Homeಚಳವಳಿಶಾಹೀನ್ ಬಾಗ್‌ ಅಜ್ಜಿ ಎಂದು BJP ಬೆಂಬಲಿಗರಿಂದ ಸುಳ್ಳು ಪ್ರಚಾರಕ್ಕೊಳಗಾದ ಈ ಮಹಿಳೆ ಯಾರು?

ಶಾಹೀನ್ ಬಾಗ್‌ ಅಜ್ಜಿ ಎಂದು BJP ಬೆಂಬಲಿಗರಿಂದ ಸುಳ್ಳು ಪ್ರಚಾರಕ್ಕೊಳಗಾದ ಈ ಮಹಿಳೆ ಯಾರು?

ನಟಿ ಕಂಗನಾ ಇವರನ್ನು 100 ರುಪಾಯಿ ಕೊಟ್ಟರೆ ಪ್ರತಿಭಟನೆಗೆ ಬರುವ ಅಜ್ಜಿ ಎಂದು ಹೇಳಿ ವಿವಾದ ಎಬ್ಬಿಸಿದ್ದರು. ನಂತರ ಮುಖಭಂಗಕ್ಕೊಳಗಾಗಿ ಟ್ವೀಟ್ ಡಿಲೀಟ್ ಮಾಡಿದ್ದಾರೆ.

- Advertisement -
- Advertisement -

ಬಿಜೆಪಿಯ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾನೂನುಗಳ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 8 ನೇ ದಿನ ತಲುಪಿದೆ. ಹೋರಾಟದ ಆರಂಭದಲ್ಲಿ 73 ವರ್ಷದ ಅಜ್ಜಿಯೊಬ್ಬರು ರೈತ ಸಂಘಟನೆಯೊಂದರ ಹಳದಿ ಧ್ವಜವನ್ನು ಹಿಡಿದು ರೈತ ಹೋರಾಟಕ್ಕೆ ಹೊರಟು ನಿಂತಿರುವ ಸ್ಪೂರ್ತಿದಾಯಕ ಚಿತ್ರವೊಂದು ವೈರಲ್‌ ಆಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದ ಈ ಚಿತ್ರ ಹಲವರ ಮನಸ್ಸು ಗೆದ್ದಿತ್ತು. ಆದರೆ ಬಿಜೆಪಿ ಬೆಂಬಲಿಗರು ಈ ಅಜ್ಜಿ ಪೌರತ್ವ ತಿದ್ದುಪಡಿ ಕಾನೂನಿನ ವಿರುದ್ದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ’ಶಾಹಿನ್‌ ಬಾಗ್‌ನ ಅಜ್ಜಿ’ ಬಿಲ್ಕೀಸ್ ಬಾನು ಎಂದು ಸುಳ್ಳು ಹರಡಿದ್ದರು. ಸದಾ ವಿವಾದದಲ್ಲಿರುವ ಬಾಲಿವುಡ್ ನಟಿ ಕಂಗನಾ ರಾಣಾವತ್‌ ಇನ್ನೂ ಒಂದು ಹೆಜ್ಜೆ ಮುಂದು ಹೋಗಿದ್ದರು.

ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ನಟಿ ಕಂಗನಾ, “ಹಹಹ ಇದು ಅದೇ ದಾದಿ, ಟೈಮ್ ಮ್ಯಾಗಝಿನ್ ಹೇಳಿರುವ ಅತ್ಯಂತ ಪ್ರಭಾವಶಾಲಿ ಇಂಡಿಯನ್… ಮತ್ತು ಅವರು 100 ರುಪಾಯಿಗೆ ಸಿಗುತ್ತಾರೆ. ಭಾರತ ಮುಜುಗರಕ್ಕೀಡಾಗಲು ಅಂತರಾಷ್ಟ್ರೀಯ ಪಿಆರ್‌ಗಳನ್ನು ಪಾಕಿಸ್ತಾನಿ ಪತ್ರಕರ್ತರು ಹೈಜಾಕ್ ಮಾಡಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಮಗಾಗಿ ಮಾತನಾಡಲು ನಮ್ಮದೇ ಜನರು ಬೇಕು” ಎಂದು ಹೇಳಿ ವಿವಾದ ಸೃಷ್ಟಿಸಿದ್ದರು. ನಟಿ ಇದೀಗ ಆ ಟ್ವೀಟನ್ನು ಅಳಿಸಿದ್ದು, ಶಾಹಿನ್ ಭಾಗ್ ಅಜ್ಜಿಯ ಕುರಿತು ಸುಳ್ಳು ಹಾಗೂ ಅವಮಾನಕರ ಹೇಳಿಕೆಗೆ ಕ್ಷಮೆ ಕೋರುವಂತೆ ನಟಿಗೆ ನಿನ್ನೆ ಪಂಜಾಬ್‌ನ ವಕೀಲರೊಬ್ಬರು ಕಾನೂನು ನೋಟಿಸ್ ಕಳುಹಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ರೈತರ ಪ್ರತಿಭಟನೆಗೆ ಧುಮುಕಿದ ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್

ಯಾರು ಈ ರೈತ ಹೋರಾಟದ ಅಜ್ಜಿ?

ಪಂಜಾಬ್‌ನ ಬಟಿಂಡಾ ಜಿಲ್ಲೆಯ ಬಹದ್ದೂರ್‌‌ ಗಡ್‌‌ ಜಂಡಿಯಾನ್ ಗ್ರಾಮದ 73 ವರ್ಷದ ಈ ಅಜ್ಜಿಯ ಹೆಸರು ಮಹಿಂದರ್ ಕೌರ್. 13 ಎಕರೆ ಭೂಮಿಯನ್ನು ಹೊಂದಿರುವ ಇವರು ಕೃಷಿಯಲ್ಲೇ ತಮ್ಮ ಇಡೀ ಜೀವನವನ್ನು ಕಳೆದಿದ್ದಾರೆ. ಜೊತೆಗೆ ರೈತ ಚಳುವಳಿಯಲ್ಲಿ ಕೂಡಾ ತೊಡಗಿಸಿಕೊಂಡಿದ್ದಾರೆ.

ಇವರಿಗೆ ಮೂವರು ಹೆಣ್ಣು ಮಕ್ಕಳಿದ್ದು ಅವರೆಲ್ಲರಿಗೂ ಮದುವೆಯಾಗಿದೆ. ಪ್ರಸ್ತುತ ತಮ್ಮ ಮಗನೊಂದಿಗೆ ಜಂಡಿಯಾನ್ ಗ್ರಾಮದಲ್ಲಿ ವಾಸವಿರುವ ಮಹಿಂದರ್‌ ಅವರು ತಮ್ಮ ಮನೆಗೆ ಬೇಕಾದ ತರಕಾರಿಯನ್ನು ತಮ್ಮದೆ ಭೂಮಿಯಲ್ಲಿ ಬೆಳೆಯುತ್ತಾರೆ.

ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಅವರ ಚಿತ್ರವು ಅಕ್ಟೋಬರ್‌ನದ್ದಾಗಿದೆ. ತಮ್ಮ ಮೇಲಿನ ಅಪಪ್ರಚಾರದ ಬಗ್ಗೆ ಮಾತನಾಡಿದ್ದ ಅವರು, “ತನ್ನ ಬಗ್ಗೆ ನಟಿಯೊಬ್ಬರು ಹೇಳಿಕೆ ನೀಡಿದ್ದಾಗಿ ನನಗೆ ಬೇರೊಬ್ಬರಿಂದ ಮಾಹಿತಿ ಸಿಕ್ಕಿತು. ಅವರೆಂದು ನನ್ನ ಮನೆಗೆ ಬಂದಿಲ್ಲ, ಅದು ತುಂಬಾ ಕೆಟ್ಟ ಹೇಳಿಕೆ. ನನಗೆ 73 ವರ್ಷ ವಯಸ್ಸಾಗಿದ್ದರೂ ಯಾವಾಗ ಬೇಕಿದ್ದರೂ ಪ್ರತಿಭಟನೆಗೆ ಸೇರಲು ಸಿದ್ದ” ಎಂದು ಹೇಳಿದ್ದರು.

ಇನ್ನು ಶಾಹೀನ್ ಭಾಗ್‌ನಲ್ಲಿ ಪ್ರಖ್ಯಾತರಾಗಿದ್ದ ಬಿಲ್ಕೀಸ್ ಅಜ್ಜಿ ರೈತರ ಪ್ರತಿಭಟನೆಗೆ ಬೆಂಬಲ ನೀಡಬಾರದೆ? ಅವರ್ಯಾರು ಹಣ ಪಡೆದು ಹೋರಾಟ ಮಾಡಿದ್ದಕ್ಕೆ ದಾಖಲೆಗಳಿಲ್ಲ. ಅವರು ನಿರಂತರವಾಗಿ ಸಿಎಎ ವಿರುದ್ಧ ಪ್ರತಿಭಟನೆ ನಡೆಸಿದ್ದರು. ನೀವು ಸಿಎಎ ಪರ ಇರುವ ಕಾರಣಕ್ಕೆ ಸಿಎಎ ವಿರುದ್ಧ ಹೋರಾಡುವುವರನ್ನು ಹಣಿಯುವುದು ಸರಿಯಲ್ಲ. ಇನ್ನು ಬಿಲ್ಕೀಸ್ ಅಜ್ಜಿ ರೈತರ ಪ್ರತಿಭಟನೆಗೆ ಬೆಂಬಲ ನೀಡಲು ಬಂದಾಗ ಅವರನ್ನು ಪೊಲೀಸರು ಬಂಧಿಸಿದ್ದೇಕೆ? ಒಬ್ಬ ಮಹಿಳೆಗೆ ಎದುರುವಷ್ಟು ಪುಕ್ಕಲು ಸರ್ಕಾರವೇ ಎಂದು ಹಲವರು ಕಂಗನಾ ಮತ್ತು ಬಿಜೆಪಿ ಬೆಂಬಲಿಗರ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...