Homeಚಳವಳಿರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

ಟ್ವಿಟ್ಟರ್‌ ಬಳಕೆದಾರರು "ಮಾಧ್ಯಮಗಳಿಗೆ ಸಲಹೆ ನೀಡಿದ್ದು ಸಾಕು, ಇನ್ನಾದರೂ ಶಿಕ್ಷೆ ನೀಡಿ" ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಕಾಲೆಳೆದಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ‘ಖಲಿಸ್ತಾನಿಗಳು’ ಮತ್ತು ರಾಷ್ಟ್ರ ವಿರೋಧಿಗಳು ಎಂದು ಲೇಬಲ್ ಮಾಡದಂತೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮಾಧ್ಯಮಗಳಿಗೆ ಸಲಹೆ ನೀಡಿದೆ.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ, ಯಾವುದೇ ಭಿನ್ನಾಭಿಪ್ರಾಯವನ್ನು ಅವಹೇಳನ ಮಾಡುವಂತಹ ನಿರೂಪಣೆಗೆ ಸಹಕರಿಸಬಾರದು ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ರೈತ ಪ್ರತಿಭಟನಾಕಾರರನ್ನು, ಅದರಲ್ಲೂ ಹೆಚ್ಚಾಗಿ ಪಂಜಾಬ್‌ನ ಸಿಖ್ ಸಮುದಾಯದ ರೈತರನ್ನು ಪ್ರತ್ಯೇಕತಾವಾದಿಗಳಾದ ಖಲಿಸ್ತಾನಿಗಳು ಮತ್ತು ರಾಷ್ಟ್ರ ವಿರೋಧಿಗಳು ಎಂದು ಸುದ್ದಿ ವಾಹಿನಿಗಳು ಸೇರಿದಂತೆ ಕೆಲವು ಮಾಧ್ಯಮಗಳು ಹೇಳುತ್ತಿವೆ. ಈ ಹಿನ್ನೆಲೆಯಲ್ಲಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಇಂದು ಮಾಧ್ಯಮಗಳಿಗೆ ಸಲಹೆ ನೀಡಿದೆ.

ಇದನ್ನೂ ಓದಿ: ಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತ ಸುದ್ದಿ ಪ್ರಸಾರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ  ಸಂಪಾದಕರ ಸಂಘ, ಯಾವುದೇ ಸಾಕ್ಷಿಗಳು ಮತ್ತು ಪುರಾವೆಗಳಿಲ್ಲದೆ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿರುವವರನ್ನು ಕೆಲವು ಮಾಧ್ಯಮಗಳು ಅವರನ್ನು ‘ಖಲಿಸ್ತಾನಿಗಳು’, ‘ರಾಷ್ಟ್ರ ವಿರೋಧಿಗಳು’ ಎಂಬ ಪದ ಬಳಸುತ್ತಿವೆ ಎಂದಿದೆ.

“ಇಂತಹ ಪದ ಬಳಕೆ ಮತ್ತು ವಿವರಣೆ ಜವಾಬ್ದಾರಿಯುತ ಮತ್ತು ನೈತಿಕ ಪತ್ರಿಕೋದ್ಯಮದ ಸಿದ್ಧಾಂತಗಳಿಗೆ ವಿರುದ್ಧವಾಗಿದೆ. ಇಂತಹ ಕ್ರಮಗಳು ಮಾಧ್ಯಮದ ವಿಶ್ವಾಸಾರ್ಹತೆಗೆ ಧಕ್ಕೆಯುಂಟುಮಾಡುತ್ತವೆ” ಎಂದು ಹೇಳಿದೆ.

ಇದನ್ನೂ ಓದಿ: ಮುನ್ಸೂಚನೆಯಿಲ್ಲದೆ ’ಕಾಶ್ಮೀರ ಟೈಮ್ಸ್’‌‌ ಕಚೇರಿಗೆ ಸೀಲ್- ಎಡಿಟರ್ಸ್ ಗಿಲ್ಡ್‌ ಖಂಡನೆ

ರೈತರ ಪ್ರತಿಭಟನೆಯನ್ನು ವರದಿ ಮಾಡುವವರು “ಸಾಂವಿಧಾನಿಕ ಹಕ್ಕುಗಳ ಮೂಲಕ ಪ್ರತಿಭಟನೆ ಮಾಡುವವರ ವಿರುದ್ಧ ಪಕ್ಷಪಾತ ಮಾಡದೇ, ನ್ಯಾಯಯುತ, ವಸ್ತುನಿಷ್ಠವಾಗಿ ವರದಿ ಮಾಡಬೇಕು ಎಂದು ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡಿದೆ.

ಪ್ರತಿಭಟನೆ ಶುರುವಾಗಿ ಇಷ್ಟು ದಿನಗಳಾದ ಮೇಲೆ, ಅದರಲ್ಲೂ ಮಾಧ್ಯಮಗಳು ರೈತರನ್ನು ಖಲಿಸ್ತಾನಿಗಳು, ರಾಷ್ಟ್ರ ವಿರೋಧಿಗಳು ಎಂದೆಲ್ಲಾ ಕರೆದ ಮೇಲೆ ಇಂತಹ ಸಲಹೆಯ ಅವಶ್ಯಕತೆ ಇರಲಿಲ್ಲ ಎಂದು ಎಡಿಟರ್ಸ್ ಗಿಲ್ಡ್‌ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗುತ್ತಿದೆ.

ಹಲವು ಮಂದಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಟ್ವಿಟ್ ಅನ್ನು ರಿಟ್ವಿಟ್ ಮಾಡಿ, “ನೀವು ಚಲನಚಿತ್ರಗಳಲ್ಲಿ ಎಲ್ಲಾ ಮುಗಿದ ಮೇಲೆ ಬರುವ ಪೊಲೀಸರಂತೆ, ಯಾವುದೇ ಪ್ರಯೋಜನ ಇಲ್ಲ” ಎಂದಿದ್ದಾರೆ.

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು “ಮಾಧ್ಯಮಗಳಿಗೆ ಸಲಹೆ ನೀಡಿದ್ದು ಸಾಕು, ಇನ್ನಾದರೂ ಶಿಕ್ಷೆ ನೀಡಿ” ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಕಾಲೆಳೆದಿದ್ದಾರೆ.

ಕೆಲವು ಮಾಧ್ಯಮಗಳು ರೈತರ ಪ್ರತಿಭಟನೆ ಶುರುವಾದಾಗಿನಿಂದಲೂ, ರೈತರನ್ನು ಖಲಿಸ್ತಾನಿಗಳು ಎಂದು ಬಿಂಬಿಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಪಂಜಾಬ್, ರಾಜಸ್ತಾನ ಮೂಲದ ರೈತರು ಹೆಚ್ಚಾಗಿ ಕಂಡು ಬರುತ್ತಿರುವುದು ಇದಕ್ಕೆ ಕಾರಣ. ಇಷ್ಟೇ ಅಲ್ಲದೇ ರೈತ ಪ್ರತಿಭಟನೆಯಲ್ಲಿ ಇರುವವರು ರೈತರಲ್ಲ, ಅವರು ಬಡವರಲ್ಲ, ಪೊಲೀಸರನ್ನು ರೈತರೇ ಹೊಡೆಯುತ್ತಿದ್ದಾರೆ ಎಂಬಂತಹ ನಕಲಿ ಸುದ್ದಿಗಳನ್ನು ಪ್ರಚುರ ಪಡಿಸುತ್ತಿದ್ದಾರೆ. ಇಂತಹವರ ವಿರುದ್ಧ ಕ್ರಮ ಕೈಗೊಳ್ಳದೇ, ಕೆವಲ ಸಲಹೆ ನಿಡಲು ಮಾತ್ರ ಸೀಮಿತವಾಗಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ  ಮೇಲೆ ಸಾಮಾಜಿಕ ಹೋರಾಟಗಾರರು, ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...