Homeಚಳವಳಿಕೊನೆಗೂ ಹೋರಾಟಗಾರ ಸ್ಟ್ಯಾನ್ ಸ್ವಾಮಿಗೆ ಸ್ಟ್ರಾ ನೀಡಿದ ಜೈಲು ಅಧಿಕಾರಿಗಳು

ಕೊನೆಗೂ ಹೋರಾಟಗಾರ ಸ್ಟ್ಯಾನ್ ಸ್ವಾಮಿಗೆ ಸ್ಟ್ರಾ ನೀಡಿದ ಜೈಲು ಅಧಿಕಾರಿಗಳು

ಕ್ಯಾಥೋಲಿಕ್ ಪಾದ್ರಿಯಾಗಿರುವ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ.

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಅಕ್ಟೋಬರ್ 8 ರಂದು ಬಂಧಿಸಲ್ಪಟ್ಟ 83 ವರ್ಷದ ಬುಡಕಟ್ಟು ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿಯವರಿಗೆ ಕೊನೆಗೂ ತಲೋಜಾ ಜೈಲಿನ ಅಧಿಕಾರಿಗಳು ನೀರು ಕುಡಿಯಲು ಬೇಕಿರುವ ಸ್ಟ್ರಾ ಮತ್ತು ಸಿಪ್ಪರ್ ಕಪ್ ನೀಡಿದ್ದಾರೆ.

ತಲೋಜಾ ಜೈಲಿನ ಅಧಿಕಾರಿಗಳು ಸ್ಟ್ಯಾನ್ ಸ್ವಾಮಿ ಅವರಿಗೆ ಸ್ಟ್ರಾ ಮತ್ತು ಸಿಪ್ಪರ್‌ ಕಪ್ ನೀಡಿದ್ದಾರೆ ಎಂದು ಫಾದರ್ ಸ್ಟ್ಯಾನ್ ಸ್ವಾಮಿಯ ಪರ ವಕೀಲ ಶರೀಫ್ ಶೇಖ್ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತಮಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಕೈಗಳು ನಡುಗುತ್ತದೆ. ಆದ್ದರಿಂದ ಆಹಾರ ಸೇವಿಸಲು ಆಗುದಿಲ್ಲ. ಹಾಗಾಗಿ ಬಂಧನದ ಸಮಯದಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ಸ್ಟ್ರಾ ಮತ್ತು ಸಿಪ್ಪರ್ ಅನ್ನು ವಾಪಸ್ ಕೊಡುವಂತೆ ಕೋರಿ ಸ್ಟಾನ್ ಸ್ವಾಮಿ ಕೋರ್ಟ್‌‌ಗೆ ಅರ್ಜಿ ಸಲ್ಲಿಸಿದ್ದರು.

ಫಾದರ್ ಸ್ಟ್ಯಾನ್ ಸ್ವಾಮಿ ಅವರು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ಹೊಸ ಮೂರು ಅರ್ಜಿಗಳನ್ನು ಸಲ್ಲಿಸಿದ್ದು, ಬಂಧನದ ವೇಳೆ ತಮ್ಮಿಂದ ವಶಪಡಿಸಿಕೊಂಡಿರುವ ಬ್ಯಾಗ್ ಹಾಗೂ ಹಾರ್ಡ್ ಕ್ಲೋನ್ ಪ್ರತಿಯನ್ನು  ಹಿಂತಿರುಗಿಸುವಂತೆ ಕೇಳಿಕೊಂಡಿದ್ದಾರೆ. ಜೊತೆಗೆ ತಮ್ಮನ್ನು ತಲೋಜಾ ಜೈಲಿನಿಂದ ಬೇರೆಡೆಗೆ ಸ್ಥಳಾಂತರಿಸದಂತೆ ಎನ್ಐಎ ಅಧಿಕಾರಿಗಳಿಗೆ ನಿರ್ದೇಶಿಸಬೇಕೆಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಇನ್ನೂ ಡಿಸೆಂಬರ್‌‌ವರೆಗೂ ಕಾಯಬೇಕು!

ಸ್ವಾಮಿ ಅವರಿಂದ ಸ್ಟ್ರಾ ಮತ್ತು ಸಿಪ್ಪರ್ ಅನ್ನು ವಶಪಡಿಸಿಕೊಂಡಿಲ್ಲ. ಆದ್ದರಿಂದ ಆ ವಸ್ತುಗಳನ್ನು ಅವರಿಗೆ ಹಿಂದಿರುಗಿಸುವ ಪ್ರಶ್ನೆಯಿಲ್ಲ ಎಂದು ಎನ್ಐಎ ಕಳೆದ ತಿಂಗಳು ನ್ಯಾಯಾಲಯಕ್ಕೆ ತಿಳಿಸಿತು. ನಂತರ ಸ್ವಾಮಿ ಸ್ಟ್ರಾ, ಸಿಪ್ಪರ್ ಮತ್ತು ಚಳಿಗಾಲದ ಬಟ್ಟೆಗಳನ್ನು ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದರು. ನವೆಂಬರ್ 26 ರಂದು ವಿಶೇಷ ಎನ್ಐಎ ನ್ಯಾಯಾಲಯವು ಜೈಲು ಅಧೀಕ್ಷಕರಿಗೆ ಅರ್ಜಿ ಸಲ್ಲಿಸಿ ತನ್ನ ಉತ್ತರವನ್ನು ಸಲ್ಲಿಸುವಂತೆ ನಿರ್ದೇಶಿಸಿತ್ತು.

ಇಂದು ತಲೋಜಾ ಜೈಲಿನ ಅಧಿಕಾರಿಗಳು ಸ್ವಾಮಿ ಅವರಿಗೆ ಸ್ಟ್ರಾ, ಸಿಪ್ಪರ್ ಜೊತೆಗೆ ಚಳಿಗಾಲದ ಉಡುಪುಗಳನ್ನು ಕೊಟ್ಟಿದ್ದಾರೆ’ ಎಂದು ವಕೀಲ ಶರೀಫ್ ಶೇಖ್ ಅವರು ನ್ಯಾಯಾಲಯಕ್ಕೆ ತಿಳಿಸಿದರು. ಸ್ವಾಮಿ ವೈದ್ಯಕೀಯ ಕಾರಣಕ್ಕೂ ಜಾಮೀನು ಅರ್ಜಿ ಸಲ್ಲಿಸಿದ್ದರು.

ಸ್ವಾಮಿಯವರ ಆರೋಗ್ಯ ಸ್ಥಿತಿ ಕುರಿತು ತಲೋಜಾ ಜೈಲಿನಿಂದ ನ್ಯಾಯಾಲಯ ವರದಿ ಕೋರಿತ್ತು. ಜೈಲು ಅಧಿಕಾರಿಗಳು ವರದಿಯನ್ನು ಸಲ್ಲಿಸಲು ಸಮಯ ಬೇಕು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದು, ನ್ಯಾಯಾಲಯವು ಡಿಸೆಂಬರ್ 10 ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಡಿಸೆಂಬರ್ 10 ರಂದು ಸ್ವಾಮಿ ಸಲ್ಲಿಸಿದ್ದ ಮೂರು ಹೊಸ ಅರ್ಜಿಗಳನ್ನೂ ಆಲಿಸುವುದಾಗಿ ನ್ಯಾಯಾಲಯ ಹೇಳಿದೆ.

ಕ್ಯಾಥೋಲಿಕ್ ಪಾದ್ರಿಯಾಗಿರುವ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದ ಸಂಬಂಧ ಬಂಧನಕ್ಕೊಳಗಾದ 16 ನೇ ವ್ಯಕ್ತಿಯಾಗಿದ್ದು, ಇದುವರೆಗೂ ಬಂಧಿಸಿದವರಲ್ಲಿ ಹಿರಿಯರಾಗಿದ್ದಾರೆ. ಸ್ಟ್ಯಾನ್ ಸ್ವಾಮಿ ಹಲವು ರೀತಿಯ ಕಾಯಿಲೆಯಿಂದ ಬಳಲುತ್ತಿದ್ದಾರೆ.


ಇದನ್ನೂ ಓದಿ: ಜೈಲಿನಲ್ಲಿರುವ ಸ್ಟ್ಯಾನ್‌ ಸ್ವಾಮಿಗೆ ಅಗತ್ಯ ಸೌಲಭ್ಯ ಖಚಿತ ಪಡಿಸಲು NHRC ಮಧ್ಯಪ್ರವೇಶಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ದೇಶದ ಜೈಲುಗಳಲ್ಲಿರುವ ಚಿಂತಕರು ಮತ್ತು ಹೋರಾಟಗಾರರ ಪರಿಸ್ಥಿತಿ ಚಿಂತಾಜನಕವಾಗಿದೆ.

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...