Homeಅಂಕಣಗಳುದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ನಮ್ಮ ಜನರ ಮೇಲೆ ನಡೆಯುವ ಅನ್ಯಾಯದ ವಿರುದ್ಧ ಪರಿಹಾರ ಸೂಚಿಸಲು ಮತ್ತು ಭವಿಷ್ಯತ್ತಿನಲ್ಲಿ ನಮ್ಮ ಪ್ರಗತಿ ಕುರಿತು ಮಾರ್ಗೋಪಾಯಗಳ ಕುರಿತು ಚರ್ಚಿಸಲು ಪತ್ರಿಕೆಗಿಂತ ಉತ್ತಮ ಸಂಪನ್ಮೂಲ ಮತ್ತೊಂದಿಲ್ಲ.

- Advertisement -
- Advertisement -

ದಲಿತರನ್ನು ಎಚ್ಚರಿಸಿ ಸಬಲರನ್ನಾಗಿ ಮಾಡಬೇಕಿದ್ದರೆ ಅವರದೇ ಆದ ಪ್ರಕಟಣೆಗಳಿರಬೇಕು ಎಂದಿದ್ದರು ಡಾ.ಬಾಬಾಸಾಹೇಬ ಅಂಬೇಡ್ಕರ್. ಇದೇ ಉದ್ದೇಶದಿಂದ 1920ರ ಜನವರಿ 31ರಂದು ಮೂಕನಾಯಕ ಎಂಬ ಮರಾಠಿ ಪಾಕ್ಷಿಕವೊಂದನ್ನು ಆರಂಭಿಸಿದರು. ಆಗ ಅವರಿಗೆ 29ರ ಉಕ್ಕುಪ್ರಾಯ.

ಹದಿನೈದು ದಿನಗಳಿಗೊಮ್ಮೆ ಶನಿವಾರಗಳಂದು ಬಾಂಬೆಯಿಂದ ಹೊರಬೀಳುತ್ತಿತ್ತು ಮೂಕನಾಯಕ. ಅದರ ಕಚೇರಿ ಪರೇಲಿನ ಶ್ರಮಿಕವರ್ಗದ ನೆರೆಹೊರೆಯಲ್ಲಿತ್ತು. ಸಂತ ತುಕಾರಾಮನ ಚತುಷ್ಪದಿಯೊಂದರ ಸ್ಫೂರ್ತಿಯೇ ಮೂಕನಾಯಕ ಶೀರ್ಷಿಕೆಗೆ ಕಾರಣವಾಗಿತ್ತು. ಕೊಲ್ಹಾಪುರದ ಶಾಹು ಮಹಾರಾಜರು ಅಂಬೇಡ್ಕರ್ ಅವರನ್ನು ಅರಸಿಕೊಂಡು ಬಂದು ನೀಡಿದ್ದ 2,500 ರುಪಾಯಿಗಳ ದೇಣಿಗೆಯೇ ಪತ್ರಿಕೆಗೆ ದೊರೆತಿದ್ದ ಆರಂಭಿಕ ಚಾಲನೆ.

ಈ ಪ್ರಕಟಣೆಯ ಹಿಂದಿನ ತರ್ಕವನ್ನು ವಿವರಿಸಿ ಮೂಕನಾಯಕದ ಉದ್ಘಾಟನಾ ಸಂಚಿಕೆಯ ಸಂಪಾದಕೀಯದಲ್ಲಿ ಅವರು ಬರೆದರು- ‘ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ನಮ್ಮ ಜನರ ಮೇಲೆ ನಡೆಯುವ ಅನ್ಯಾಯದ ವಿರುದ್ಧ ಪರಿಹಾರ ಸೂಚಿಸಲು ಮತ್ತು ಭವಿಷ್ಯತ್ತಿನಲ್ಲಿ ನಮ್ಮ ಪ್ರಗತಿ ಕುರಿತು ಮಾರ್ಗೋಪಾಯಗಳ ಕುರಿತು ಚರ್ಚಿಸಲು ಪತ್ರಿಕೆಗಿಂತ ಉತ್ತಮ ಸಂಪನ್ಮೂಲ ಮತ್ತೊಂದಿಲ್ಲ’.

ಮುಂದುವರೆದು ಅವರು ಬರೆಯುತ್ತಾರೆ- ‘ಹಿಂದೂ ಸಮಾಜವು ಏಣಿ ಅಥವಾ ಪ್ರವೇಶ ದ್ವಾರವೇ ಇಲ್ಲದ ಹಲವು ಅಂತಸ್ತುಗಳ ಗೋಪುರವಿದ್ದಂತೆ. ಕೆಳ ಅಂತಸ್ತಿನಲ್ಲಿ ಹುಟ್ಟಿದ ವ್ಯಕ್ತಿ ಅದೆಷ್ಟೇ ಯೋಗ್ಯನಾದರೂ ಮೇಲಿನ ಅಂತಸ್ತನ್ನು ಪ್ರವೇಶಿಸಲಾರ. ಮೇಲಿನ ಅಂತಸ್ತಿನಲ್ಲಿ ಹುಟ್ಟಿದ ವ್ಯಕ್ತಿ ಅದೆಷ್ಟೇ ಅಯೋಗ್ಯನಾದರೂ ಅವನನ್ನು ಕೆಳ ಅಂತಸ್ತಿಗೆ ಓಡಿಸುವುದು ಸಾಧ್ಯವಿಲ್ಲ. ಅಂತರ್ಜಾತೀಯ ಸಹಭೋಜನ ಮತ್ತು ಅಂತರ್ಜಾತೀಯ ವಿವಾಹಗಳಿಗೆ ಅವಕಾಶವಿಲ್ಲದೆ ಏರ್ಪಟ್ಟಿರುವ ಪರಕೀಯಪ್ರಜ್ಞೆಯು ಸ್ಪೃಶ್ಯ ಮತ್ತು ಅಸ್ಪೃಶ್ಯ ಭಾವನೆಗಳನ್ನು ಅದೆಷ್ಟು ಪೋಷಿಸಿಬಿಟ್ಟಿದೆಯೆಂದರೆ ಈ ಸ್ಪೃಶ್ಯ ಮತ್ತು ಅಸ್ಪೃಶ್ಯ ಜಾತಿಗಳು ಹಿಂದೂ ಸಮಾಜದ ಭಾಗವೇ ಆಗಿದ್ದರೂ, ವಾಸ್ತವದಲ್ಲಿ ಬೇರೆ ಬೇರೆಯೇ ಜಗತ್ತುಗಳಾಗಿ ಜೀವಿಸುತ್ತಿವೆ’.

‘ಬೆಕ್ಕುಗಳು ನಾಯಿಗಳು ಅಸ್ಪೃಶ್ಯರ ಎಂಜಲು ತಿನ್ನುತ್ತವೆ. ಮಕ್ಕಳ ಮಲವನ್ನೂ ತಿನ್ನುತ್ತವೆ. ಇದೇ ನಾಯಿ ಬೆಕ್ಕುಗಳು ಸ್ಪೃಶ್ಯರ ಮನೆಯನ್ನು ಪ್ರವೇಶಿಸಬಹುದು. ಹಾಗೆ ಪ್ರವೇಶಿಸಿದರೆ ಮೈಲಿಗೆಯಿಲ್ಲ. ಈ ಪ್ರಾಣಿಗಳನ್ನು ಸ್ಪೃಶ್ಯರು ಮುಟ್ಟುತ್ತಾರೆ, ಅಪ್ಪಿ ಮುದ್ದಾಡುತ್ತಾರೆ. ಅವು ಉಣ್ಣುವ ತಟ್ಟೆಗೆ ಬಾಯಿ ಹಾಕಿದರೂ ಅವರಿಗೆ ತಕರಾರಿಲ್ಲ. ಯಾವುದೋ ಚಾಕರಿಗೆಂದು ಮನೆಯ ಹೊರಗೆ ನಿಲ್ಲುವ ಅಸ್ಪೃಶ್ಯನನ್ನು ಕಂಡ ಸವರ್ಣೀಯ ಗದರುತ್ತಾನೆ- ದೂರ ನಿಲ್ಲು, ಮಗುವಿನ ಮಲವನ್ನು ಬಾಚಿ ಎಸೆಯುವ ಬೋಕಿ ಬಿಲ್ಲೆಯನ್ನು ಅಲ್ಲಿ ಇಡಲಾಗಿದೆ. ಅದನ್ನೂ ಮುಟ್ಟಿ ಮೈಲಿಗೆ ಮಾಡುತ್ತೀಯೇನು?’ ಎಂಬ ಹೃದಯವಿದ್ರಾವಕ ಸಾಲುಗಳನ್ನು ಬಾಬಾಸಾಹೇಬರು ಮೂಕನಾಯಕದ 1920ರ ಆಗಸ್ಟ್ ಸಂಚಿಕೆಯ ಸಂಪಾದಕೀಯದಲ್ಲಿ ಬರೆದಿದ್ದಾರೆ.

ಲಂಡನ್ ಸ್ಕೂಲ್ ಅಫ್ ಎಕನಾಮಿಕ್ಸ್‌ನಲ್ಲಿ ಅರ್ಧದಲ್ಲಿಯೇ ತೊರೆದು ಬಂದಿದ್ದ ತಮ್ಮ ಉನ್ನತ ವ್ಯಾಸಂಗವನ್ನು ಮುಂದುವರೆಸಲು ಬಾಬಾಸಾಹೇಬರು ಹಠಾತ್ತನೆ ಲಂಡನ್‍ಗೆ ತೆರಳಬೇಕಾಗುತ್ತದೆ. ಮೂಕನಾಯಕನ ಉಸ್ತುವಾರಿಯನ್ನು ಅಲ್ಲಿಂದಲೇ ನೋಡಿಕೊಳ್ಳುತ್ತಾರೆ. ಪತ್ರಿಕೆಯ ಹಿಂದಿನ ಚಾಲಕಶಕ್ತಿ ತಾವೇ ಆದರೂ ಸಂಪಾದಕ ಹುದ್ದೆಯಲ್ಲಿ ಅಂಬೇಡ್ಕರ್ ಇರುವುದಿಲ್ಲ. ಪಾಂಡುರಂಗ ಭಾಟ್ಕರ್ ಈ ಪತ್ರಿಕೆಯ ಮೊದಲ ಸಂಪಾದಕರು. ಧ್ಯಾನದೇವ ಘೋಲಪ್ ಎರಡನೆಯ ಸಂಪಾದಕರು. ಆರ್ಥಿಕ ಸಂಕಟ ಈ ಪತ್ರಿಕೆಯನ್ನು ನೆರಳಿನಂತೆ ಹಿಂಬಾಲಿಸಿತ್ತು. ಘೋಲಪ್ ಅವರೊಂದಿಗೆ ಭಿನ್ನಾಭಿಪ್ರಾಯದ ಕಾರಣ ಅಂಬೇಡ್ಕರ್ 1923ರಲ್ಲಿ ಈ ಪತ್ರಿಕೆಯಿಂದ ದೂರವಾದರು.

ಬಾಬಾಸಾಹೇಬರು 1920ರಲ್ಲಿ ಆರಂಭಿಸಿದ ಮೊದಲ ಪತ್ರಿಕೆ ಮೂಕನಾಯಕವಾದರೆ ಕಡೆಯ ಪತ್ರಿಕೆ ಪ್ರಬುದ್ಧ ಭಾರತ (1956ರ ಫೆಬ್ರವರಿ ನಾಲ್ಕು). ಈ ನಡುವಿನ ಅವಧಿಯಲ್ಲಿ ಬಹಿಷ್ಕೃತ ಭಾರತ (1927ರ ಏಪ್ರಿಲ್ ಮೂರು), ಸಮತಾ (1928ರ ಜೂನ್ 29), ಜನತಾ (1930ರ ನವೆಂಬರ್ 25) ಪತ್ರಿಕೆಗಳನ್ನು ಹೊರತಂದರು.

ಅಂಬೇಡ್ಕರ್ ಆರಂಭಿಸಿದ್ದ ಪತ್ರಿಕೆಗಳಿಗೆ ಹಣಬಲವಿರಲಿಲ್ಲ. ಮೂಕನಾಯಕ ಮತ್ತು ಬಹಿಷ್ಕೃತ ಭಾರತ ಮುಚ್ಚಲು ಹಣದ ಕೊರತೆಯೇ ನೇರ ಕಾರಣ. ಜಾಹೀರಾತು ಕುರಿತು ಬಾಬಾಸಾಹೇಬರು ತಳೆದಿದ್ದ ನಿಷ್ಠುರ ನಿಲುವೂ ಪತ್ರಿಕೆಗಳ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿತ್ತು. ಅಸಮಾನತೆ ಮತ್ತು ಸಂಪ್ರದಾಯವಾದವನ್ನು ಎತ್ತಿ ಹಿಡಿದು ಮುಂದುವರೆಸುವ ಹೊಣೆಗೇಡಿ ಜಾಹೀರಾತುಗಳನ್ನು ಅವರು ತಮ್ಮ ಸಂಪಾದಕೀಯಗಳಲ್ಲಿ ತೀವ್ರವಾಗಿ ಖಂಡಿಸಿದ್ದರು. ಬಾಂಬೇ ಕ್ರಾನಿಕಲ್ ಮತ್ತು ಬಾಲ ಗಂಗಾಧರ ತಿಲಕ್ ಅವರ ಕೇಸರಿ ಸೇರಿದಂತೆ ಹಲವಾರು ರಾಷ್ಟ್ರವಾದಿ ಪತ್ರಿಕೆಗಳು ಬ್ರಾಹ್ಮಣವಾದಿ ಧಾರ್ಮಿಕ ಸಾಹಿತ್ಯವನ್ನು, ಬ್ರಾಹ್ಮಣವಾದವನ್ನು ಎತ್ತಿ ಹಿಡಿಯುವ ಚಟುವಟಿಕೆಗಳು, ಘಟನಾವಳಿಗಳು ಹಾಗೂ ಗಂಡಾಳಿಕೆಯನ್ನು ಸಮರ್ಥಿಸುವ ಜಾಹೀರಾತುಗಳನ್ನು ಪ್ರಕಟಿಸುತ್ತಿದ್ದವು. ಸಾಮಾಜಿಕವಾಗಿ ಅನೈತಿಕ ಮತ್ತು ಅಸಭ್ಯ ಜಾಹೀರಾತುಗಳನ್ನು ಪ್ರಕಟಣೆಗಿಂತ ಜಾಹೀರಾತುಗಳ ಪ್ರಕಟಣೆಯನ್ನು ನಿಲ್ಲಿಸುವುದೇ ಲೇಸು ಎಂಬುದು ಬಾಬಾಸಾಹೇಬರ ನಿಲುವಾಗಿತ್ತು.

ಸ್ವಾತಂತ್ರ್ಯ ಹೋರಾಟದ ದಿನಗಳಲ್ಲಿ ತುಳಿದಿಟ್ಟ ಜನರ ಪರವಾಗಿ ಅಸ್ಪೃಶ್ಯತೆಯ ವಿರುದ್ಧವಾಗಿ ದನಿಯೆತ್ತಿದ್ದ ಅಂಬೇಡ್ಕರ್ ಅವರನ್ನು ಅಂದಿನ ಹಿಂದೂವಾದಿ ಮಾಲೀಕತ್ವದ ಪತ್ರಿಕೆಗಳು ಭೀಮಾಸುರ, ರಾಕ್ಷಸ, ದ್ರೋಹಿ, ಬಾಡಿಗೆಯ ಬಂಟ, ಬ್ರಹ್ಮದ್ವೇಷಿ, ರಾಷ್ಟ್ರೀಯತೆಯ ವಿರೋಧಿ ಎಂದೆಲ್ಲ ಹೀಯಾಳಿಸಿದ್ದವು.
ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವನ್ನು ವಹಿಸಿತ್ತು ಮೂಕನಾಯಕ.


ಇದನ್ನೂ ಓದಿ: ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...