Homeಮುಖಪುಟಔಷಧಿ ಪೂರೈಕೆಗೆ ತಡೆ, ಸಾಂಕ್ರಾಮಿಕ ಕಾಯ್ದೆ ಉಲ್ಲಂಘನೆ ಆರೋಪ: ಹೋರಾಟನಿರತ ರೈತರ ಮೇಲೆ ಸುಪ್ರೀಂನಲ್ಲಿ PIL

ಔಷಧಿ ಪೂರೈಕೆಗೆ ತಡೆ, ಸಾಂಕ್ರಾಮಿಕ ಕಾಯ್ದೆ ಉಲ್ಲಂಘನೆ ಆರೋಪ: ಹೋರಾಟನಿರತ ರೈತರ ಮೇಲೆ ಸುಪ್ರೀಂನಲ್ಲಿ PIL

ಬಿಹಾರ ಚುನಾವಣೆ ನಡೆದಾಗಿ ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸಭೆಗೆ ಲಕ್ಷಾಂತರ ಜನ ಸೇರಿದ್ದರು, ಆಗ ಎಲ್ಲಿ ಹೋಗಿತ್ತು ನಿಮ್ಮ ಈ ಸಾಂಕ್ರಾಮಿಕ ಕಾಯ್ದೆ ಎಂದು ರೈತರು ಕಿಡಿಕಾರಿದ್ದಾರೆ.

- Advertisement -
- Advertisement -

ಲಾಠೀ ಏಟು, ಜಲಫಿರಂಗಿ ಮತ್ತು ಅಶ್ರವಾಯುಗಳನ್ನು ಸಿಡಿಸಿ ರೈತರನ್ನು ಬಗ್ಗುಬಡಿಯಲು ಯತ್ನಿಸಿದ ಸರ್ಕಾರ ಕಳೆದ ಮೂರು ದಿನಗಳಿಂದ ಅವರೊಂದಿಗೆ ಮಾತುಕತೆ ನಡೆಸಲು ಮುಂದಾಗಿತ್ತು. ಆದರೆ ರೈತರು ಕೇಂದ್ರದ ವಾದಗಳನ್ನು ಒಪ್ಪದೆ, 3 ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಪಟ್ಟು ಹಿಡಿದು ಹೋರಾಟ ಮುಂದುವರೆಸಿದಾಗ ಅವರ ಮೇಲೆ ಸಾಂಕ್ರಾಮಿಕ ಕಾಯ್ದೆ ಉಲ್ಲಂಘನೆಯ ಆರೋಪಗಳನ್ನು ಹೊರಿಸಿದೆ. ದೆಹಲಿ ಪೊಲೀಸರು ಈ ಕುರಿತು ರೈತ ಹೋರಾಟಗಾರರಿಗೆ ನೋಟಿಸ್ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ರೈತರು ದೆಹಲಿ ತಲುಪುವು ಎಲ್ಲಾ ರಸ್ತೆಗಳನ್ನು ಬಂದ್ ಮಾಡಿರುವುದರಿಂದ ಔಷಧಿ ಪೂರೈಕೆಗೆ ತಡೆಯಾಗಿದೆ. ಹಾಗಾಗಿ ದೆಹಲಿ ಗಡಿಗಳಲ್ಲಿ ಹೋರಾಟ ನಿರತರನ್ನು ರೈತರನ್ನು ಎಲ್ಲಿಂದ ಹೊರಗೆ ಕಳಿಸಬೇಕೆಂದು ಇಂದು ಸುಪ್ರೀಂನಲ್ಲಿ ಪಿಐಎಲ್‌ ಒಂದು ದಾಖಲಾಗಿದೆ.

ಸಾಂಕ್ರಾಮಿಕ ರೋಗ ಕಾಯ್ದೆ ಉಲ್ಲಂಘಿಸಿದ ನೆಪವೊಡ್ಡಿ ಪ್ರತಿಭಟನಾ ನಿರತ ರೈತ ನಾಯಕರಿಗೆ ಪೊಲೀಸ್ ನೋಟಿಸ್‌ ನೀಡಿದ ಸರ್ಕಾರದ ಕ್ರಮವನ್ನು ಎಐಕೆಎಸ್‌ಸಿಸಿ ಖಂಡಿಸಿದೆ. ಬಿಹಾರದಲ್ಲಿ ಚುನಾವಣೆ ನಡೆದಾಗಿ ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸಭೆಗೆ ಲಕ್ಷಾಂತರ ಜನ ಸೇರಿದ್ದರು. ಪ್ರಧಾನಿ ಕ್ಷೇತ್ರ ವಾರಣಾಸಿಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಲಕ್ಷಾಂತರ ಜನ ಸೇರಿ ದೀಪೋತ್ಸವ ಆಚರಿಸಿದರು, ಆಗ ಎಲ್ಲಿ ಹೋಗಿತ್ತು ನಿಮ್ಮ ಈ ಕಾಯ್ದೆ ಎಂದು ರೈತ ಮುಖಂಡರು ಕಿಡಿಕಾರಿದ್ದಾರೆ.

ಎಂಎಸ್‌ಪಿ ಕೊಡುತ್ತೇವೆ ಎಂಬ ಸರ್ಕಾರದ ಮಾತನ್ನು ನಾವು ನಂಬುವುದಿಲ್ಲ. ಸ್ವಾಮಿನಾಥನ್ ಆಯೋಗದ ವರದಿಯಂತೆ ರೈತ ಬೆಳೆದ ಬೆಳಗೆ ಖರ್ಚು ಸೇರಿ ಒಂದೂವರೆ ಪಟ್ಟು ಬೆಲೆ ನಿಗದಿ ಮಾಡಬೇಕು. ಇದಕ್ಕಾಗಿ ಕಾನೂನು ತರಬೇಕೆಂದು ಆಗ್ರಹಿಸಿದ್ದಾರೆ. ಅದೇ ಸಮಯದಲ್ಲಿ ನೀತಿ ಆಯೋಗವು ಕಾರ್ಪೊರೇಟ್‌ಗಳ ಪರವಾಗಿ ಬ್ಯಾಟಿಂಗ್ ಮಾಡುತ್ತಾ ಕೃಷಿ ಕಾಯ್ದೆಗಳನ್ನು ಸಮರ್ಥಿಸುವುದನ್ನು ಎಐಕೆಎಸ್‌ಸಿಸಿ ಖಂಡಿಸಿದೆ.


ಇದನ್ನೂ ಓದಿ: ಪಂಜಾಬಿನ ಪುಟ್ಟ ಮಕ್ಕಳಿಗೂ ಗೊತ್ತು ಈ ರೈತ ವಿರೋಧಿ ನೀತಿಗಳ ಪರಿಣಾಮ ಏನೆಂದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...