Homeಮುಖಪುಟ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ಟೈಮ್ ನಿಯತಕಾಲಿಕೆಯ 2020 ರ 100 ಅತ್ಯಂತ ಪ್ರಭಾವಶಾಲಿ ಜನರ ಪಟ್ಟಿಯಲ್ಲಿ ಬಿಲ್ಕೀಸ್ ಬಾನು ಸ್ಥಾನ ಪಡೆದಿದ್ದಾರೆ. ಅಲ್ಲದೆ ತೀರಾ ಇತ್ತೀಚೆಗೆ ಬಿಬಿಸಿಯ ವರ್ಷದ ಪ್ರಭಾವಶಾಲಿ ಮಹಿಳೆಯಾಗಿ ಹೊರಹೊಮ್ಮಿದ್ದಾರೆ.

- Advertisement -
- Advertisement -

“ಶಾಹೀನ್ ಬಾಗ್‌‌ನ ದಾದಿ” ಎಂದೆ ಪ್ರೀತಿಯಿಂದ ಕರೆಯಲ್ಪಡುವ ಸಿಎಎ ವಿರುದ್ದದ ಹೋರಾಟದ ಸ್ಪೂರ್ತಿಯಾಗಿರುವ 82 ವರ್ಷದ ಬಿಲ್ಕಿಸ್ ಬಾನು ಅವರ ಬಗ್ಗೆ ಬಾಲಿವುಡ್ ನಟಿ ಕಂಗನಾ ರಾಣಾವತ್‌ ನೀಡಿರುವ ಹೇಳಿಕೆಗೆ ಕಾನೂನು ನೋಟಿಸ್ ನೀಡಲಾಗಿದೆ.

ದೆಹಲಿಯ ಶಾಹೀನ್ ಬಾಗ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಟೈಮ್ ನಿಯತಕಾಲಿಕೆಯ 2020 ರ 100 ಅತ್ಯಂತ ಪ್ರಭಾವಶಾಲಿ ಜನರ ಪಟ್ಟಿಯಲ್ಲಿ ಬಿಲ್ಕೀಸ್ ಬಾನು ಸ್ಥಾನ ಪಡೆದಿದ್ದಾರೆ. ಅಲ್ಲದೆ ತೀರಾ ಇತ್ತೀಚೆಗೆ ಬಿಬಿಸಿಯ ವರ್ಷದ ಪ್ರಭಾವಶಾಲಿ ಮಹಿಳೆಯಾಗಿ ಹೊರಹೊಮ್ಮಿದ್ದಾರೆ.

ಇದನ್ನೂಓದಿ: ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

ವಿವಾದಾತ್ಮಕ ಟ್ವೀಟನ್ನು ಕಂಗನಾ ಈಗ ಅಳಿಸಿದ್ದು ಅದರಲ್ಲಿ, “ಹಹಹ ಇದು ಅದೇ ದಾದಿ, ಟೈಮ್ ಮ್ಯಾಗಝಿನ್ ಹೇಳಿರುವ ಅತ್ಯಂತ ಪ್ರಭಾವಶಾಲಿ ಇಂಡಿಯನ್…ಮತ್ತು ಅವರು 100 ರುಪಾಯಿಗೆ ಸಿಗುತ್ತಾರೆ. ಭಾರತ ಮುಜುಗರಕ್ಕೀಡಾಗಲು ಅಂತರಾಷ್ಟ್ರೀಯ ಪಿಆರ್‌ಗಳನ್ನು ಪಾಕಿಸ್ತಾನಿ ಪತ್ರಕರ್ತರು ಹೈಜಾಕ್ ಮಾಡಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಮಗಾಗಿ ಮಾತನಾಡಲು ನಮ್ಮದೇ ಜನರು ಬೇಕು” ಎಂದು ಟ್ವೀಟ್ ಮಾಡಿದ್ದರು.

ಪಂಜಾಬ್‌ನ ಜಿರಾಕ್‌ಪುರ ಪಟ್ಟಣದ ವಕೀಲರು ಕಾನೂನು ನೋಟಿಸ್ ಕಳುಹಿಸಿದ್ದು, ಏಳು ದಿನಗಳ ಒಳಗಾಗಿ ಕಂಗನಾ ಅವರ ಟ್ವೀಟ್‌ಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿರುವ ವೃದ್ದ ಮಹಿಳೆಯೊಬ್ಬರನ್ನು ಕಂಗನಾ “ಬಿಲ್ಕಿಸ್ ದಾದಿ” ಎಂದು ತಪ್ಪಾಗಿ ಗುರುತಿಸಿದ್ದಾರೆ ಎಂದು ವಕೀಲರು ತಮ್ಮ ನೋಟಿಸ್‌ನಲ್ಲಿ ತಿಳಿಸಿದ್ದಾರೆ. ಸ್ವತಃ ಬಿಲ್ಕಿಸ್ ಬಾನೂ ಅವರೇ ಚಿತ್ರದಲ್ಲಿರುವ ಮಹಿಳೆ ತಾನಲ್ಲ ಎಂದು ದೃಡಪಡಿಸಿದ್ದಾರೆ.

ಕಾನೂನು ನೋಟಿಸ್, “ಮಹಿಳೆಯು ನಕಲಿ ಅಲ್ಲ, ಅವರ ಹೆಸರು ಮನಿಂದರ್ ಕೌರ್ ಹಾಗೂ ಅವರು ಬಹದ್ದೂರ್ ಗಡ್ ಗ್ರಾಮಕ್ಕೆ ಸೇರಿದವರು” ಎಂದು ಹೇಳಿದೆ.

ಇದನ್ನೂ ಓದಿ: ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಶಾಹೀನ್‌ಬಾಗ್ ಅಜ್ಜಿ ಬಿಲ್ಕೀಸ್‌ರನ್ನು ಬಂಧಿಸಿದ ಪೊಲೀಸರು!

ಕಂಗನಾ ತನ್ನ ಟ್ವೀಟ್ ಮೂಲಕ ರೈತರ ಪ್ರತಿಭಟನೆಯನ್ನು ಅಪಹಾಸ್ಯ ಮಾಡಿದ್ದಾರೆ ಎಂದು ನೋಟಿಸ್‌‌ನಲ್ಲಿ ತಿಳಿಸಲಾಗಿದೆ. “ಈ ರೀತಿಯಾಗಿ ಟ್ವೀಟ್ ಮಾಡುವ ಮೂಲಕ, ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಜನರನ್ನು ಬಾಡಿಗೆಗೆ ತರುವ ಮೂಲಕ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆಂದು” ಎಂದು ಅದು ಹೇಳುತ್ತದೆ.

ಮಂಗಳವಾರ ಸಂಜೆ ದೆಹಲಿ-ಹರಿಯಾಣದ ಸಿಂಗು ಗಡಿಯಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಲು ಬಿಲ್ಕೀಸ್ ಬಾನು ಬಂದಿದ್ದು, ಆದರೆ ಅವರನ್ನು ಪೊಲೀಸರು ಬಂಧಿಸಿದರು. “ನಾವು ರೈತರನ್ನು ಬೆಂಬಲಿಸಲು ಇಲ್ಲಿದ್ದೇವೆ. ಶಾಹೀನ್ ಬಾಗ್‌‌ನಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಅವರು ನಮ್ಮನ್ನು ಬೆಂಬಲಿಸಿದರು. ಈಗ ನಾವು ಅವರಿಗಾಗಿ ಇಲ್ಲಿದ್ದೇವೆ. ಹೊಸ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ” ಎಂದು ಅವರು ಪ್ರತಿಭಟನಾ ಸ್ಥಳದಲ್ಲಿ ಹೇಳಿದ್ದರು.

ಭಾರತದ ಹಲವಾರು ರಾಜ್ಯಗಳ ರೈತರು ದೆಹಲಿಯ ಗಡಿಯಲ್ಲಿ ನಿರಂತರ ಏಳು ದಿನದಿಂದ ಪ್ರತಿಭಟನೆ ನಡೆಸುತ್ತಿದ್ದು, ಅವರು ಕೇಂದ್ರದ ಕೃಷಿ ಕಾನೂನುಗಳಿಗೆ ವಿರುದ್ಧವಾಗಿ ಘೋಷಣೆ ಕೂಗುತ್ತಿದ್ದಾರೆ. ಮಂಗಳವಾರ ಕೇಂದ್ರ ಸರ್ಕಾರ ಮತ್ತು 30 ಕ್ಕೂ ಹೆಚ್ಚು ಯೂನಿಯನ್ ನಾಯಕರ ನಡುವಿನ ಮಾತುಕತೆ ಮುರಿದು ಬಿದ್ದಿದ್ದು, ನಾಳೆ ನಾಲ್ಕನೇ ಸುತ್ತಿನ ಮಾತುಕತೆಗೆ ಕೇಂದ್ರ ಕರೆ ನೀಡಿದೆ.

ಇದನ್ನೂ ಓದಿ: ಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...