Homeಮುಖಪುಟಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ?

ಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ?

ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವೆ ರಾಜಕೀಯ ಸಂಬಂಧ ದಿನದಿಂದ ದಿನ ಹಳಸುತ್ತಲೆ ಇದೆ. ಜಿಲ್ಲೆಗೆ ಈಶ್ವರಪ್ಪ ಉಸ್ತುವಾರಿ ಸಚಿವರಾಗಿದ್ದರೂ ಸಿ.ಎಂ ಪುತ್ರ ಸಂಸದ ಬಿ.ವೈ ರಾಘವೇಂದ್ರ ಜಿಲ್ಲೆಯ ಸಮಗ್ರ ವಹಿವಾಟನ್ನು ತಮ್ಮ ವಶಕ್ಕಿಟ್ಟುಕೊಂಡಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರಾಜಕೀಯ ಕರ್ಮಕ್ಷೇತ್ರ ಶಿವಮೊಗ್ಗದಲ್ಲಿ ಶಾಂತಿ-ಸೌಹಾರ್ದತೆ ಕದಡುವ ಕೋಮು ರಾಜಕಾರಣ ಗರಿಬಿಚ್ಚಿದೆ. ಗುರುವಾರ ಬೆಳಗ್ಗೆ (ಡಿ.3) ಬಜರಂಗದಳದ ಕಾರ್ಯಕರ್ತ ನಾಗೇಶ್ ಎಂಬಾತನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಪ್ರಕರಣ ಈಗ ನಗರದಲ್ಲಿ ಕೋಮುಗಲಭೆಯ ಆತಂಕವನ್ನು ಸೃಷ್ಟಿಸಿದೆ. ಈ ಹಲ್ಲೆಯನ್ನು ಪ್ರತಿಭಟಿಸುವ ನೆಪದಲ್ಲಿ ಬಜರಂಗದಳ ಕಾರ್ಯಕರ್ತರು ಸಿನಿಮಾ ರಸ್ತೆಯಲ್ಲಿನ ಬಟ್ಟೆ ಮಾರ್ಕೆಟ್ ಗೆ ನುಗ್ಗಿ ಒಂದು ಕೋಮಿನ ಜನರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ. ಇದಕ್ಕೆ ಪ್ರತಿಕಾರವೆಂಬಂತೆ ಬೈಕ್ ನಲ್ಲಿ ಬಂದ ಮೂರ‍್ನಾಲ್ಕು ಜನ ಮುಸ್ಲಿಂ ಹುಡುಗರ ಗುಂಪೊಂದು ಮಾರಾಕಾಸ್ತ್ರಗಳಿಂದ ರವಿವರ್ಮ ಬೀದಿಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೋಗಳ ಗ್ಲಾಸ್ ಜಖಂ ಮಾಡಿ ಪರಾರಿಯಾಗಿದೆ. ಈ ಎಲ್ಲಾ ಬೆಳವಣಿಗೆಗಳು ನಗರದಲ್ಲಿ ಕೋಮುಗಲಭೆ ವದಂತಿಗಳಿಗೆ ಕಾರಣವಾಗಿದ್ದು, ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದ ಪರಿಸ್ಥಿತಿ ಹತೋಟಿ ಬಂದಿದೆ. ಇಂತಹದ್ದೊಂದು ಸಂದರ್ಭಕ್ಕೆ ಕಾದು ಕುಳಿತಂತಿದ್ದ ಮತಿಗೇಡಿಗಳು ನಾಲಿಗೆ ಮಸೆದುಕೊಂಡು ಕೋಮುರಾಜಕಾರಣಕ್ಕೆ ಇಳಿದಿದ್ದಾರೆ.

ವಾಸ್ತವವಾಗಿ ನಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದವರು ಯಾವ ಕೋಮಿನವರು ಮತ್ತು ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂಬುದು ಇದುವರೆಗೂ ಪೊಲೀಸರ ತನಿಖೆಯಲ್ಲಿ ಕಂಡು ಬಂದಿಲ್ಲ. ಇದನ್ನು ಪೂರ್ವವಲಯ ಐಜಿಪಿ ರವಿ.ಎಸ್ ಅವರು ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಆದರೆ ಇದರ ಸತ್ಯ ಬಯಲಾಗುವ ಮುಂಚೆಯೇ ಸಂಸದ ಬಿ.ವೈ ರಾಘವೇಂದ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಇದು ಹಿಂದೂ ವಿರೋಧಿಗಳ ಕೃತ್ಯ ಎಂದು ಸಾರಿಬಿಟ್ಟಿದ್ದಾರೆ. ನಾಗೇಶನ ಮೇಲೆ ನಡೆದ ಹಲ್ಲೆಗೆ ಪ್ರತಿಯಾಗಿ ಬಟ್ಟೆ ಮಾರ್ಕೆಟ್ ನಲ್ಲಿ ಬಜರಂಗದಳ ಕಾರ್ಯಕರ್ತರು ನಡೆಸಿದ ದಾಳಿಯೂ ಹಿಂದೂಗಳ ಪ್ರತಿಕಾರದ ಗೂಂಡಾಗಿರಿಯೇ ಆಗಿದೆ ಎಂದು ಈ ರಾಜ್ಯದ ಸಚಿವ ಕೆ.ಎಸ್ ಈಶ್ವರಪ್ಪ ಘೋಷಿಸಿದ್ದಾರೆ. ಅಲ್ಲಿಗೆ ಶಿವಮೊಗ್ಗದಲ್ಲೊಂದು ರಣರಂಗದ ದಳ್ಳುರಿಗೆ ಎಲ್ಲಾ ವೇದಿಕೆಯನ್ನು ಸಜ್ಜುಗೊಳಿಸುತ್ತಿರುವ ಆತಂಕ ಜನಸಾಮಾನ್ಯರ ನಿದ್ದೆಗೆಡಿಸಿದೆ.

ಕೊರೋನಾ ಸಂದರ್ಭದಲ್ಲೆ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಪ್ರಯತ್ನಗಳು ವಿಫಲವಾಗಿದ್ದವು. ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸಬೇಕೆಂಬ ಷಡ್ಯಂತ್ರಗಳು ಅವರದ್ದೇ ಪಕ್ಷ ಪರಿವಾರದಿಂದ ನಡೆದಿತ್ತು ಎಂಬ ಗುಪ್ತಚರ ವರದಿಯೂ ಬಹಿರಂಗವಾಗಿತ್ತು. ಲಾಕ್ ಡೌನ್ ನಿಂದ ಗುಜರಾತ್‌ನಲ್ಲಿ ಸಿಲುಕಿಕೊಂಡಿದ್ದ ತಮ್ಮ ಸ್ವಕ್ಷೇತ್ರ ಶಿಕಾರಿಪುರದ ಏಳು ಜನ ತಬ್ಲಿಘಿಗಳನ್ನು ಖುದ್ದು ಮುಖ್ಯಮಂತ್ರಿಗಳೇ ವಿಶೇಷ ಬಸ್ಸಿನಲ್ಲಿ ಕರೆತರಿಸಿ ಶಿವಮೊಗ್ಗದಲ್ಲಿ ಕ್ವಾರಂಟೈನ್ ಗೊಳಪಡಿಸಿ ನಂತರ ಶಿಕಾರಿಪುರ ತಲುಪಿಸಿದ್ದರು. ರಾಜ್ಯದಲ್ಲಿ ತಬ್ಲಿಘಿಗಳ ವಿರುದ್ದ ಬಿಜೆಪಿ ಮತ್ತು ಪರಿವಾರದ ಸಂಘಟನೆಗಳು ದ್ವೇಷ ಹರಡುವಲ್ಲಿ ನಿರತರಾಗಿದ್ದಾಗ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂತಹ ಪ್ರಚೋದನೆಗಳನ್ನು ಸಹಿಸುವುದಿಲ್ಲ. ಅಲ್ಪಸಂಖ್ಯಾತರ ಮೇಲೆ ದಾಳಿನಡೆದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿ ತಮ್ಮದೇ ಪಕ್ಷದವರ ಕೋಮುರಾಜಕಾರಣಕ್ಕೆ ಕಡಿವಾಣ ಹಾಕಿದ್ದರು. ಈ ಕಾರಣದಿಂದಾಗಿ ಹಿಂದೂ ಮತೀಯ ಸಂಘಟನೆಗಳಿಗೆ ಯಡಿಯೂರಪ್ಪ ಅಪಥ್ಯವಾಗಿ ಕಂಡಿದ್ದಾರೆ. ಬಹುಶಃ ಗುಪ್ತಚರ ವರದಿಯಂತೆ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಯ ಹುನ್ನಾರವನ್ನು ಯಡಿಯೂರಪ್ಪ ಅವರು ಬಗ್ಗುಬಡಿದಿದ್ದರು.

2010 ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗಲೇ ಕನ್ನಡದ ದಿನಪತ್ರಿಕೆಯೊಂದರಲ್ಲಿ ಪ್ರಕಟವಾದ ಲೇಖನದಲ್ಲಿ ಬುರ್ಖಾ ಬಗ್ಗೆ ಅವಹೇಳನ ಮಾಡಲಾಗಿದೆ ಎಂಬ ನೆಪದಲ್ಲಿ ಶಿವಮೊಗ್ಗದಲ್ಲಿ ಭುಗಿಲೆದ್ದ ಗಲಭೆಯಲ್ಲಿ ಇಬ್ಬರೂ ಪೊಲೀಸರ ಗುಂಡಿಗೆ ಬಲಿಯಾಗಿ, ಹತ್ತಾರು ಜನ ಗಾಯಗೊಂಡು, ಲಕ್ಷಾಂತರ ರೂಪಾಯಿಗಳ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗುವುದರೊಂದಿಗೆ ಕೊನೆಗೊಂಡಿತ್ತು.

2015 ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ಆಡಳಿತವಿರುವಾಗ ನಗರದಲ್ಲಿ ವಿಶ್ವನಾಥ್ ಶೆಟ್ಟಿ ಎಂಬಾತನ ಕೊಲೆಯ ಹಿನ್ನಲೆಯಲ್ಲಿ ನಗರದಲ್ಲಿ ಕೋಮುಗಲಭೆ ನಡೆದಿದ್ದು, ಅಂದಿನ ಇನ್ಸ್‌ಪೆಕ್ಟರ್ ಮಂಜುನಾಥ್, ಡಿವೈಎಸ್ಪಿ ಪಿ.ಓ ಶಿವಕುಮಾರ್ ಅವರುಗಳು ವರ್ಗಾವಣೆಯ ತಲೆದಂಡಕ್ಕೆ ಗುರಿಯಾದರು. ತೀರ್ಥಹಳ್ಳಿಯಲ್ಲಿ ಬಾಲಕಿ ನಂದಿತ ಸಾವಿನ ಪ್ರಕರಣದಲ್ಲೂ ಕೋಮು ರಾಜಕಾರಣದ ದಳ್ಳುರಿಗೆ ತೀರ್ಥಹಳ್ಳಿ ಮತ್ತು ಅವತ್ತಿನ ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ಹೈರಾಣಾಗಿ ಹೋಗಿದ್ದರು.

ಇದೀಗ ಯಡಿಯೂರಪ್ಪನವರೆ ಮುಖ್ಯಮಂತ್ರಿಗಳಾಗಿರುವಾಗ ಶಿವಮೊಗ್ಗ ನಗರದಲ್ಲಿ ಮತ್ತೊಂದು ಸುತ್ತಿನ ಕೋಮುಗಲಭೆಯ ಆತಂಕ ಮನೆ ಮಾಡಿದೆ. ಘಟನೆ ನಡೆದ ಬೆನ್ನೆಲ್ಲೆ ತರಾತುರಿ ಎಂಬಂತೆ ಸಂಸದ ಬಿ.ವೈ ರಾಘವೇಂದ್ರ ಇದೊಂದು ಮುಸ್ಲಿಂ ಗುಂಪು ನಡೆಸಿದ ದಾಳಿ ಎಂದು ಹೇಳುವ ಮೂಲಕ ದುಡುಕಿದರೆ, ಇಂದು ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಎಂದಿನಂತೆ ದ್ವೇಷದ ಮಾತುಗಳನ್ನಾಡಿದ್ದಾರೆ. ಮುಸ್ಲಿಂ ಗೂಂಡಾಗಳು ನಾಗೇಶನ ಮೇಲೆ ನಡೆಸಿದ ಹಲ್ಲೆಗೆ ಪ್ರತಿಯಾಗಿ ಹಿಂದೂಗಳು ಗೂಂಡಾಗಿರಿ ಮಾಡಿದ್ದಾರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಅಲ್ಲಿಗೆ ಎಲ್ಲವೂ ಸ್ಪಷ್ಟವಾಗಿದೆ. ನಗರದ ಜನತೆ ಆತಂಕದಿಂದ ದಿನದೂಡುವಂತಾಗಿದೆ.

ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವೆ ರಾಜಕೀಯ ಸಂಬಂಧ ದಿನದಿಂದ ದಿನ ಹಳಸುತ್ತಲೆ ಇದೆ. ಜಿಲ್ಲೆಗೆ ಈಶ್ವರಪ್ಪ ಉಸ್ತುವಾರಿ ಸಚಿವರಾಗಿದ್ದರೂ ಸಿ.ಎಂ ಪುತ್ರ ಸಂಸದ ಬಿ.ವೈ ರಾಘವೇಂದ್ರ ಜಿಲ್ಲೆಯ ಸಮಗ್ರ ವಹಿವಾಟನ್ನು ತಮ್ಮ ವಶಕ್ಕಿಟ್ಟುಕೊಂಡಿದ್ದಾರೆ. ಪೊಲೀಸ್ ವರಿಷ್ಟಾಧಿಕಾರಿಗಳಿಂದ ಠಾಣಾವ್ಯಾಪ್ತಿಯ ಕಾನ್ಸ್ಟೇಬಲ್ ವರೆಗೂ ಎಲ್ಲಾ ವರ್ಗಾವಣೆಗಳು ಬಿ.ವೈ ರಾಘವೇಂದ್ರ ನ ಮರ್ಜಿಯಲ್ಲೆ ನಡೆದಿವೆ. ಇದು ಈಶ್ವರಪ್ಪ ಅವರ ಅಸಹನೆಗೆ ಕಾರಣವಾಗಿದೆ. ಪ್ರತಿಕಾರಕ್ಕೆ ಈಶ್ವರಪ್ಪ ಕಾಲದ ನಿರೀಕ್ಷೆಯಲ್ಲಿದ್ದಾರೆ. ಹಾಗಂತ ನಗರದಲ್ಲಿ ಕೋಮುಗಲಭೆಯೆಂದೆ ಕರೆಯುತ್ತಿರುವ ಘಟನೆಗಳ ಹಿಂದೆ ಯಡಿಯೂರಪ್ಪ ಅವರಿಗೆ ಇಕ್ಕಟ್ಟು ತಂದಿಡುವ ಮತೀಯ ರಾಜಕಾರಣವಿದೆ ಎಂಬುದನ್ನು ಈಗಲೆ ನಿಖರವಾಗಿ ಹೇಳಲು ಬರುವುದಿಲ್ಲ. ಆದರೆ ಈಶ್ವರಪ್ಪ ಅವರ ಮಾತುಗಳು ಮಾತ್ರ ಕೋಮುಗಲಭೆಯ ಕಿಡಿಯನ್ನು ಹಚ್ಚುವ , ರಾಜಕೀಯ ಏಟುಗಳನ್ನು ಕೊಡುವ ಸೂಚನೆ ನೀಡುತ್ತಿಲ್ಲ ಎಂಬುದನ್ನು‌ ನಿರಾಕರಿಸಲಾಗದು.

  • ಎನ್‌. ರವಿಕುಮಾರ್ ಟೆಲೆಕ್ಸ್

ಇದನ್ನೂ ಓದಿ; ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಮುನ್ನಡೆ- ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...