Homeಮುಖಪುಟಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಜೇನುತುಪ್ಪ ನಿಜಕ್ಕೂ ಕಲಬೆರಕೆಯದ್ದು!

ಪತಂಜಲಿ, ಡಾಬರ್, ಇಮಾಮಿ ಸೇರಿ ಹಲವು ಜೇನುತುಪ್ಪ ನಿಜಕ್ಕೂ ಕಲಬೆರಕೆಯದ್ದು!

13 ಬ್ರಾಂಡ್‌ಗಳಲ್ಲಿ ಸಫೊಲಾ, ಮಾರ್ಕ್‌ಫೆಡ್ ಸೊಹ್ನಾ ಮತ್ತು ನೇಚರ್ ನೆಕ್ಟಾರ್ ಈ 3 ಕಂಪನಿಯ ಜೇನುತುಪ್ಪ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿವೆ ಎಂದು ವರದಿ ಹೇಳಿದೆ.

- Advertisement -
- Advertisement -

ನಾವು ಪ್ರತಿದಿನ ಆಹಾರದಲ್ಲಿ, ಸೌಂದರ್ಯವರ್ಧಕವಾಗಿ ಬಳಸೋ ಜೇನುತುಪ್ಪವನ್ನು ಶುದ್ಧ ಜೇನುತುಪ್ಪ ಎಂದೇ ಬಳಸಿರುತ್ತೇವೆ. ಅದರಲ್ಲೂ ಆರ್ಯುವೇದ ಕಂಪನಿಯ ಜೇನುತುಪ್ಪ ಎಂದರೇ ಪರಿಶುದ್ಧ ಎನ್ನುವ ನಮ್ಮ ಭ್ರಮೆಯನ್ನು ಕಳಚುವ ಕೆಲಸ ಕೇಂದ್ರದ ವಿಜ್ಞಾನ ಮತ್ತು ಪರಿಸರ ಕೇಂದ್ರ (ಸಿಎಸ್‌ಇ) ಮಾಡಿದೆ.

ಹೌದು, ದೊಡ್ಡ ದೊಡ್ಡ ಕಂಪನಿಗಳ ಜೇನುತುಪ್ಪ ಕಳಪೆ ಗುಣಮಟ್ಟದ್ದಾಗಿವೆ ಎಂದು ಕೇಂದ್ರದ ವಿಜ್ಞಾನ ಮತ್ತು ಪರಿಸರ ಕೇಂದ್ರ​ ವರದಿ ನೀಡಿದೆ. ಭಾರತದ ಮಾರುಕಟ್ಟೆಯಲ್ಲಿ ಲಭ್ಯ ಇರುವ ಜೇನುತುಪ್ಪ ಬ್ರ್ಯಾಂಡ್‌ಗಳಲ್ಲಿ ಹೆಚ್ಚಿನವು ಕಲಬೆರಕೆ ಜೇನನ್ನು ಗ್ರಾಹಕರಿಗೆ ಮಾರುತ್ತಿವೆ ಎಂಬ ಅಂಶ ಸಿಎಸ್‌ಇ ನಡೆಸಿರುವ ಅಧ್ಯಯನದಲ್ಲಿ ಬಹಿರಂಗವಾಗಿದೆ.

ದೇಶದ ಮಾರುಕಟ್ಟೆಗಳಿಂದ 13 ಜೇನುತುಪ್ಪದ ವಿವಿಧ ಬ್ರಾಂಡ್‌ಗಳ ಮೇಲೆ ನಡೆಸಿದ ತನಿಖೆಯನ್ನು ವರದಿ ಉಲ್ಲೇಖಿಸಿದೆ. ಚೀನಾದಲ್ಲಿ ತಯಾರಾಗುವ ವಿಶೇಷ ರೀತಿಯ ಸಕ್ಕರೆ ಪಾಕವನ್ನು ಜೇನಿಗೆ ಬೆರೆಸಿ ಮಾರಾಟ ಮಾಡಲಾಗುತ್ತಿದೆ ಎಂಬ ಅಂಶವು ಈ ಅಧ್ಯಯನದಿಂದ ತಿಳಿದು ಬಂದಿದ್ದು, ಗುಜರಾತ್‌ನಲ್ಲಿರುವ ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿಯ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿತ್ತು.

ಜೇನಿನ ಹಲವು ಆರೋಗ್ಯಲಾಭಗಳ ಬಗ್ಗೆ ಅಗತ್ಯವಾಗಿ ತಿಳಿದುಕೊಳ್ಳಿ | Vartha Bharati- ವಾರ್ತಾ ಭಾರತಿ

ಇದನ್ನೂಓದಿ: ರೈತರ ಪ್ರತಿಭಟನೆಯನ್ನು ತುಕ್ಡೆ-ತುಕ್ಡೆ ಗ್ಯಾಂಗ್ ಶಾಹೀನ್ ಬಾಗ್ ಆಗಿ ಪರಿವರ್ತಿಸುತ್ತಿದೆ- ದೆಹಲಿ ಸಂಸದ

ಈ 13 ದೊಡ್ಡ ದೊಡ್ಡ ಕಂಪನಿಯ ಜೇನುತುಪ್ಪಗಳಲ್ಲಿ ಕೇವಲ ಮೂರೇ ಮೂರೇ ಕಂಪನಿಯ ಜೇನುತುಪ್ಪ ಮಾತ್ರ ಗುಣಮಟ್ಟದ ಟೆಸ್ಟ್‌ನಲ್ಲಿ ಪಾಸ್​ ಆಗಿವೆ. ಉಳಿದ 10 ಕಂಪನಿಗಳು ಕಲಬೆರಕೆಯ ಜೇನು ಮಾರಾಟ ಮಾಡುತ್ತಿವೆ ಎಂಬ ಅಂಶ ಬೆಳಕಿಗೆ ಬಂದಿದೆ.

ಸಿಎಸ್ಇ ಆಹಾರ ಸಂಶೋಧಕರು ಡಾಬರ್, ಪತಂಜಲಿ, ಬೈದ್ಯನಾಥ್, ಇಮಾಮಿ ಮತ್ತು ಝಂಡು ಸೇರಿದಂತೆ 13 ಬ್ರಾಂಡ್‌ಗಳ ಜೇನುತುಪ್ಪವನ್ನು ಆಯ್ಕೆ ಮಾಡಿ, ಅವುಗಳನ್ನು ಜೇನುತುಪ್ಪ ಎಂದು ಲೇಬಲ್ ಮಾಡಲು ರಾಷ್ಟ್ರೀಯ ಆಹಾರ ನಿಯಂತ್ರಣ ಕಾನೂನುಗಳ ಅಡಿಯಲ್ಲಿ ಅಗತ್ಯವಿರುವ 18 ಪರೀಕ್ಷೆಗಳಿಗೆ ಒಳಪಡಿಸಿದ್ದಾರೆ.

ಈ ವರದಿಗೆ ಸುಮ್ಮನಾಗದ ಸಿಎಸ್‌ಇ, ಜರ್ಮನಿಯ ಪ್ರಯೋಗಾಲಯವೊಂದರಲ್ಲಿ ಮುಂದುವರಿದ ದೇಶಗಳಲ್ಲಿ ಜೇನಿನ ಪರಿಶುದ್ಧತೆ ಪರಿಶೀಲನೆಗೆ ಬಳಸಲಾಗುವ ನ್ಯೂಕ್ಲಿಯರ್‌ ಮ್ಯಾಗ್ನೆಟಿಕ್‌ ರೆಸೊನೆನ್ಸ್‌ (ಎನ್‌ಎಂಆರ್‌) ಪರೀಕ್ಷೆಗೂ ಒಳಪಡಿಸಲು ನಿರ್ಧರಿಸಿತು. ಅಲ್ಲಿ ನಡೆದ ಪರೀಕ್ಷೆಯಲ್ಲೂ 13 ಬ್ರ್ಯಾಂಡ್‌ಗಳ ಪೈಕಿ 10 ಬ್ರ್ಯಾಂಡ್‌ಗಳ ಜೇನು ಶುದ್ಧವಲ್ಲ ಎಂಬ ರಿಸಲ್ಟ್ ಬಂದಿದೆ.

ಇದನ್ನೂ ಓದಿ: ಕೇಂದ್ರದೊಂದಿಗೆ ರೈತ ಮುಖಂಡರ ಸಭೆ: ಸಂಸತ್ ಅಧಿವೇಶನ ಕರೆದು ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ರೈತರ ತಾಕೀತು

13 ಬ್ರಾಂಡ್‌ಗಳಲ್ಲಿ ಸಫೊಲಾ, ಮಾರ್ಕ್‌ಫೆಡ್ ಸೊಹ್ನಾ ಮತ್ತು ನೇಚರ್ ನೆಕ್ಟಾರ್ (ಎರಡು ಮಾದರಿಗಳಲ್ಲಿ ಒಂದು) ಈ 3 ಕಂಪನಿಯ ಜೇನುತುಪ್ಪ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿವೆ ಎಂದು ವರದಿ ಹೇಳಿದೆ.

“ನಾವು ಕೊರೊನಾ ಸಾಂಕ್ರಾಮಿಕದ ರೋಗದ ವಿರುದ್ಧ ಹೋರಾಡಲು, ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂಬ ಕಾರಣಕ್ಕಾಗಿ ಜೇನುತುಪ್ಪವನ್ನು ಸೇವಿಸುತ್ತಿದ್ದೇವೆ. ಆದರೆ, ಸಕ್ಕರೆಯೊಂದಿಗೆ ಕಲಬೆರಕೆ ಮಾಡಿದ ಜೇನುತುಪ್ಪವು ಆರೋಗ್ಯಕ್ಕೆ ಉತ್ತಮವಲ್ಲ ಎಂದು ಸಿಎಸ್‌ಇ ಪ್ರಧಾನ ನಿರ್ದೇಶಕಿ ಸುನಿತಾ ನಾರಾಯಣ್ ಮಾಹಿತಿ ನೀಡಿದ್ದಾರೆ.

ಕಳೆದ ಜೂನ್​ ಮತ್ತು ಸೆಪ್ಟೆಂಬರ್​ ಅವಧಿಯಲ್ಲಿ ವಿಶ್ವದಾದ್ಯಂತಾ ಅತಿಹೆಚ್ಚಿನ ಸಂಖ್ಯೆಯಲ್ಲಿ ಜೇನುತುಪ್ಪ ಮಾರಾಟವಾಗಿವೆ. ಆದರೆ ಸಂಸ್ಥೆಯ ಈ ವರದಿಯನ್ನು ಕಂಪನಿಗಳು ತಳ್ಳಿಹಾಕಿವೆ.

ಝಂಡು ಶುದ್ಧ ಹನಿ ತಯಾರಕ, ಇಮಾಮಿ ಕಂಪನಿಗಳು, “ನಮ್ಮ ಜೇನುತುಪ್ಪವು ಭಾರತ ಸರ್ಕಾರ ಮತ್ತು ಅದರ ಅಧಿಕೃತ ಸಂಸ್ಥೆಗಳಾದ ಎಫ್‌ಎಸ್‌ಎಸ್‌ಎಐನಂತಹ ಎಲ್ಲಾ ಪ್ರೋಟೋಕಾಲ್ಗಳು ಮತ್ತು ಗುಣಮಟ್ಟದ  ಮಾನದಂಡಗಳಿಗೆ ಅನುಗುಣವಾಗಿವೆ” ಎಂದು ಹೇಳಿವೆ.


ಇದನ್ನೂ ಓದಿ: ‘ನಮ್ಮ‌ ಊಟ ನಾವೇ ತಂದಿದ್ದೇವೆ’: ಸರ್ಕಾರದ ಜೊತೆಗಿನ ಸಭೆಯಲ್ಲಿ ಊಟ ಮಾಡಲು ನಿರಾಕರಿಸಿದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...