Homeಚಳವಳಿಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು

ಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು

’ಅನ್ನ ತಿನ್ನುವವರು ಅನ್ನದಾತರನ್ನು ಬೆಂಬಲಿಸಿ ಎಂದರೆ, ನಾನು ರೊಟ್ಟಿ ತಿನ್ನುತ್ತೇನೆ ಎನ್ನುವ ಜನರ ಮನಸ್ಥಿತಿಗಳು ಬದಲಾಗುವವರೆಗೆ ನಮ್ಮ ದೇಶದಲ್ಲಿ ಬದಲಾವಣೆ ಕನಸಿನ ಮಾತು’

- Advertisement -
- Advertisement -

ದೇಶದ ರೈತರು ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ, ಚಳಿ, ಬಿಸಿಲೆನ್ನದೇ ದೇಶದ ರಸ್ತೆಗೆ ಇಳಿದಿದ್ದಾರೆ. ತಮ್ಮ ಹಕ್ಕುಗಳಿಗಾಗಿ, ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ದೆಹಲಿ ಚಲೋ ನಡೆಸುತ್ತಿದ್ದಾರೆ. ಇಡೀ ದೇಶವೇ ಅವರ ಬೆನ್ನಿಗೆ ನಿಂತಿದೆ. ಅವರಿಗೆ ಈಗ ಬೇಕಿರುವುದು ನೈತಿಕ ಬೆಂಬಲದ ಜೊತೆಗೆ ಆರ್ಥಿಕ ಬೆಂಬಲದ ಅಗ್ಯವಿದೆ. ಅನ್ನದ ಋಣ ತೀರಿಸಲು ಇದೊಂದು ಸವರ್ಣಾವಕಾಶ.

ನಿನ್ನೆ ಮೂವರು ಕೇಂದ್ರ ಸಚಿವರೊಂದಿಗೆ ನಡೆದ ಸಭೆಯಲ್ಲಿ ಸರ್ಕಾರದ ನಿರ್ಧಾರವನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದು, ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ ಎಂದು AIKSCC ಅಧಿಕೃತ ಹೇಳಿಕೆ ನೀಡಿದೆ.

ಕೇಂದ್ರ ಸರ್ಕಾರ ರೈತರ ಮುಖ್ಯ ಬೇಡಿಕೆಗಳಾವುದನ್ನು ಒಪ್ಪುವ ಲಕ್ಷಣ ಇಲ್ಲ. ಈ ಹಿನ್ನೆಲೆ ರೈತ ಸಂಘಟನೆಗಳು ಮತ್ತಷ್ಟು ದಿನಗಳ ಕಾಲ ದೀರ್ಘ ಹೋರಾಟಕ್ಕೆ ಅಣಿಯಾಗುತ್ತಿವೆ. ದೆಹಲಿಯಲ್ಲಿ ರೈತರ ಸಂಘರ್ಷ ತಿಂಗಳುಗಟ್ಟಲೆ ನಡೆಯಲಿದೆ. ಲಕ್ಷಾಂತರ ಅನ್ನದಾತರು ತಾವೇ ಕೆಲವು ಸಿದ್ಧತೆ ಮಾಡಿಕೊಂಡು ಬಂದಿದ್ದರೂ ವಿವಿಧ ಮೂಲ ಸೌಲಭ್ಯಗಳ ಅಗತ್ಯ ಇನ್ನೂ ಹೆಚ್ಚಾಗಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಬಗ್ಗೆ ಸಮಿತಿ ರಚಿಸುವ ಸರ್ಕಾರದ ಪ್ರಸ್ತಾಪ ತಿರಸ್ಕರಿಸಿದ ರೈತ ಮುಖಂಡರು: ಪ್ರತಿಭಟನೆ…

ರಾಜಸ್ಥಾನ, ಉತ್ತರ ಪ್ರದೇಶ, ಉತ್ತರ ಖಂಡ, ಮಧ್ಯಪ್ರದೇಶ ,ಬಿಹಾರ ಮೊದಲಾದ ಬೇರೆ-ಬೇರೆ ರಾಜ್ಯಗಳ ರೈತರು  ಈ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಆಹಾರ, ನೀರು ಸೇರಿ ಮೂಲಸೌಕರ್ಯಕ್ಕೆ ಆರ್ಥಿಕ ಸಹಾಯದ ಅವಶ್ಯಕತೆ ಇದೆ ಎಂದು ಅಖಿಲ ಭಾರತ ಕಿಸಾನ್ ಸಭಾ (AIKS) ಹೇಳಿದೆ.

ಪ್ರತಿಭಟನೆ ತೀವ್ರಗೊಳ್ಳುವಂತೆಯೇ, ಕೇಂದ್ರ ಸರ್ಕಾರದ ದೌರ್ಜನ್ಯ ಕೂಡ ಹೆಚ್ಚಾಗುವ ಸಂಭವವಿದೆ. ಆದ್ದರಿಂದ ದೊಡ್ಡ ಪ್ರಮಾಣದ ಹಣ ಸಹಾಯ ಅಗತ್ಯ ಇದೆ. ದೇಶದ ಜನರು, ಸಾಧ್ಯವಿರುವವರೆಲ್ಲಾ ಧನ ಸಹಾಯ ಮಾಡಿ ಎಂದು ಸಂಘಟನೆ ಮನವಿ ಮಾಡಿದೆ.

ದೆಹಲಿ ಚಲೋ

ದೇಶದ ಬಹುಸಂಖ್ಯಾತ ಅನ್ನದಾತರು ಬಡವರು, ವಿಶ್ವಕ್ಕೆ ಅನ್ನ ನೀಡುವ ಇವರು ತಮ್ಮ ಸಹಾಯಕ್ಕೆ ಮತ್ತೊಬ್ಬರ ಬಳಿ ಬೇಡುವ ಪರಿಸ್ಥಿತಿ ತಂದಿರುವ ಸರ್ಕಾರದ ವಿರುದ್ಧ ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲವೇ ಕೆಲವು ಸಂಖ್ಯೆಯಲ್ಲಿ ಕಾರುಗಳಲ್ಲಿ ಓಡಾಡುವವರನ್ನು ಗುರಿಯಾಗಿಸಿಕೊಂಡು ಮಾತನಾಡುವ ಜನತೆಗೆ ನೆಲ ಮೂಲದ ರೈತರ ಬವಣೆಗಳ ಬಗ್ಗೆ ಕನಿಷ್ಠ ಜ್ಞಾನವು ಇಲ್ಲ ಎಂದು ಟೀಕಿಸಿದ್ದಾರೆ. ಪ್ರತಿದಿನ ನಾವು ತಿನ್ನುವ ಅನ್ನವನ್ನೂ ನೊಡಿದಾಗಲಾದರೂ ಅನ್ನದಾತರ ಬೆಲೆ ಅರ್ಥವಾದಿತ್ತು. ಆದರೆ, ವಾಟ್ಸಾಪ್ ಯೂನಿವರ್ಸಿಟಿಗಳಲ್ಲಿ ಪದವಿ ಪಡೆದ ಜನರು ರೈತರನ್ನು ಭಯೋತ್ಪಾದಕರು ಎನ್ನುವ ಮಟ್ಟಕ್ಕೆ ಬಂದಿದ್ದಾರೆ. ಇದು ಕಳವಳಕಾರಿ ಸಂಗತಿ ಎಂದು ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತರ ಪ್ರತಿಭಟನೆಗೆ ಹರಿದು ಬಂತು ವಿದೇಶಿ ರಾಜಕೀಯ ನಾಯಕರ ಬೆಂಬಲ

ಅನ್ನ ತಿನ್ನುವವರು ಅನ್ನದಾತರನ್ನು ಬೆಂಬಲಿಸಿ ಎಂದರೆ, ನಾನು ರೊಟ್ಟಿ ತಿನ್ನುತ್ತೇನೆ ಎನ್ನುವ ಜನರ ಮನಸ್ಥಿತಿಗಳು ಬದಲಾಗುವವರೆಗೆ ನಮ್ಮ ದೇಶದಲ್ಲಿ ಬದಲಾವಣೆ ಕನಸಿನ ಮಾತು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ಹೇಳುತ್ತಾರೆ.

ಸದ್ಯ ದೇಶದಲ್ಲಿ ಭುಗಿಲೆದ್ದಿರುವ ರೈತರ ಪ್ರತಿಭಟನೆಗೆ ದೇಶದ ಜನರ ನೈತಿಕ ಬೆಂಬಲದ ಜೊತೆಗೆ ಆರ್ಥಿಕ ಬೆಂಬಲದ ಅಗತ್ಯವೂ ಇದ್ದು, ಭಾರತ ಮಾತೆಯ ರೈತ ಮಕ್ಕಳು ತಮಗೆ ಸಹಾಯ ನೀಡಿ ಎಂದು ಕೇಳುತ್ತಿದ್ದಾರೆ. ಅನ್ನದ ಋಣ ತೀರಿಸಲು ಇದೊಂದು ಸುವರ್ಣಾವಕಾಶವೆ ಸರಿ.

ಬ್ಯಾಂಕ್ ಖಾತೆ ವಿವರಗಳು ಹೀಗಿವೆ:

The Bank Account Details are as follows:

Name: All India Kisan Sabha

A/C No: 20032032844

Bank: ALLAHABAD BANK

Address: ALLAHABAD BANK BUILDING,

17 PARLIAMENT STREET, NEW DELHI

State: DELHI

IFSC Code: ALLA0210163 (used for RTGS, IMPS and NEFT transactions)

Branch Code: 210163

MICR Code: 110010026


ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...