Homeಚಳವಳಿಕೊನೆಗೂ ಹೋರಾಟಗಾರ ಸ್ಟ್ಯಾನ್ ಸ್ವಾಮಿಗೆ ಸ್ಟ್ರಾ ನೀಡಿದ ಜೈಲು ಅಧಿಕಾರಿಗಳು

ಕೊನೆಗೂ ಹೋರಾಟಗಾರ ಸ್ಟ್ಯಾನ್ ಸ್ವಾಮಿಗೆ ಸ್ಟ್ರಾ ನೀಡಿದ ಜೈಲು ಅಧಿಕಾರಿಗಳು

ಕ್ಯಾಥೋಲಿಕ್ ಪಾದ್ರಿಯಾಗಿರುವ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ.

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಅಕ್ಟೋಬರ್ 8 ರಂದು ಬಂಧಿಸಲ್ಪಟ್ಟ 83 ವರ್ಷದ ಬುಡಕಟ್ಟು ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿಯವರಿಗೆ ಕೊನೆಗೂ ತಲೋಜಾ ಜೈಲಿನ ಅಧಿಕಾರಿಗಳು ನೀರು ಕುಡಿಯಲು ಬೇಕಿರುವ ಸ್ಟ್ರಾ ಮತ್ತು ಸಿಪ್ಪರ್ ಕಪ್ ನೀಡಿದ್ದಾರೆ.

ತಲೋಜಾ ಜೈಲಿನ ಅಧಿಕಾರಿಗಳು ಸ್ಟ್ಯಾನ್ ಸ್ವಾಮಿ ಅವರಿಗೆ ಸ್ಟ್ರಾ ಮತ್ತು ಸಿಪ್ಪರ್‌ ಕಪ್ ನೀಡಿದ್ದಾರೆ ಎಂದು ಫಾದರ್ ಸ್ಟ್ಯಾನ್ ಸ್ವಾಮಿಯ ಪರ ವಕೀಲ ಶರೀಫ್ ಶೇಖ್ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತಮಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಕೈಗಳು ನಡುಗುತ್ತದೆ. ಆದ್ದರಿಂದ ಆಹಾರ ಸೇವಿಸಲು ಆಗುದಿಲ್ಲ. ಹಾಗಾಗಿ ಬಂಧನದ ಸಮಯದಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ಸ್ಟ್ರಾ ಮತ್ತು ಸಿಪ್ಪರ್ ಅನ್ನು ವಾಪಸ್ ಕೊಡುವಂತೆ ಕೋರಿ ಸ್ಟಾನ್ ಸ್ವಾಮಿ ಕೋರ್ಟ್‌‌ಗೆ ಅರ್ಜಿ ಸಲ್ಲಿಸಿದ್ದರು.

ಫಾದರ್ ಸ್ಟ್ಯಾನ್ ಸ್ವಾಮಿ ಅವರು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ಹೊಸ ಮೂರು ಅರ್ಜಿಗಳನ್ನು ಸಲ್ಲಿಸಿದ್ದು, ಬಂಧನದ ವೇಳೆ ತಮ್ಮಿಂದ ವಶಪಡಿಸಿಕೊಂಡಿರುವ ಬ್ಯಾಗ್ ಹಾಗೂ ಹಾರ್ಡ್ ಕ್ಲೋನ್ ಪ್ರತಿಯನ್ನು  ಹಿಂತಿರುಗಿಸುವಂತೆ ಕೇಳಿಕೊಂಡಿದ್ದಾರೆ. ಜೊತೆಗೆ ತಮ್ಮನ್ನು ತಲೋಜಾ ಜೈಲಿನಿಂದ ಬೇರೆಡೆಗೆ ಸ್ಥಳಾಂತರಿಸದಂತೆ ಎನ್ಐಎ ಅಧಿಕಾರಿಗಳಿಗೆ ನಿರ್ದೇಶಿಸಬೇಕೆಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಒಂದು ಸ್ಟ್ರಾ ಪಡೆಯಲು ’ಸ್ಟ್ಯಾನ್ ಸ್ವಾಮಿ’ ಇನ್ನೂ ಡಿಸೆಂಬರ್‌‌ವರೆಗೂ ಕಾಯಬೇಕು!

ಸ್ವಾಮಿ ಅವರಿಂದ ಸ್ಟ್ರಾ ಮತ್ತು ಸಿಪ್ಪರ್ ಅನ್ನು ವಶಪಡಿಸಿಕೊಂಡಿಲ್ಲ. ಆದ್ದರಿಂದ ಆ ವಸ್ತುಗಳನ್ನು ಅವರಿಗೆ ಹಿಂದಿರುಗಿಸುವ ಪ್ರಶ್ನೆಯಿಲ್ಲ ಎಂದು ಎನ್ಐಎ ಕಳೆದ ತಿಂಗಳು ನ್ಯಾಯಾಲಯಕ್ಕೆ ತಿಳಿಸಿತು. ನಂತರ ಸ್ವಾಮಿ ಸ್ಟ್ರಾ, ಸಿಪ್ಪರ್ ಮತ್ತು ಚಳಿಗಾಲದ ಬಟ್ಟೆಗಳನ್ನು ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದರು. ನವೆಂಬರ್ 26 ರಂದು ವಿಶೇಷ ಎನ್ಐಎ ನ್ಯಾಯಾಲಯವು ಜೈಲು ಅಧೀಕ್ಷಕರಿಗೆ ಅರ್ಜಿ ಸಲ್ಲಿಸಿ ತನ್ನ ಉತ್ತರವನ್ನು ಸಲ್ಲಿಸುವಂತೆ ನಿರ್ದೇಶಿಸಿತ್ತು.

ಇಂದು ತಲೋಜಾ ಜೈಲಿನ ಅಧಿಕಾರಿಗಳು ಸ್ವಾಮಿ ಅವರಿಗೆ ಸ್ಟ್ರಾ, ಸಿಪ್ಪರ್ ಜೊತೆಗೆ ಚಳಿಗಾಲದ ಉಡುಪುಗಳನ್ನು ಕೊಟ್ಟಿದ್ದಾರೆ’ ಎಂದು ವಕೀಲ ಶರೀಫ್ ಶೇಖ್ ಅವರು ನ್ಯಾಯಾಲಯಕ್ಕೆ ತಿಳಿಸಿದರು. ಸ್ವಾಮಿ ವೈದ್ಯಕೀಯ ಕಾರಣಕ್ಕೂ ಜಾಮೀನು ಅರ್ಜಿ ಸಲ್ಲಿಸಿದ್ದರು.

ಸ್ವಾಮಿಯವರ ಆರೋಗ್ಯ ಸ್ಥಿತಿ ಕುರಿತು ತಲೋಜಾ ಜೈಲಿನಿಂದ ನ್ಯಾಯಾಲಯ ವರದಿ ಕೋರಿತ್ತು. ಜೈಲು ಅಧಿಕಾರಿಗಳು ವರದಿಯನ್ನು ಸಲ್ಲಿಸಲು ಸಮಯ ಬೇಕು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದು, ನ್ಯಾಯಾಲಯವು ಡಿಸೆಂಬರ್ 10 ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಡಿಸೆಂಬರ್ 10 ರಂದು ಸ್ವಾಮಿ ಸಲ್ಲಿಸಿದ್ದ ಮೂರು ಹೊಸ ಅರ್ಜಿಗಳನ್ನೂ ಆಲಿಸುವುದಾಗಿ ನ್ಯಾಯಾಲಯ ಹೇಳಿದೆ.

ಕ್ಯಾಥೋಲಿಕ್ ಪಾದ್ರಿಯಾಗಿರುವ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದ ಸಂಬಂಧ ಬಂಧನಕ್ಕೊಳಗಾದ 16 ನೇ ವ್ಯಕ್ತಿಯಾಗಿದ್ದು, ಇದುವರೆಗೂ ಬಂಧಿಸಿದವರಲ್ಲಿ ಹಿರಿಯರಾಗಿದ್ದಾರೆ. ಸ್ಟ್ಯಾನ್ ಸ್ವಾಮಿ ಹಲವು ರೀತಿಯ ಕಾಯಿಲೆಯಿಂದ ಬಳಲುತ್ತಿದ್ದಾರೆ.


ಇದನ್ನೂ ಓದಿ: ಜೈಲಿನಲ್ಲಿರುವ ಸ್ಟ್ಯಾನ್‌ ಸ್ವಾಮಿಗೆ ಅಗತ್ಯ ಸೌಲಭ್ಯ ಖಚಿತ ಪಡಿಸಲು NHRC ಮಧ್ಯಪ್ರವೇಶಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ದೇಶದ ಜೈಲುಗಳಲ್ಲಿರುವ ಚಿಂತಕರು ಮತ್ತು ಹೋರಾಟಗಾರರ ಪರಿಸ್ಥಿತಿ ಚಿಂತಾಜನಕವಾಗಿದೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...