Homeಚಳವಳಿಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು

ಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು

’ಅನ್ನ ತಿನ್ನುವವರು ಅನ್ನದಾತರನ್ನು ಬೆಂಬಲಿಸಿ ಎಂದರೆ, ನಾನು ರೊಟ್ಟಿ ತಿನ್ನುತ್ತೇನೆ ಎನ್ನುವ ಜನರ ಮನಸ್ಥಿತಿಗಳು ಬದಲಾಗುವವರೆಗೆ ನಮ್ಮ ದೇಶದಲ್ಲಿ ಬದಲಾವಣೆ ಕನಸಿನ ಮಾತು’

- Advertisement -
- Advertisement -

ದೇಶದ ರೈತರು ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ, ಚಳಿ, ಬಿಸಿಲೆನ್ನದೇ ದೇಶದ ರಸ್ತೆಗೆ ಇಳಿದಿದ್ದಾರೆ. ತಮ್ಮ ಹಕ್ಕುಗಳಿಗಾಗಿ, ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ದೆಹಲಿ ಚಲೋ ನಡೆಸುತ್ತಿದ್ದಾರೆ. ಇಡೀ ದೇಶವೇ ಅವರ ಬೆನ್ನಿಗೆ ನಿಂತಿದೆ. ಅವರಿಗೆ ಈಗ ಬೇಕಿರುವುದು ನೈತಿಕ ಬೆಂಬಲದ ಜೊತೆಗೆ ಆರ್ಥಿಕ ಬೆಂಬಲದ ಅಗ್ಯವಿದೆ. ಅನ್ನದ ಋಣ ತೀರಿಸಲು ಇದೊಂದು ಸವರ್ಣಾವಕಾಶ.

ನಿನ್ನೆ ಮೂವರು ಕೇಂದ್ರ ಸಚಿವರೊಂದಿಗೆ ನಡೆದ ಸಭೆಯಲ್ಲಿ ಸರ್ಕಾರದ ನಿರ್ಧಾರವನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದು, ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ ಎಂದು AIKSCC ಅಧಿಕೃತ ಹೇಳಿಕೆ ನೀಡಿದೆ.

ಕೇಂದ್ರ ಸರ್ಕಾರ ರೈತರ ಮುಖ್ಯ ಬೇಡಿಕೆಗಳಾವುದನ್ನು ಒಪ್ಪುವ ಲಕ್ಷಣ ಇಲ್ಲ. ಈ ಹಿನ್ನೆಲೆ ರೈತ ಸಂಘಟನೆಗಳು ಮತ್ತಷ್ಟು ದಿನಗಳ ಕಾಲ ದೀರ್ಘ ಹೋರಾಟಕ್ಕೆ ಅಣಿಯಾಗುತ್ತಿವೆ. ದೆಹಲಿಯಲ್ಲಿ ರೈತರ ಸಂಘರ್ಷ ತಿಂಗಳುಗಟ್ಟಲೆ ನಡೆಯಲಿದೆ. ಲಕ್ಷಾಂತರ ಅನ್ನದಾತರು ತಾವೇ ಕೆಲವು ಸಿದ್ಧತೆ ಮಾಡಿಕೊಂಡು ಬಂದಿದ್ದರೂ ವಿವಿಧ ಮೂಲ ಸೌಲಭ್ಯಗಳ ಅಗತ್ಯ ಇನ್ನೂ ಹೆಚ್ಚಾಗಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಬಗ್ಗೆ ಸಮಿತಿ ರಚಿಸುವ ಸರ್ಕಾರದ ಪ್ರಸ್ತಾಪ ತಿರಸ್ಕರಿಸಿದ ರೈತ ಮುಖಂಡರು: ಪ್ರತಿಭಟನೆ…

ರಾಜಸ್ಥಾನ, ಉತ್ತರ ಪ್ರದೇಶ, ಉತ್ತರ ಖಂಡ, ಮಧ್ಯಪ್ರದೇಶ ,ಬಿಹಾರ ಮೊದಲಾದ ಬೇರೆ-ಬೇರೆ ರಾಜ್ಯಗಳ ರೈತರು  ಈ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಆಹಾರ, ನೀರು ಸೇರಿ ಮೂಲಸೌಕರ್ಯಕ್ಕೆ ಆರ್ಥಿಕ ಸಹಾಯದ ಅವಶ್ಯಕತೆ ಇದೆ ಎಂದು ಅಖಿಲ ಭಾರತ ಕಿಸಾನ್ ಸಭಾ (AIKS) ಹೇಳಿದೆ.

ಪ್ರತಿಭಟನೆ ತೀವ್ರಗೊಳ್ಳುವಂತೆಯೇ, ಕೇಂದ್ರ ಸರ್ಕಾರದ ದೌರ್ಜನ್ಯ ಕೂಡ ಹೆಚ್ಚಾಗುವ ಸಂಭವವಿದೆ. ಆದ್ದರಿಂದ ದೊಡ್ಡ ಪ್ರಮಾಣದ ಹಣ ಸಹಾಯ ಅಗತ್ಯ ಇದೆ. ದೇಶದ ಜನರು, ಸಾಧ್ಯವಿರುವವರೆಲ್ಲಾ ಧನ ಸಹಾಯ ಮಾಡಿ ಎಂದು ಸಂಘಟನೆ ಮನವಿ ಮಾಡಿದೆ.

ದೆಹಲಿ ಚಲೋ

ದೇಶದ ಬಹುಸಂಖ್ಯಾತ ಅನ್ನದಾತರು ಬಡವರು, ವಿಶ್ವಕ್ಕೆ ಅನ್ನ ನೀಡುವ ಇವರು ತಮ್ಮ ಸಹಾಯಕ್ಕೆ ಮತ್ತೊಬ್ಬರ ಬಳಿ ಬೇಡುವ ಪರಿಸ್ಥಿತಿ ತಂದಿರುವ ಸರ್ಕಾರದ ವಿರುದ್ಧ ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲವೇ ಕೆಲವು ಸಂಖ್ಯೆಯಲ್ಲಿ ಕಾರುಗಳಲ್ಲಿ ಓಡಾಡುವವರನ್ನು ಗುರಿಯಾಗಿಸಿಕೊಂಡು ಮಾತನಾಡುವ ಜನತೆಗೆ ನೆಲ ಮೂಲದ ರೈತರ ಬವಣೆಗಳ ಬಗ್ಗೆ ಕನಿಷ್ಠ ಜ್ಞಾನವು ಇಲ್ಲ ಎಂದು ಟೀಕಿಸಿದ್ದಾರೆ. ಪ್ರತಿದಿನ ನಾವು ತಿನ್ನುವ ಅನ್ನವನ್ನೂ ನೊಡಿದಾಗಲಾದರೂ ಅನ್ನದಾತರ ಬೆಲೆ ಅರ್ಥವಾದಿತ್ತು. ಆದರೆ, ವಾಟ್ಸಾಪ್ ಯೂನಿವರ್ಸಿಟಿಗಳಲ್ಲಿ ಪದವಿ ಪಡೆದ ಜನರು ರೈತರನ್ನು ಭಯೋತ್ಪಾದಕರು ಎನ್ನುವ ಮಟ್ಟಕ್ಕೆ ಬಂದಿದ್ದಾರೆ. ಇದು ಕಳವಳಕಾರಿ ಸಂಗತಿ ಎಂದು ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತರ ಪ್ರತಿಭಟನೆಗೆ ಹರಿದು ಬಂತು ವಿದೇಶಿ ರಾಜಕೀಯ ನಾಯಕರ ಬೆಂಬಲ

ಅನ್ನ ತಿನ್ನುವವರು ಅನ್ನದಾತರನ್ನು ಬೆಂಬಲಿಸಿ ಎಂದರೆ, ನಾನು ರೊಟ್ಟಿ ತಿನ್ನುತ್ತೇನೆ ಎನ್ನುವ ಜನರ ಮನಸ್ಥಿತಿಗಳು ಬದಲಾಗುವವರೆಗೆ ನಮ್ಮ ದೇಶದಲ್ಲಿ ಬದಲಾವಣೆ ಕನಸಿನ ಮಾತು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ಹೇಳುತ್ತಾರೆ.

ಸದ್ಯ ದೇಶದಲ್ಲಿ ಭುಗಿಲೆದ್ದಿರುವ ರೈತರ ಪ್ರತಿಭಟನೆಗೆ ದೇಶದ ಜನರ ನೈತಿಕ ಬೆಂಬಲದ ಜೊತೆಗೆ ಆರ್ಥಿಕ ಬೆಂಬಲದ ಅಗತ್ಯವೂ ಇದ್ದು, ಭಾರತ ಮಾತೆಯ ರೈತ ಮಕ್ಕಳು ತಮಗೆ ಸಹಾಯ ನೀಡಿ ಎಂದು ಕೇಳುತ್ತಿದ್ದಾರೆ. ಅನ್ನದ ಋಣ ತೀರಿಸಲು ಇದೊಂದು ಸುವರ್ಣಾವಕಾಶವೆ ಸರಿ.

ಬ್ಯಾಂಕ್ ಖಾತೆ ವಿವರಗಳು ಹೀಗಿವೆ:

The Bank Account Details are as follows:

Name: All India Kisan Sabha

A/C No: 20032032844

Bank: ALLAHABAD BANK

Address: ALLAHABAD BANK BUILDING,

17 PARLIAMENT STREET, NEW DELHI

State: DELHI

IFSC Code: ALLA0210163 (used for RTGS, IMPS and NEFT transactions)

Branch Code: 210163

MICR Code: 110010026


ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...