HomeಮುಖಪುಟPFI ಕಚೇರಿಗಳ ಮೇಲೆ ಇಡಿ ದಾಳಿ ಜನರ ಗಮನ ಬೇರೆಡೆಗೆ ಸೆಳೆಯುವ ಯತ್ನ: ಮುಹಮ್ಮದ್ ಶಾಕಿಫ್

PFI ಕಚೇರಿಗಳ ಮೇಲೆ ಇಡಿ ದಾಳಿ ಜನರ ಗಮನ ಬೇರೆಡೆಗೆ ಸೆಳೆಯುವ ಯತ್ನ: ಮುಹಮ್ಮದ್ ಶಾಕಿಫ್

ಪಿಎಫ್‌ಐ ಸಿಎಎ ಕಾಯ್ದೆಯನ್ನು ವಿರೋಧಿಸಿ ಹೋರಾಟ ನಡೆಸುತ್ತಿದೆ. ಆ ಕಾಯ್ದೆ ಸಂವಿಧಾನ ವಿರೋಧಿಯಾದುದು ಎಂಬುದು ನಮ್ಮ ಅಭಿಮತ. ಹಾಗಾಗಿ ನಮ್ಮ ಹೋರಾಟವನ್ನು ಹಣಿಯಲು ಕೇಂದ್ರ ಸರ್ಕಾರ ಮುಂದಾಗಿದೆ.

- Advertisement -
- Advertisement -

ಸಿಎಎ ವಿರೋಧಿ ಹೋರಾಟದ ಬಳಿಕ ಈಗ ಐತಿಹಾಸಿಕ ರೈತರ ಹೋರಾಟವು ಮೋದಿ ಸರಕಾರದ ಬುಡ ಅಲ್ಲಾಡಿಸುತ್ತಿದೆ. ಎಂದಿನಿಂತೆ ಅದು ಸಾಂವಿಧಾನಿಕ ಸಂಸ್ಥೆ EDಯನ್ನು ದುರ್ಬಳಕೆ ಮಾಡಿಕೊಂಡು PFI ವಿರುದ್ಧ ಕಾರ್ಯಾಚರಣೆಗಿಳಿದಿದೆ. ಜನರ ದಿಕ್ಕು ತಪ್ಪಿಸಲು ನಡೆಸುವ ಇಂತಹ ದುಷ್ಟ ತಂತ್ರಗಳಿಂದ PFIಯನ್ನು ಧೃತಿಗೆಡಿಸಲಾಗದು ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯದರ್ಶಿ ಮುಹಮ್ಮದ್ ಶಾಕಿಫ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಇಂದು ಜಾರಿ ನಿರ್ದೇಶನಾಲಯವು ಏಕಕಾಲದಲ್ಲಿ ಹಲವು ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ನಡೆಸಿದೆ. ಇದು ರಾಜಕೀಯ ಪ್ರೇರಿತ ಕ್ರಮವಾಗಿದೆ. ಅಧಿಕಾರದಲ್ಲಿರುವ ಸರಕಾರ ಜನಾಕ್ರೋಶದ ಒತ್ತಡಕ್ಕೆ ಗುರಿಯಾದಾಗ, ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಇಂತಹ ದಾಳಿಗಳನ್ನು ಮಾಡುತ್ತದೆ ಎಂದು ಆರೋಪಿಸಿದ್ದಾರೆ.

ರಾಜಕೀಯ ಎದುರಾಳಿಗಳ ವಿರುದ್ಧ ಮತ್ತು ದೇಶದಲ್ಲಿರುವ ಭಿನ್ನಮತವನ್ನು ದಮನಿಸುವುದಕ್ಕಾಗಿ ಮೋದಿ ಸರಕಾರ ಯಾವಾಗಲೂ ರಾಷ್ಟ್ರೀಯ ಏಜೆನ್ಸಿಗಳನ್ನು ಬಳಸುತ್ತಿದೆ. ಈ ಏಜೆನ್ಸಿಗಳ ವಿಶ್ವಾಸಾರ್ಹತೆಯ ಮೇಲೆ ಪ್ರಶ್ನೆ ಎದ್ದಿದೆ. ದಿಲ್ಲಿಯಲ್ಲಿ ರೈತರು ಪಟ್ಟು ಹಿಡಿದು ಬೃಹತ್ ಹೋರಾಟ ನಡೆಸುತ್ತಿದ್ದಾರೆ. ಹೀಗಿರುವಾಗ ಈ ದಾಳಿಗಳು ವಿಷಯಾಂತರಗೊಳಿಸುವ ಗಿಮಿಕ್ ಅಲ್ಲದೆ ಬೇರೇನೂ ಅಲ್ಲ ಎಂದು ಶಾಕಿಫ್ ಹೇಳಿದ್ದಾರೆ.

ಪಿಎಫ್‌ಐ ಸಿಎಎ ಕಾಯ್ದೆಯನ್ನು ವಿರೋಧಿಸಿ ಹೋರಾಟ ನಡೆಸುತ್ತಿದೆ. ಆ ಕಾಯ್ದೆ ಸಂವಿಧಾನ ವಿರೋಧಿಯಾದುದು ಎಂಬುದು ನಮ್ಮ ಅಭಿಮತ. ಹಾಗಾಗಿ ನಮ್ಮ ಹೋರಾಟವನ್ನು ಹಣಿಯಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ ಪಾಪ್ಯುಲರ್ ಫ್ರಂಟ್ ಇದರಿಂದ ಆಘಾತಗೊಳ್ಳುವುದಿಲ್ಲ ಎಂದಿದ್ದಾರೆ.

ದೇಶದಲ್ಲಿ ಪ್ರಜಾಸತ್ತಾತ್ಮಕವಾಗಿ ಮತ್ತು ಕಾನೂನಾತ್ಮಕವಾಗಿ ನಡೆಯುತ್ತಿರುವ ಪಿಎಫ್‌ಐ ಸಂಘಟನೆಯ ನಮ್ಮ ಚಟುವಟಿಕೆಗಳು ಪಾರದರ್ಶಕವಾಗಿವೆ ಮತ್ತು ಸಾರ್ವಜನಿಕವಾಗಿವೆ. ನಮ್ಮಲ್ಲಿ ಮುಚ್ಚುಮರೆ ಏನೂ ಇಲ್ಲ. ಸಂಘಟನೆಯು ಕಾನೂನಾತ್ಮಕವಾಗಿ ಮತ್ತು ಪ್ರಜಾಸತ್ತಾತ್ಮಕವಾಗಿ ಇದನ್ನು ಎದುರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಝೀ ನ್ಯೂಸ್, ರಿಪಬ್ಲಿಕ್ ಟಿವಿ ಮತ್ತು ಆಜ್‌‌ತಕ್‌ ಚಾನೆಲ್‌‌ಗಳನ್ನು ’ಗೋದಿ ಮೀಡಿಯಾ’ ಎಂದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...