Homeಮುಖಪುಟಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ?

ಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ?

ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವೆ ರಾಜಕೀಯ ಸಂಬಂಧ ದಿನದಿಂದ ದಿನ ಹಳಸುತ್ತಲೆ ಇದೆ. ಜಿಲ್ಲೆಗೆ ಈಶ್ವರಪ್ಪ ಉಸ್ತುವಾರಿ ಸಚಿವರಾಗಿದ್ದರೂ ಸಿ.ಎಂ ಪುತ್ರ ಸಂಸದ ಬಿ.ವೈ ರಾಘವೇಂದ್ರ ಜಿಲ್ಲೆಯ ಸಮಗ್ರ ವಹಿವಾಟನ್ನು ತಮ್ಮ ವಶಕ್ಕಿಟ್ಟುಕೊಂಡಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರಾಜಕೀಯ ಕರ್ಮಕ್ಷೇತ್ರ ಶಿವಮೊಗ್ಗದಲ್ಲಿ ಶಾಂತಿ-ಸೌಹಾರ್ದತೆ ಕದಡುವ ಕೋಮು ರಾಜಕಾರಣ ಗರಿಬಿಚ್ಚಿದೆ. ಗುರುವಾರ ಬೆಳಗ್ಗೆ (ಡಿ.3) ಬಜರಂಗದಳದ ಕಾರ್ಯಕರ್ತ ನಾಗೇಶ್ ಎಂಬಾತನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಪ್ರಕರಣ ಈಗ ನಗರದಲ್ಲಿ ಕೋಮುಗಲಭೆಯ ಆತಂಕವನ್ನು ಸೃಷ್ಟಿಸಿದೆ. ಈ ಹಲ್ಲೆಯನ್ನು ಪ್ರತಿಭಟಿಸುವ ನೆಪದಲ್ಲಿ ಬಜರಂಗದಳ ಕಾರ್ಯಕರ್ತರು ಸಿನಿಮಾ ರಸ್ತೆಯಲ್ಲಿನ ಬಟ್ಟೆ ಮಾರ್ಕೆಟ್ ಗೆ ನುಗ್ಗಿ ಒಂದು ಕೋಮಿನ ಜನರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ. ಇದಕ್ಕೆ ಪ್ರತಿಕಾರವೆಂಬಂತೆ ಬೈಕ್ ನಲ್ಲಿ ಬಂದ ಮೂರ‍್ನಾಲ್ಕು ಜನ ಮುಸ್ಲಿಂ ಹುಡುಗರ ಗುಂಪೊಂದು ಮಾರಾಕಾಸ್ತ್ರಗಳಿಂದ ರವಿವರ್ಮ ಬೀದಿಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೋಗಳ ಗ್ಲಾಸ್ ಜಖಂ ಮಾಡಿ ಪರಾರಿಯಾಗಿದೆ. ಈ ಎಲ್ಲಾ ಬೆಳವಣಿಗೆಗಳು ನಗರದಲ್ಲಿ ಕೋಮುಗಲಭೆ ವದಂತಿಗಳಿಗೆ ಕಾರಣವಾಗಿದ್ದು, ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದ ಪರಿಸ್ಥಿತಿ ಹತೋಟಿ ಬಂದಿದೆ. ಇಂತಹದ್ದೊಂದು ಸಂದರ್ಭಕ್ಕೆ ಕಾದು ಕುಳಿತಂತಿದ್ದ ಮತಿಗೇಡಿಗಳು ನಾಲಿಗೆ ಮಸೆದುಕೊಂಡು ಕೋಮುರಾಜಕಾರಣಕ್ಕೆ ಇಳಿದಿದ್ದಾರೆ.

ವಾಸ್ತವವಾಗಿ ನಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದವರು ಯಾವ ಕೋಮಿನವರು ಮತ್ತು ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂಬುದು ಇದುವರೆಗೂ ಪೊಲೀಸರ ತನಿಖೆಯಲ್ಲಿ ಕಂಡು ಬಂದಿಲ್ಲ. ಇದನ್ನು ಪೂರ್ವವಲಯ ಐಜಿಪಿ ರವಿ.ಎಸ್ ಅವರು ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಆದರೆ ಇದರ ಸತ್ಯ ಬಯಲಾಗುವ ಮುಂಚೆಯೇ ಸಂಸದ ಬಿ.ವೈ ರಾಘವೇಂದ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಇದು ಹಿಂದೂ ವಿರೋಧಿಗಳ ಕೃತ್ಯ ಎಂದು ಸಾರಿಬಿಟ್ಟಿದ್ದಾರೆ. ನಾಗೇಶನ ಮೇಲೆ ನಡೆದ ಹಲ್ಲೆಗೆ ಪ್ರತಿಯಾಗಿ ಬಟ್ಟೆ ಮಾರ್ಕೆಟ್ ನಲ್ಲಿ ಬಜರಂಗದಳ ಕಾರ್ಯಕರ್ತರು ನಡೆಸಿದ ದಾಳಿಯೂ ಹಿಂದೂಗಳ ಪ್ರತಿಕಾರದ ಗೂಂಡಾಗಿರಿಯೇ ಆಗಿದೆ ಎಂದು ಈ ರಾಜ್ಯದ ಸಚಿವ ಕೆ.ಎಸ್ ಈಶ್ವರಪ್ಪ ಘೋಷಿಸಿದ್ದಾರೆ. ಅಲ್ಲಿಗೆ ಶಿವಮೊಗ್ಗದಲ್ಲೊಂದು ರಣರಂಗದ ದಳ್ಳುರಿಗೆ ಎಲ್ಲಾ ವೇದಿಕೆಯನ್ನು ಸಜ್ಜುಗೊಳಿಸುತ್ತಿರುವ ಆತಂಕ ಜನಸಾಮಾನ್ಯರ ನಿದ್ದೆಗೆಡಿಸಿದೆ.

ಕೊರೋನಾ ಸಂದರ್ಭದಲ್ಲೆ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಪ್ರಯತ್ನಗಳು ವಿಫಲವಾಗಿದ್ದವು. ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸಬೇಕೆಂಬ ಷಡ್ಯಂತ್ರಗಳು ಅವರದ್ದೇ ಪಕ್ಷ ಪರಿವಾರದಿಂದ ನಡೆದಿತ್ತು ಎಂಬ ಗುಪ್ತಚರ ವರದಿಯೂ ಬಹಿರಂಗವಾಗಿತ್ತು. ಲಾಕ್ ಡೌನ್ ನಿಂದ ಗುಜರಾತ್‌ನಲ್ಲಿ ಸಿಲುಕಿಕೊಂಡಿದ್ದ ತಮ್ಮ ಸ್ವಕ್ಷೇತ್ರ ಶಿಕಾರಿಪುರದ ಏಳು ಜನ ತಬ್ಲಿಘಿಗಳನ್ನು ಖುದ್ದು ಮುಖ್ಯಮಂತ್ರಿಗಳೇ ವಿಶೇಷ ಬಸ್ಸಿನಲ್ಲಿ ಕರೆತರಿಸಿ ಶಿವಮೊಗ್ಗದಲ್ಲಿ ಕ್ವಾರಂಟೈನ್ ಗೊಳಪಡಿಸಿ ನಂತರ ಶಿಕಾರಿಪುರ ತಲುಪಿಸಿದ್ದರು. ರಾಜ್ಯದಲ್ಲಿ ತಬ್ಲಿಘಿಗಳ ವಿರುದ್ದ ಬಿಜೆಪಿ ಮತ್ತು ಪರಿವಾರದ ಸಂಘಟನೆಗಳು ದ್ವೇಷ ಹರಡುವಲ್ಲಿ ನಿರತರಾಗಿದ್ದಾಗ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂತಹ ಪ್ರಚೋದನೆಗಳನ್ನು ಸಹಿಸುವುದಿಲ್ಲ. ಅಲ್ಪಸಂಖ್ಯಾತರ ಮೇಲೆ ದಾಳಿನಡೆದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿ ತಮ್ಮದೇ ಪಕ್ಷದವರ ಕೋಮುರಾಜಕಾರಣಕ್ಕೆ ಕಡಿವಾಣ ಹಾಕಿದ್ದರು. ಈ ಕಾರಣದಿಂದಾಗಿ ಹಿಂದೂ ಮತೀಯ ಸಂಘಟನೆಗಳಿಗೆ ಯಡಿಯೂರಪ್ಪ ಅಪಥ್ಯವಾಗಿ ಕಂಡಿದ್ದಾರೆ. ಬಹುಶಃ ಗುಪ್ತಚರ ವರದಿಯಂತೆ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಯ ಹುನ್ನಾರವನ್ನು ಯಡಿಯೂರಪ್ಪ ಅವರು ಬಗ್ಗುಬಡಿದಿದ್ದರು.

2010 ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗಲೇ ಕನ್ನಡದ ದಿನಪತ್ರಿಕೆಯೊಂದರಲ್ಲಿ ಪ್ರಕಟವಾದ ಲೇಖನದಲ್ಲಿ ಬುರ್ಖಾ ಬಗ್ಗೆ ಅವಹೇಳನ ಮಾಡಲಾಗಿದೆ ಎಂಬ ನೆಪದಲ್ಲಿ ಶಿವಮೊಗ್ಗದಲ್ಲಿ ಭುಗಿಲೆದ್ದ ಗಲಭೆಯಲ್ಲಿ ಇಬ್ಬರೂ ಪೊಲೀಸರ ಗುಂಡಿಗೆ ಬಲಿಯಾಗಿ, ಹತ್ತಾರು ಜನ ಗಾಯಗೊಂಡು, ಲಕ್ಷಾಂತರ ರೂಪಾಯಿಗಳ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗುವುದರೊಂದಿಗೆ ಕೊನೆಗೊಂಡಿತ್ತು.

2015 ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ಆಡಳಿತವಿರುವಾಗ ನಗರದಲ್ಲಿ ವಿಶ್ವನಾಥ್ ಶೆಟ್ಟಿ ಎಂಬಾತನ ಕೊಲೆಯ ಹಿನ್ನಲೆಯಲ್ಲಿ ನಗರದಲ್ಲಿ ಕೋಮುಗಲಭೆ ನಡೆದಿದ್ದು, ಅಂದಿನ ಇನ್ಸ್‌ಪೆಕ್ಟರ್ ಮಂಜುನಾಥ್, ಡಿವೈಎಸ್ಪಿ ಪಿ.ಓ ಶಿವಕುಮಾರ್ ಅವರುಗಳು ವರ್ಗಾವಣೆಯ ತಲೆದಂಡಕ್ಕೆ ಗುರಿಯಾದರು. ತೀರ್ಥಹಳ್ಳಿಯಲ್ಲಿ ಬಾಲಕಿ ನಂದಿತ ಸಾವಿನ ಪ್ರಕರಣದಲ್ಲೂ ಕೋಮು ರಾಜಕಾರಣದ ದಳ್ಳುರಿಗೆ ತೀರ್ಥಹಳ್ಳಿ ಮತ್ತು ಅವತ್ತಿನ ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ಹೈರಾಣಾಗಿ ಹೋಗಿದ್ದರು.

ಇದೀಗ ಯಡಿಯೂರಪ್ಪನವರೆ ಮುಖ್ಯಮಂತ್ರಿಗಳಾಗಿರುವಾಗ ಶಿವಮೊಗ್ಗ ನಗರದಲ್ಲಿ ಮತ್ತೊಂದು ಸುತ್ತಿನ ಕೋಮುಗಲಭೆಯ ಆತಂಕ ಮನೆ ಮಾಡಿದೆ. ಘಟನೆ ನಡೆದ ಬೆನ್ನೆಲ್ಲೆ ತರಾತುರಿ ಎಂಬಂತೆ ಸಂಸದ ಬಿ.ವೈ ರಾಘವೇಂದ್ರ ಇದೊಂದು ಮುಸ್ಲಿಂ ಗುಂಪು ನಡೆಸಿದ ದಾಳಿ ಎಂದು ಹೇಳುವ ಮೂಲಕ ದುಡುಕಿದರೆ, ಇಂದು ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಎಂದಿನಂತೆ ದ್ವೇಷದ ಮಾತುಗಳನ್ನಾಡಿದ್ದಾರೆ. ಮುಸ್ಲಿಂ ಗೂಂಡಾಗಳು ನಾಗೇಶನ ಮೇಲೆ ನಡೆಸಿದ ಹಲ್ಲೆಗೆ ಪ್ರತಿಯಾಗಿ ಹಿಂದೂಗಳು ಗೂಂಡಾಗಿರಿ ಮಾಡಿದ್ದಾರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಅಲ್ಲಿಗೆ ಎಲ್ಲವೂ ಸ್ಪಷ್ಟವಾಗಿದೆ. ನಗರದ ಜನತೆ ಆತಂಕದಿಂದ ದಿನದೂಡುವಂತಾಗಿದೆ.

ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವೆ ರಾಜಕೀಯ ಸಂಬಂಧ ದಿನದಿಂದ ದಿನ ಹಳಸುತ್ತಲೆ ಇದೆ. ಜಿಲ್ಲೆಗೆ ಈಶ್ವರಪ್ಪ ಉಸ್ತುವಾರಿ ಸಚಿವರಾಗಿದ್ದರೂ ಸಿ.ಎಂ ಪುತ್ರ ಸಂಸದ ಬಿ.ವೈ ರಾಘವೇಂದ್ರ ಜಿಲ್ಲೆಯ ಸಮಗ್ರ ವಹಿವಾಟನ್ನು ತಮ್ಮ ವಶಕ್ಕಿಟ್ಟುಕೊಂಡಿದ್ದಾರೆ. ಪೊಲೀಸ್ ವರಿಷ್ಟಾಧಿಕಾರಿಗಳಿಂದ ಠಾಣಾವ್ಯಾಪ್ತಿಯ ಕಾನ್ಸ್ಟೇಬಲ್ ವರೆಗೂ ಎಲ್ಲಾ ವರ್ಗಾವಣೆಗಳು ಬಿ.ವೈ ರಾಘವೇಂದ್ರ ನ ಮರ್ಜಿಯಲ್ಲೆ ನಡೆದಿವೆ. ಇದು ಈಶ್ವರಪ್ಪ ಅವರ ಅಸಹನೆಗೆ ಕಾರಣವಾಗಿದೆ. ಪ್ರತಿಕಾರಕ್ಕೆ ಈಶ್ವರಪ್ಪ ಕಾಲದ ನಿರೀಕ್ಷೆಯಲ್ಲಿದ್ದಾರೆ. ಹಾಗಂತ ನಗರದಲ್ಲಿ ಕೋಮುಗಲಭೆಯೆಂದೆ ಕರೆಯುತ್ತಿರುವ ಘಟನೆಗಳ ಹಿಂದೆ ಯಡಿಯೂರಪ್ಪ ಅವರಿಗೆ ಇಕ್ಕಟ್ಟು ತಂದಿಡುವ ಮತೀಯ ರಾಜಕಾರಣವಿದೆ ಎಂಬುದನ್ನು ಈಗಲೆ ನಿಖರವಾಗಿ ಹೇಳಲು ಬರುವುದಿಲ್ಲ. ಆದರೆ ಈಶ್ವರಪ್ಪ ಅವರ ಮಾತುಗಳು ಮಾತ್ರ ಕೋಮುಗಲಭೆಯ ಕಿಡಿಯನ್ನು ಹಚ್ಚುವ , ರಾಜಕೀಯ ಏಟುಗಳನ್ನು ಕೊಡುವ ಸೂಚನೆ ನೀಡುತ್ತಿಲ್ಲ ಎಂಬುದನ್ನು‌ ನಿರಾಕರಿಸಲಾಗದು.

  • ಎನ್‌. ರವಿಕುಮಾರ್ ಟೆಲೆಕ್ಸ್

ಇದನ್ನೂ ಓದಿ; ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಮುನ್ನಡೆ- ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...