Homeಕರ್ನಾಟಕಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ಗೋಹತ್ಯೆ ನಿಷೇಧ ಕಾಯ್ದೆಯನ್ನು ಬಿಜೆಪಿ ಆಡಳಿತವಿರುವ ಗೋವಾದಲ್ಲಿ ಏಕೆ ಜಾರಿಗೊಳಿಸಿಲ್ಲ? ಕರ್ನಾಟಕದಲ್ಲಿಯೇ ಏಕೆ?

- Advertisement -
- Advertisement -

ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ. ಆರ್‌ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಹಾಗೂ ಸಂತೋಷ್ ಅವರು ಈಶ್ವರಪ್ಪ ಅವರನ್ನು ಬಳಸಿಕೊಂಡು ಕುರುಬ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

“ನಾವು ಕರೆದರೂ ಕುರುಬರ ಎಸ್ಟಿ ಮೀಸಲಾತಿ ಹೋರಾಟದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸುತ್ತಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಅವರು ನನ್ನನ್ನು ಕರೆದೂ ಇಲ್ಲ, ನಾನು ಬರುತ್ತೇನೆ ಅಥವಾ ಬರುವುದಿಲ್ಲ ಎಂದು ಅವರಿಗೆ ಹೇಳಿಲ್ಲ. ಈಶ್ವರಪ್ಪ ಈ ವಿಚಾರದಲ್ಲಿ ಸುಳ್ಳು ಹೇಳಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

“ಮೋದಿಯವರು ಪ್ರಧಾನಿಯಾಗಿ ಆರೂವರೆ ವರ್ಷಗಳಾದವು. ಗೊಂಡ, ರಾಜಗೊಂಡ ಸಮುದಾಯದವರು ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಆ ಬಗ್ಗೆ ಈಶ್ವರಪ್ಪ ಅವರು ಏಕೆ ಆದೇಶ ಮಾಡಿಸಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅನ್ನದಾತರ ಹೋರಾಟದ ಪರವಾಗಿ ನಾವಿದ್ದೇವೆ: ಸಿದ್ದರಾಮಯ್ಯ

“ಆರ್‌ಎಸ್ಎಸ್ ನವರು ಎಂದೂ ಮೀಸಲಾತಿ ಪರ ಇಲ್ಲ. ಹಾವನೂರು ಆಯೋಗ, ವೆಂಕಟಸ್ವಾಮಿ ಆಯೋಗ, ಚಿನ್ನಪ್ಪರೆಡ್ಡಿ ಆಯೋಗ ಮತ್ತು ಮಂಡಲ್ ವರದಿಯನ್ನು ಅವರು ಸ್ವಾಗತ ಮಾಡಿದರೇ? ಎಲ್ಲಾ ಸಂದರ್ಭದಲ್ಲಿಯೂ ವಿರೋಧ ಮಾಡಿದ್ದಾರೆ. ಬಿಜೆಪಿ ಮತ್ತು ಆರ್‌ಎಸ್ಎಸ್ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿವೆ. ಆರ್‌ಎಸ್‌ಎಸ್ ಸ್ಥಾಪಕರಾದ ಹೆಡಗೆವಾರ್ ಆಗಲಿ, ಎಂ.ಎಸ್ ಗೋಲವಾಲ್ಕಾರ್ ಇಲ್ಲವೇ ಇತರ ಆರ್‌ಎಸ್‌ಎಸ್ ನಾಯಕರು ಎಂದಾದರೂ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಪರ ಹೋರಾಟ ಮಾಡಿದ್ದಾರೆಯೇ?” ಎಂದು ಪ್ರಶ್ನಿಸಿದ್ದಾರೆ.

“ಕುರುಬರ ನಾಯಕ ನಾನೇ ಎಂದು ಈಶ್ವರಪ್ಪ ಹೇಳಿಕೊಳ್ಳಲಿ. ಅದಕ್ಕೆ ನನ್ನ ತಕರಾರು ಇಲ್ಲ. ನಾಯಕ ಯಾರೆಂದು ಜನ ತೀರ್ಮಾನ ಮಾಡುತ್ತಾರೆ, ನಾವೇ ಘೋಷಿಸಿಕೊಳ್ಳುವುದಲ್ಲ. ಕುರುಬರನ್ನು ಎಸ್ಟಿಗೆ ಸೇರಿಸುವ ಮೊದಲು ಎಸ್ಟಿ ಮೀಸಲಾತಿಯನ್ನು ಶೇ. 3ರಿಂದ ಕನಿಷ್ಠ ಶೇ. 20ಕ್ಕೆ ಹೆಚ್ಚಿಸಬೇಕು. ಅದಕ್ಕೂ ಹೋರಾಟ ಮಾಡಬೇಕಿದೆ. ವಾಲ್ಮೀಕಿ ಸಮುದಾಯದವರು ಮೀಸಲಾತಿಯನ್ನು ಶೇ.7.5ಕ್ಕೆ ಹೆಚ್ಚಿಸುವಂತೆ ಹೋರಾಟ ಮಾಡುತ್ತಿದ್ದಾರೆ. ಮೀಸಲು ಪ್ರಮಾಣ ಶೇ. 3ರಷ್ಟೇ ಇದ್ದರೆ ಕುರುಬ ಸಮುದಾಯವನ್ನು ಎಸ್‌ಟಿ ಗೆ ಸೇರಿಸಿದರೆ ಏನು ಲಾಭ?” ಎಂದು ಅವರು ಕೇಳಿದ್ದಾರೆ.

“ಕುರುಬ ಸಮುದಾಯದ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇದ್ದರೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಗಣತಿ ಆಧಾರಿತ ವರದಿಯನ್ನು ರಾಜ್ಯ ಬಿಜೆಪಿ ಸರ್ಕಾರ ಒಪ್ಪಿಕೊಳ್ಳಲಿ. ಕುರುಬರ ಬಗ್ಗೆ ಈಶ್ವರಪ್ಪ ಅವರಿಗೆ ಇದ್ದಕ್ಕಿದ್ದಂತೆ ಕಾಳಜಿ ಬಂದಿದೆ. ಕಾಗಿನೆಲೆ ಮಠ ಸ್ಥಾಪನೆ ಸಂದರ್ಭದಲ್ಲಿ ಈಶ್ವರಪ್ಪ ಅವರು ಎಲ್ಲಿದ್ದರು. ಆಗ ಅವರು ಪತ್ತೆಯೇ ಇರಲಿಲ್ಲ. ಈಗ ಸ್ವಾಮೀಜಿಗಳನ್ನು ಕರೆದುಕೊಂಡು ಹೋರಾಟ ನಡೆಸುತ್ತಿದ್ದಾರೆ. ಮಠದ ಉದ್ಘಾಟನಾ ಸಭೆಗೂ ಅವರು ಆಗ ಬಂದಿರಲಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರ ದಿವಾಳಿಯಾಗಿದೆ, ವೃದ್ಧಾಪ್ಯ ವೇತನ ನೀಡಲು ಕೂಡಾ ಹಣವಿಲ್ಲ: ಸಿದ್ದರಾಮಯ್ಯ

“ಉಡುಪಿಯ ಕನಕ ಗೋಪುರ ಕೆಡವಿದಾಗ ಈಶ್ವರಪ್ಪ ಎಲ್ಲಿ ಹೋಗಿದ್ದರು? ಯಾವ ಮೀಸಲಾತಿ ಪರ ಅವರು ಹೋರಾಟ ಮಾಡಿದ್ದಾರೆ? ರಾಜ್ಯ ಸಭಾ ಸದಸ್ಯರಾಗಿದ್ದ ರಾಮಾ ಜೋಯಿಸರು ಹಿಂದುಳಿದ ವರ್ಗದವರ ಮೀಸಲು ವಿರೋಧಿಸಿದಾಗ ಎಲ್ಲಿದ್ದರು. ಬಿಜೆಪಿಯಲ್ಲಿ ಆಗ ಈಶ್ವರಪ್ಪ ಇದ್ದರಲ್ಲವೇ? ಏಕೆ ವಿರೋಧ ಮಾಡಲಿಲ್ಲ ಈಗ ಇದ್ದಕ್ಕಿಂದ್ದರೆ ಈಶ್ವರಪ್ಪ ಅವರಿಗೆ ಕುರುಬರ ಮೇಲೆ ಪ್ರೀತಿ ಬಂದಿದೆ. ಅವರು ಹೋರಾಟ ಮಾಡಲಿ. ಬೇಡ ಎನ್ನುವುದಿಲ್ಲ. ಮೊದಲು ಬೀದರ್, ಕಲಬರಗಿ, ಯಾದಗಿರಿಯ ಗೊಂಡ, ರಾಜಗೊಂಡ ಸಮುದಾಯವನ್ನು ಎಸ್ಟಿಗೆ ಸೇರಿಸುವ ಕುರಿತು ಆದೇಶ ಜಾರಿ ಮಾಡಿಸಲಿ” ಎಂದು ಆಗ್ರಹಿಸಿದ್ದಾರೆ.

“ಈಶ್ವರಪ್ಪ ಅವರು ಎಂದೂ ಮೀಸಲಾತಿ ಪರ ಹೋರಾಟ ಮಾಡಿದವರಲ್ಲ. ಸದನದಲ್ಲಿಯೂ ಧ್ವನಿ ಎತ್ತಿದವರಲ್ಲ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಈಶ್ವರಪ್ಪ ಅವರು ಎಲ್ಲಿ ಬಿಟ್ಟರು? ಹೀಗೆ ಸ್ವಾರ್ಥಕ್ಕಾಗಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ಕುರುಬ ಸಮುದಾಯವನ್ನು ಒಡೆಯಲು ಆರ್‌ಎಸ್ಎಸ್ ನವರು ಈಶ್ವರಪ್ಪ ಅವರನ್ನು ಬಳಸಿಕೊಳ್ಳುತ್ತಿದ್ದಾರೆ. ಆರಂಭದಲ್ಲಿ ಆರ್‌ಎಸ್‌ಎಸ್ ಕೈವಾಡದ ಬಗ್ಗೆ ನನಗೆ ಗೊತ್ತಿರಲಿಲ್ಲ. ಈಶ್ವರಪ್ಪ ಅವರೇ ಹೇಳಿದ ಮೇಲೆ ನನಗೂ ತಿಳಿದದ್ದು. ಈಶ್ವರಪ್ಪ ಅವರು ಸ್ವಂತ ಬುದ್ಧಿಯಿಂದ ಹೋರಾಟ ಶುರು ಮಾಡಿದ್ದಲ್ಲ, ಆರ್‌ಎಸ್‌ಎಸ್, ಬಿಜೆಪಿಯವರ ಹುನ್ನಾರವಿದೆ” ಎಂದು ಎಂದ ಅವರು ತಿಳಿಸಿದ್ದಾರೆ.

ಗೋಹತ್ಯೆ ನಿಷೇಧ ಬಿಜೆಪಿ ಆಡಳಿತದ ಗೋವಾದಲ್ಲಿ ಯಾಕಿಲ್ಲ?

“ಗೋಹತ್ಯೆ ನಿಷೇಧ ಕಾಯ್ದೆಯನ್ನು ಬಿಜೆಪಿ ಆಡಳಿತವಿರುವ ಗೋವಾದಲ್ಲಿ ಏಕೆ ಜಾರಿಗೊಳಿಸಿಲ್ಲ? ಕರ್ನಾಟಕದಲ್ಲಿಯೇ ಏಕೆ? ಕಾಯ್ದೆ ಜಾರಿಯಾದರೆ ತಾವು ಕಷ್ಟ ನಷ್ಟಕ್ಕೆ ಈಡಾಗುತ್ತೇವೆ ಎಂಬ ಭಯದಿಂದ ಮುಸ್ಲಿಂ ಸಮುದಾಯದ ಮುಖಂಡರು ನನ್ನ ಬಳಿಗೆ ಬಂದಿದ್ದರು. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಲ್ಲಿ ನಾವು ವಿರೋಧಿಸಲಿದ್ದೇವೆ. ಉತ್ತರ ಪ್ರದೇಶದಲ್ಲಿ ಜಾರಿಯಿರುವ ಲವ್ ಜಿಹಾದ್ ತಡೆ ಕಾನೂನು ಅಸಂವಿಧಾನಿಕ. ನಿಗದಿತ ವಯೋಮಾನಕ್ಕೆ ಮೇಲ್ಪಟ್ಟ ಪ್ರತಿಯೊಬ್ಬರಿಗೂ ತಮಗೆ ಇಷ್ಟವಾಗುವ ವ್ಯಕ್ತಿಯನ್ನು ಮಧುವೆಯಾಗುವ ಸ್ವಾತಂತ್ರ್ಯ ಇದೆ. ಯಾವುದೇ ಒಂದು ಜಾತಿ ಇಂತಹುದೇ ಜಾತಿ – ಧರ್ಮದ ಹುಡುಗ ಅಥವಾ ಹುಡುಗಿಯನ್ನು ವಿವಾಹವಾಗಬೇಕೆಂಬ ಕಾನೂನು ನಮ್ಮ ಸಂವಿಧಾನದಲ್ಲಿ ಇಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್‌ನ ಒಳ ಒಪ್ಪಂದದಿಂದ ಉಪಚುನಾವಣೆಯನ್ನು ಗೆಲ್ಲಲಾಗಿದೆ: ಸಿದ್ದರಾಮಯ್ಯ

“ಲವ್ ಜಿಹಾದ್ ನಿಷೇಧದಂತಹ ಕಾನೂನು ಜಾರಿಗೊಳಿಸಲು ಸಂವಿಧಾನ ಅವಕಾಶ ನೀಡಲ್ಲ, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ ಕಾಯ್ದೆ ವಜಾಗೊಳ್ಳಲಿದೆ. ಇಂತಹಾ ಕಾಯ್ದೆಗಳಿಗೆ ಅವಕಾಶವಿಲ್ಲ ಎಂದು ಅಲಹಾಬಾದ್ ಹಾಗೂ ಕರ್ನಾಟಕದ ಉಚ್ಚ ನ್ಯಾಯಾಲಯಗಳು ಹೇಳಿವೆ. ಹಾಗಾಗಿ ಕಾಯ್ದೆ ಜಾರಿ ಅಸಾಧ್ಯ” ಎಂದು ಅವರು ತಿಳಿಸಿದ್ದಾರೆ.

“ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯೂ ಸೇರಿದಂತೆ ಬಿಜೆಪಿ ಹಾಗೂ ಆರ್.ಎಸ್.ಎಸ್ ನಾಯಕರು ನಮ್ಮಲ್ಲಿರುವ ಮಾನವೀಯತೆಯನ್ನು ನೋಡಿ ಕಲಿಯಬೇಕು. ಡಿ.ಕೆ ಶಿವಕುಮಾರ್ ಅವರಿಗೆ ನೀವು ಕಿವಿಮಾತು ಹೇಳುವುದೇನೋ ಸರಿ, ಆದರೆ ಅವರು ಯಾವಾಗ ಮಾನವೀಯತೆ, ಮನುಷ್ಯತ್ವವನ್ನು ಕಲಿಯುವುದು? ನಾನೂ ಸಗಣಿ ಬಾಚಿದ್ದೇನೆ, ಗಂಜಲ ಎತ್ತಿದ್ದೇನೆ. ಬಿಜೆಪಿಯ ಯಾವ ನಾಯಕರು ಈ ಕೆಲಸ ಮಾಡಿದ್ದಾರೆ? ಪಶು ಸಾಕಾಣಿಕೆ ಬಗ್ಗೆ ಅವರಿಗೇನು ಗೊತ್ತಿದೆ? ಹಸು- ಎತ್ತುಗಳಿಗೆ ವಯಸ್ಸಾದ ಮೇಲೆ ಅವನ್ನು ರೈತರು ಏನು ಮಾಡಬೇಕು? ಬಿಜೆಪಿಯವರ ಮನೆ ಬಾಗಿಲಿಗೆ ಕೊಂಡುಹೋಗಿ ಬಿಟ್ಟು ಬರಬೇಕೇ?” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿದ್ದಾರೆ.

ಇದನ್ನೂ ಓದಿ: ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...