Homeಅಂಕಣಗಳುದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ನಮ್ಮ ಜನರ ಮೇಲೆ ನಡೆಯುವ ಅನ್ಯಾಯದ ವಿರುದ್ಧ ಪರಿಹಾರ ಸೂಚಿಸಲು ಮತ್ತು ಭವಿಷ್ಯತ್ತಿನಲ್ಲಿ ನಮ್ಮ ಪ್ರಗತಿ ಕುರಿತು ಮಾರ್ಗೋಪಾಯಗಳ ಕುರಿತು ಚರ್ಚಿಸಲು ಪತ್ರಿಕೆಗಿಂತ ಉತ್ತಮ ಸಂಪನ್ಮೂಲ ಮತ್ತೊಂದಿಲ್ಲ.

- Advertisement -
- Advertisement -

ದಲಿತರನ್ನು ಎಚ್ಚರಿಸಿ ಸಬಲರನ್ನಾಗಿ ಮಾಡಬೇಕಿದ್ದರೆ ಅವರದೇ ಆದ ಪ್ರಕಟಣೆಗಳಿರಬೇಕು ಎಂದಿದ್ದರು ಡಾ.ಬಾಬಾಸಾಹೇಬ ಅಂಬೇಡ್ಕರ್. ಇದೇ ಉದ್ದೇಶದಿಂದ 1920ರ ಜನವರಿ 31ರಂದು ಮೂಕನಾಯಕ ಎಂಬ ಮರಾಠಿ ಪಾಕ್ಷಿಕವೊಂದನ್ನು ಆರಂಭಿಸಿದರು. ಆಗ ಅವರಿಗೆ 29ರ ಉಕ್ಕುಪ್ರಾಯ.

ಹದಿನೈದು ದಿನಗಳಿಗೊಮ್ಮೆ ಶನಿವಾರಗಳಂದು ಬಾಂಬೆಯಿಂದ ಹೊರಬೀಳುತ್ತಿತ್ತು ಮೂಕನಾಯಕ. ಅದರ ಕಚೇರಿ ಪರೇಲಿನ ಶ್ರಮಿಕವರ್ಗದ ನೆರೆಹೊರೆಯಲ್ಲಿತ್ತು. ಸಂತ ತುಕಾರಾಮನ ಚತುಷ್ಪದಿಯೊಂದರ ಸ್ಫೂರ್ತಿಯೇ ಮೂಕನಾಯಕ ಶೀರ್ಷಿಕೆಗೆ ಕಾರಣವಾಗಿತ್ತು. ಕೊಲ್ಹಾಪುರದ ಶಾಹು ಮಹಾರಾಜರು ಅಂಬೇಡ್ಕರ್ ಅವರನ್ನು ಅರಸಿಕೊಂಡು ಬಂದು ನೀಡಿದ್ದ 2,500 ರುಪಾಯಿಗಳ ದೇಣಿಗೆಯೇ ಪತ್ರಿಕೆಗೆ ದೊರೆತಿದ್ದ ಆರಂಭಿಕ ಚಾಲನೆ.

ಈ ಪ್ರಕಟಣೆಯ ಹಿಂದಿನ ತರ್ಕವನ್ನು ವಿವರಿಸಿ ಮೂಕನಾಯಕದ ಉದ್ಘಾಟನಾ ಸಂಚಿಕೆಯ ಸಂಪಾದಕೀಯದಲ್ಲಿ ಅವರು ಬರೆದರು- ‘ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ನಮ್ಮ ಜನರ ಮೇಲೆ ನಡೆಯುವ ಅನ್ಯಾಯದ ವಿರುದ್ಧ ಪರಿಹಾರ ಸೂಚಿಸಲು ಮತ್ತು ಭವಿಷ್ಯತ್ತಿನಲ್ಲಿ ನಮ್ಮ ಪ್ರಗತಿ ಕುರಿತು ಮಾರ್ಗೋಪಾಯಗಳ ಕುರಿತು ಚರ್ಚಿಸಲು ಪತ್ರಿಕೆಗಿಂತ ಉತ್ತಮ ಸಂಪನ್ಮೂಲ ಮತ್ತೊಂದಿಲ್ಲ’.

ಮುಂದುವರೆದು ಅವರು ಬರೆಯುತ್ತಾರೆ- ‘ಹಿಂದೂ ಸಮಾಜವು ಏಣಿ ಅಥವಾ ಪ್ರವೇಶ ದ್ವಾರವೇ ಇಲ್ಲದ ಹಲವು ಅಂತಸ್ತುಗಳ ಗೋಪುರವಿದ್ದಂತೆ. ಕೆಳ ಅಂತಸ್ತಿನಲ್ಲಿ ಹುಟ್ಟಿದ ವ್ಯಕ್ತಿ ಅದೆಷ್ಟೇ ಯೋಗ್ಯನಾದರೂ ಮೇಲಿನ ಅಂತಸ್ತನ್ನು ಪ್ರವೇಶಿಸಲಾರ. ಮೇಲಿನ ಅಂತಸ್ತಿನಲ್ಲಿ ಹುಟ್ಟಿದ ವ್ಯಕ್ತಿ ಅದೆಷ್ಟೇ ಅಯೋಗ್ಯನಾದರೂ ಅವನನ್ನು ಕೆಳ ಅಂತಸ್ತಿಗೆ ಓಡಿಸುವುದು ಸಾಧ್ಯವಿಲ್ಲ. ಅಂತರ್ಜಾತೀಯ ಸಹಭೋಜನ ಮತ್ತು ಅಂತರ್ಜಾತೀಯ ವಿವಾಹಗಳಿಗೆ ಅವಕಾಶವಿಲ್ಲದೆ ಏರ್ಪಟ್ಟಿರುವ ಪರಕೀಯಪ್ರಜ್ಞೆಯು ಸ್ಪೃಶ್ಯ ಮತ್ತು ಅಸ್ಪೃಶ್ಯ ಭಾವನೆಗಳನ್ನು ಅದೆಷ್ಟು ಪೋಷಿಸಿಬಿಟ್ಟಿದೆಯೆಂದರೆ ಈ ಸ್ಪೃಶ್ಯ ಮತ್ತು ಅಸ್ಪೃಶ್ಯ ಜಾತಿಗಳು ಹಿಂದೂ ಸಮಾಜದ ಭಾಗವೇ ಆಗಿದ್ದರೂ, ವಾಸ್ತವದಲ್ಲಿ ಬೇರೆ ಬೇರೆಯೇ ಜಗತ್ತುಗಳಾಗಿ ಜೀವಿಸುತ್ತಿವೆ’.

‘ಬೆಕ್ಕುಗಳು ನಾಯಿಗಳು ಅಸ್ಪೃಶ್ಯರ ಎಂಜಲು ತಿನ್ನುತ್ತವೆ. ಮಕ್ಕಳ ಮಲವನ್ನೂ ತಿನ್ನುತ್ತವೆ. ಇದೇ ನಾಯಿ ಬೆಕ್ಕುಗಳು ಸ್ಪೃಶ್ಯರ ಮನೆಯನ್ನು ಪ್ರವೇಶಿಸಬಹುದು. ಹಾಗೆ ಪ್ರವೇಶಿಸಿದರೆ ಮೈಲಿಗೆಯಿಲ್ಲ. ಈ ಪ್ರಾಣಿಗಳನ್ನು ಸ್ಪೃಶ್ಯರು ಮುಟ್ಟುತ್ತಾರೆ, ಅಪ್ಪಿ ಮುದ್ದಾಡುತ್ತಾರೆ. ಅವು ಉಣ್ಣುವ ತಟ್ಟೆಗೆ ಬಾಯಿ ಹಾಕಿದರೂ ಅವರಿಗೆ ತಕರಾರಿಲ್ಲ. ಯಾವುದೋ ಚಾಕರಿಗೆಂದು ಮನೆಯ ಹೊರಗೆ ನಿಲ್ಲುವ ಅಸ್ಪೃಶ್ಯನನ್ನು ಕಂಡ ಸವರ್ಣೀಯ ಗದರುತ್ತಾನೆ- ದೂರ ನಿಲ್ಲು, ಮಗುವಿನ ಮಲವನ್ನು ಬಾಚಿ ಎಸೆಯುವ ಬೋಕಿ ಬಿಲ್ಲೆಯನ್ನು ಅಲ್ಲಿ ಇಡಲಾಗಿದೆ. ಅದನ್ನೂ ಮುಟ್ಟಿ ಮೈಲಿಗೆ ಮಾಡುತ್ತೀಯೇನು?’ ಎಂಬ ಹೃದಯವಿದ್ರಾವಕ ಸಾಲುಗಳನ್ನು ಬಾಬಾಸಾಹೇಬರು ಮೂಕನಾಯಕದ 1920ರ ಆಗಸ್ಟ್ ಸಂಚಿಕೆಯ ಸಂಪಾದಕೀಯದಲ್ಲಿ ಬರೆದಿದ್ದಾರೆ.

ಲಂಡನ್ ಸ್ಕೂಲ್ ಅಫ್ ಎಕನಾಮಿಕ್ಸ್‌ನಲ್ಲಿ ಅರ್ಧದಲ್ಲಿಯೇ ತೊರೆದು ಬಂದಿದ್ದ ತಮ್ಮ ಉನ್ನತ ವ್ಯಾಸಂಗವನ್ನು ಮುಂದುವರೆಸಲು ಬಾಬಾಸಾಹೇಬರು ಹಠಾತ್ತನೆ ಲಂಡನ್‍ಗೆ ತೆರಳಬೇಕಾಗುತ್ತದೆ. ಮೂಕನಾಯಕನ ಉಸ್ತುವಾರಿಯನ್ನು ಅಲ್ಲಿಂದಲೇ ನೋಡಿಕೊಳ್ಳುತ್ತಾರೆ. ಪತ್ರಿಕೆಯ ಹಿಂದಿನ ಚಾಲಕಶಕ್ತಿ ತಾವೇ ಆದರೂ ಸಂಪಾದಕ ಹುದ್ದೆಯಲ್ಲಿ ಅಂಬೇಡ್ಕರ್ ಇರುವುದಿಲ್ಲ. ಪಾಂಡುರಂಗ ಭಾಟ್ಕರ್ ಈ ಪತ್ರಿಕೆಯ ಮೊದಲ ಸಂಪಾದಕರು. ಧ್ಯಾನದೇವ ಘೋಲಪ್ ಎರಡನೆಯ ಸಂಪಾದಕರು. ಆರ್ಥಿಕ ಸಂಕಟ ಈ ಪತ್ರಿಕೆಯನ್ನು ನೆರಳಿನಂತೆ ಹಿಂಬಾಲಿಸಿತ್ತು. ಘೋಲಪ್ ಅವರೊಂದಿಗೆ ಭಿನ್ನಾಭಿಪ್ರಾಯದ ಕಾರಣ ಅಂಬೇಡ್ಕರ್ 1923ರಲ್ಲಿ ಈ ಪತ್ರಿಕೆಯಿಂದ ದೂರವಾದರು.

ಬಾಬಾಸಾಹೇಬರು 1920ರಲ್ಲಿ ಆರಂಭಿಸಿದ ಮೊದಲ ಪತ್ರಿಕೆ ಮೂಕನಾಯಕವಾದರೆ ಕಡೆಯ ಪತ್ರಿಕೆ ಪ್ರಬುದ್ಧ ಭಾರತ (1956ರ ಫೆಬ್ರವರಿ ನಾಲ್ಕು). ಈ ನಡುವಿನ ಅವಧಿಯಲ್ಲಿ ಬಹಿಷ್ಕೃತ ಭಾರತ (1927ರ ಏಪ್ರಿಲ್ ಮೂರು), ಸಮತಾ (1928ರ ಜೂನ್ 29), ಜನತಾ (1930ರ ನವೆಂಬರ್ 25) ಪತ್ರಿಕೆಗಳನ್ನು ಹೊರತಂದರು.

ಅಂಬೇಡ್ಕರ್ ಆರಂಭಿಸಿದ್ದ ಪತ್ರಿಕೆಗಳಿಗೆ ಹಣಬಲವಿರಲಿಲ್ಲ. ಮೂಕನಾಯಕ ಮತ್ತು ಬಹಿಷ್ಕೃತ ಭಾರತ ಮುಚ್ಚಲು ಹಣದ ಕೊರತೆಯೇ ನೇರ ಕಾರಣ. ಜಾಹೀರಾತು ಕುರಿತು ಬಾಬಾಸಾಹೇಬರು ತಳೆದಿದ್ದ ನಿಷ್ಠುರ ನಿಲುವೂ ಪತ್ರಿಕೆಗಳ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿತ್ತು. ಅಸಮಾನತೆ ಮತ್ತು ಸಂಪ್ರದಾಯವಾದವನ್ನು ಎತ್ತಿ ಹಿಡಿದು ಮುಂದುವರೆಸುವ ಹೊಣೆಗೇಡಿ ಜಾಹೀರಾತುಗಳನ್ನು ಅವರು ತಮ್ಮ ಸಂಪಾದಕೀಯಗಳಲ್ಲಿ ತೀವ್ರವಾಗಿ ಖಂಡಿಸಿದ್ದರು. ಬಾಂಬೇ ಕ್ರಾನಿಕಲ್ ಮತ್ತು ಬಾಲ ಗಂಗಾಧರ ತಿಲಕ್ ಅವರ ಕೇಸರಿ ಸೇರಿದಂತೆ ಹಲವಾರು ರಾಷ್ಟ್ರವಾದಿ ಪತ್ರಿಕೆಗಳು ಬ್ರಾಹ್ಮಣವಾದಿ ಧಾರ್ಮಿಕ ಸಾಹಿತ್ಯವನ್ನು, ಬ್ರಾಹ್ಮಣವಾದವನ್ನು ಎತ್ತಿ ಹಿಡಿಯುವ ಚಟುವಟಿಕೆಗಳು, ಘಟನಾವಳಿಗಳು ಹಾಗೂ ಗಂಡಾಳಿಕೆಯನ್ನು ಸಮರ್ಥಿಸುವ ಜಾಹೀರಾತುಗಳನ್ನು ಪ್ರಕಟಿಸುತ್ತಿದ್ದವು. ಸಾಮಾಜಿಕವಾಗಿ ಅನೈತಿಕ ಮತ್ತು ಅಸಭ್ಯ ಜಾಹೀರಾತುಗಳನ್ನು ಪ್ರಕಟಣೆಗಿಂತ ಜಾಹೀರಾತುಗಳ ಪ್ರಕಟಣೆಯನ್ನು ನಿಲ್ಲಿಸುವುದೇ ಲೇಸು ಎಂಬುದು ಬಾಬಾಸಾಹೇಬರ ನಿಲುವಾಗಿತ್ತು.

ಸ್ವಾತಂತ್ರ್ಯ ಹೋರಾಟದ ದಿನಗಳಲ್ಲಿ ತುಳಿದಿಟ್ಟ ಜನರ ಪರವಾಗಿ ಅಸ್ಪೃಶ್ಯತೆಯ ವಿರುದ್ಧವಾಗಿ ದನಿಯೆತ್ತಿದ್ದ ಅಂಬೇಡ್ಕರ್ ಅವರನ್ನು ಅಂದಿನ ಹಿಂದೂವಾದಿ ಮಾಲೀಕತ್ವದ ಪತ್ರಿಕೆಗಳು ಭೀಮಾಸುರ, ರಾಕ್ಷಸ, ದ್ರೋಹಿ, ಬಾಡಿಗೆಯ ಬಂಟ, ಬ್ರಹ್ಮದ್ವೇಷಿ, ರಾಷ್ಟ್ರೀಯತೆಯ ವಿರೋಧಿ ಎಂದೆಲ್ಲ ಹೀಯಾಳಿಸಿದ್ದವು.
ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವನ್ನು ವಹಿಸಿತ್ತು ಮೂಕನಾಯಕ.


ಇದನ್ನೂ ಓದಿ: ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...