Homeಮುಖಪುಟರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಹಿರಿಯ ಮಹಿಳೆಯ ಚಿತ್ರವು ಅಕ್ಟೋಬರ್‌ನದ್ದಾಗಿದೆ. 73 ವರ್ಷದ ಈ ಅಜ್ಜಿಯ ಹೆಸರು ಮಹಿಂದರ್ ಕೌರ್, ಪಂಜಾಬ್‌ನ ಬಟಿಂಡಾ ಜಿಲ್ಲೆಯವರಾಗಿದ್ದಾರೆ

- Advertisement -
- Advertisement -

ದೆಹಲಿ ಸಿಖ್ ಗುರುದ್ವಾರ ಮ್ಯಾನೇಜ್ಮೆಂಟ್ ಕಮಿಟಿ (DSGMC) ಬಾಲಿವುಡ್ ನಟಿ ಕಂಗನಾ ರಣಾವತ್, ತಮ್ಮ ಅವಹೇಳನಕಾರಿ ಟ್ವಿಟ್‌ಗೆ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಲೀಗಲ್ ನೋಟಿಸ್ ಕಳುಹಿಸಿದೆ. ನಟಿ ಕಂಗನಾ, ಹಿರಿಯ ವೃದ್ಧೆಯನ್ನು, ದೆಹಲಿ ಚಲೋ ರೈತರ ಪ್ರತಿಭನೆಯಲ್ಲಿ ಭಾಗಿಯಾಗಿರುವ ಬಿಲ್ಕೀಸ್ ಬಾನು ಎಂದು ತಪ್ಪಾಗಿ ಗುರುತಿಸಿದ್ದರು. ಜೊತೆಗೆ 100 ರೂಪಾಯಿಗೆ ಸಿಗುತ್ತಾರೆ ಎಂದು ವ್ಯಂಗ್ಯವಾಡಿದ್ದರು.

ನಟಿ ಕಂಗನಾ ಟ್ವೀಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆ ವ್ಯಕ್ತವಾದ ನಂತರ ವೃದ್ಧೆಯ ಮೇಲಿನ ಟ್ವೀಟ್  ಅಳಿಸಿದ್ದಾರೆ. ಟ್ವೀಟ್‌ಗೆ ಆಕ್ರೋಶ ವ್ಯಕ್ತಪಡಿಸಿರುವ DSGMC ಲೀಗಲ್ ನೋಟಿಸ್ ಕಳುಹಿಸಿ, ಕ್ಷಮೆ ಕೇಳುವಂತೆ ಆಗ್ರಹಿಸಿದೆ.

“ಹಿರಿಯ ತಾಯಿಯನ್ನು 100 ರೂ.ಗಳಿಗೆ ಲಭ್ಯವಿರುವ ಮಹಿಳೆ ಎಂದು ಕರೆದು ಅವಹೇಳನಕಾರಿ ಟ್ವೀಟ್ ಮಾಡಿರುವ ಕಂಗನಾರಿಗೆ ನಾವು ಲೀಗಲ್ ನೋಟಿಸ್ ಕಳುಹಿಸಿದ್ದೇವೆ. ಅವರ ಟ್ವೀಟ್‌ಗಳು ರೈತರ ಪ್ರತಿಭಟನೆಯನ್ನು ರಾಷ್ಟ್ರ ವಿರೋಧಿ ಎಂದು ಬಿಂಬಿಸುತ್ತವೆ. ರೈತರ ಪ್ರತಿಭಟನೆಯ ಬಗ್ಗೆ ಅವರು ಮಾಡಿದ ಅವಹೇಳನಕಾರಿದ ಟೀಕೆಗಳಿಗೆ ಬೇಷರತ್ತಾಗಿ ಕ್ಷಮೆಯಾಚಿಸಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಡಿಎಸ್‌ಜಿಎಂಸಿಯ ಅಧ್ಯಕ್ಷ ಮಂಜಿಂದರ್ ಸಿಂಗ್ ಸಿರ್ಸಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಶಾಹೀನ್ ಬಾಗ್‌ ಅಜ್ಜಿ ಎಂದು BJP ಬೆಂಬಲಿಗರಿಂದ ಸುಳ್ಳು ಪ್ರಚಾರಕ್ಕೊಳಗಾದ ಈ ಮಹಿಳೆ ಯಾರು?

ಕಳೆದ ನವೆಂಬರ್‌ 27 ರಂದು ನಟಿ ಕಂಗನಾ, “ಹಹಹ ಇದು ಅದೇ ದಾದಿ, ಟೈಮ್ ಮ್ಯಾಗಝಿನ್ ಹೇಳಿರುವ ಅತ್ಯಂತ ಪ್ರಭಾವಶಾಲಿ ಇಂಡಿಯನ್. ಅವರು 100 ರೂಪಾಯಿಗೆ ಸಿಗುತ್ತಾರೆ. ಭಾರತ ಮುಜುಗರಕ್ಕೀಡಾಗಲು ಅಂತರಾಷ್ಟ್ರೀಯ ಪಿಆರ್‌ಗಳನ್ನು ಪಾಕಿಸ್ತಾನಿ ಪತ್ರಕರ್ತರು ಹೈಜಾಕ್ ಮಾಡಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ನಮಗಾಗಿ ಮಾತನಾಡಲು ನಮ್ಮದೇ ಜನರು ಬೇಕು” ಎಂದು ಟ್ವೀಟ್ ಮಾಡಿ ವಿವಾದ ಸೃಷ್ಟಿಸಿದ್ದರು.

ನಟಿ ಆ ಟ್ವೀಟನ್ನು ಅಳಿಸಿದ್ದು, ಶಾಹಿನ್ ಭಾಗ್ ಅಜ್ಜಿಯ ಕುರಿತು ಸುಳ್ಳು ಹಾಗೂ ಅವಮಾನಕರ ಹೇಳಿಕೆಗೆ ಕ್ಷಮೆ ಕೋರುವಂತೆ ನಟಿಗೆ ಪಂಜಾಬ್‌ನ ವಕೀಲರೊಬ್ಬರು ಕೂಡ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

“ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೊದಲು ರಣಾವತ್ ಅವರು ದೃಢಿಕರಿಸಿದ ಮಾಹಿತಿಯನ್ನು ಹೊಂದಿರಬೇಕು ಮತ್ತು ಅವರ ಟ್ವೀಟ್‌ಗಳ ಬಗ್ಗೆ ಕ್ಷಮೆಯಾಚಿಸಬೇಕು” ಎಂದು ವಕೀಲ ಹರ್ಕಮ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಹಿರಿಯ ಮಹಿಳೆಯ ಚಿತ್ರವು ಅಕ್ಟೋಬರ್‌ನದ್ದಾಗಿದೆ. ತಮ್ಮ ಮೇಲಿನ ಅಪಪ್ರಚಾರದ ಬಗ್ಗೆ ಮಾತನಾಡಿದ್ದ ಅವರು, “ತನ್ನ ಬಗ್ಗೆ ನಟಿಯೊಬ್ಬರು ಹೇಳಿಕೆ ನೀಡಿದ್ದಾಗಿ ನನಗೆ ಬೇರೊಬ್ಬರಿಂದ ಮಾಹಿತಿ ಸಿಕ್ಕಿತು. ಅವರೆಂದು ನನ್ನ ಮನೆಗೆ ಬಂದಿಲ್ಲ, ಅದು ತುಂಬಾ ಕೆಟ್ಟ ಹೇಳಿಕೆ. ನನಗೆ 73 ವರ್ಷ ವಯಸ್ಸಾಗಿದ್ದರೂ ಯಾವಾಗ ಬೇಕಿದ್ದರೂ ಪ್ರತಿಭಟನೆಗೆ ಸೇರಲು ಸಿದ್ದ” ಎಂದು ಹೇಳಿದ್ದರು.

ಪಂಜಾಬ್‌ನ ಬಟಿಂಡಾ ಜಿಲ್ಲೆಯ ಬಹದ್ದೂರ್‌‌ ಗಡ್‌‌ ಜಂಡಿಯಾನ್ ಗ್ರಾಮದ 73 ವರ್ಷದ ಈ ಅಜ್ಜಿಯ ಹೆಸರು ಮಹಿಂದರ್ ಕೌರ್. 13 ಎಕರೆ ಭೂಮಿಯನ್ನು ಹೊಂದಿರುವ ಇವರು ಕೃಷಿಯಲ್ಲೇ ತಮ್ಮ ಇಡೀ ಜೀವನವನ್ನು ಕಳೆದಿದ್ದಾರೆ. ಜೊತೆಗೆ ರೈತ ಚಳುವಳಿಯಲ್ಲಿ ಕೂಡಾ ತೊಡಗಿಸಿಕೊಂಡಿದ್ದಾರೆ.

ನಟಿ ಕಂಗನಾ ಹೇಳಿಕೆಗೆ, ದಿಲ್ಜಿತ್ ದೋಸಾಂಜ್, ಪ್ರಿನ್ಸ್ ನರುಲ್ಲಾ, ಸರ್ಗುನ್ ಮೆಹ್ತಾ, ಹಿಮಾಂಶಿ ಖುರಾನಾ ಮತ್ತು ಇತರ ಹಲವಾರು ನಟರು ತಮ್ಮ ಟ್ವಿಟರ್‌ ಖಾತೆಯಲ್ಲಿ ನಟಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಇದನ್ನೂ ಓದಿ: ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಶಾಹೀನ್‌ಬಾಗ್ ಅಜ್ಜಿ ಬಿಲ್ಕೀಸ್‌ರನ್ನು ಬಂಧಿಸಿದ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...