Homeಮುಖಪುಟಭೋಪಾಲ್ ಅನಿಲ ದುರಂತಕ್ಕೆ 36 ವರ್ಷ: ಇನ್ನೂ ನ್ಯಾಯಕ್ಕಾಗಿ ಕಾಯುತ್ತಿರುವ ಸಂತ್ರಸ್ತರು

ಭೋಪಾಲ್ ಅನಿಲ ದುರಂತಕ್ಕೆ 36 ವರ್ಷ: ಇನ್ನೂ ನ್ಯಾಯಕ್ಕಾಗಿ ಕಾಯುತ್ತಿರುವ ಸಂತ್ರಸ್ತರು

ಸರ್ಕಾರಗಳ ಹೊಣೆಗೇಡಿತನದಿಂದಾಗಿ ಸಾವಿರಾರು ಜನರ ಸಾವಿಗೆ ಕಾರಣವಾದ ವ್ಯಕ್ತಿ ವಾರೆನ್ ಆಂಡರ್ಸನ್‌ಗೆ ಶಿಕ್ಷೆಯಾಗಲಿಲ್ಲ. ಆತ ತುಂಬು ಜೀವನ ನಡೆಸಿ 2014ರಲ್ಲಿ ತನ್ನ 92ನೇ ವಯಸ್ಸಿನಲ್ಲಿ ನಿಧನನಾದ.

- Advertisement -
- Advertisement -

1984ರ ಡಿಸೆಂಬರ್ 2-3  ರ ರಾತ್ರಿ ಯೂನಿಯನ್ ಕಾರ್ಬೈಡ್ ಎಂಬ ಕಂಪನಿ ಭೋಪಾಲಿನ 3000 ಕ್ಕೂ ಹೆಚ್ಚು ಮಂದಿಗೆ ಮಿಥೈಲ್ ಐಸೋಸಯನೇಟ್ ಎಂಬ ವಿಷ ಅನಿಲ ಕುಡಿಸಿ ಕೊಂದು ಹಾಕಿತ್ತು ಎಂದು ಸರ್ಕಾರದ ವರದಿಗಳು ಹೇಳುತ್ತವೆ. ಆದರೆ ಈ ಅನಿಲ ದುರಂತದಲ್ಲಿ ಮಡಿದ ಮತ್ತು ಬದುಕುಳಿದ ಜನರ ಪರವಾಗಿ ಹೋರಾಡುತ್ತಿರುವ ಸಂಘಟನೆಗಳು ಈ ದುರಂತದಿಂದಾಗಿ 25,000 ಜನ ಸಾವನಪ್ಪಿದ್ದಾರೆ ಎಂದು ವಾದಿಸುತ್ತಿದೆ. ಇಷ್ಟೆಲ್ಲದರ ನಡುವೆ ಪ್ರಪಂಚದ ಅತಿ ದೊಡ್ಡ ಔಧ್ಯಮಿಕ ದುರಂತದ ಈ ದುರ್ಘಟನೆ ನಡೆದು 36 ವರ್ಷ ಕಳೆದರೂ ಸಂತ್ರಸ್ತರಿಗೆ ನ್ಯಾಯವೆಂಬುದು ಮರೀಚಿಕೆಯಾಗಿದೆ.

1984 ರಲ್ಲಿ ಸಂಭವಿಸಿದ ಭೋಪಾಲ್ ಅನಿಲ ದುರಂತದಿಂದಾಗಿ 8000 ಜನ ಸತ್ತು, 5,25,000 ಜನ ಬಾಧಿತರಾಗಿದ್ದಕ್ಕೆ ಕೊನೆಗೂ ಯೂನಿಯನ್ ಕಾರ್ಬೈಡ್ ಕಂಪನಿ ಪರಿಹಾರವಾಗಿ ಕೊಟ್ಟಿದ್ದು 450 ಮಿಲಿಯನ್ ಡಾಲರ್ – ಅಂದರೆ 1,500 ಕೋಟಿ ರೂಪಾಯಿಗಳನ್ನು ಮಾತ್ರ. ಅಲ್ಲದೆ ಭೋಪಾಲ್‍ನಲ್ಲಿ ಮಡಿದ ಭಾರತೀಯರಿಗೂ ಅಮೆರಿಕದ ಮಾಲೀಕತ್ವದ ಯೂನಿಯನ್ ಕಾರ್ಬೈಡ್ ಕಂಪನಿಗೂ ಯಾವುದೇ ಸಂಬಂಧವಿಲ್ಲ ಎಂಬಂತಲೇ ವರ್ತಿಸಿಕೊಂಡು ಬಂದಿರುವ ಈ ಕಂಪನಿಯು ತಾನು ಎಸಗಿದ ಕೊಲೆಗಳಿಂದ ಬಚಾವಾಗಲೂ ಮಾಡಿದ ಷಡ್ಯಂತ್ರಗಳು ಒಂದೆರಡಲ್ಲ. ಅವುಗಳಲ್ಲಿ ಪ್ರಮುಖವಾದದ್ದು 2000 ರಲ್ಲಿ ಯೂನಿಯನ್ ಕಾರ್ಬೈಡ್ ಕಂಪನಿಯನ್ನೇ ಡೌ ಎಂಬ ಮತ್ತೊಂದು ಕಂಪನಿಗೆ ಮಾರಿದ್ದು. ಇದನ್ನು ಡೌ ಕಂಪನಿಯು ಕೊಂಡಿದ್ದೇ ಯೂನಿಯನ್ ಕಾರ್ಬೈಡ್‍ನ ಯಾವ ಹೊಣೆಗಾರಿಕೆಗೂ ತಾನು ಜವಾಬ್ದಾರನಲ್ಲ ಎಂಬ ಷರತ್ತಿನ ಮೇಲೆ.

ಹತ್ತು ವರ್ಷಗಳ ಹಿಂದೆ 2010ರಲ್ಲಿ ಭೋಪಾಲ್ ಕೋರ್ಟ್ ತೀರ್ಪು ನೀಡಿತು. ಸಾವಿರಾರು ಜನರ ಸಾವಿಗೆ. ಲಕ್ಷಾಂತರ ಜನರ ನೋವಿಗೆ ನ್ಯಾಯವಾಗಿ ಅಪರಾಧಿಗಲಿಗೆ ಕೋರ್ಟ್ ಕೊಟ್ಟ ಶಿಕ್ಷೆ ಕೇವಲ 2 ವರ್ಷದ ಸಜೆ! ಆ ದುರಂತದಲ್ಲಿ ಸತ್ತವರಲ್ಲಿ ಬಹಳಷ್ಟು ಜನ ಬಡವರು, ಕೂಲಿ ಕಾರ್ಮಿಕರು, ಗುಡಿಸಲುಗಳಲ್ಲಿ ವಾಸಿಸುತ್ತಿದ್ದ ಕೆಲ ವರ್ಗದವರು. ಹಾಗೆಯೇ ಆ ದುರಂತದಲ್ಲಿ ಸಂತ್ರಸ್ತರಾದ ಐದೂವರೆ ಲಕ್ಷ ಜನರೂ ಕಡುಬಡವರು. ಈ ಜನ ಮಾತ್ರ ಪರಿಹಾರಕ್ಕಾಗಿ 26 ವರ್ಷಗಳ ಕಾಲ ಕಾಯಬೇಕಾಯಿತು. ಆಗಲೂ ಅವರಿಗೆ ದೊರಕಿದ ಹಣವೆಷ್ಟು? ತಲಾ 15,000 ರೂಪಾಯಿಗಳು ಮಾತ್ರ. ಅಂದರೆ ಆ ದುರಂತ ಸಂಭವಿಸಿ ಅವರ ಬದುಕೇ ನುಚ್ಚುನೂರಾಗಿದ್ದರೂ ಅಂದಿನಿಂದ ಇಂದಿನತನಕ ಅವರು ಅನುಭವಿಸಿದ ಯಾತನೆಗೆ ನೀಡಿದ ಪರಿಹಾರ: ಪ್ರತಿದಿನಕ್ಕೆ ಕೇವಲ ಒಂದೂವರೆ ರೂಪಾಯಿಗಳು!

ಇನ್ನು ಭೋಪಾಲ್ ಅನಿಲ ದುರಂತ ಸಂಭವಿಸಿದ ಸಂದರ್ಭದಲ್ಲಿ ಯೂನಿಯನ್ ಕಾರ್ಬೈಡ್ ಕಂಪನಿಯ ಸಿಇಓ ಆಗಿದ್ದವನು ವಾರೆನ್ ಆಂಡರ್ಸನ್. ಇಂತಹ ದೊಡ್ಡ ದುರಂತ ಸಂಭವಿಸಿ ಸಾವಿರಾರು ಜನ ಸಾಯುತ್ತಿದ್ದರೂ ಆತ ಅಮೆರಿಕಾಕ್ಕೆ ಪರಾರಿಯಾಗಲು ಆಗಿನ ಕಾಂಗ್ರೆಸ್ ಸರ್ಕಾರ ಸಹಾಯ ಮಾಡಿದೆ ಎಂಬ ಆರೋಪವಿದೆ. ಅಲ್ಲದೇ ಈ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ದೇಶದ ಬಡಜನರ ಬದಲು ಕಂಪನಿಯೊಂದಿಗೆ ಶಾಮೀಲಾಗಿತ್ತು ಎಂದು ಹೋರಾಟಗಾರರು ದೂರಿದ್ದರು. ಸಂತ್ರಸ್ತರಿಗೆ ನ್ಯಾಯ ವಿಳಂಬವಾಗಲು ಕಾಂಗ್ರೆಸ್ ಸರ್ಕಾರವೇ ಕಾರಣವಾಗಿತ್ತು.

ಈ ವಿಷಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಿಜೆಪಿ ತರಾಟೆಗೆ ತೆಗೆದುಕೊಳ್ಳುತ್ತಿದೆ. ಆದರೆ ಇದೇ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಭೋಪಾಲ್ ಸಂತ್ರಸ್ತರಿಗೆ ಯಾವ ಸಹಾಯವನ್ನೂ ಮಾಡಲಿಲ್ಲ. ಅಷ್ಟೇ ಅಲ್ಲ, ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಅಂದರೆ ವಾಜಪೇಯಿ ಪ್ರಧಾನಿ ಆಗಿದ್ದಾಗ ಡೌ ಕಂಪನಿಯ ಮುಖ್ಯಸ್ಥನನ್ನು ಗಣರಾಜ್ಯೋತ್ಸವದ ಸಮಾರಂಭಕ್ಕೆ ಆಹ್ವಾನಿಸಿತ್ತು! ಮಾತ್ರವಲ್ಲ, ಸಾವಿರಾರು ಜನರ ಸಾವಿಗೆ ಕಾರಣನಾಗಿದ್ದೂ ಅಮೆರಿಕಕ್ಕೆ ಓಡಿಹೋಗಿದ್ದ ಯೂನಿಯನ್ ಕಾರ್ಬೈಡ್‍ನ ಮುಖ್ಯಸ್ಥ ವಾರೆನ್ ಆಂಡರ್ಸನ್ ಅನ್ನು ಭಾರತಕ್ಕೆ ಒಪ್ಪಿಸಬೇಕೆಂದು ಒಮ್ಮೆಯೂ ಬಿಜೆಪಿ ಸರ್ಕಾರ ಅಮೆರಿಕವನ್ನು ಕೇಳಿಕೊಂಡಿರಲಿಲ್ಲ!

ಈ ರೀತಿಯಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳ ದುಷ್ಟತನ, ಹೊಣೆಗೇಡಿತನದಿಂದಾಗಿ ಸಾವಿರಾರು ಜನರ ಸಾವಿಗೆ ಕಾರಣವಾದ ವ್ಯಕ್ತಿ ಯೂನಿಯನ್ ಕಾರ್ಬೈಡ್ ಕಂಪನಿಯ ಸಿಇಓ ವಾರೆನ್ ಆಂಡರ್ಸನ್ ತುಂಬು ಜೀವನ ನಡೆಸಿ 2014ರಲ್ಲಿ ತನ್ನ 92ನೇ ವಯಸ್ಸಿನಲ್ಲಿ ನಿಧನನಾದನೇ ಹೊರತು ಶಿಕ್ಷೆಯಿಂದಲ್ಲ! ಶಿಕ್ಷೆ ಇರಲಿ ಆತ ಭಾರತೀಯ ಕೋರ್ಟುಗಳು ವಿಚಾರಣೆಗೂ ಹಾಜರಾಗಲಿಲ್ಲ ಎಂದರೆ ನಂಬಲೇಬೇಕು.

ಅನಿಲ ದುರಂತದ ಸಂತ್ರಸ್ತರ ಪರವಾಗಿ ಇಂದಿರಾ ಜೈಸಿಂಗ್, ಅನಿಲ್ ಸದ್ಗೋಪಾಲ್ ಸೇರಿದಂತೆ ಸಾವಿರಾರು ಜನ ಸುಧೀರ್ಘ ಹೋರಾಟ ನಡೆಸಿದ್ದಾರೆ. ಇಂದು ಸಂತ್ರಸ್ತರಿಗೆ ಅಷ್ಟೋ ಇಷ್ಟೊ ಪರಿಹಾರ ಸಿಗಲು ದೇಶದ ಲಕ್ಷಾಂತರ ಜನ ಬೀದಿಗಿಳಿದಿ ಹೋರಾಟ ಮಾಡಬೇಕಾದ ದುಸ್ಥಿತಿ ನಮ್ಮ ದೇಶದ್ದು. ಆದರು ಇಂದಿಗೂ ಎಲ್ಲರಿಗೂ ನ್ಯಾಯ ಮತ್ತು ಪರಿಹಾರ ಸಿಕ್ಕಿಲ್ಲ. 36 ವರ್ಷ ಕಳೆದರೂ ಇಂದಿಗೂ ಹಲವು ಸಂಘಟನೆಗಳು ದನಿಯೆತ್ತುತ್ತಲೇ ಇವೆ.

ಅನಿಲ ದುರಂತದಿಂದ ಬದುಕುಳಿದವರಿಗೆ ದೀರ್ಘಾವಧಿಯ ಗಾಯಗಳು ಮತ್ತು ರೋಗಗಳು ಬಾಧಿಸುತ್ತಿವೆ. ಇಂದಿನ ಕೋವಿಡ್ ಸಾಂಕ್ರಾಮಿಕವು ಅವರನ್ನು ಇನ್ನಷ್ಟು ತೊಂದರೆಗೀಡುಮಾಡಿದೆ. ಆರೋಗ್ಯ ಇಲಾಖೆಯ ಅಧಿಕೃತ ದಾಖಲೆಯ ಪ್ರಕಾರ ಭೋಪಾಲ್ ಜಿಲ್ಲೆಯ ಅನಿಲ ಪೀಡಿತ ಜನಸಂಖ್ಯೆಯಲ್ಲಿ ಕೋವಿಡ್ -19 ಸಾವಿನ ಪ್ರಮಾಣ 6.5 ಪಟ್ಟು ಹೆಚ್ಚಾಗಿದೆ ಎಂದು ಭೋಪಾಲ್ ಗ್ಯಾಸ್ ಪೀಡಿತ ಮಹಿಳಾ ಪುರುಷ ಸಂಘರ್ಷ ಮೋರ್ಚಾದ ಅಧ್ಯಕ್ಷ ನವಾಬ್ ಖಾನ್ ಹೇಳಿದ್ದಾರೆ.

ವಿಷಕಾರಿ ಪ್ರಕರಣದ ಪರಿಣಾಮಗಳನ್ನು ತಗ್ಗಿಸಲು ಸರ್ಕಾರಗಳು ಇಂದಿಗೂ ಯಾವುದೇ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ಸಂತ್ರಸ್ತರ ಪರವಾಗಿ ಹೋರಾಡುತ್ತಿರುವ ಭೋಪಾಲ್ ಗ್ಯಾಸ್ ಪೀಡಿತ ಸಂಘರ್ಷ ಸಹಯೋಗ್ ಸಮಿತಿ ಎಂಬ ಮತ್ತೊಂದು ಸಂಘಟನೆಯ ಸಂಚಾಲಕಿ ಸಾಧನಾ ಕಾರ್ನಿಕ್ ಹೇಳುತ್ತಾರೆ.

“ಸ್ಥಾವರದಿಂದ ಸೋರಿಕೆಯಾದ ಅನಿಲವು ನಗರದ ವಿಶಾಲ ಪ್ರದೇಶದ ಜನರ ಮೇಲೆ ಪರಿಣಾಮ ಬೀರುತ್ತಿದೆ. ಆದರೆ ಈ ಸಮಸ್ಯೆಯನ್ನು ಪರಿಹರಿಸಲು ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ಕಡೆಯಿಂದ ಯಾವುದೇ ಪ್ರಾಮಾಣಿಕ ಪ್ರಯತ್ನಗಳಾಗುತ್ತಿಲ್ಲ. ಸಂತ್ರಸ್ತರಿಗಾಗಿ ನಿರ್ಮಾಣವಾದ ಭೋಪಾಲ್ ಸ್ಮಾರಕ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ (ಬಿಎಮ್‌ಹೆಚ್‌ಆರ್‌ಸಿ)ವು ಅಸ್ತವ್ಯಸ್ತವಾಗಿದೆ. ಅಲ್ಲಿನ ಸೌಲಭ್ಯಗಳನ್ನು ಸುಧಾರಿಸಲು ಯಾರೂ ಮುಂದಾಗುತ್ತಿಲ್ಲ” ಎಂದು ಅವರು ದೂರಿದ್ದಾರೆ.

ಇನ್ನು ಮಧ್ಯಪ್ರದೇಶ ಸರ್ಕಾರವು “ಭೋಪಾಲ್ ಅನಿಲ ದುರಂತದ ಪರಿಹಾರ ಮತ್ತು ಪುನರ್ವಸತಿ ಖಾತೆ”ಯನ್ನು ಆರಂಭಿಸಿದೆ. ಅದರ ಸಚಿವ ವಿಶ್ವಸ್ ಸಾರಂಗ್ “ಪರಿಹಾರದ ವಿಷಯವು ಸುಪ್ರೀಂ ಕೋರ್ಟ್ ಮುಂದೆ ಬಾಕಿ ಇದೆ. ಆದ್ದರಿಂದ, ನಾನು ಅದರ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ದುರಂತದಿಂದ ಬದುಕುಳಿದವರಿಗೆ ಉತ್ತಮ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ರಾಜ್ಯದ ನಮ್ಮ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಒಂದು ಆಸ್ಪತ್ರೆಯನ್ನು ಅವರಿಗಾಗಿ ಮೀಸಲಿಟ್ಟಿದ್ದೇವೆ” ಎನ್ನುತ್ತಾರೆ. ಇಂತಹ ಅಸೂಕ್ಷ್ಮ ವ್ಯಕ್ತಿಗಳು ಇರುವವರೆಗೂ ಸಂತ್ರಸ್ತರು ನ್ಯಾಯಕ್ಕಾಗಿ ಕಾಯುತ್ತಲೇ ಇರಬೇಕಿದೆ. justice delayed is justice denied ಎಂಬ ಆಂಗ್ಲಗಾದೆಯನ್ನು ಈ ದುರಂತ ನಿಜ ಮಾಡಿದೆ.


ಇದನ್ನೂ ಓದಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಪರಿಹಾರದಲ್ಲಿಯೂ ತಾರತಮ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...