Homeಕರೋನಾ ತಲ್ಲಣಇಡೀ ದೇಶದ ಜನರಿಗೆ ಲಸಿಕೆ ಹಾಕುವುದಾಗಿ ಸರ್ಕಾರ ಎಂದೂ ಹೇಳಿಲ್ಲ: ಉಲ್ಟಾ ಹೊಡೆದ ಆರೋಗ್ಯ ಸಚಿವಾಲಯ

ಇಡೀ ದೇಶದ ಜನರಿಗೆ ಲಸಿಕೆ ಹಾಕುವುದಾಗಿ ಸರ್ಕಾರ ಎಂದೂ ಹೇಳಿಲ್ಲ: ಉಲ್ಟಾ ಹೊಡೆದ ಆರೋಗ್ಯ ಸಚಿವಾಲಯ

"ಇಡೀ ದೇಶಕ್ಕೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ’- ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್

- Advertisement -
- Advertisement -

ಕೊರೊನಾವೈರಸ್ ಸಾಂಕ್ರಾಮಿಕ ರೋಗಕ್ಕೆ ಇಡೀ ದೇಶದ ಜನರಿಗೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಂಗಳವಾರ ಸ್ಪಷ್ಟನೆ ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ದೇಶದ ಇಡೀ ಜನಸಂಖ್ಯೆಗೆ ಲಸಿಕೆ ಹಾಕುವ ಅವಶ್ಯಕತೆಯಿಲ್ಲದಿರಬಹುದು ಎಂದು ಹೇಳಿದ್ದಾರೆ.

“ಇಡೀ ದೇಶಕ್ಕೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಅಂತಹ ವೈಜ್ಞಾನಿಕ ವಿಚಾರಗಳನ್ನು ವಾಸ್ತವ ಮಾಹಿತಿಗಳನ್ನಾಧರಿಸಿ ಚರ್ಚಿಸಬೇಕು, ಒಟ್ಟಾರೆ ಮಾತನಾಡಬಾರದು” ಎಂದು ರಾಜೇಶ್ ಭೂಷಣ್ ತಿಳಿಸಿದರು.

ಆದರೆ ನವೆಂಬರ್ 24 ರಂದು ರಾಜ್ಯಗಳನ್ನುದ್ದೇಶಿಸಿ ಮಾತನಾಡಿದ ದೇಶದ ಪ್ರಧಾನಿ, ದೇಶದ ಪ್ರತಿಯೊಬ್ಬ ಪ್ರಜೆಗೆ ವ್ಯಾಕ್ಸೀನ್ ತಲುಪಲಿದೆ. ಅದಕ್ಕಾಗಿ ಎಲ್ಲಾ ವ್ಯವಸ್ಥೆ ನಡೆದಿದೆ ಎಂದು ಭರವಸೆ ನೀಡಿದ್ದರು. ಸ್ವತಃ ಪ್ರಧಾನಮಂತ್ರಿಗಳ ಕಚೇರಿಯಿಂದ ಬಂದ ಸರ್ಕಾರಿ PIB ಪತ್ರಿಕಾ ಪ್ರಕಟಣೆ ಇದನ್ನು ಹೇಳಿತ್ತು. ಆದರೆ ಈಗ ಇದಕ್ಕೆ ಉಲ್ಟಾ ಹೊಡೆಯುತ್ತಿರುವುದೇಕೆ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: 2021 ಏಪ್ರಿಲ್ ವೇಳೆಗೆ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ- ಆದರ್‌ ಪೂನವಾಲ್ಲಾ

ಐಸಿಎಂಆರ್ ನ ಡಿಜಿ ಬಾಲರಾಮ್ ಭಾರ್ಗವ ಕೂಡ “ಇದು ಲಸಿಕೆಯ ಪರಿಣಾಮಕಾರಿತ್ವವನ್ನು ಅವಲಂಬಿಸಿರುತ್ತದೆ ಮತ್ತು ವೈರಸ್ ಹರಡುವ ಸರಪಳಿ ಮುರಿಯುವುದು ನಮ್ಮ ಉದ್ದೇಶ. ಸೋಂಕು ಹರಡುವುದನ್ನು ತಡೆಯುವುದು ಸಾಧ್ಯವಾದರೇ ನಾವು ಎಲ್ಲರಿಗೂ ಲಸಿಕೆ ನೀಡಬೇಕಾಗಿಲ್ಲ” ಎಂದಿದ್ದಾರೆ.

ಕೊರೊನಾ ವೈರಸ್ ಹರಡುವುದನ್ನು ತಡೆಯುವಲ್ಲಿ ಮಾಸ್ಕ್‌ಗಳ ಪಾತ್ರವು ಬಹಳ ಮುಖ್ಯವಾಗಿದೆ. ವ್ಯಾಕ್ಸಿನೇಷನ್ ನಂತರವೂ ಮಾಸ್ಕ್‌ಗಳ ಬಳಕೆ ಮುಂದುವರಿಯುತ್ತದೆ. ಸೋಂಕು ಹರಡುವುದನ್ನು ತಡೆಯುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಬಾಲರಾಮ್ ಭಾರ್ಗವ ತಿಳಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ರಾಜ್ಯದ ಎಲ್ಲರಿಗೂ ಉಚಿತ ಕೊರೊಣಾ ಲಸಿಕೆ ನೀಡುವ ಭರವಸೆ ನೀಡಿತ್ತು.

ಕಳೆದ ಕೆಲ ದಿನಗಳ ಹಿಂದೆ ’2024 ರ ವೇಳೆಗೆ ಪ್ರತಿಯೊಬ್ಬ ಭಾರತೀಯನಿಗೂ ಲಸಿಕೆ ನೀಡಲಾಗುವುದು’ ಎಂದು ಕೊರೊನಾ ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ, ಆದರ್‌ ಪೂನವಾಲ್ಲಾ ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮ್ಮಿಟ್‌- 2020 ಕಾರ್ಯಕ್ರಮದಲ್ಲಿ (HTLS) ಹೇಳಿದ್ದರು. ಆದರೆ ಈಗ ಇದೆಲ್ಲದ್ದಕ್ಕೂ ಉಲ್ಟಾ ಹೊಡೆದಿದ್ದು ಎಲ್ಲರಿಗೂ ಲಸಿಕೆ ಹಾಕುತ್ತೇವೆಂದು ನಾವು ಹೇಳಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ.


ಇದನ್ನೂ ಓದಿ: ಆಕ್ಸ್​​ಫರ್ಡ್ ಲಸಿಕೆ ಶೇ.70 ರಷ್ಟು ಪರಿಣಾಮಕಾರಿ: ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...