Homeಮುಖಪುಟಕ್ಯಾಪ್ಟನ್ ಗೋಪಿನಾಥ್ ಮತ್ತು ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ನಡುವಿನ ಸಂಬಂಧ ಏನು?

ಕ್ಯಾಪ್ಟನ್ ಗೋಪಿನಾಥ್ ಮತ್ತು ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ನಡುವಿನ ಸಂಬಂಧ ಏನು?

ಕ್ಯಾಪ್ಟನ್ ಗೋಪಿನಾಥ್ ಅತೀ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆಯಾದ “ಏರ್ ಡೆಕ್ಕನ್” ಅನ್ನು ಸ್ಥಾಪಿಸಿದ್ದರು ಮತ್ತು ಇದು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಸೇವೆ ಒದಗಿಸುತ್ತಿದ್ದ ವಿಮಾನಯಾನ ಸೇವೆ ಎಂದೇ ಹೆಸರಾಗಿತ್ತು.

- Advertisement -
- Advertisement -

ಕನ್ನಡಿಗ ಕ್ಯಾಪ್ಟನ್.ಜಿ.ಆರ್‌. ಗೋಪಿನಾಥ್‌‌‌ ಜೀವನಾಧಾರಿತ ತಮಿಳು ಚಿತ್ರ ’ಸೂರರೈ ಪೋಟ್ರು’ ಸಿನಿಮಾ ಪ್ರಿಯರ ಮನಗೆದ್ದಿದ್ದು, ಅದರಲ್ಲೂ ಸಿನಿಮಾವು ಕನ್ನಡಕ್ಕೆ ಡಬ್ಬಿಂಗ್‌‌ ಆಗಿ, ಕುವೆಂಪು, ಮಂತ್ರ ಮಾಂಗಲ್ಯ ಸೇರಿದಂತೆ ಕನ್ನಡಿಗ ಸಂಸ್ಕೃತಿಯ ಬಗ್ಗೆ ಚಿತ್ರಿಸಿದ್ದು ಕೂಡಾ ಕನ್ನಡಿಗರ ಮನಗೆದ್ದಿತ್ತು.

ಸಿನಿಮಾವು ಕ್ಯಾಪ್ಟನ್ ಗೋಪಿನಾಥ್ ಜೀವನಾಧಾರಿತ ಕತೆಯಾಗಿದ್ದರೂ, ಕಾಲ್ಪನಿಕ ಘಟನೆಗಳನ್ನು ಸೇರಿಸಲಾಗಿದೆ ಎಂದು ಸಿನಮಾ ನಿರ್ದೇಶಕಿ ಸುಧಾ ಕೆ. ಪ್ರಸಾದ್ ಹೇಳಿದ್ದರು. ಸ್ವತಃ ಕ್ಯಾಪ್ಟನ್ ಗೋಪಿನಾಥ್‌ ಕೂಡಾ “ಕಾಲ್ಪನಿಕ ಘಟನೆಗಳನ್ನು ಸೇರಿಸಿ ಮಾಡಿರುವ ಚಿತ್ರವಾಗಿದ್ದರೂ ನನ್ನ ಪುಸ್ತಕದ ಕತೆಯ ಎಳೆಯನ್ನು ಹಿಡಿದು ಮಾಡಿರುವ ಚಿತ್ರವು ತುಂಬಾ ಚೆನ್ನಾಗಿದೆ” ಎಂದು ಹೇಳಿದ್ದರು. ಜೊತೆಗೆ ಚಿತ್ರ ತಂಡಕ್ಕೆ ಶುಭಹಾರೈಸಿದ್ದರು.

ಇದನ್ನೂ ಓದಿ: ಹಿಂದುತ್ವದ ಬೀಜಗಳನ್ನು ತೊರೆದು ಬಹುತ್ವದ ಕನ್ನಡ ರಾಷ್ಟ್ರೀಯತೆ ಕಟ್ಟುವ ಸವಾಲುಗಳು

ಈ ಕಮರ್ಷಿಯಲ್ ಸಿನಿಮಾ ಬಿಡುಗಡೆಯಾದ ಹಿನ್ನಲೆಯಲ್ಲಿ ಕ್ಯಾಪ್ಟನ್ ಜಿ. ಆರ್‌. ಗೋಪಿನಾಥ್ ಅವರ ಜೀವನ ಮತ್ತು ಸಾಧನೆಗಳ ಬಗ್ಗೆ ವ್ಯಾಪಕ ಹುಡುಕಾಟಗಳು, ಚರ್ಚೆಗಳು ನಡೆದು ಕನ್ನಡಿಗನೊಬ್ಬನ ಸಾಧನೆಯ ಬಗ್ಗೆ ಕನ್ನಡಿಗರು ಹೆಮ್ಮೆ ವ್ಯಕ್ತಪಡಿಸಿದ್ದರು. ಗೋಪಿನಾಥ್ ಅವರ ತಂದೆಯವರ ಹೆಸರು ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌‌’ ಆಗಿದ್ದು, ಅವರನ್ನು ಕನ್ನಡದ ಖ್ಯಾತ ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್‌ ಅವರಿಗೆ ಗೊಂದಲಿಸಿಕೊಂಡು ಸಾಮಾಜಿಕ ಜಾಲಣಗಳಲ್ಲಿ ತಪ್ಪು ಮಾಹಿತಿ ಹರಡಿತ್ತು.

ಈ ಬಗ್ಗೆ ವಿಕಿಪೀಡಿಯಾದಲ್ಲಿ ಕೂಡಾ ತಪ್ಪು ಮಾಹಿತಿಯಿದ್ದು, ಅವರ ತಂದೆಯನ್ನು ”ಕನ್ನಡ ಕಾದಂಬರಿಗಾರ” ಎಂದು ತಪ್ಪಾಗಿ ಉಲ್ಲೇಖಿಸಿದೆ. (ಲಿಂಕ್ ಇಲ್ಲಿದೆ)

ಆಕೈವ್ ಲಿಂಕ್ ಇಲ್ಲಿದೆ

ಕೆಲವರು ಸ್ವಾತಂತ್ಯ್ರ ಹೋರಾಟಗಾರ, ಮಹಾತ್ಮಾ ಗಾಂಧಿಯ ಆತ್ಮಕತೆಯನ್ನು ಕನ್ನಡಕ್ಕೆ ತಂದಿದ್ದ ಸಾಹಿತಿ ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌’ ಅವರೇ ಕ್ಯಾಪ್ಟನ್‌ ಜಿ. ಆರ್‌. ಗೋಪಿನಾಥ್ ಅವರ ತಂದೆ ಎಂದು ತಪ್ಪು ಮಾಹಿತಿಗಳನ್ನು ಹರಡಿದ್ದರು.

ಇದನ್ನೂ ಓದಿ: ಉತ್ತರ ಕನ್ನಡ : ಕನ್ನಡ ಕಟ್ಟಿದ ಕೊಂಕಣಿಗರು

ಇದೀಗ ಸ್ವತಃ ಗೋಪಿನಾಥ್ ಅವರೇ ಗೊಂದಲಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕ್ಯಾಪ್ಟನ್ ಗೋಪಿನಾಥ್, “ನನ್ನ ತಂದೆಯ ಹೆಸರು ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌’ ಎಂದಾಗಿದ್ದು ಅವರು ಗೊರೂರಿನಲ್ಲಿ ಹೈಸ್ಕೂಲ್ ಮೇಷ್ಟ್ರಾಗಿದ್ದರು. ಆದರೆ ಸಾಹಿತಿ ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌‌’ ನನ್ನ ದೊಡ್ಡ ಅಜ್ಜ, ಅಂದರೆ ನನ್ನ ತಾಯಿಯ ಸೋದರ ಮಾವ. ಅವರೂ ನಮ್ಮ ಊರಿನವರೇ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದೆ” ಎಂದು ಹೇಳಿದ್ದಾರೆ.

ಭಾರತೀಯ ವಾಯು ಪಡೆಯಲ್ಲಿ ಸೇವೆ ಸಲ್ಲಿಸಿದ್ದ ಕ್ಯಾಪ್ಟನ್ ಜಿ.ಆರ್‌. ಗೋಪಿನಾಥ್ ಹಾಸನ ಜಿಲ್ಲೆಯ ಗೊರೂರಿನಲ್ಲಿ ಜನಿಸಿದವರು. ಎಂಟು ವರ್ಷಗಳ ಕಾಲ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದ ಅವರು ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಭಾಗವಹಿಸಿದ್ದರು. ನಂತರ ಸೇನೆ ತೊರೆದ ಅವರು ಸುಸ್ಥಿರ ಕೃಷಿಯಲ್ಲಿ ಅನೇಕ ಪ್ರಯೋಗವನ್ನು ಮಾಡಿ ಯಶಸ್ಸು ಗಳಿಸಿದ್ದರು.

1997 ರಲ್ಲಿ ಅವರು ಚಾರ್ಟರ್ ಹೆಲಿಕಾಪ್ಟರ್ ಸೇವೆಯಾದ ಡೆಕ್ಕನ್ ಏವಿಯೇಷನ್ ​​ಅನ್ನು ಸ್ಥಾಪಿಸಿದ ಅವರು, 2003 ರಲ್ಲಿ ಅತೀ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆಯಾದ “ಏರ್ ಡೆಕ್ಕನ್” ಅನ್ನು ಸ್ಥಾಪಿಸಿದರು. ಇದು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಸೇವೆ ಒದಗಿಸುತ್ತಿದ್ದ ವಿಮಾನಯಾನ ಸೇವೆ ಎಂದೇ ಹೆಸರಾಗಿತ್ತು.

ರಾಜಕಾರಣಿಯಾಗಿ ಕೂಡಾ ಕ್ಯಾಪ್ಟನ್ ತಮ್ಮದೆ ಛಾಪು ಮೂಡಿಸಿದ್ದು, 2009 ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಮತ್ತು 2014 ರಲ್ಲಿ ಆಮ್ ಆದ್ಮಿ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದರು. ಗೋಪಿನಾಥ್ ಪ್ರಜಾವಾಣಿ ಪತ್ರಿಕೆಗೆ ಅಂಕಣಗಳನ್ನು ಬರೆಯುತ್ತಿದ್ದು, ‘ಯು ಕ್ಯನಾಟ್ ಮಿಸ್ ದಿಸ್ ಫ್ಲೈಟ್; ಎಸ್ಸೇ ಆನ್ ಎಮರ್ಜಿಂಗ್ ಇಂಡಿಯಾ’, ‘ಸಿಂಪ್ಲಿ ಫ್ಲೈ’, ‘ಸಿಂಪ್ಲಿ ಫ್ಲೈ: ಎ ಡೆಕ್ಕನ್ ಒಡಿಸ್ಸಿ’ ಎಂಬ ಕೃತಿಯನ್ನೂ ರಚಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಸತಿಗೆ, ಮರಾಠಾ ಪತಿ! – ಡಿ.ಎಸ್ ಚೌಗಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...