Homeಚಳವಳಿಕೊನೆಗೂ ಹೋರಾಟಗಾರ ಸ್ಟ್ಯಾನ್ ಸ್ವಾಮಿಗೆ ಸ್ಟ್ರಾ ನೀಡಿದ ಜೈಲು ಅಧಿಕಾರಿಗಳು

ಕೊನೆಗೂ ಹೋರಾಟಗಾರ ಸ್ಟ್ಯಾನ್ ಸ್ವಾಮಿಗೆ ಸ್ಟ್ರಾ ನೀಡಿದ ಜೈಲು ಅಧಿಕಾರಿಗಳು

ಕ್ಯಾಥೋಲಿಕ್ ಪಾದ್ರಿಯಾಗಿರುವ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ.

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಅಕ್ಟೋಬರ್ 8 ರಂದು ಬಂಧಿಸಲ್ಪಟ್ಟ 83 ವರ್ಷದ ಬುಡಕಟ್ಟು ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿಯವರಿಗೆ ಕೊನೆಗೂ ತಲೋಜಾ ಜೈಲಿನ ಅಧಿಕಾರಿಗಳು ನೀರು ಕುಡಿಯಲು ಬೇಕಿರುವ ಸ್ಟ್ರಾ ಮತ್ತು ಸಿಪ್ಪರ್ ಕಪ್ ನೀಡಿದ್ದಾರೆ.

ತಲೋಜಾ ಜೈಲಿನ ಅಧಿಕಾರಿಗಳು ಸ್ಟ್ಯಾನ್ ಸ್ವಾಮಿ ಅವರಿಗೆ ಸ್ಟ್ರಾ ಮತ್ತು ಸಿಪ್ಪರ್‌ ಕಪ್ ನೀಡಿದ್ದಾರೆ ಎಂದು ಫಾದರ್ ಸ್ಟ್ಯಾನ್ ಸ್ವಾಮಿಯ ಪರ ವಕೀಲ ಶರೀಫ್ ಶೇಖ್ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತಮಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಕೈಗಳು ನಡುಗುತ್ತದೆ. ಆದ್ದರಿಂದ ಆಹಾರ ಸೇವಿಸಲು ಆಗುದಿಲ್ಲ. ಹಾಗಾಗಿ ಬಂಧನದ ಸಮಯದಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ಸ್ಟ್ರಾ ಮತ್ತು ಸಿಪ್ಪರ್ ಅನ್ನು ವಾಪಸ್ ಕೊಡುವಂತೆ ಕೋರಿ ಸ್ಟಾನ್ ಸ್ವಾಮಿ ಕೋರ್ಟ್‌‌ಗೆ ಅರ್ಜಿ ಸಲ್ಲಿಸಿದ್ದರು.

ಫಾದರ್ ಸ್ಟ್ಯಾನ್ ಸ್ವಾಮಿ ಅವರು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ಹೊಸ ಮೂರು ಅರ್ಜಿಗಳನ್ನು ಸಲ್ಲಿಸಿದ್ದು, ಬಂಧನದ ವೇಳೆ ತಮ್ಮಿಂದ ವಶಪಡಿಸಿಕೊಂಡಿರುವ ಬ್ಯಾಗ್ ಹಾಗೂ ಹಾರ್ಡ್ ಕ್ಲೋನ್ ಪ್ರತಿಯನ್ನು  ಹಿಂತಿರುಗಿಸುವಂತೆ ಕೇಳಿಕೊಂಡಿದ್ದಾರೆ. ಜೊತೆಗೆ ತಮ್ಮನ್ನು ತಲೋಜಾ ಜೈಲಿನಿಂದ ಬೇರೆಡೆಗೆ ಸ್ಥಳಾಂತರಿಸದಂತೆ ಎನ್ಐಎ ಅಧಿಕಾರಿಗಳಿಗೆ ನಿರ್ದೇಶಿಸಬೇಕೆಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಇನ್ನೂ ಡಿಸೆಂಬರ್‌‌ವರೆಗೂ ಕಾಯಬೇಕು!

ಸ್ವಾಮಿ ಅವರಿಂದ ಸ್ಟ್ರಾ ಮತ್ತು ಸಿಪ್ಪರ್ ಅನ್ನು ವಶಪಡಿಸಿಕೊಂಡಿಲ್ಲ. ಆದ್ದರಿಂದ ಆ ವಸ್ತುಗಳನ್ನು ಅವರಿಗೆ ಹಿಂದಿರುಗಿಸುವ ಪ್ರಶ್ನೆಯಿಲ್ಲ ಎಂದು ಎನ್ಐಎ ಕಳೆದ ತಿಂಗಳು ನ್ಯಾಯಾಲಯಕ್ಕೆ ತಿಳಿಸಿತು. ನಂತರ ಸ್ವಾಮಿ ಸ್ಟ್ರಾ, ಸಿಪ್ಪರ್ ಮತ್ತು ಚಳಿಗಾಲದ ಬಟ್ಟೆಗಳನ್ನು ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದರು. ನವೆಂಬರ್ 26 ರಂದು ವಿಶೇಷ ಎನ್ಐಎ ನ್ಯಾಯಾಲಯವು ಜೈಲು ಅಧೀಕ್ಷಕರಿಗೆ ಅರ್ಜಿ ಸಲ್ಲಿಸಿ ತನ್ನ ಉತ್ತರವನ್ನು ಸಲ್ಲಿಸುವಂತೆ ನಿರ್ದೇಶಿಸಿತ್ತು.

ಇಂದು ತಲೋಜಾ ಜೈಲಿನ ಅಧಿಕಾರಿಗಳು ಸ್ವಾಮಿ ಅವರಿಗೆ ಸ್ಟ್ರಾ, ಸಿಪ್ಪರ್ ಜೊತೆಗೆ ಚಳಿಗಾಲದ ಉಡುಪುಗಳನ್ನು ಕೊಟ್ಟಿದ್ದಾರೆ’ ಎಂದು ವಕೀಲ ಶರೀಫ್ ಶೇಖ್ ಅವರು ನ್ಯಾಯಾಲಯಕ್ಕೆ ತಿಳಿಸಿದರು. ಸ್ವಾಮಿ ವೈದ್ಯಕೀಯ ಕಾರಣಕ್ಕೂ ಜಾಮೀನು ಅರ್ಜಿ ಸಲ್ಲಿಸಿದ್ದರು.

ಸ್ವಾಮಿಯವರ ಆರೋಗ್ಯ ಸ್ಥಿತಿ ಕುರಿತು ತಲೋಜಾ ಜೈಲಿನಿಂದ ನ್ಯಾಯಾಲಯ ವರದಿ ಕೋರಿತ್ತು. ಜೈಲು ಅಧಿಕಾರಿಗಳು ವರದಿಯನ್ನು ಸಲ್ಲಿಸಲು ಸಮಯ ಬೇಕು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದು, ನ್ಯಾಯಾಲಯವು ಡಿಸೆಂಬರ್ 10 ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಡಿಸೆಂಬರ್ 10 ರಂದು ಸ್ವಾಮಿ ಸಲ್ಲಿಸಿದ್ದ ಮೂರು ಹೊಸ ಅರ್ಜಿಗಳನ್ನೂ ಆಲಿಸುವುದಾಗಿ ನ್ಯಾಯಾಲಯ ಹೇಳಿದೆ.

ಕ್ಯಾಥೋಲಿಕ್ ಪಾದ್ರಿಯಾಗಿರುವ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದ ಸಂಬಂಧ ಬಂಧನಕ್ಕೊಳಗಾದ 16 ನೇ ವ್ಯಕ್ತಿಯಾಗಿದ್ದು, ಇದುವರೆಗೂ ಬಂಧಿಸಿದವರಲ್ಲಿ ಹಿರಿಯರಾಗಿದ್ದಾರೆ. ಸ್ಟ್ಯಾನ್ ಸ್ವಾಮಿ ಹಲವು ರೀತಿಯ ಕಾಯಿಲೆಯಿಂದ ಬಳಲುತ್ತಿದ್ದಾರೆ.


ಇದನ್ನೂ ಓದಿ: ಜೈಲಿನಲ್ಲಿರುವ ಸ್ಟ್ಯಾನ್‌ ಸ್ವಾಮಿಗೆ ಅಗತ್ಯ ಸೌಲಭ್ಯ ಖಚಿತ ಪಡಿಸಲು NHRC ಮಧ್ಯಪ್ರವೇಶಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ದೇಶದ ಜೈಲುಗಳಲ್ಲಿರುವ ಚಿಂತಕರು ಮತ್ತು ಹೋರಾಟಗಾರರ ಪರಿಸ್ಥಿತಿ ಚಿಂತಾಜನಕವಾಗಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...