Homeಕರ್ನಾಟಕದೆಹಲಿಯ ಐತಿಹಾಸಿಕ ರೈತ ಹೋರಾಟದಲ್ಲಿ ಭಾಗಿಯಾಗಿರುವ ಕರ್ನಾಟಕದ ರೈತ ಮುಖಂಡರು ಹೇಳಿದ್ದೇನು?

ದೆಹಲಿಯ ಐತಿಹಾಸಿಕ ರೈತ ಹೋರಾಟದಲ್ಲಿ ಭಾಗಿಯಾಗಿರುವ ಕರ್ನಾಟಕದ ರೈತ ಮುಖಂಡರು ಹೇಳಿದ್ದೇನು?

'ಸರ್ಕಾರ ಪ್ರತಿಭಟನಾಕಾರರನ್ನು ಭಯೋತ್ಪಾದಕರು, ಖಾಲಿಸ್ತಾನಿಗಳು ಎಂದು ಅಪಪ್ರಚಾರ ಮಾಡುತ್ತಿದೆ. ಅಷ್ಟಕ್ಕೂ ಅವರು ಭಯೋತ್ಪಾದಕರಾದರೆ ಸರ್ಕಾರವೇಕೆ ಪ್ರತಿಭಟನಾಕಾರರನ್ನು ಎರೆಡೆರಡು ಬಾರಿ ಮಾತುಕತೆಗೆ ಕರೆದಿದೆ?'

- Advertisement -
- Advertisement -

ಸುಗ್ರೀವಾಜ್ಞೆಗಳ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾನೂನುಗಳ ವಿರುದ್ಧ ದೇಶದ ರಾಜಧಾನಿಯಲ್ಲಿ ನಡೆಯುತ್ತಿರುವ ದೆಹಲಿ ಚಲೋ ಆಂದೋಲನ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ. ಲಕ್ಷಾಂತರ ರೈತರು ದೆಹಲಿಯ ಐದು ಪ್ರಮುಖ ಗಡಿಗಳಲ್ಲಿ ಜಮಾಯಿಸಿದ್ದು ಇವರನ್ನು ಸೇರಲು ಇನ್ನಷ್ಟು ರೈತರು ಹಲವು ರಾಜ್ಯದಿಂದ ಹೊರಟಿದ್ದಾರೆ. ಪ್ರತಿಭಟನಾಕಾರರು ಸರ್ಕಾರ ಜಾರಿಗೆ ತಂದಿರುವ ಮೂರು ಕಾನೂನುಗಳನ್ನು ವಾಪಾಸು ಪಡೆಯಬೇಕು ಇಲ್ಲವಾದಲ್ಲಿ ಪ್ರತಿಭಟನೆಯಿಂದ ಕದಲುವ ಮಾತೇ ಇಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ರಾಷ್ಟ್ರದ ರಾಜಧಾನಿ ದೆಹಲಿಗೆ ನಿಕಟದಲ್ಲಿರುವ ರಾಜ್ಯಗಳ ರೈತರಿಗೆ ಹೋಲಿಸಿದರೆ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರೈತರು ಭಾರಿ ಸಂಖ್ಯೆಯಲ್ಲಿ ಭಾಗಿಯಾಗಿಲ್ಲವಾದರೂ, ಈ ಐತಿಹಾಸಿಕ ಹೋರಾಟದಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಭಾಗಿಯಾಗಿದ್ದಾರೆ ಮತ್ತು ಇನ್ನೂ ಸೇರಿಕೊಳ್ಳುತ್ತಿದ್ದಾರೆ. ಕರ್ನಾಟಕವೊಂದರಿಂದಲೇ 9 ಪ್ರಮುಖ ರೈತ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಿವೆ.

ಸಿಂಧೂ ಸ್ವಾಮಿ

ಕಳೆದ ಹಲವಾರು ವರ್ಷಗಳಿಂದ ರೈತ ಹೋರಾಟದ ಭಾಗವಾಗಿರುವ ತುಮಕೂರಿನ ಜ್ಞಾನ ಸಿಂಧೂ ಸ್ವಾಮಿ ಅವರು ಹೇಳುವಂತೆ, “ಇದೊಂದು ಐತಿಹಾಸಿಕ ಹೋರಾಟವಾಗಿದೆ. ನವೆಂಬರ್ 22ರಂದು ಕರ್ನಾಟಕದ ಹಲವು ಪ್ರಮುಖ ರೈತ ಸಂಘಟನೆಗಳ ಜೊತೆಗೂಡಿ, ನಾವೆಲ್ಲಾ ದೆಹಲಿಗೆ ಹೊರಟಿದ್ದೆವು. ನಮ್ಮ ಪ್ರಯಾಣದ ನಡುವೆ ಆಂಧ್ರ ಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ತಾನ ಸೇರಿದಂತೆ ಪ್ರತಿದಿನವು ನಮ್ಮ ತಂಡ ಪತ್ರಿಕಾಗೋಷ್ಠಿ, ಸಭೆಗಳನ್ನು ನಡೆಸಿದ್ದೇವೆ. ಜೊತೆಗೆ ಪ್ರತಿ ರಾಜ್ಯದಲ್ಲೂ ನಮಗೆ ಭಾರಿ ಜನಸ್ಪಂದನೆ ದೊರೆತಿದ್ದಲ್ಲದೆ, ಅಲ್ಲಿನ ರೈತರ ಜಾಥಾ ಕೂಡಾ ನಮ್ಮನ್ನು ಸೇರಿಕೊಂಡು ನಾವು ರಾಜಸ್ತಾನದವರೆಗೂ ಯಾವುದೇ ತೊಂದರೆಯಿಲ್ಲದೆ ತಲುಪಿದೆವು.

“ಆದರೆ ರಾಜಸ್ತಾನ-ಉತ್ತರ ಪ್ರದೇಶ ಗಡಿಯಲ್ಲಿ ನಮಗೆ ತೊಂದರೆಗಳಾಯಿತು. ಗಡಿಯಲ್ಲಿ ನಿಂತಿದ್ದ ಉತ್ತರ ಪ್ರದೇಶ ಪೊಲೀಸರು ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡುತ್ತಿದ್ದರು. ಮಧ್ಯಪ್ರದೇಶದಲ್ಲಿ ನಮ್ಮ ಜೊತೆ ಸೇರಿಕೊಂಡಿದ್ದ ನರ್ಮದಾ ಬಚಾವೋ ಆಂದೋಲನದ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ಬಂಧಿಸಿದ್ದರಲ್ಲದೆ, ನಮ್ಮನ್ನು ಮುಂದುವರೆಯಲು ತಡೆಯೊಡ್ಡಿದರು. ಇದರ ವಿರುದ್ದ ನವೆಂಬರ್ 25ರಿಂದ ನಾವು ಎರಡು ದಿನ ಹೆದ್ದಾರಿಯನ್ನು ತಡೆದು ಪ್ರತಿಭಟನೆ ಮಾಡಿದೆವು. ಈ ಹೊತ್ತಿನಲ್ಲಿ ಯುಪಿ ಪೊಲೀಸರು ನಿರಂತವಾಗಿ ಎರಡು ದಿನ ನಮಗೆ ತೊಂದರೆಗಳನ್ನು ಕೊಟ್ಟಿದ್ದಾರೆ” ಎಂದು ಹೇಳಿದರು.

“ಈ ಪ್ರತಿಭಟನೆಯ ನಂತರ ಯುಪಿ ಪೊಲೀಸರು ನಮ್ಮನ್ನು ದೆಹಲಿಗೆ ಪ್ರಯಾಣಿಸಲು ಅನುಮತಿ ನೀಡಿದರಾದರೂ, ಅವರ ಎಸ್ಕಾರ್ಟ್ ಮುಖಾಂತರ ದೆಹಲಿಯ ಬರಾರಿ ನಿರಂಕರಿ ಮೈದಾನಕ್ಕೆ ಕರೆದುಕೊಂಡು ಬಂದರು. ಈ ಹೊತ್ತಿಗೆ ಟಿಕ್ರಿ ಗಡಿಯಿಂದ ರೈತರನ್ನು ಅಲ್ಲಿಗೆ ಕರೆತರಲಾಗಿತ್ತು. ಆದರೆ ರೈತರನ್ನು ಬಂಧಿಸಲು ಬೇಕಾಗಿಯೇ ಈ ಮೈದಾನವನ್ನು ಬಳಸಲು ದೆಹಲಿ ಸರ್ಕಾರವನ್ನು ಕೇಂದ್ರ ಸರ್ಕಾರ ಕೇಳಿತ್ತು ಎಂದು ನಮಗೆ ನಂತರವೇ ಅರಿವಾಗಿದ್ದು. ಪ್ರತಿಭಟನಾಕಾರರನ್ನು ಬೇರೆ ಬೇರೆ ಕಡೆಗೆ ಸೇರಿಸಿ ಅಲ್ಲಿ ಬಂಧಿಸಿಡುವ ಕುತಂತ್ರವನ್ನು ಕೇಂದ್ರ ಸರ್ಕಾರ ಹೂಡಿತ್ತು. ಇದು ತಿಳಿದ ನಂತರ ರೈತರು ಅಲ್ಲಿಗೆ ಬರಲು ನಿರಾಕರಿಸಿದರು. ಇದರ ನಂತರ ರೈತರು ನಿರಂಕರಿ ಕ್ರೀಡಾಂಗಣಕ್ಕೆ ಬರದೆ ಗಡಿಯಲ್ಲೇ ಪ್ರತಿಭಟನೆಯನ್ನು ಮುಂದುವರೆಸಿದ್ದು, ದೆಹಲಿಯನ್ನು ಸಂಪರ್ಕಿಸುವ ಐದು ಗಡಿಯಲ್ಲಿ ಜಮಾಯಿಸಿರುವ ಕಾರಣಕ್ಕೆ ರಸ್ತೆಗಳು ಬಂದಾಗಿದೆ. ನಮ್ಮ ಹೋರಾಟದ ಗುರಿ ಒಂದೇ ಆಗಿದ್ದು, ಕೇಂದ್ರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನನ್ನು ವಾಪಾಸು ಪಡೆಯಬೇಕು ಎಂದಷ್ಟೇ” ಎಂದು ಜ್ಞಾನ ಸಿಂಧು ಸ್ವಾಮಿ ಹೇಳಿದರು.

ಟಿ.ಯಶವಂತ

ನವೆಂಬರ್ 21ರಂದು ಬೆಂಗಳೂರಿನಿಂದ ಹೊರಟು ಇಲ್ಲಿಯತನಕ ದೆಹಲಿ ರೈತ ಹೋರಾಟದಲ್ಲಿ ಪಾಲ್ಗೊಂಡಿರುವ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮಿತಿ ಸದಸ್ಯ ಟಿ.ಯಶವಂತ ಅವರು ಹೇಳುವಂತೆ, “ರಾಜಸ್ತಾನದ ಗಡಿಯಲ್ಲಿ ಯುಪಿ ಪೊಲೀಸರು ನಮ್ಮನ್ನು ತಡೆದಾಗ ಕೆಲವು ಸಂಘ ಪರಿವಾರದ ಪುಂಡರು ಪ್ರಯಾಣಿಕರ ಸೋಗಿನಲ್ಲಿ ಬಂದು ಮಹಿಳಾ ಹೋರಾಟಗಾರರನ್ನು ಅಶ್ಲೀಲವಾಗಿ ನಿಂದನೆ ಮಾಡಿ ನಮ್ಮನ್ನು ಪ್ರಚೋದಿಸಲು ನೋಡಿದ್ದರು. ಅದೇ ಪ್ರಯತ್ನವನ್ನು ಮರುದಿನ ಬೆಳಿಗ್ಗೆ ಕೂಡಾ ಮುಂದುವರೆಸಿದ್ದರು. ಆದರೆ ಹೋರಾಟಗಾರರು ವಿಚಲಿತರಾಗದೆ ಶಾಂತವಾಗಿ ಇದ್ದುದರಿಂದ ಅವರ ಪ್ರಯತ್ನ ವಿಫಲವಾಯಿತು” ಎನ್ನುತ್ತಾರೆ.

“ದೆಹಲಿಯ ಐದು ಗಡಿಗಳು ಈಗಾಗಲೇ ಬಂದಾಗಿದೆ, ಜೊತೆಗೆ ಅಲ್ಲಿ ಇನ್ನೂ ಹೆಚ್ಚಿನ ರೈತರು ಬಂದು ಸೇರುತ್ತಿದ್ದಾರೆ. ಅಲ್ಲದೆ ಇಂದು ಉತ್ತರ ಪ್ರದೇಶದ ಗಾಝಿಯಾಬಾದ್‍ನಲ್ಲಿ ಇವತ್ತು ಕೂಡ ಹೆಚ್ಚಿನ ಜನರು ಬಂದು ಸೇರುತ್ತಿದ್ದಾರೆ. ಹೋರಾಟ ಇನ್ನೂ ತೀವ್ರಗೊಳ್ಳುತ್ತದೆ.

ಕೇಂದ್ರ ಸರ್ಕಾರ ರೈತ ಸಂಘಟನೆಗಳಲ್ಲಿ ಒಡಕು ತರಲು ಪ್ರಯತ್ನಿಸಿದರೂ ಅವುಗಳನ್ನು ರೈತರು ಹಿಮ್ಮೆಟ್ಟಿಸಿದ್ದಾರೆ. ಇಡೀ ಪ್ರತಿಭಟನೆ ರೈತ ವಿರೋಧಿ ಕಾನೂನುಗಳನ್ನು ವಾಪಾಸು ಪಡೆಯಬೇಕು ಎನ್ನುವುದರ ಬಗ್ಗೆ ಅಚಲವಾಗಿದೆ” ಎಂದರು.

ನರೇಂದ್ರ ಮೋದಿ ಸರ್ಕಾರ ಕೃಷಿಯನ್ನು ಕಾರ್ಪೊರೆಟೀಕರಣ ಮಾಡಲು ಹಾಗೂ ಬಹುರಾಷ್ಟ್ರೀಯ ಕಂಪೆನಿಗಳಿಗೆ ಕೊಡಲು ಭಾರಿ ಆತುರಪಡುತ್ತಿದೆ. ಈ ಮಟ್ಟದ ಪ್ರತಿಭಟನೆಗಳನ್ನು ಅವರು ನಿರೀಕ್ಷೆ ಮಾಡಿರಲಿಲ್ಲ. ದೆಹಲಿ ಸುತ್ತ ಕೋಟ್ಯಾಂತರ ರೈತರು ನೆರೆದಿದ್ದರೂ ಕೇಂದ್ರ ಸರ್ಕಾರ ಇನ್ನೂ ಕೃಷಿ ಕಾನೂನನ್ನು ಸಮರ್ಥನೆ ಮಾಡುತ್ತಲೇ ಇದೆ. ಒಂದು ಕಡೆ ರೈತರನ್ನು ಮಾತುಕತೆಗೆ ಕರೆಯುತ್ತಾ ಇನ್ನೊಂದು ಕಡೆ ರೈತರನ್ನು ಅವರು ರೈತರೇ ಅಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆಕ್ಟೋಪಸ್‍ನ ಕಾಲುಗಳು ಬೇರೆಬೇರೆ ಕಡೆ ಹರಡಿ ಬೇರೆ ಬೇರೆ ರೀತಿಯಲ್ಲಿ ವರ್ತಿಸುತ್ತವಾದರೂ ಅವನ್ನು ಕೇವಲ ಒಂದೇ ಮೆದುಳು ಹೇಗೆ ನಿಯಂತ್ರಿಸುತ್ತದೆಯೋ ಹಾಗೆಯೇ ಕೇಂದ್ರ ಸರ್ಕಾರ ವರ್ತಿಸುತ್ತಿದೆ. ಇದರ ಮೆದುಳನ್ನು ಆರ್‌ಎಸ್‍ಎಸ್ ನಿರ್ವಹಿಸುತ್ತಾ ಇದೆ. ಒಟ್ಟಿನಲ್ಲಿ ಇವರು ರೈತರ ಈ ಹೋರಾಟವನ್ನು ಕುಖ್ಯಾತಿಗೊಳಿಸಲು ಹಾಗೂ ರೈತ ಸಂಘಟನೆಗಳ ನಡುವೆ ಒಡಕು ತರಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಅವರು ಅಪಪ್ರಚಾರ ಮಾಡಿದಂತೆ ಇಲ್ಲಿ ರೈತರಲ್ಲಿ ಆಕ್ರೋಶ ಹೆಚ್ಚುತ್ತಿದೆ” ಎನ್ನುತ್ತಾರೆ ಯಶವಂತ್.

“ಈ ಕರಾಳ ಕಾಯದೆಗಳನ್ನು ವಾಪಾಸು ಪಡೆಯುವವರೆಗೂ ಈ ಪ್ರತಿಭಟನೆ ಮುಂದುವರೆಯುತ್ತದೆ, ಇದಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಮಾಡಿಯೇ ರೈತರು ದೆಹಲಿಗೆ ಬಂದಿದ್ದಾರೆ. ಪ್ರತಿಭಟನೆಯಲ್ಲಿ ಪಂಜಾಬ್ ಮತ್ತು ಹರಿಯಾಣದ ರೈತರು ಮುಂಚೂಣಿಯಲ್ಲಿದ್ದಾರೆಂಬುದು ನಿಜವಾದರೂ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಉತ್ತರಪ್ರದೇಶ, ಉತ್ತರಾಖಂಡ ಹಾಗೂ ರಾಜಸ್ತಾನದ ರೈತರು ಕೂಡಾ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ” ಎಂದು ಯಶವಂತ್ ತಿಳಿಸಿದರು.

ಶಿವಕುಮಾರ್ ಗುಳಘಟ್ಟ

ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಕರ್ನಾಟಕ ಜನಶಕ್ತಿ ಸಂಘಟನೆಯ ಶಿವಕುಮಾರ್ ಗುಳಘಟ್ಟ, “ಪ್ರತಿಭಟನೆಯಲ್ಲಿ ರೈತ ಮಹಿಳೆಯರ ಸಂಖ್ಯೆ ಕಡಿಮೆಯಿರುವುದನ್ನು ಬಿಟ್ಟರೆ ಉಳಿದಂತೆ ಪ್ರತಿಭಟನೆ ಯಶಸ್ವಿಯಾಗಿ ಮುಂದುವರೆಯುತ್ತಿದೆ. ಸರ್ಕಾರ ಪ್ರತಿಭಟನಾಕಾರರನ್ನು ನಕ್ಸಲೈಟ್ ಹಾಗೂ ಖಾಲಿಸ್ತಾನಿಗಳು ಎಂದು ಅಪಪ್ರಚಾರ ಮಾಡುತ್ತಿದೆ. ಅವರ ವೈಫಲ್ಯವನ್ನು ಮುಚ್ಚಿಕೊಳ್ಳಲು ಬೇಕಾಗಿಯೇ ಇಂತಹ ಪದಗಳನ್ನು ಬಳಸುತ್ತಿದ್ದಾರೆ. ಅಷ್ಟಕ್ಕೂ ಅವರು ಭಯೋತ್ಪಾದಕರಾದರೆ ಸರ್ಕಾರವೇಕೆ ಪ್ರತಿಭಟನಾಕಾರರನ್ನು ಎರೆಡೆರಡು ಬಾರಿ ಮಾತುಕತೆಗೆ ಕರೆದಿದೆ?” ಎಂದು ಪ್ರಶ್ನಿಸುತ್ತಾರೆ.

“ಮುಖ್ಯವಾಗಿ ಕೇಂದ್ರ ಸರ್ಕಾರ ಚಳವಳಿಯನ್ನು ಒಡೆಯಲು ಪ್ರಯತ್ನಿಸುತ್ತಿದೆ. ಆದರೆ ರೈತರು ಈಗಾಗಲೇ ತಮ್ಮ ಆರು ತಿಂಗಳ ಆಹಾರವನ್ನು ತಮ್ಮೊಂದಿಗೆ ತಂದಿದ್ದು, ತಮ್ಮ ಎಲ್ಲಾ ಕೆಲಸಗಳನ್ನು ಮುಗಿಸಿಕೊಂಡೇ ಬನ್ನಿ, ನಾವು ಕಾಯುತ್ತೇವೆ ಎಂದು ಸರ್ಕಾರದೊಂದಿಗೆ ಹೇಳುತ್ತಿದ್ದಾರೆ. ಒಟ್ಟಾರೆಯಾಗಿ ಇದೊಂದು ಯಶಸ್ವಿ ಜನಚಳವಳಿಯಾಗಿದ್ದು, ಕಾನೂನನ್ನು ವಾಪಾಸು ಪಡೆಯದೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ರೈತರು ಗಟ್ಟಿಯಾಗಿದ್ದಾರೆ” ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರ ದೆಹಲಿ ಚಲೋ ನಂತರ ರೈತ ಮುಖಂಡರನ್ನು ಡಿಸೆಂಬರ್ 1 ಮತ್ತು 3 ರಂದು ಎರುಡು ಬಾರಿ ಮಾತುಕತೆಗೆ ಕರೆದಿತ್ತಾದರೂ ಅದು ಮುರಿದುಬಿದ್ದಿದೆ. ಹೊಸ ಕಾನೂನಿನ ಬಗ್ಗೆ ಚರ್ಚೆ ಮಾಡಲು ಸರ್ಕಾರ ಹಾಗೂ ರೈತರನ್ನೊಳಗೊಂಡ ಸಮಿತಿಯನ್ನು ರಚಿಸುವುದಾಗಿ ಹೇಳಿದೆಯಾದರೂ ರೈತರು ಅದನ್ನು ಒಪ್ಪದೆ, ರೈತ ವಿರೋಧಿ ಕಾನೂನನ್ನು ವಾಪಾಸು ಪಡೆಯಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಹೋರಾಟ ಇನ್ನೂ ಮುಂದುವರೆಯಲಿದ್ದು ಸರ್ವಾಧಿಕಾರಿ ಧೋರಣೆಯ ಸರ್ಕಾರದ ಬುಡಕ್ಕೆ ರೈತನ ನೇಗಿಲು ಆಳವಾಗಿ ಹುದುಗಿದೆ. ಹೋರಾಟ ಮುಂದುವರೆದಿದೆ…


ಇದನ್ನೂ ಓದಿ: ದೆಹಲಿಯಲ್ಲಿ ರೈತರ ಗುಡುಗು: ಇಂದಿನ ಹೋರಾಟದ ಚಿತ್ರಗಳು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...