Homeಮುಖಪುಟಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ?

ಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ?

ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವೆ ರಾಜಕೀಯ ಸಂಬಂಧ ದಿನದಿಂದ ದಿನ ಹಳಸುತ್ತಲೆ ಇದೆ. ಜಿಲ್ಲೆಗೆ ಈಶ್ವರಪ್ಪ ಉಸ್ತುವಾರಿ ಸಚಿವರಾಗಿದ್ದರೂ ಸಿ.ಎಂ ಪುತ್ರ ಸಂಸದ ಬಿ.ವೈ ರಾಘವೇಂದ್ರ ಜಿಲ್ಲೆಯ ಸಮಗ್ರ ವಹಿವಾಟನ್ನು ತಮ್ಮ ವಶಕ್ಕಿಟ್ಟುಕೊಂಡಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರಾಜಕೀಯ ಕರ್ಮಕ್ಷೇತ್ರ ಶಿವಮೊಗ್ಗದಲ್ಲಿ ಶಾಂತಿ-ಸೌಹಾರ್ದತೆ ಕದಡುವ ಕೋಮು ರಾಜಕಾರಣ ಗರಿಬಿಚ್ಚಿದೆ. ಗುರುವಾರ ಬೆಳಗ್ಗೆ (ಡಿ.3) ಬಜರಂಗದಳದ ಕಾರ್ಯಕರ್ತ ನಾಗೇಶ್ ಎಂಬಾತನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಪ್ರಕರಣ ಈಗ ನಗರದಲ್ಲಿ ಕೋಮುಗಲಭೆಯ ಆತಂಕವನ್ನು ಸೃಷ್ಟಿಸಿದೆ. ಈ ಹಲ್ಲೆಯನ್ನು ಪ್ರತಿಭಟಿಸುವ ನೆಪದಲ್ಲಿ ಬಜರಂಗದಳ ಕಾರ್ಯಕರ್ತರು ಸಿನಿಮಾ ರಸ್ತೆಯಲ್ಲಿನ ಬಟ್ಟೆ ಮಾರ್ಕೆಟ್ ಗೆ ನುಗ್ಗಿ ಒಂದು ಕೋಮಿನ ಜನರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ. ಇದಕ್ಕೆ ಪ್ರತಿಕಾರವೆಂಬಂತೆ ಬೈಕ್ ನಲ್ಲಿ ಬಂದ ಮೂರ‍್ನಾಲ್ಕು ಜನ ಮುಸ್ಲಿಂ ಹುಡುಗರ ಗುಂಪೊಂದು ಮಾರಾಕಾಸ್ತ್ರಗಳಿಂದ ರವಿವರ್ಮ ಬೀದಿಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೋಗಳ ಗ್ಲಾಸ್ ಜಖಂ ಮಾಡಿ ಪರಾರಿಯಾಗಿದೆ. ಈ ಎಲ್ಲಾ ಬೆಳವಣಿಗೆಗಳು ನಗರದಲ್ಲಿ ಕೋಮುಗಲಭೆ ವದಂತಿಗಳಿಗೆ ಕಾರಣವಾಗಿದ್ದು, ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದ ಪರಿಸ್ಥಿತಿ ಹತೋಟಿ ಬಂದಿದೆ. ಇಂತಹದ್ದೊಂದು ಸಂದರ್ಭಕ್ಕೆ ಕಾದು ಕುಳಿತಂತಿದ್ದ ಮತಿಗೇಡಿಗಳು ನಾಲಿಗೆ ಮಸೆದುಕೊಂಡು ಕೋಮುರಾಜಕಾರಣಕ್ಕೆ ಇಳಿದಿದ್ದಾರೆ.

ವಾಸ್ತವವಾಗಿ ನಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದವರು ಯಾವ ಕೋಮಿನವರು ಮತ್ತು ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂಬುದು ಇದುವರೆಗೂ ಪೊಲೀಸರ ತನಿಖೆಯಲ್ಲಿ ಕಂಡು ಬಂದಿಲ್ಲ. ಇದನ್ನು ಪೂರ್ವವಲಯ ಐಜಿಪಿ ರವಿ.ಎಸ್ ಅವರು ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಆದರೆ ಇದರ ಸತ್ಯ ಬಯಲಾಗುವ ಮುಂಚೆಯೇ ಸಂಸದ ಬಿ.ವೈ ರಾಘವೇಂದ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಇದು ಹಿಂದೂ ವಿರೋಧಿಗಳ ಕೃತ್ಯ ಎಂದು ಸಾರಿಬಿಟ್ಟಿದ್ದಾರೆ. ನಾಗೇಶನ ಮೇಲೆ ನಡೆದ ಹಲ್ಲೆಗೆ ಪ್ರತಿಯಾಗಿ ಬಟ್ಟೆ ಮಾರ್ಕೆಟ್ ನಲ್ಲಿ ಬಜರಂಗದಳ ಕಾರ್ಯಕರ್ತರು ನಡೆಸಿದ ದಾಳಿಯೂ ಹಿಂದೂಗಳ ಪ್ರತಿಕಾರದ ಗೂಂಡಾಗಿರಿಯೇ ಆಗಿದೆ ಎಂದು ಈ ರಾಜ್ಯದ ಸಚಿವ ಕೆ.ಎಸ್ ಈಶ್ವರಪ್ಪ ಘೋಷಿಸಿದ್ದಾರೆ. ಅಲ್ಲಿಗೆ ಶಿವಮೊಗ್ಗದಲ್ಲೊಂದು ರಣರಂಗದ ದಳ್ಳುರಿಗೆ ಎಲ್ಲಾ ವೇದಿಕೆಯನ್ನು ಸಜ್ಜುಗೊಳಿಸುತ್ತಿರುವ ಆತಂಕ ಜನಸಾಮಾನ್ಯರ ನಿದ್ದೆಗೆಡಿಸಿದೆ.

ಕೊರೋನಾ ಸಂದರ್ಭದಲ್ಲೆ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಪ್ರಯತ್ನಗಳು ವಿಫಲವಾಗಿದ್ದವು. ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸಬೇಕೆಂಬ ಷಡ್ಯಂತ್ರಗಳು ಅವರದ್ದೇ ಪಕ್ಷ ಪರಿವಾರದಿಂದ ನಡೆದಿತ್ತು ಎಂಬ ಗುಪ್ತಚರ ವರದಿಯೂ ಬಹಿರಂಗವಾಗಿತ್ತು. ಲಾಕ್ ಡೌನ್ ನಿಂದ ಗುಜರಾತ್‌ನಲ್ಲಿ ಸಿಲುಕಿಕೊಂಡಿದ್ದ ತಮ್ಮ ಸ್ವಕ್ಷೇತ್ರ ಶಿಕಾರಿಪುರದ ಏಳು ಜನ ತಬ್ಲಿಘಿಗಳನ್ನು ಖುದ್ದು ಮುಖ್ಯಮಂತ್ರಿಗಳೇ ವಿಶೇಷ ಬಸ್ಸಿನಲ್ಲಿ ಕರೆತರಿಸಿ ಶಿವಮೊಗ್ಗದಲ್ಲಿ ಕ್ವಾರಂಟೈನ್ ಗೊಳಪಡಿಸಿ ನಂತರ ಶಿಕಾರಿಪುರ ತಲುಪಿಸಿದ್ದರು. ರಾಜ್ಯದಲ್ಲಿ ತಬ್ಲಿಘಿಗಳ ವಿರುದ್ದ ಬಿಜೆಪಿ ಮತ್ತು ಪರಿವಾರದ ಸಂಘಟನೆಗಳು ದ್ವೇಷ ಹರಡುವಲ್ಲಿ ನಿರತರಾಗಿದ್ದಾಗ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂತಹ ಪ್ರಚೋದನೆಗಳನ್ನು ಸಹಿಸುವುದಿಲ್ಲ. ಅಲ್ಪಸಂಖ್ಯಾತರ ಮೇಲೆ ದಾಳಿನಡೆದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿ ತಮ್ಮದೇ ಪಕ್ಷದವರ ಕೋಮುರಾಜಕಾರಣಕ್ಕೆ ಕಡಿವಾಣ ಹಾಕಿದ್ದರು. ಈ ಕಾರಣದಿಂದಾಗಿ ಹಿಂದೂ ಮತೀಯ ಸಂಘಟನೆಗಳಿಗೆ ಯಡಿಯೂರಪ್ಪ ಅಪಥ್ಯವಾಗಿ ಕಂಡಿದ್ದಾರೆ. ಬಹುಶಃ ಗುಪ್ತಚರ ವರದಿಯಂತೆ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಯ ಹುನ್ನಾರವನ್ನು ಯಡಿಯೂರಪ್ಪ ಅವರು ಬಗ್ಗುಬಡಿದಿದ್ದರು.

2010 ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗಲೇ ಕನ್ನಡದ ದಿನಪತ್ರಿಕೆಯೊಂದರಲ್ಲಿ ಪ್ರಕಟವಾದ ಲೇಖನದಲ್ಲಿ ಬುರ್ಖಾ ಬಗ್ಗೆ ಅವಹೇಳನ ಮಾಡಲಾಗಿದೆ ಎಂಬ ನೆಪದಲ್ಲಿ ಶಿವಮೊಗ್ಗದಲ್ಲಿ ಭುಗಿಲೆದ್ದ ಗಲಭೆಯಲ್ಲಿ ಇಬ್ಬರೂ ಪೊಲೀಸರ ಗುಂಡಿಗೆ ಬಲಿಯಾಗಿ, ಹತ್ತಾರು ಜನ ಗಾಯಗೊಂಡು, ಲಕ್ಷಾಂತರ ರೂಪಾಯಿಗಳ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗುವುದರೊಂದಿಗೆ ಕೊನೆಗೊಂಡಿತ್ತು.

2015 ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ಆಡಳಿತವಿರುವಾಗ ನಗರದಲ್ಲಿ ವಿಶ್ವನಾಥ್ ಶೆಟ್ಟಿ ಎಂಬಾತನ ಕೊಲೆಯ ಹಿನ್ನಲೆಯಲ್ಲಿ ನಗರದಲ್ಲಿ ಕೋಮುಗಲಭೆ ನಡೆದಿದ್ದು, ಅಂದಿನ ಇನ್ಸ್‌ಪೆಕ್ಟರ್ ಮಂಜುನಾಥ್, ಡಿವೈಎಸ್ಪಿ ಪಿ.ಓ ಶಿವಕುಮಾರ್ ಅವರುಗಳು ವರ್ಗಾವಣೆಯ ತಲೆದಂಡಕ್ಕೆ ಗುರಿಯಾದರು. ತೀರ್ಥಹಳ್ಳಿಯಲ್ಲಿ ಬಾಲಕಿ ನಂದಿತ ಸಾವಿನ ಪ್ರಕರಣದಲ್ಲೂ ಕೋಮು ರಾಜಕಾರಣದ ದಳ್ಳುರಿಗೆ ತೀರ್ಥಹಳ್ಳಿ ಮತ್ತು ಅವತ್ತಿನ ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ಹೈರಾಣಾಗಿ ಹೋಗಿದ್ದರು.

ಇದೀಗ ಯಡಿಯೂರಪ್ಪನವರೆ ಮುಖ್ಯಮಂತ್ರಿಗಳಾಗಿರುವಾಗ ಶಿವಮೊಗ್ಗ ನಗರದಲ್ಲಿ ಮತ್ತೊಂದು ಸುತ್ತಿನ ಕೋಮುಗಲಭೆಯ ಆತಂಕ ಮನೆ ಮಾಡಿದೆ. ಘಟನೆ ನಡೆದ ಬೆನ್ನೆಲ್ಲೆ ತರಾತುರಿ ಎಂಬಂತೆ ಸಂಸದ ಬಿ.ವೈ ರಾಘವೇಂದ್ರ ಇದೊಂದು ಮುಸ್ಲಿಂ ಗುಂಪು ನಡೆಸಿದ ದಾಳಿ ಎಂದು ಹೇಳುವ ಮೂಲಕ ದುಡುಕಿದರೆ, ಇಂದು ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಎಂದಿನಂತೆ ದ್ವೇಷದ ಮಾತುಗಳನ್ನಾಡಿದ್ದಾರೆ. ಮುಸ್ಲಿಂ ಗೂಂಡಾಗಳು ನಾಗೇಶನ ಮೇಲೆ ನಡೆಸಿದ ಹಲ್ಲೆಗೆ ಪ್ರತಿಯಾಗಿ ಹಿಂದೂಗಳು ಗೂಂಡಾಗಿರಿ ಮಾಡಿದ್ದಾರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಅಲ್ಲಿಗೆ ಎಲ್ಲವೂ ಸ್ಪಷ್ಟವಾಗಿದೆ. ನಗರದ ಜನತೆ ಆತಂಕದಿಂದ ದಿನದೂಡುವಂತಾಗಿದೆ.

ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವೆ ರಾಜಕೀಯ ಸಂಬಂಧ ದಿನದಿಂದ ದಿನ ಹಳಸುತ್ತಲೆ ಇದೆ. ಜಿಲ್ಲೆಗೆ ಈಶ್ವರಪ್ಪ ಉಸ್ತುವಾರಿ ಸಚಿವರಾಗಿದ್ದರೂ ಸಿ.ಎಂ ಪುತ್ರ ಸಂಸದ ಬಿ.ವೈ ರಾಘವೇಂದ್ರ ಜಿಲ್ಲೆಯ ಸಮಗ್ರ ವಹಿವಾಟನ್ನು ತಮ್ಮ ವಶಕ್ಕಿಟ್ಟುಕೊಂಡಿದ್ದಾರೆ. ಪೊಲೀಸ್ ವರಿಷ್ಟಾಧಿಕಾರಿಗಳಿಂದ ಠಾಣಾವ್ಯಾಪ್ತಿಯ ಕಾನ್ಸ್ಟೇಬಲ್ ವರೆಗೂ ಎಲ್ಲಾ ವರ್ಗಾವಣೆಗಳು ಬಿ.ವೈ ರಾಘವೇಂದ್ರ ನ ಮರ್ಜಿಯಲ್ಲೆ ನಡೆದಿವೆ. ಇದು ಈಶ್ವರಪ್ಪ ಅವರ ಅಸಹನೆಗೆ ಕಾರಣವಾಗಿದೆ. ಪ್ರತಿಕಾರಕ್ಕೆ ಈಶ್ವರಪ್ಪ ಕಾಲದ ನಿರೀಕ್ಷೆಯಲ್ಲಿದ್ದಾರೆ. ಹಾಗಂತ ನಗರದಲ್ಲಿ ಕೋಮುಗಲಭೆಯೆಂದೆ ಕರೆಯುತ್ತಿರುವ ಘಟನೆಗಳ ಹಿಂದೆ ಯಡಿಯೂರಪ್ಪ ಅವರಿಗೆ ಇಕ್ಕಟ್ಟು ತಂದಿಡುವ ಮತೀಯ ರಾಜಕಾರಣವಿದೆ ಎಂಬುದನ್ನು ಈಗಲೆ ನಿಖರವಾಗಿ ಹೇಳಲು ಬರುವುದಿಲ್ಲ. ಆದರೆ ಈಶ್ವರಪ್ಪ ಅವರ ಮಾತುಗಳು ಮಾತ್ರ ಕೋಮುಗಲಭೆಯ ಕಿಡಿಯನ್ನು ಹಚ್ಚುವ , ರಾಜಕೀಯ ಏಟುಗಳನ್ನು ಕೊಡುವ ಸೂಚನೆ ನೀಡುತ್ತಿಲ್ಲ ಎಂಬುದನ್ನು‌ ನಿರಾಕರಿಸಲಾಗದು.

  • ಎನ್‌. ರವಿಕುಮಾರ್ ಟೆಲೆಕ್ಸ್

ಇದನ್ನೂ ಓದಿ; ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಮುನ್ನಡೆ- ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...