Homeಅಂತರಾಷ್ಟ್ರೀಯಗಾಲ್ವಾನ್ ಸಂಘರ್ಷ ಚೀನಾದ ಪೂರ್ವ ಯೋಜಿತ ಕೃತ್ಯ: ಅಮೆರಿಕಾ ವರದಿ

ಗಾಲ್ವಾನ್ ಸಂಘರ್ಷ ಚೀನಾದ ಪೂರ್ವ ಯೋಜಿತ ಕೃತ್ಯ: ಅಮೆರಿಕಾ ವರದಿ

- Advertisement -
- Advertisement -

ಜೂನ್‌ 15 ರಂದು ಚೀನಾ ಮತ್ತು ಭಾರತೀಯ ಸೇನೆಯ ನಡುವೆ ಗಾಲ್ವಾನ್‌ ಕಣಿವೆಯಲ್ಲಿ ನಡೆದ ಘರ್ಷಣೆಗೆ ಚೀನಾ ಸರ್ಕಾರ ಮೊದಲೇ ಯೋಜನೆ ರೂಪಿಸಿತ್ತು ಎಂದು ಅಮೆರಿಕ ಕಾಂಗ್ರೆಸ್‌ಗೆ ಸಲ್ಲಿಕೆಯಾಗಿರುವ ಇತ್ತೀಚಿನ ವರದಿಯಲ್ಲಿ ಹೇಳಲಾಗಿದೆ. ಈ ಯೋಜನೆಯಂತೆ ಅಲ್ಲಿ ಸಾಕಷ್ಟು ಸಾವುನೋವುಗಳನ್ನು ಉಂಟು ಮಾಡುವುದೇ ಅದರ ದುರುದ್ದೇಶವಾಗಿತ್ತೆಂದು ಅದು ಹೇಳಿದೆ.

ಮಂಗಳವಾರ ಪ್ರಕಟವಾದ ಈ ವರದಿಯಲ್ಲಿ, ತನ್ನ ನೆರೆಹೊರೆಯ ರಾಷ್ಟ್ರಗಳ ವಿರುದ್ಧ ಚೀನಾವು ಹಲವಾರು ವರ್ಷಗಳಿಂದ ಬೆದರಿಸುವ ಅಭಿಯಾನವನ್ನು ನಡೆಸುತ್ತಾ ಬಂದಿದ್ದು, ಜಪಾನ್‌, ಭಾರತ ಸೇರಿದಂತೆ ಆಗ್ನೇಯ ಏಷ್ಯಾದ ರಾಷ್ಟ್ರಗಳ ಜೊತೆ ಮಿಲಿಟರಿ ಉದ್ವಿಗ್ನತೆಯನ್ನು ಪ್ರಚೋದಿಸುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಚೀನಾ ಪ್ರಸ್ತಾಪಿತ ಒಪ್ಪಂದಕ್ಕೆ ಸಹಿ ಹಾಕಿದ 15 ರಾಷ್ಟ್ರಗಳು; ಹೊರಗುಳಿದ ಭಾರತ!

ಚೀನಾ-ಭಾರತದ ಸಂಬಂಧಗಳ ವಿಷಯದಲ್ಲಿ 2020 ಅತ್ಯಂತ ‘ಕೆಟ್ಟ ವರ್ಷ’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಗಲ್ವಾನ್ ಸಂಘರ್ಷವು 1975ರ ಯುದ್ಧದ ಬಳಿಕ ಇದೇ ಮೊದಲ ಬಾರಿಗೆ ಎರಡೂ ಕಡೆಯ ಸೈನಿಕರ ಸಾವು, ನೋವಿಗೆ ಕಾರಣವಾಗಿದೆಯೆಂದು ವರದಿ ತಿಳಿಸಿದೆ.

ಶಾಂತಿ ಕಾಲದಲ್ಲಿ ಚೀನಾ ಆಡಳಿತ ಪಕ್ಷವು ತನ್ನ ಸಶಸ್ತ್ರ ಪಡೆಗಳನ್ನು ಬೆದರಿಕೆಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ತೈವಾನ್ ಮತ್ತು ದಕ್ಷಿಣ ಚೀನಾ ಸಾಗರಪ್ರದೇಶದಲ್ಲಿ ಬೃಹತ್ ಪ್ರಮಾಣದಲ್ಲಿ ಸಮರಾಭ್ಯಾಸಗಳನ್ನು ನಡೆಸಿ ಭೀತಿ ಮೂಡಿಸಲು ಯತ್ನಿಸುತ್ತಿದೆ ಎಂದು ವರದಿ ಹೇಳಿದೆ.

ಚೀನಾದ ಆಕ್ರಮಣಕಾರಿ ಕ್ರಮಗಳ ಹಿನ್ನೆಲೆಯಲ್ಲಿ ಭಾರತ ಮತ್ತು ಚೀನಾದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ‘ಅಮೆರಿಕ-ಚೀನಾ ಆಯೋಗ’ ಅಮೆರಿಕ ಕಾಂಗ್ರೆಸ್‌ಗೆ ವಿವರವಾದ ಈ ವರದಿಯನ್ನು ನೀಡಿದೆ. ಅಮೆರಿಕ ಮತ್ತು ಚೀನಾ ನಡುವಿನ ಭದ್ರತೆ ಮತ್ತು ವ್ಯಾಪಾರ ಸಮಸ್ಯೆಗಳನ್ನು ಮೇಲ್ವಿಚಾರಣೆ ಮಾಡಲು 2000 ನೇ ಅಕ್ಟೋಬರ್‌ನಲ್ಲಿ ‘ಅಮೆರಿಕ-ಚೀನಾ ಆಯೋಗ’ವನ್ನು ರಚಿಸಲಾಗಿತ್ತು.

ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಈ ಸಂಘರ್ಷದಿಂದ ಭಾರತದ ಸುಮಾರು 20 ಯೋಧರು ಸಾವನ್ನಪ್ಪಿದ್ದರು. ಚೀನಾ ಕೂಡಾ ಸಾವು ನೋವುಗಳಾಗಿತ್ತು ಎಂದು ಒಪ್ಪಿಕೊಂಡಿದ್ದರೂ ಸಾವಿನ ಸಂಖ್ಯೆಯನ್ನು ಬಹಿರಂಗಪಡಿಸಿರಲಿಲ್ಲ.

ಇದನ್ನೂ ಓದಿ: ಚೀನಾ ನಮ್ಮ ಭೂಪ್ರದೇಶವನ್ನು ವಶಪಡಿಸಿಕೊಂಡಿದೆ ಎಂಬುದು ಸ್ಪಷ್ಟ: ಮೋಹನ್ ಭಾಗವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...