Homeಚಳವಳಿಶಾಹೀನ್ ಬಾಗ್‌ ಅಜ್ಜಿ ಎಂದು BJP ಬೆಂಬಲಿಗರಿಂದ ಸುಳ್ಳು ಪ್ರಚಾರಕ್ಕೊಳಗಾದ ಈ ಮಹಿಳೆ ಯಾರು?

ಶಾಹೀನ್ ಬಾಗ್‌ ಅಜ್ಜಿ ಎಂದು BJP ಬೆಂಬಲಿಗರಿಂದ ಸುಳ್ಳು ಪ್ರಚಾರಕ್ಕೊಳಗಾದ ಈ ಮಹಿಳೆ ಯಾರು?

ನಟಿ ಕಂಗನಾ ಇವರನ್ನು 100 ರುಪಾಯಿ ಕೊಟ್ಟರೆ ಪ್ರತಿಭಟನೆಗೆ ಬರುವ ಅಜ್ಜಿ ಎಂದು ಹೇಳಿ ವಿವಾದ ಎಬ್ಬಿಸಿದ್ದರು. ನಂತರ ಮುಖಭಂಗಕ್ಕೊಳಗಾಗಿ ಟ್ವೀಟ್ ಡಿಲೀಟ್ ಮಾಡಿದ್ದಾರೆ.

- Advertisement -
- Advertisement -

ಬಿಜೆಪಿಯ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾನೂನುಗಳ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 8 ನೇ ದಿನ ತಲುಪಿದೆ. ಹೋರಾಟದ ಆರಂಭದಲ್ಲಿ 73 ವರ್ಷದ ಅಜ್ಜಿಯೊಬ್ಬರು ರೈತ ಸಂಘಟನೆಯೊಂದರ ಹಳದಿ ಧ್ವಜವನ್ನು ಹಿಡಿದು ರೈತ ಹೋರಾಟಕ್ಕೆ ಹೊರಟು ನಿಂತಿರುವ ಸ್ಪೂರ್ತಿದಾಯಕ ಚಿತ್ರವೊಂದು ವೈರಲ್‌ ಆಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದ ಈ ಚಿತ್ರ ಹಲವರ ಮನಸ್ಸು ಗೆದ್ದಿತ್ತು. ಆದರೆ ಬಿಜೆಪಿ ಬೆಂಬಲಿಗರು ಈ ಅಜ್ಜಿ ಪೌರತ್ವ ತಿದ್ದುಪಡಿ ಕಾನೂನಿನ ವಿರುದ್ದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ’ಶಾಹಿನ್‌ ಬಾಗ್‌ನ ಅಜ್ಜಿ’ ಬಿಲ್ಕೀಸ್ ಬಾನು ಎಂದು ಸುಳ್ಳು ಹರಡಿದ್ದರು. ಸದಾ ವಿವಾದದಲ್ಲಿರುವ ಬಾಲಿವುಡ್ ನಟಿ ಕಂಗನಾ ರಾಣಾವತ್‌ ಇನ್ನೂ ಒಂದು ಹೆಜ್ಜೆ ಮುಂದು ಹೋಗಿದ್ದರು.

ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ನಟಿ ಕಂಗನಾ, “ಹಹಹ ಇದು ಅದೇ ದಾದಿ, ಟೈಮ್ ಮ್ಯಾಗಝಿನ್ ಹೇಳಿರುವ ಅತ್ಯಂತ ಪ್ರಭಾವಶಾಲಿ ಇಂಡಿಯನ್… ಮತ್ತು ಅವರು 100 ರುಪಾಯಿಗೆ ಸಿಗುತ್ತಾರೆ. ಭಾರತ ಮುಜುಗರಕ್ಕೀಡಾಗಲು ಅಂತರಾಷ್ಟ್ರೀಯ ಪಿಆರ್‌ಗಳನ್ನು ಪಾಕಿಸ್ತಾನಿ ಪತ್ರಕರ್ತರು ಹೈಜಾಕ್ ಮಾಡಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಮಗಾಗಿ ಮಾತನಾಡಲು ನಮ್ಮದೇ ಜನರು ಬೇಕು” ಎಂದು ಹೇಳಿ ವಿವಾದ ಸೃಷ್ಟಿಸಿದ್ದರು. ನಟಿ ಇದೀಗ ಆ ಟ್ವೀಟನ್ನು ಅಳಿಸಿದ್ದು, ಶಾಹಿನ್ ಭಾಗ್ ಅಜ್ಜಿಯ ಕುರಿತು ಸುಳ್ಳು ಹಾಗೂ ಅವಮಾನಕರ ಹೇಳಿಕೆಗೆ ಕ್ಷಮೆ ಕೋರುವಂತೆ ನಟಿಗೆ ನಿನ್ನೆ ಪಂಜಾಬ್‌ನ ವಕೀಲರೊಬ್ಬರು ಕಾನೂನು ನೋಟಿಸ್ ಕಳುಹಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ರೈತರ ಪ್ರತಿಭಟನೆಗೆ ಧುಮುಕಿದ ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್

ಯಾರು ಈ ರೈತ ಹೋರಾಟದ ಅಜ್ಜಿ?

ಪಂಜಾಬ್‌ನ ಬಟಿಂಡಾ ಜಿಲ್ಲೆಯ ಬಹದ್ದೂರ್‌‌ ಗಡ್‌‌ ಜಂಡಿಯಾನ್ ಗ್ರಾಮದ 73 ವರ್ಷದ ಈ ಅಜ್ಜಿಯ ಹೆಸರು ಮಹಿಂದರ್ ಕೌರ್. 13 ಎಕರೆ ಭೂಮಿಯನ್ನು ಹೊಂದಿರುವ ಇವರು ಕೃಷಿಯಲ್ಲೇ ತಮ್ಮ ಇಡೀ ಜೀವನವನ್ನು ಕಳೆದಿದ್ದಾರೆ. ಜೊತೆಗೆ ರೈತ ಚಳುವಳಿಯಲ್ಲಿ ಕೂಡಾ ತೊಡಗಿಸಿಕೊಂಡಿದ್ದಾರೆ.

ಇವರಿಗೆ ಮೂವರು ಹೆಣ್ಣು ಮಕ್ಕಳಿದ್ದು ಅವರೆಲ್ಲರಿಗೂ ಮದುವೆಯಾಗಿದೆ. ಪ್ರಸ್ತುತ ತಮ್ಮ ಮಗನೊಂದಿಗೆ ಜಂಡಿಯಾನ್ ಗ್ರಾಮದಲ್ಲಿ ವಾಸವಿರುವ ಮಹಿಂದರ್‌ ಅವರು ತಮ್ಮ ಮನೆಗೆ ಬೇಕಾದ ತರಕಾರಿಯನ್ನು ತಮ್ಮದೆ ಭೂಮಿಯಲ್ಲಿ ಬೆಳೆಯುತ್ತಾರೆ.

ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಅವರ ಚಿತ್ರವು ಅಕ್ಟೋಬರ್‌ನದ್ದಾಗಿದೆ. ತಮ್ಮ ಮೇಲಿನ ಅಪಪ್ರಚಾರದ ಬಗ್ಗೆ ಮಾತನಾಡಿದ್ದ ಅವರು, “ತನ್ನ ಬಗ್ಗೆ ನಟಿಯೊಬ್ಬರು ಹೇಳಿಕೆ ನೀಡಿದ್ದಾಗಿ ನನಗೆ ಬೇರೊಬ್ಬರಿಂದ ಮಾಹಿತಿ ಸಿಕ್ಕಿತು. ಅವರೆಂದು ನನ್ನ ಮನೆಗೆ ಬಂದಿಲ್ಲ, ಅದು ತುಂಬಾ ಕೆಟ್ಟ ಹೇಳಿಕೆ. ನನಗೆ 73 ವರ್ಷ ವಯಸ್ಸಾಗಿದ್ದರೂ ಯಾವಾಗ ಬೇಕಿದ್ದರೂ ಪ್ರತಿಭಟನೆಗೆ ಸೇರಲು ಸಿದ್ದ” ಎಂದು ಹೇಳಿದ್ದರು.

ಇನ್ನು ಶಾಹೀನ್ ಭಾಗ್‌ನಲ್ಲಿ ಪ್ರಖ್ಯಾತರಾಗಿದ್ದ ಬಿಲ್ಕೀಸ್ ಅಜ್ಜಿ ರೈತರ ಪ್ರತಿಭಟನೆಗೆ ಬೆಂಬಲ ನೀಡಬಾರದೆ? ಅವರ್ಯಾರು ಹಣ ಪಡೆದು ಹೋರಾಟ ಮಾಡಿದ್ದಕ್ಕೆ ದಾಖಲೆಗಳಿಲ್ಲ. ಅವರು ನಿರಂತರವಾಗಿ ಸಿಎಎ ವಿರುದ್ಧ ಪ್ರತಿಭಟನೆ ನಡೆಸಿದ್ದರು. ನೀವು ಸಿಎಎ ಪರ ಇರುವ ಕಾರಣಕ್ಕೆ ಸಿಎಎ ವಿರುದ್ಧ ಹೋರಾಡುವುವರನ್ನು ಹಣಿಯುವುದು ಸರಿಯಲ್ಲ. ಇನ್ನು ಬಿಲ್ಕೀಸ್ ಅಜ್ಜಿ ರೈತರ ಪ್ರತಿಭಟನೆಗೆ ಬೆಂಬಲ ನೀಡಲು ಬಂದಾಗ ಅವರನ್ನು ಪೊಲೀಸರು ಬಂಧಿಸಿದ್ದೇಕೆ? ಒಬ್ಬ ಮಹಿಳೆಗೆ ಎದುರುವಷ್ಟು ಪುಕ್ಕಲು ಸರ್ಕಾರವೇ ಎಂದು ಹಲವರು ಕಂಗನಾ ಮತ್ತು ಬಿಜೆಪಿ ಬೆಂಬಲಿಗರ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...