Homeಕರ್ನಾಟಕವರ್ಗಾವಣೆ ಖಂಡಿಸಿ ಉದಯ ಟಿವಿ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ 7ನೇ ದಿನಕ್ಕೆ

ವರ್ಗಾವಣೆ ಖಂಡಿಸಿ ಉದಯ ಟಿವಿ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ 7ನೇ ದಿನಕ್ಕೆ

ಸನ್ ಟಿವಿ ನೆಟ್‌ವರ್ಕ್, ಬೆಂಗಳೂರು ಕೇಂದ್ರದಲ್ಲಿ ಕೆಲಸ ಮಾಡುತ್ತಿರುವವರನ್ನು ಕೋಲ್ಕತಾ, ನೋಯ್ಡಾ, ಮುಂಬಯಿ, ಹೈದರಾಬಾದ್, ಚೆನ್ನೈ ನಗರಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.

- Advertisement -
- Advertisement -

ಕಾನೂನು ಬಾಹಿರವಾಗಿ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ, ಆಡಳಿತ ಮಂಡಳಿಯ ಕ್ರಮವನ್ನು ಖಂಡಿಸಿ ಉದಯ ಟಿವಿ ಸಿಬ್ಬಂದಿ ಬೆಂಗಳೂರಿನ ಮಾರನ್ ಟವರ್ಸ್ ಮುಂದೆ ನಡೆಸುತ್ತಿರುವ ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿದೆ.

ನವೆಂಬರ್‌ 26 ರಂದು ಆರಂಭಿಸಿರುವ ಪ್ರತಿಭಟನೆ ಇನ್ನು ನಡೆಯುತ್ತಲೇ ಇದೆ. ಇತ್ತ ದೇಶದ ರೈತರು ಚಳಿ, ಮಳೆ ಎನ್ನದೇ ಕೃಷಿ ಕಾನೂನುಗಳ ವಿರುದ್ಧ ಹೋರಾಡುತಿದ್ದರೆ, ಉದಯ ಟಿವಿ ನೌಕರರು ಕೂಡ ಚಳಿ, ಮಳೆಯ ನಡುವೆಯೇ ಉದಯ ಟಿವಿ ಕಚೇರಿಯ ಮುಖ್ಯದ್ವಾರದಲ್ಲಿ ಕೂತು ಮೌನ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಆಡಳಿತ ಮಂಡಳಿಯ ಅನುಚಿತ ನೀತಿ, ಕಾನೂನುಬಾಹಿರ ವರ್ಗಾವಣೆಯನ್ನು ಖಂಡಿಸಿ ಏಳನೇಯ ದಿನ ಕಚೇರಿಯ ಮುಂದೆ ಸಿಬ್ಬಂದಿ ವರ್ಗ ಮೌನ ಪ್ರತಿಭಟನೆಯನ್ನು ಮುಂದುವರೆಸಿ, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ಸುಳಿವು ನೀಡಿದ್ದಾರೆ.

ಇದನ್ನೂ ಓದಿ: ರಾಮನಗರ ಅರವಿಂದ್ ಫ್ಯಾಶನ್ ಲಿಮಿಟೆಡ್ ಕಾರ್ಖಾನೆ ಲಾಕೌಟ್: ಬೀದಿಗೆ ಬಿದ್ದ ಕಾರ್ಮಿಕರು

ರಾಜ್ಯದಲ್ಲಿ ಇಪ್ಪತ್ತೈದು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಜನಪ್ರಿಯ ವಾಹಿನಿಯಾದ ಉದಯ ಟಿವಿ ಆಡಳಿತ ಮಂಡಳಿ, ಸಂಸ್ಥೆಯಲ್ಲಿ ಕಾರ್ಮಿಕ ಸಂಘ ಅಸ್ಥಿತ್ವಕ್ಕೆ ಬಂದಿರುವುದನ್ನು ಸಹಿಸಿಕೊಳ್ಳಲಾಗದೇ, ಪ್ರತಿಕಾರವಾಗಿ ಭಾಷೆಯೇ ಗೊತ್ತಿಲ್ಲದ ಸಿಬ್ಬಂದಿಯನ್ನು ಬಂಗಾಲಿ, ಹಿಂದಿ, ಮರಾಠಿ ಭಾಷೆಯ ಪ್ರದೇಶಗಳಿಗೆ ವರ್ಗಾವಣೆ ಮಾಡಿದೆ ಎಂದು ಪ್ರತಿಭಟನಾನಿರತ ಸಿಬ್ಬಂದಿ ವರ್ಗ ಆರೋಪಿಸಿದೆ.

’ಸಂಸ್ಥೆ ಕೆಲಸ ನೀಡಲು ನಿರಾಕರಿಸಿದೆ. ಮೂರು ತಿಂಗಳಿಂದ ವೇತನವಿಲ್ಲದೇ ನಮ್ಮ ಬದುಕು ಅಕ್ಷರಶಃ ಬೀದಿಗೆ ಬಿದ್ದಿದೆ. ನಮಗೆ ಭಾಷೆ ಗೊತ್ತಿಲ್ಲದ ಪ್ರದೇಶದಲ್ಲಿ, ಕೇವಲ ಹತ್ತು ಸಾವಿರ ರೂಪಾಯಿ ಸಂಬಳದಲ್ಲಿ ಕೋಲ್ಕತ್ತಾ ಹೋಗಿ ಹೇಗೆ ಕೆಲಸ ಮಾಡಬೇಕು..?” ಎಂದು ನೌಕರ ರಾಜೇಶ್ ತಮ್ಮ ಅಳಲು ತೋಡಿಕೊಂಡಿದ್ದಾರೆ.

PC: Voiceofworkers.In

ಆಡಳಿತ ಮಂಡಳಿ ಸ್ಟ್ಯಾಂಡಿಂಗ್ ಆರ್ಡರ್ ಜಾರಿಗೆ ತರದೇ ಇರುವುದೇ ಇಡೀ ಬಿಕ್ಕಟ್ಟಿಗೆ ಮೂಲ ಕಾರಣ ಎನ್ನಲಾಗುತ್ತಿದೆ. ಬೋನಸ್, ಕನಿಷ್ಠ ವೇತನ, ಇಂಕ್ರೀಮೆಂಟ್, ಟಿಎ, ಡಿಎ, ಇಎಸ್ಐ, ಪಿಎಫ್ ಗಳಂತಹ ಸಾಮಾನ್ಯ ಕಾರ್ಮಿಕ ಸವಲತ್ತುಗಳನ್ನು ನೀಡದೇ ಇರುವುದನ್ನು ಪ್ರಶ್ನಿಸಿದಕ್ಕೆ ಈ ರೀತಿ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.

ಸನ್ ಟಿವಿ ನೆಟ್‌ವರ್ಕ್, ಬೆಂಗಳೂರು ಕೇಂದ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಉದ್ಯೋಗಿಗಳನ್ನು ದೂರದ ಕೋಲ್ಕತಾ, ನೋಯ್ಡಾ, ಮುಂಬಯಿ, ಹೈದರಾಬಾದ್, ಚೆನ್ನೈ ನಗರಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆ ಒಪ್ಪದ ಸಿಬ್ಬಂದಿಗೆ ಕೆಲಸ ನೀಡದೇ ಹೊರಗಟ್ಟಿದೆ.


ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...