Homeಕರ್ನಾಟಕಡಿಸೆಂಬರ್ 5ರ 'ಕರ್ನಾಟಕ ಬಂದ್'ಗೆ ಬೆಂಬಲ ಘೋಷಿಸಿದ ಕರ್ನಾಟಕ ರಕ್ಷಣಾ ವೇದಿಕೆ

ಡಿಸೆಂಬರ್ 5ರ ‘ಕರ್ನಾಟಕ ಬಂದ್’ಗೆ ಬೆಂಬಲ ಘೋಷಿಸಿದ ಕರ್ನಾಟಕ ರಕ್ಷಣಾ ವೇದಿಕೆ

'ಕರ್ನಾಟಕ ಬಂದ್' ನಡೆಸಲು ಸರ್ಕಾರವೇ ಕಾರಣ ಹೊರತು ಕನ್ನಡಪರ ಸಂಘಟನೆಗಳಲ್ಲ’ ಎಂದು ಕರವೇ ಅಭಿಪ್ರಾಯಪಟ್ಟಿದೆ.

- Advertisement -
- Advertisement -

ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮತ್ತು ಶಾಸಕರುಗಳ ಕನ್ನಡದ್ರೋಹಿ ನಡವಳಿಕೆಗಳ ಹಿನ್ನೆಲೆಯಲ್ಲಿ ಡಿಸೆಂಬರ್ 5 ರಂದು ಕರೆ ನೀಡಲಾಗಿರುವ ‘ಕರ್ನಾಟಕ ಬಂದ್’ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದೆ.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಡಿಸೆಂಬರ್ 5 ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಿದ್ದಾರೆ. ಅದೇ ರೀತಿ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ, ತಹಸೀಲ್ದಾರ್ ಕಚೇರಿಗಳಿಗೆ ಮುತ್ತಿಗೆ ಹಾಕಲಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಸಾವಿರಾರು ಕರವೇ ಕಾರ್ಯಕರ್ತರು ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆಯನ್ನು ದಾಖಲಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಮ್ಮ ಪ್ರತಿಭಟನೆ ಯಾವುದೇ ಸಮಾಜದ ವಿರೋಧವಲ್ಲ, ಬದಲಾಗಿ ರಾಜಕೀಯ ಲಾಭಕ್ಕಾಗಿ ಸರ್ಕಾರ ನಡೆಸುತ್ತಿರುವ ಒಡೆದು ಆಳುವ ನೀತಿಗೆ ವಿರುದ್ಧ. ಹೀಗಾಗಿ ಯಾವುದೇ ಭಾಗದಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಅಹಿತಕರ ಘಟನೆಗಳು‌ ನಡೆಯದಂತೆ, ಶಾಂತಿಯುತ ಬಂದ್ ನಡೆಸಲು ಕಾರ್ಯಕರ್ತರಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಕರವೇ ಮಾಹಿತಿ ನೀಡಿದೆ.

ಇದನ್ನೂ ಓದಿ: ಮರಾಠ ಅಭಿವೃದ್ಧಿ ಪ್ರಾಧಿಕಾರ: ಕನ್ನಡಪರ ಹೋರಾಟಗಾರರಿಗೆ ಎಚ್ಚರಿಕೆ ನೀಡಿದ ಯಡಿಯೂರಪ್ಪ!

ಮರಾಠಾ ಪ್ರಾಧಿಕಾರ ರಚನೆ ಸಂಬಂಧ ಮುಖ್ಯಮಂತ್ರಿಗಳು ಕನ್ನಡಪರ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾತುಕತೆ ನಡೆಸಬಹುದಿತ್ತು. ಆದರೆ ಮುಖ್ಯಮಂತ್ರಿಗಳಾದಿಯಾಗಿ ಸರ್ಕಾರವನ್ನು‌‌ ನಡೆಸುತ್ತಿರುವವರು ಹುಂಬತನದಿಂದ ಆಕ್ರಮಣಕಾರಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಆಳುವ ಪಕ್ಷದ ಶಾಸಕರುಗಳೇ ನಾಲಿಗೆ ಹರಿಬಿಟ್ಟು ಕನ್ನಡಪರ ಸಂಘಟನೆಗಳನ್ನು ದೂಷಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಕನ್ನಡದ್ರೋಹಿ ಶಾಸಕರುಗಳು “ನಮಗೆ ಕನ್ನಡಿಗರ ಮತ ಬೇಕಿಲ್ಲ” ಎಂಬಂಥ ಉದ್ಧಟತನದ ಹೇಳಿಕೆಗಳನ್ನೂ ನೀಡಿದ್ದಾರೆ. ಆದರೆ, ದುರದೃಷ್ಟವಶಾತ್ ಈ ಹೇಳಿಕೆಗಳನ್ನು ಖಂಡಿಸದೆ ಸರ್ಕಾರ ಮೌನ ಸಮ್ಮತಿ‌ ನೀಡಿರುವುದು ಕನ್ನಡ ಕಾರ್ಯಕರ್ತರ‌ನ್ನು ಕೆರಳಿಸಿದೆ. ಈ ಹಿನ್ನೆಲೆಯಲ್ಲಿ ‘ಕರ್ನಾಟಕ ಬಂದ್’ ನಡೆಸಲು ಕಾರಣಕರ್ತರು ಸರ್ಕಾರದವರೇ ಹೊರತು ಕನ್ನಡಪರ ಸಂಘಟನೆಗಳಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕಿದೆ ಎಂದು ತಮ್ಮ ಪ್ರತಿಭಟನೆಗೆ ಸರ್ಕಾರ ಕಾರಣ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಇದು ಯಡಿಯೂರಪ್ಪನವರ ’ಜಾತಿಗೊಂದು ನಿಗಮ’ವಷ್ಟೇ ಅಲ್ಲ, ಬಿಜೆಪಿಯ ಅಪಾಯಕಾರಿ ವೈದಿಕಶಾಹಿ ವರಸೆ!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪುರಸಭೆ ಸದಸ್ಯ ಸ್ಥಾನದಿಂದ ಮುಖ್ಯಮಂತ್ರಿ ಸ್ಥಾನದವರೆಗೆ ತಲುಪಲು ಅವರು ಹೋರಾಟದ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದೇ ಕಾರಣ. ಆದರೆ ಅವರೇ ಇಂದು ಹೋರಾಟಗಾರರಿಗೆ ಪೊಲೀಸರನ್ನು ಬಳಸಿಕೊಂಡು ಹೋರಾಟ ಹತ್ತಿಕ್ಕುವ ಬೆದರಿಕೆ ಒಡ್ಡುತ್ತಿದ್ದಾರೆ. ಮುಖ್ಯಮಂತ್ರಿಗಳು ಆತ್ಮವಿಮರ್ಶೆ ಮಾಡಿಕೊಂಡು ಈ ಬೆದರಿಕೆ ತಂತ್ರವನ್ನು ಕೈಬಿಟ್ಟು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಪ್ರಬುದ್ಧತೆ ಮೆರೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

‘ಕರ್ನಾಟಕ ಬಂದ್’ ವೇಳೆ ವೈದ್ಯಕೀಯ ಸೇವೆಗಳು, ಆಂಬುಲೆನ್ಸ್, ಔಷಧಿ ಅಂಗಡಿಗಳು, ಹಾಲು-ದಿನಪತ್ರಿಕೆ ಸರಬರಾಜಿನಂಥ ಅಗತ್ಯ ಸೇವೆಗಳಲ್ಲಿ ವ್ಯತ್ಯಯವಾಗುವುದಿಲ್ಲ. ಸಂಚಾರ ವ್ಯವಸ್ಥೆ ಸ್ಥಗಿತಗೊಳ್ಳುವುದರಿಂದ ನಾಗರಿಕರು ಡಿಸೆಂಬರ್ 5ರಂದು ಮನೆಯಲ್ಲೇ ಉಳಿದು ಬಂದ್ ಬೆಂಬಲಿಸಬೇಕೆಂದು ವೇದಿಕೆ ಮನವಿ ಮಾಡಿದೆ.

ಇನ್ನು ’ಕನ್ನಡಿಗರಿಗೆ ಅಗತ್ಯವಿರುವ ಎಲ್ಲವನ್ನು ಮಾಡಲು ಸರ್ಕಾರ ಸಿದ್ಧವಾಗಿದೆ. ಆದರೆ ಸರ್ಕಾರದ ನಿರ್ಧಾರಕ್ಕೆ ವಿರುದ್ಧವಾಗಿ ಬಂದ್‌ಗೆ ಕರೆ ನೀಡಿರುವುದು ಸರಿಯಲ್ಲ. ಸಂಘಟನೆಗಳು ಬಲವಂತವಾಗಿ ಬಂದ್ ಜಾರಿಗೊಳಿಸಲು ಮುಂದಾದರೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅವರು ಶಾಂತಿಯುತವಾಗಿ ಪ್ರತಿಭಟಿಸಬಹುದು. ಆದರೆ ಸರ್ಕಾರವು ಬಲವಂತದ ಬಂದ್ ಅನ್ನು ನಾವು ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕನ್ನಡಪರ ಹೋರಾಟಗಾರರಿಗೆ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...