂ ಹಕ್ಕಿರುವ ಕೃಷ್ಣ ಗೋದಾವರಿ ನದಿಪಾತ್ರದಲ್ಲಿ ತೈಲ ಲೂಟಿ ಹೊಡೆಯಲು ‘ಅವರಪ್ಪನ ಮನೆ ಆಸ್ತಿ’ ಎಂಬಂತೆ ಅಂಬಾನಿ ಸಹೋದರರಿಬ್ಬರು ಮುಗಿಬಿದ್ದರು.

ಕೊನೆಗೆ ಅದನ್ನು ತನ್ನ ವಶಕ್ಕೆ ಪಡೆಯಲು ಯಶಸ್ವಿಯಾದ ಮುಖೇಶ್ ಅಂಬಾನಿ ಈ ದೇಶದ ಕಾನೂನಗಳನ್ನೆಲ್ಲಾ ಗಾಳಿಗೆ ತೂರಿ ಮನಸ್ಸಿಗೆ ಬಂದ ಹಾಗೆ ತೈಲ ಲೂಟಿ ಹೊಡೆಯಲು ಮುಂದಾದ. ಪೆಟ್ರೋಲಿಯಂ ಖಾತೆಯ ಜಂಟಿ ಕಾರ್ಯದರ್ಶಿಯಾಗಿದ್ದ ನಜೀಬ್ ಜಂಗ್‍ರವರು ಸರ್ಕಾರದ ಪರವಾಗಿ ಅಂಬಾನಿಯ ರಿಲೆಯನ್ಸ್‍ನೊಂದಿಗಿನ ಒಪ್ಪಂದಕ್ಕೆ ಸಹಿ ಹಾಕಿದರು. ಅದಾದ ಕೆಲವೇ ದಿನಗಳಲ್ಲಿ ಅವರು ತಮ್ಮ ಹುದ್ದೆಯಿಂದ ಸ್ವಯಂ ನಿವೃತ್ತಿ ಹೊಂದಿ, ಅದೇ ರಿಲೆಯನ್ಸ್ ಸೇರಿದರು ಎಂದರೆ ಅಂಬಾನಿಯ ಕುಟಿಲತೆ ಎಷ್ಟಿರಬೇಡ ನೀವೇ ಹೇಳಿ? ಲಕ್ಷಾಂತರ ಕೋಟಿ ಬೆಲೆ ಬಾಳುವ ಅಲ್ಲಿನ ಕಚ್ಛಾ ತೈಲ ಸಂಪತ್ತನ್ನು ಸರ್ಕಾರಿ ಸ್ವಾಮ್ಯದ ಒಎನ್‍ಜಿಸಿಗೆ ಕೊಡುವುದು ಬಿಟ್ಟು ಆಗಿನ ಯುಪಿಎ ಸರ್ಕಾರ ಮುಖೇಶ್ ಅಂಬಾನಿಗೆ ಬಿಡಿಗಾಸಿಗೆ ಹರಾಜು ಹಾಕಿತ್ತು.

ಈ ಕಳ್ಳ ತನ್ನ ಪಾಲಿನ ಜಾಗದಲ್ಲಿ ತೈಲ ಹೊರತೆಗೆಯುವುದಲ್ಲದೇ ಒಎನ್‍ಜಿಸಿಯ ಕೊಳವೆಗಳಿಗೂ ಕನ್ನ ಹಾಕಿ ಲಕ್ಷಾಂತರ ಕೋಟಿ ಬೆಲೆ ಬಾಳುವ ತೈಲವನ್ನು ಕದ್ದುಬಿಟ್ಟಿದ್ದನ್ನು. ಅದಕ್ಕೆ ವಿರೊಧ ವ್ಯಕ್ತಪಡಿಸಿದ ಕಾರಣಕ್ಕಾಗಿ ಆಗಿನ ಸರ್ಕಾರದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ಸಚಿವರಾಗಿದ್ದ ಮಣಿಶಂಕರ್ ಅಯ್ಯರ್ ರನ್ನು ಬದಲಿಸಿ ಮುರಳಿ ದೇವ್ರಗೆ ಕೊಡಲಾಯಿತು. ಅದೂ ಸಾಲದೆಂಬಂತೆ ವೀರಪ್ಪ ಮೋಯ್ಲಿಯನ್ನು ತರಲಾಯಿತು. ಅರಣ್ಯ ಮತ್ತು ಪರಿಸರ ಸಚಿವರಾಗಿದ್ದ ಜೈರಾಂ ರಮೇಶ್ ಮತ್ತು ಜೈಪಾಲ್ ರೆಡ್ಡಿಯವರು ಅಂಬಾನಿ ಲೂಟಿಯನ್ನು ಸುತಾರಂ ಒಪ್ಪಲಿಲ್ಲ ಮಾತ್ರವಲ್ಲ ಅಂಬಾನಿಯ ಅವ್ಯವಹಾರಗಳಿಗೆ ಕಡಿವಾಣ ಹಾಕಲು ಬಯಸಿದರು. ಆದರೆ ಈ ಅಂಬಾನಿ ಎಷ್ಟು ಪ್ರಭಾವಿಯಾಗಿದ್ದ ಎಂದರೆ ಅವರೆಲ್ಲರನ್ನು ಕೆಳಗಿಳಿಸಿ, ಇಂಧನ ಸಚಿವ ವೀರಪ್ಪ ಮೋಯ್ಲಿಯನ್ನೆ ಅರಣ್ಯ ಖಾತೆಗೂ ಸಚಿವರನ್ನಾಗಿಸಿ  ತನ್ನೆಲ್ಲಾ ಅವ್ಯವಹಾರಗಳನ್ನು ಕಾನೂನುಬದ್ಧಗೊಳಿಸಿಕೊಂಡ.

ಇಷ್ಟೆಲ್ಲಾ ಅನ್ಯಾಯಗಳನ್ನು ವಿರೋಧಿಸಿ ದೆಹಲಿಯಲ್ಲಿ ಆಮ್ ಆದ್ಮ ಪಾರ್ಟಿಯ ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ ಪರಿಣಾಮ ಮುಖೇಶ್ ಅಂಬಾನಿ ಮತ್ತು ವೀರಪ್ಪ ಮೋಯ್ಲಿ ಮೇಲೆ ಎಫ್‍ಐಆರ್ ದಾಖಲಾಯಿತು. ಅರವಿಂದ್ ಕೇಜ್ರಿವಾಲ್ ನೇರವಾಗಿ ಅಂಬಾನಿಯನ್ನು ಎದರುಗೊಂಡ ಕಾರಣ ಬಹಳಷ್ಟು ಜನ ಕೇಜ್ರಿವಾಲ್ ಬೆಂಬಲಕ್ಕೆ ನಿಂತರು. ಆದರೆ ಚೌಕಿದಾರೆನೆಂದು ಕರೆದುಕೊಳ್ಳುವ ಮೋದಿ ಕೃಷ್ಣ ಗೋದಾವರಿ ಬೇಸಿನ್‍ನ ವಿಚಾರಣೆಗಳಿಗೂ ದೆಹಲಿಗೂ ಸಂಬಂಧವಿಲ್ಲವೆಂದು ಸಂಸತ್ತಿನಲ್ಲಿ ತಿದ್ದುಪಡಿ ತಂದರು. ಇದು ಮುಂದಕ್ಕೂ ಅನ್ವಯಿಸುತ್ತದೆ ಮತ್ತು ಹಿಂದಿನ ವರ್ಷಗಳಿಗೂ ಅನ್ವಯಿಸುತ್ತದೆ ಎಂದುಬಿಟ್ಟರು. ಅಂಬಾನಿ ಸೇಫ್ ಆದ, ನಾವು ಪೆಟ್ರೋಲ್ ಡೀಸೆಲ್ ಗ್ಯಾಸ್‍ಗಾಗಿ ಅತಿ ಹೆಚ್ಚಿನ ತೆರಿಗೆ ಕಟ್ಟುವ ದುಸ್ಥಿತಿ ಬಂತು.

2014ರ ಲೋಕಸಭಾ ಚುನಾವಣೆಗೂ ಮುನ್ನ ಎಲೆಕ್ಷನ್ ಪ್ರಚಾರಕ್ಕಾಗಿ 35ಸಾವಿರ ಕೋಟಿ ರೂಗಳನ್ನು ಮುಖೇಶ್ ಅಂಬಾನಿ ಮೋದಿ ಜೇಬಿಗಿಟ್ಟ ಕಾರಣಕ್ಕಾಗಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲಂತೂ ಅಂಬಾನಿ ಅದೃಷ್ಟ ಎರಡು ಪಟ್ಟು ಹೆಚ್ಚಾಯಿತು. 2013ರಲ್ಲಿ ತನ್ನ ಬ್ಲಾಕ್‍ಗಳಿಂದ ತೈಲ ಮತ್ತು ಅನಿಲ್ ಕಳ್ಳತನ ಮಾಡಿದ್ದಕ್ಕಾಗಿ ಒಎನ್‍ಜಿಸಿಯು ಅಂಬಾನಿ ರಿಲೆಯನ್ಸ್ ವಿರುದ್ಧ ದೆಹಲಿ ಹೈಕೋರ್ಟ್‍ನಲ್ಲಿ ದಾವೆ ಹೂಡಿತ್ತು. ಡಿ ಅಂಡ್ ಎಂ ಕನ್ಸಲ್ಟಿಂಗ್ ಕಂಪನಿಯ ವರದಿ ಆಧಾರದಲ್ಲಿ ಎ.ಪಿ ಶಾ ಸಮಿತಿಯು ತೈಲ ಮತ್ತು ಅನಿಲ ಕಳ್ಳತನವಾಗಿದೆ ಎಂದು ವರದಿ ನೀಡಿತ್ತು. ಹಾಗಾಗಿ ಕೋರ್ಟ್ 10,300 ಕೋಟಿ ರೂಗಳ ದೊಡ್ಡ ಮೊತ್ತದ ದಂಡವನ್ನು ಅಂಬಾನಿಯ ರಿಲೆಯನ್ಸ್‍ಗೆ ಹಾಕಿತ್ತು. ಮೋದಿ ಕೃಪೆಯಿಂದಾಗಿ ಸರ್ಕಾರ ಮತ್ತು ಒಎನ್‍ಜಿಸಿ ಈ ಕೇಸಿನಲ್ಲಿ ಸರಿಯಾಗಿ ವಾದಿಸದೇ ಸಾಕ್ಷಿಗಳನ್ನು ನಾಶಮಾಡಿ ಕೊನೆಗೆ ಅಂಬಾನಿ ದಂಡ ಕಟ್ಟದಂತೆ ನೋಡಿಕೊಂಡರು.

ಇನ್ನು ಇದೇ ಅಂಬಾನಿ 2016ರಲ್ಲಿ ಟೆಲಿಕಾಂ ಕ್ಷೇತ್ರಕ್ಕೆ ಲಗ್ಗೆಯಿಟ್ಟು ಜಿಯೋ ಸಿಮ್ ಹೊರತಂದಾಗ ಪತ್ರಿಕೆಗಳ ಮುಖಪುಟದಲ್ಲಿ ಜಾಹೀರಾತು ನೀಡಿದ್ದು ಇದೇ ಅಂಬಾನಿಯ ಪ್ರಧಾನ ಸೇವಕ ನರೇಂದ್ರ ಮೋದಿ. ಜಿಯೋ ಲಾಭಕ್ಕಾಗಿ ಯಶಸ್ವಿಯಾಗಿ ನಡೆಯುತ್ತಿದ್ದ ಸರ್ಕಾರಿ ಸ್ವಾಮ್ಯದ ಬಿಎಸ್‍ಎನ್‍ಎಲ್ ಅನ್ನು ಮುಳುಗಿಸಲಾಯಿತು. ಲಕ್ಷಕ್ಕೂ ಅಧಿಕ ನೌಕರರು ಈಗ ಬೀದಿಗೆ ಬೀಳುವ ಅಪಾಯದಲ್ಲಿದ್ದಾರೆ. ಈ ದೇಶದ ಕೃಷಿ ಸಾಲಕ್ಕಾಗಿ ನಿಗಧಿಯಾದ ಹಣದಲ್ಲಿ ಮುಖೇಶ್ ಅಂಬಾನಿ ಇದುವರೆಗೂ ಒಂದು ಲಕ್ಷ ಕೋಟಿಗೂ ಅಧಿಕ ಸಾಲ ಪಡೆದು ಸದ್ದಿಲ್ಲದೇ ಮನ್ನಾವಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಮುಖೇಶ್ ಅಂಬಾನಿಗೆ ನೀಡಿದ ತೆರಿಗೆ ವಿನಾಯಿತಿಗಳಿಗೆ ಲೆಕ್ಕವಿಲ್ಲ. ಅಂಬಾನಿಗೆ ನೆರವಾಗಲೆಂದು ಭೂಸ್ವಾದೀನ ಕಾಯ್ದೆಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಲು ಮೋದಿ ಮುಂದಾಗಿದ್ದರು ಅಲ್ಲವೇ?

ಇದನ್ನೂ ಓದಿ: ವಿಶ್ವಗುರು’ ನುಡಿಯಲ್ಲಿ ಆಗಿ ನಡೆಯಲ್ಲಿ ತಪ್ಪಬಹುದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...