Homeಮುಖಪುಟಕ್ಯಾಪ್ಟನ್ ಗೋಪಿನಾಥ್ ಮತ್ತು ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ನಡುವಿನ ಸಂಬಂಧ ಏನು?

ಕ್ಯಾಪ್ಟನ್ ಗೋಪಿನಾಥ್ ಮತ್ತು ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ನಡುವಿನ ಸಂಬಂಧ ಏನು?

ಕ್ಯಾಪ್ಟನ್ ಗೋಪಿನಾಥ್ ಅತೀ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆಯಾದ “ಏರ್ ಡೆಕ್ಕನ್” ಅನ್ನು ಸ್ಥಾಪಿಸಿದ್ದರು ಮತ್ತು ಇದು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಸೇವೆ ಒದಗಿಸುತ್ತಿದ್ದ ವಿಮಾನಯಾನ ಸೇವೆ ಎಂದೇ ಹೆಸರಾಗಿತ್ತು.

- Advertisement -
- Advertisement -

ಕನ್ನಡಿಗ ಕ್ಯಾಪ್ಟನ್.ಜಿ.ಆರ್‌. ಗೋಪಿನಾಥ್‌‌‌ ಜೀವನಾಧಾರಿತ ತಮಿಳು ಚಿತ್ರ ’ಸೂರರೈ ಪೋಟ್ರು’ ಸಿನಿಮಾ ಪ್ರಿಯರ ಮನಗೆದ್ದಿದ್ದು, ಅದರಲ್ಲೂ ಸಿನಿಮಾವು ಕನ್ನಡಕ್ಕೆ ಡಬ್ಬಿಂಗ್‌‌ ಆಗಿ, ಕುವೆಂಪು, ಮಂತ್ರ ಮಾಂಗಲ್ಯ ಸೇರಿದಂತೆ ಕನ್ನಡಿಗ ಸಂಸ್ಕೃತಿಯ ಬಗ್ಗೆ ಚಿತ್ರಿಸಿದ್ದು ಕೂಡಾ ಕನ್ನಡಿಗರ ಮನಗೆದ್ದಿತ್ತು.

ಸಿನಿಮಾವು ಕ್ಯಾಪ್ಟನ್ ಗೋಪಿನಾಥ್ ಜೀವನಾಧಾರಿತ ಕತೆಯಾಗಿದ್ದರೂ, ಕಾಲ್ಪನಿಕ ಘಟನೆಗಳನ್ನು ಸೇರಿಸಲಾಗಿದೆ ಎಂದು ಸಿನಮಾ ನಿರ್ದೇಶಕಿ ಸುಧಾ ಕೆ. ಪ್ರಸಾದ್ ಹೇಳಿದ್ದರು. ಸ್ವತಃ ಕ್ಯಾಪ್ಟನ್ ಗೋಪಿನಾಥ್‌ ಕೂಡಾ “ಕಾಲ್ಪನಿಕ ಘಟನೆಗಳನ್ನು ಸೇರಿಸಿ ಮಾಡಿರುವ ಚಿತ್ರವಾಗಿದ್ದರೂ ನನ್ನ ಪುಸ್ತಕದ ಕತೆಯ ಎಳೆಯನ್ನು ಹಿಡಿದು ಮಾಡಿರುವ ಚಿತ್ರವು ತುಂಬಾ ಚೆನ್ನಾಗಿದೆ” ಎಂದು ಹೇಳಿದ್ದರು. ಜೊತೆಗೆ ಚಿತ್ರ ತಂಡಕ್ಕೆ ಶುಭಹಾರೈಸಿದ್ದರು.

ಇದನ್ನೂ ಓದಿ: ಹಿಂದುತ್ವದ ಬೀಜಗಳನ್ನು ತೊರೆದು ಬಹುತ್ವದ ಕನ್ನಡ ರಾಷ್ಟ್ರೀಯತೆ ಕಟ್ಟುವ ಸವಾಲುಗಳು

ಈ ಕಮರ್ಷಿಯಲ್ ಸಿನಿಮಾ ಬಿಡುಗಡೆಯಾದ ಹಿನ್ನಲೆಯಲ್ಲಿ ಕ್ಯಾಪ್ಟನ್ ಜಿ. ಆರ್‌. ಗೋಪಿನಾಥ್ ಅವರ ಜೀವನ ಮತ್ತು ಸಾಧನೆಗಳ ಬಗ್ಗೆ ವ್ಯಾಪಕ ಹುಡುಕಾಟಗಳು, ಚರ್ಚೆಗಳು ನಡೆದು ಕನ್ನಡಿಗನೊಬ್ಬನ ಸಾಧನೆಯ ಬಗ್ಗೆ ಕನ್ನಡಿಗರು ಹೆಮ್ಮೆ ವ್ಯಕ್ತಪಡಿಸಿದ್ದರು. ಗೋಪಿನಾಥ್ ಅವರ ತಂದೆಯವರ ಹೆಸರು ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌‌’ ಆಗಿದ್ದು, ಅವರನ್ನು ಕನ್ನಡದ ಖ್ಯಾತ ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್‌ ಅವರಿಗೆ ಗೊಂದಲಿಸಿಕೊಂಡು ಸಾಮಾಜಿಕ ಜಾಲಣಗಳಲ್ಲಿ ತಪ್ಪು ಮಾಹಿತಿ ಹರಡಿತ್ತು.

ಈ ಬಗ್ಗೆ ವಿಕಿಪೀಡಿಯಾದಲ್ಲಿ ಕೂಡಾ ತಪ್ಪು ಮಾಹಿತಿಯಿದ್ದು, ಅವರ ತಂದೆಯನ್ನು ”ಕನ್ನಡ ಕಾದಂಬರಿಗಾರ” ಎಂದು ತಪ್ಪಾಗಿ ಉಲ್ಲೇಖಿಸಿದೆ. (ಲಿಂಕ್ ಇಲ್ಲಿದೆ)

ಆಕೈವ್ ಲಿಂಕ್ ಇಲ್ಲಿದೆ

ಕೆಲವರು ಸ್ವಾತಂತ್ಯ್ರ ಹೋರಾಟಗಾರ, ಮಹಾತ್ಮಾ ಗಾಂಧಿಯ ಆತ್ಮಕತೆಯನ್ನು ಕನ್ನಡಕ್ಕೆ ತಂದಿದ್ದ ಸಾಹಿತಿ ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌’ ಅವರೇ ಕ್ಯಾಪ್ಟನ್‌ ಜಿ. ಆರ್‌. ಗೋಪಿನಾಥ್ ಅವರ ತಂದೆ ಎಂದು ತಪ್ಪು ಮಾಹಿತಿಗಳನ್ನು ಹರಡಿದ್ದರು.

ಇದನ್ನೂ ಓದಿ: ಉತ್ತರ ಕನ್ನಡ : ಕನ್ನಡ ಕಟ್ಟಿದ ಕೊಂಕಣಿಗರು

ಇದೀಗ ಸ್ವತಃ ಗೋಪಿನಾಥ್ ಅವರೇ ಗೊಂದಲಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕ್ಯಾಪ್ಟನ್ ಗೋಪಿನಾಥ್, “ನನ್ನ ತಂದೆಯ ಹೆಸರು ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌’ ಎಂದಾಗಿದ್ದು ಅವರು ಗೊರೂರಿನಲ್ಲಿ ಹೈಸ್ಕೂಲ್ ಮೇಷ್ಟ್ರಾಗಿದ್ದರು. ಆದರೆ ಸಾಹಿತಿ ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌‌’ ನನ್ನ ದೊಡ್ಡ ಅಜ್ಜ, ಅಂದರೆ ನನ್ನ ತಾಯಿಯ ಸೋದರ ಮಾವ. ಅವರೂ ನಮ್ಮ ಊರಿನವರೇ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದೆ” ಎಂದು ಹೇಳಿದ್ದಾರೆ.

ಭಾರತೀಯ ವಾಯು ಪಡೆಯಲ್ಲಿ ಸೇವೆ ಸಲ್ಲಿಸಿದ್ದ ಕ್ಯಾಪ್ಟನ್ ಜಿ.ಆರ್‌. ಗೋಪಿನಾಥ್ ಹಾಸನ ಜಿಲ್ಲೆಯ ಗೊರೂರಿನಲ್ಲಿ ಜನಿಸಿದವರು. ಎಂಟು ವರ್ಷಗಳ ಕಾಲ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದ ಅವರು ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಭಾಗವಹಿಸಿದ್ದರು. ನಂತರ ಸೇನೆ ತೊರೆದ ಅವರು ಸುಸ್ಥಿರ ಕೃಷಿಯಲ್ಲಿ ಅನೇಕ ಪ್ರಯೋಗವನ್ನು ಮಾಡಿ ಯಶಸ್ಸು ಗಳಿಸಿದ್ದರು.

1997 ರಲ್ಲಿ ಅವರು ಚಾರ್ಟರ್ ಹೆಲಿಕಾಪ್ಟರ್ ಸೇವೆಯಾದ ಡೆಕ್ಕನ್ ಏವಿಯೇಷನ್ ​​ಅನ್ನು ಸ್ಥಾಪಿಸಿದ ಅವರು, 2003 ರಲ್ಲಿ ಅತೀ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆಯಾದ “ಏರ್ ಡೆಕ್ಕನ್” ಅನ್ನು ಸ್ಥಾಪಿಸಿದರು. ಇದು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಸೇವೆ ಒದಗಿಸುತ್ತಿದ್ದ ವಿಮಾನಯಾನ ಸೇವೆ ಎಂದೇ ಹೆಸರಾಗಿತ್ತು.

ರಾಜಕಾರಣಿಯಾಗಿ ಕೂಡಾ ಕ್ಯಾಪ್ಟನ್ ತಮ್ಮದೆ ಛಾಪು ಮೂಡಿಸಿದ್ದು, 2009 ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಮತ್ತು 2014 ರಲ್ಲಿ ಆಮ್ ಆದ್ಮಿ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದರು. ಗೋಪಿನಾಥ್ ಪ್ರಜಾವಾಣಿ ಪತ್ರಿಕೆಗೆ ಅಂಕಣಗಳನ್ನು ಬರೆಯುತ್ತಿದ್ದು, ‘ಯು ಕ್ಯನಾಟ್ ಮಿಸ್ ದಿಸ್ ಫ್ಲೈಟ್; ಎಸ್ಸೇ ಆನ್ ಎಮರ್ಜಿಂಗ್ ಇಂಡಿಯಾ’, ‘ಸಿಂಪ್ಲಿ ಫ್ಲೈ’, ‘ಸಿಂಪ್ಲಿ ಫ್ಲೈ: ಎ ಡೆಕ್ಕನ್ ಒಡಿಸ್ಸಿ’ ಎಂಬ ಕೃತಿಯನ್ನೂ ರಚಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಸತಿಗೆ, ಮರಾಠಾ ಪತಿ! – ಡಿ.ಎಸ್ ಚೌಗಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...