Homeಚಳವಳಿಅಸ್ಪೃಶ್ಯತೆಯನ್ನು ನಿಲ್ಲಿಸಿ, ಅಸ್ಪೃಶ್ಯತೆಯನ್ನು ಅಡ್ರೆಸ್ ಮಾಡುವ ಸ್ಕಾಲರ್‌ಶಿಪ್‌ನಲ್ಲ!

ಅಸ್ಪೃಶ್ಯತೆಯನ್ನು ನಿಲ್ಲಿಸಿ, ಅಸ್ಪೃಶ್ಯತೆಯನ್ನು ಅಡ್ರೆಸ್ ಮಾಡುವ ಸ್ಕಾಲರ್‌ಶಿಪ್‌ನಲ್ಲ!

ಕೇಂದ್ರದಿಂದ ಶೇ. 100 ಪ್ರಮಾಣದಲ್ಲಿ ಆರ್ಥಿಕ ಅನುದಾನ ಬರುತ್ತಿದ್ದ, ಶೋಷಿತ ಸಮುದಾಯಗಳಿಗೆ ಆರ್ಥಿಕ ನೆರವನ್ನು ಕೊಡುವ, ಶೈಕ್ಷಣಿಕ ನ್ಯಾಯ ಒದಗಿಸುವ ಅಂಬೇಡ್ಕರ್‌ರವರ ಪ್ರಿಯವಾದ ಈ ಯೋಜನೆಯನ್ನು ಮೋದಿ ಸರಕಾರ ನಿಲ್ಲಿಸಬಾರದು.

- Advertisement -
- Advertisement -

1944 ರಿಂದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗಾಗಿ ಜಾರಿಯಲ್ಲಿರುವ “ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ (ಪಿಎಂಎಸ್)” ನಿಲ್ಲಿಸಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಇದು ದಲಿತರ ಶೈಕ್ಷಣಿಕ ನ್ಯಾಯವನ್ನು ಕಸಿದುಕೊಳ್ಳುವ ಹುನ್ನಾರ ಎಂದು ‘ದಲಿತ ಮಾನವ ಹಕ್ಕುಗಳ ರಾಷ್ಟ್ರೀಯ ಅಭಿಯಾನ’ ಆತಂಕ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯು “ಕೇಂದ್ರದಿಂದ ಶೇ. 100 ಪ್ರಮಾಣದಲ್ಲಿ ಆರ್ಥಿಕ ಅನುದಾನ ಬರುತ್ತಿದ್ದ, ಶೋಷಿತ ಸಮುದಾಯಗಳಿಗೆ ಆರ್ಥಿಕ ನೆರವನ್ನು ಕೊಡುವ, ಶೈಕ್ಷಣಿಕ ನ್ಯಾಯ ಒದಗಿಸುವ ಅಂಬೇಡ್ಕರ್‌ರವರ ಪ್ರಿಯವಾದ ಯೋಜನೆಯನ್ನು ಮೋದಿ ಸರಕಾರ ನಿಲ್ಲಿಸಬಾರದು. ಅಸ್ಪೃಶ್ಯತೆಯನ್ನು ನಿಲ್ಲಿಸಿ, ಅಸ್ಪೃಶ್ಯತೆಯನ್ನು ಅಡ್ರೆಸ್ ಮಾಡುವ ಸ್ಕಾಲರ್‌ಶಿಪ್‌ನಲ್ಲ” ಎಂದು ಆಗ್ರಹಿಸಿದೆ.

ಈ ‘ಪಿಎಂಎಸ್’ ಅಡಿಯಲ್ಲಿ ವಾರ್ಷಿಕ ವರಮಾನ 2.5 ಲಕ್ಷಕ್ಕಿಂತ ಕಡಿಮೆ ಇರುವ ಪ.ಜಾತಿ/ಪ.ಪಂಗಡದ ಬಡ ಕುಟುಂಬದ ಸುಮಾರು 60 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ದೊರಕುತ್ತಿತ್ತು. ಆದರೆ ಆ ಹಣವನ್ನು ಇನ್ನು ಮುಂದೆ ಜೈಲು ಕಟ್ಟುವ, ಟೆಲಿಕಾಂ ಕಂಪನಿಗಳಿಗೆ ಕೇಬಲ್ ಹಾಕುವುದಕ್ಕೆ ಬಳಸಲು ಮೋದಿ ಸರ್ಕಾರ ಮುಂದಾಗುತ್ತಿದೆ ಎಂದು ಆರೋಪಿಸಲಾಗಿದೆ.

ಜುಲೈ 2019ರಲ್ಲಿ ಈ ‘ಪಿಎಂಎಸ್’ ಗೆ ತಿದ್ದುಪಡಿ ಮಾಡಿ ಸಂಪೂರ್ಣ ಕೇಂದ್ರದ ಯೋಜನೆಯಾಗಿದ್ದ (national scheme) ಇದರ ಸ್ವರೂಪವನ್ನು ಕೇಂದ್ರ-ರಾಜ್ಯಗಳ 60:40 ಅನುಪಾತಕ್ಕೆ ಬದಲಿಸಿದೆ. ಇದರಿಂದ ಇಲ್ಲಿಯವರೆಗೂ ಆರ್ಥಿಕ ಕೊರತೆಯ ನೆಪವೊಡ್ಡಿ ಬಿಹಾರ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ, ಮಹಾರಾಷ್ಟ್ರ ಮತ್ತು ಉತ್ತರಖಂಡ ರಾಜ್ಯಗಳು ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡಿಲ್ಲ. ಹಾಗಾಗಿ ಮೊದಲಿದ್ದ ಹಾಗೆ ಕೇಂದ್ರ ಸರ್ಕಾರವೇ ಈ ಯೋಜನೆಯ ಜವಾಬ್ದಾರಿ ಹೊತ್ತುಕೊಳ್ಳಬೇಕೆಂದು ‘ದಲಿತ ಆರ್ಥಿಕ ಅಧಿಕಾರಕ್ಕಾಗಿ ದಲಿತ ಮಾನವ ಹಕ್ಕುಗಳ ರಾಷ್ಟ್ರೀಯ ಅಭಿಯಾನ’ದ ಪ್ರಧಾನ ಕಾರ್ಯದರ್ಶಿ ಬೀನಾ ಪಲ್ಲಿಕಲ್ ಒತ್ತಾಯಿಸಿದ್ದಾರೆ.

ಈ ಕೂಡಲೇ ಕೇಂದ್ರ ಸರ್ಕಾರ ಸ್ಕಾಲರ್‌ಶಿಪ್‌ಗಾಗಿ ಅಗತ್ಯವಿರುವ 10,000 ಕೋಟಿ ರೂ ಹಣವನ್ನು ಬಿಡುಗಡೆ ಮಾಡಬೇಕು, ಯೋಜನೆಯ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಬೇಕು, ಸ್ಕಾಲರ್‌ಶಿಪ್ ಮೊತ್ತವನ್ನು ಹೆಚ್ಚಿಸಬೇಕು, ಎಲ್ಲಾ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ಸಿಗುತ್ತಿದೆಯೇ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಮೇಲ್ವಿಚಾರಣೆ ನಡೆಸಬೇಕು, ವಿದ್ಯಾರ್ಥಿ ವೇತನ ನೀಡದ ಸಂಸ್ಥೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ದೇಶದ 60 ಲಕ್ಷಕ್ಕೂ ಹೆಚ್ಚು ದಲಿತ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣವನ್ನು ಮೊಟಕುಗೊಳಿಸಬೇಕಾದ ಪರಿಸ್ಥಿತಿ ಬಂದಿದೆ. ಹಾಗಾಗಿ ಕೇಂದ್ರದ ಈ ದಲಿತ ವಿರೋಧಿ ನೀತಿಯನ್ನು ಖಂಡಿಸಿ ದೇಶದ ಎಲ್ಲಾ ದಲಿತ ಸಂಘಟನೆಗಳು ಹೋರಾಟಕ್ಕೆ ಮುಂದಾಗಬೇಕೇಂದು ಬೀನಾ ಪಲ್ಲಿಕಲ್ ಕರೆ ನೀಡಿದ್ದಾರೆ.


ಇದನ್ನೂ ಓದಿ: SC/ST ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ ನಿಲ್ಲುವ ಅಪಾಯ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...