Homeಮುಖಪುಟಉತ್ತರಪ್ರದೇಶದಲ್ಲಿ ಮನೆ ಮಾಡಲು ಮುಂದಾದ ಪ್ರಿಯಾಂಕಾ ಗಾಂಧಿ: ಪಕ್ಷದ ಕಾರ್ಯಕರ್ತರಲ್ಲಿ ಹೊಸ ಭರವಸೆ!

ಉತ್ತರಪ್ರದೇಶದಲ್ಲಿ ಮನೆ ಮಾಡಲು ಮುಂದಾದ ಪ್ರಿಯಾಂಕಾ ಗಾಂಧಿ: ಪಕ್ಷದ ಕಾರ್ಯಕರ್ತರಲ್ಲಿ ಹೊಸ ಭರವಸೆ!

ರಾಜ್ಯದಲ್ಲಿ ನಿಷ್ಕ್ರಿಯವಾಗಿರುವ ಪಕ್ಷ ಮತ್ತೆ ಪುಟಿದೇಳುವ ದಿನಗಳು ಬರಬಹುದು ಎಂಬ ನಿರೀಕ್ಷೆಯನ್ನು ಕಾರ್ಯಕರ್ತರು ಹೊಂದಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಸರ್ಕಾರ ಮಂಜೂರು ಮಾಡಿದ್ದ ಬಂಗಲೆ ಖಾಲಿ ಮಾಡುವಂತೆ ತಿಳಿಸಿದ ನಂತರ, ಪ್ರಿಯಾಂಕಾ ಗಾಂಧಿ ಉತ್ತರಪ್ರದೇಶದಲ್ಲಿ ಮನೆ ಹುಡುಕುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ಇದು ಉತ್ತರಪ್ರದೇಶದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಭರವಸೆ ಮೂಡಿಸಿದೆ.

ಕಳೆದ ಜೂನ್‌ನಲ್ಲಿ ನವದೆಹಲಿಯ ಲೋಧಿ ಎಸ್ಟೇಟ್‌ನಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ಸರ್ಕಾರ ಮಂಜೂರು ಮಾಡಿದ ಬಂಗಲೆ ಖಾಲಿ ಮಾಡುವಂತೆ ತಿಳಿಸಿತ್ತು. ಆ ನಂತರ ಪ್ರಿಯಾಂಕಾ ಗಾಂಧಿ ಲಖನೌದಲ್ಲಿ ಮನೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿಷ್ಕ್ರಿಯವಾಗಿರುವ ಪಕ್ಷ ಮತ್ತೆ ಪುಟಿದೇಳುವ ದಿನಗಳು ಬರಬಹುದು ಎಂಬ ನಿರೀಕ್ಷೆಯನ್ನು ಕಾರ್ಯಕರ್ತರು ಹೊಂದಿದ್ದಾರೆ.

ದಿವಂಗತ ಕಾಂಗ್ರೆಸ್ ಮುಖಂಡ ಶೀಲಾ ಕೌಲ್‌ಗೆ ಸೇರಿದ ಮನೆಯೊಂದನ್ನು ಪ್ರಿಯಾಂಕಾ ಗಾಂಧಿಗಾಗಿ ನೋಡಲಾಗಿತ್ತು. ಆದರೆ, ಈಗ ಭದ್ರತಾ ಕಾರಣಗಳಿಂದಾಗಿ ಯೋಜನೆಗಳನ್ನು ಬದಲಾಯಿಸಲಾಗಿದೆ. ಅವರಿಗಾಗಿ  ಲಕ್ನೋದಲ್ಲಿ ಒಂದು ಮತ್ತು ಪ್ರಯಾಗರಾಜ್‌ನಲ್ಲಿ ಮತ್ತೊಂದು ಒಟ್ಟು ಎರಡು ಬಾಡಿಗೆ ಮನೆಗಳನ್ನು ಹುಡುಕಲಾಗುತ್ತಿದೆ.

ಇದನ್ನೂ ಓದಿ: ದೆಹಲಿಯ ಐತಿಹಾಸಿಕ ರೈತ ಹೋರಾಟದಲ್ಲಿ ಭಾಗಿಯಾಗಿರುವ ಕರ್ನಾಟಕದ ರೈತ ಮುಖಂಡರು ಹೇಳಿದ್ದೇನು?

ಪ್ರಿಯಾಂಕಾ ಗಾಂಧಿಯವರ ವೈಯಕ್ತಿಕ ಕಾರ್ಯದರ್ಶಿ ಸಂದೀಪ್ ಸಿಂಗ್ ಅವರು ಎರಡು ಮನೆಗಳ ಹುಡುಕಾಟವನ್ನು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೆಲವು ಸ್ಥಳೀಯ ನಾಯಕರನ್ನು ಭೇಟಿ ಮಾಡಲು ಮತ್ತು ಮನೆಯನ್ನು ನೋಡಲು ಪ್ರಯಾಗರಾಜ್‌ಗೆ ಭೇಟಿ ನೀಡಿದ್ದರು. 2021 ರ ಜನವರಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರತಿ ತಿಂಗಳು ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಎಂದು ಲಖನೌದಲ್ಲಿನ ಕಾಂಗ್ರೆಸ್ ಮುಖಂಡರಿಗೆ ಹೇಳಲಾಗಿತ್ತು. ಆದರೆ, 2019ರ ಡಿಸೆಂಬರ್ ನಿಂದ ಯಾವ ಮುಖಂಡರು ಪಕ್ಷದ ರಾಜ್ಯ ಕೇಂದ್ರ ಕಚೇರಿಗೆ ಭೇಟಿ ನೀಡಿಲ್ಲ.

ಉತ್ತರಪ್ರದೇಶ ರಾಜಕೀಯದಲ್ಲಿ ಸಕ್ರಿಯವಾಗಿ ನೆಲೆಗೊಳ್ಳಲು ಕಾಂಗ್ರೆಸ್ ತುಂಬಾ ಹೆಣಗಾಡುತ್ತಿದೆ. ಇತ್ತೀಚಿನ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್, ಒಟ್ಟು ಮತಗಳಲ್ಲಿ ಶೇಕಡಾ 7.53 ರಷ್ಟು ಮಾತ್ರ ಮತ ಪಡೆದಿತ್ತು. ಅದರಲ್ಲೂ, ಕಾಂಗ್ರೆಸ್ ಅಭ್ಯರ್ಥಿಗಳು ನಾಲ್ಕು ಸ್ಥಾನಗಳಲ್ಲಿ ತಮ್ಮ ಠೇವಣಿ ಕಳೆದುಕೊಂಡಿದ್ದರು.

ಸದ್ಯ ಪ್ರಿಯಾಂಕಾ ಗಾಂಧಿ ಲಖನೌ ಮತ್ತು ಪ್ರಯಾಗರಾಜ್‌ಗಳಲ್ಲಿ ಮನೆ ಹುಡುಕುತ್ತಿರುವುದು ಪಕ್ಷ ಕಾರ್ಯಕರ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಉತ್ತರ ಪ್ರದೇಶದಲ್ಲಿ ಮತ್ತೆ ಪಕ್ಷ ಸಂಘಟನೆ ನಡೆಸಲು ಸಹಾಯಕವಾಗುತ್ತದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ರೈತರ ಬೇಡಿಕೆ ಈಡೇರದಿದ್ದರೆ ದೇಶಾದ್ಯಂತ ಅಗತ್ಯ ಸರಕುಗಳ ಸಾಗಾಣಿಕೆ ನಿಲ್ಲಿಸುತ್ತೇವೆ: ಸಾಗಾಣಿಕೆದಾರ ಒಕ್ಕೂಟದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...