Homeನಾನು ಗೌರಿಗಡಿಯನ್ನು ಸೈನ್ಯಕ್ಕೆ ಬಿಡಿ, ಬಾಹ್ಯಾಕಾಶವನ್ನು ವಿಜ್ಞಾನಿಗಳಿಗೆ ಬಿಡಿ. ಬನ್ನಿ ನಮ್ಮೊಡನೆ ಮಾತನಾಡಿ

ಗಡಿಯನ್ನು ಸೈನ್ಯಕ್ಕೆ ಬಿಡಿ, ಬಾಹ್ಯಾಕಾಶವನ್ನು ವಿಜ್ಞಾನಿಗಳಿಗೆ ಬಿಡಿ. ಬನ್ನಿ ನಮ್ಮೊಡನೆ ಮಾತನಾಡಿ

- Advertisement -
- Advertisement -

| ಡಾ. ವಾಸು ಎಚ್.ವಿ |

ದೇಶದ ಸಮಸ್ಯೆಗಳ ಸುತ್ತ ಚುನಾವಣೆ ಎದುರಿಸಲು ಹಿಂಜರಿಯುತ್ತಿರುವ ಬಿಜೆಪಿ

2019ರ ಚುನಾವಣೆಯ ಒಂದು ಅತೀ ಮುಖ್ಯ ಲಕ್ಷಣವೆಂದರೆ, ಅಧಿಕಾರಾರೂಢ ಪಕ್ಷವು ದೇಶದ ಜನರ ಅಸಲೀ ಸಮಸ್ಯೆಗಳು ಚುನಾವಣೆಯಲ್ಲಿ ಚರ್ಚೆಯಾಗಬಾರದೆಂದು ಬಯಸುತ್ತಿದೆ. ಅದಕ್ಕಾಗಿ ಇನ್ನಿಲ್ಲದ ಸರ್ಕಸ್ ಮಾಡುತ್ತಿದೆ. ಇದಕ್ಕೆ ಕಾರಣಗಳಿವೆ.

ಇನ್ನು 10 ವರ್ಷಗಳ ಕಾಲ ನಾನೇ ಪ್ರಧಾನಿ ಎಂದು ಖಚಿತವಾಗಿ ಭಾವಿಸಿಕೊಂಡಿದ್ದ ಬಿಜೆಪಿಯ ನಂಬಿಕೆ ಮೂರೂವರೆ ವರ್ಷಗಳಲ್ಲೇ ಅಲ್ಲಾಡಿತು. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬಂದರೂ ಸಂಭ್ರಮಿಸಲಾಗದಷ್ಟು ತೆಳ್ಳಗಿನ ಮಾರ್ಜಿನ್‍ನಲ್ಲಿ ಗೆದ್ದಿದ್ದರು. ಆ ನಂತರ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಎಲ್ಲಾ ಕಡೆ ಸೋತರಷ್ಟೇ ಅಲ್ಲದೇ, ಈ ಹಿಂದೆ ಅಧಿಕಾರದಲ್ಲಿದ್ದ ಮೂರು ದೊಡ್ಡ ರಾಜ್ಯಗಳನ್ನು ಕಳೆದುಕೊಂಡಿದ್ದರು. ಇಲ್ಲಿಂದ ಬಿಜೆಪಿಯ ಗ್ರಾಫ್ ಇಳಿಯುತ್ತಾ ಹೋಯಿತು. ಆದರೆ, ಪ್ರಧಾನಿ ಅಭ್ಯರ್ಥಿಯಾಗಿ ಮೋದಿಯವರ ಜನಪ್ರಿಯತೆ ರಾಹುಲ್ ಗಾಂಧಿಗಿಂತ ಎಷ್ಟೋ ಮೇಲೆ ಇತ್ತು, ಇಂದಿಗೂ ಇದೆ.

ಅದು ಕುಸಿಯಲು ಆರಂಭಿಸಿದ್ದು ರಾಫೇಲ್ ಭ್ರಷ್ಟಾಚಾರದ ಸದ್ದು ಹೆಚ್ಚಾಗುತ್ತಾ ಹೋದಂತೆ. ಜನವರಿಯ ನಂತರ ನಡೆದ ಸಮೀಕ್ಷೆಗಳಲ್ಲೆಲ್ಲಾ ಬಿಜೆಪಿಯ ಕುಸಿತವು ಕಾಣುತ್ತಾ ಬಂದಿತು. ಮೊದಮೊದಲು ಬಿಜೆಪಿಗೆ ಬಹುಮತ ಬರಲ್ಲ ಅಂತ ಇದ್ದದ್ದು, ಎನ್‍ಡಿಎಗೂ ಬಹುಮತ ಬರಲ್ಲ ಅಂತ ಖಚಿತವಾಯಿತು. ಚುನಾವಣೆ ಹೊತ್ತಿಗೆ ಈ ಗ್ರಾಫ್ ಮತ್ತಷ್ಟು ಇಳಿದರೆ ಏನು ಮಾಡೋದು ಎನ್ನುವ ಚಿಂತೆಯಲ್ಲಿದ್ದ ಅವರಿಗೆ ಪುಲ್ವಾಮಾ ನೆರವಿಗೆ ಬಂದಿತು.

ಸಿಆರ್‍ಪಿಎಫ್ ಯೋಧರು ಸತ್ತಿದ್ದಕ್ಕೆ ಇಡೀ ದೇಶವೇ ಮರುಗಿತು. ಆದರೆ ಬಿಜೆಪಿಗೆ ಒಂಥರಾ ಸಂಭ್ರಮವಿತ್ತು. ಪಾಕಿಸ್ತಾನದ ಮೇಲೆ ಒಂದು ದಾಳಿ ನಡೆಸಿ (ಈ ದಾಳಿಯ ‘ಸಾಧನೆ’ಯ ಕುರಿತ ವಿವಾದಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ) ಮಸ್ಕುಲಾರ್ ನ್ಯಾಷನಲಿಸಂ ಮೂಲಕ ಚೇತರಿಕೆ ಪಡೆದುಕೊಳ್ಳಲು ನೋಡಿದರು. ಮಸ್ಕುಲಾರ್ ನ್ಯಾಷನಲಿಸಂ ಎಂದರೆ, ದೇಶದ ಅಸಲೀ ಸಮಸ್ಯೆಗಳನ್ನು ಬಗೆಹರಿಸಿ, ಜನರನ್ನು ಸಬಲಗೊಳಿಸಿ ದೇಶ ಕಟ್ಟುವ ಬದಲಿಗೆ ಹೊರಗಿನ ಶತ್ರುವಿನ ವಿರುದ್ಧ ತೋಳೇರಿಸುತ್ತಾ ತನ್ನ ಬಲ ಹೆಚ್ಚಿಸಿಕೊಳ್ಳುವುದು. ಒಂದು ವೇಳೆ ಶತ್ರು ಇಲ್ಲದಿದ್ದರೆ ಅಂತಹ ಶತ್ರುವನ್ನು ಸೃಷ್ಟಿಸುವುದು ಇದಕ್ಕೆ ಅಗತ್ಯವಿದೆ. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗೆ ನೆರವು ನೀಡುತ್ತಿರುವ ನೆರೆಯ ಪಾಕಿಸ್ತಾನ ಇರುವುದು ಬಿಜೆಪಿಗೆ ಬಹಳ ಅನುಕೂಲ. ಬಿಜೆಪಿ ಆಡಳಿತಾವಧಿಯಲ್ಲಿ ಹಿಂದಿಗಿಂತ ಹೆಚ್ಚು ಭಯೋತ್ಪಾದಕ ಚಟುವಟಿಕೆ ನಡೆದಿದ್ದರೂ, ಹೆಚ್ಚು ಸೈನಿಕರು ಸತ್ತಿದ್ದರೂ ಲೋಪ ಎಲ್ಲಾಯಿತು ಎಂದು ನೋಡಿಕೊಳ್ಳುವ ಬದಲು, ಸೈನಿಕರ ಶವವಿಟ್ಟುಕೊಂಡು ಅದರ ದುರ್ಬಳಕೆಗೆ ಮುಂದಾಯಿತು.

ನಿಧಾನಕ್ಕೆ ಈ ಏರ್‍ಸ್ಟ್ರೈಕ್‍ಗಳು ಜನರ ತಲೆಯಿಂದ ಮರೆಯಾಗುತ್ತಾ, ಅಸಲೀ ವಿಚಾರಗಳು ಮುಂದಕ್ಕೆ ಬಂದವು. ಜನರು ಮತ್ತೆ ನಿರುದ್ಯೋಗ, ರೈತರಿಗೆ ಬೆಲೆ ಇತ್ಯಾದಿಗಳನ್ನು ಮಾತಾಡುತ್ತಾ ಬಂದರು. ಜೊತೆಗೆ ರಾಹುಲ್‍ಗಾಂಧಿ ಬಡವರ ಖಾತೆಗೆ ಸರಾಸರಿ 72,000 ರೂ ಹಾಕುವ ನ್ಯಾಯ್ ಯೋಜನೆ ಪ್ರಕಟಿಸಿದರು. ಚರ್ಚೆ ಬಡವರ ಸುತ್ತಲೂ ಶುರುವಾಯಿತು.

ಇದೀಗ ಮತ್ತೆ ಮೋದಿಯವರು ರಂಗಕ್ಕಿಳಿದರು. ಇಸ್ರೋ ಮುಖ್ಯಸ್ಥರು ಮಾಡಬೇಕಾದ ಪ್ರಕಟಣೆಯನ್ನು ತಾವೇ ಮಾಡಲು ನಿಂತರು. ಸಿನೀಮಿಯಗೊಳಿಸಲು ಬೆಳಿಗ್ಗೆ 11ಕ್ಕೆ ಒಂದು ಟ್ವೀಟ್ ಮಾಡಿ, ತಾನು 11.45ಕ್ಕೆ ರಾಷ್ಟ್ರವನ್ನುದ್ದೇಶಿಸಿ ಮಾತಾಡಲಿದ್ದೇನೆಂದು ಘೋಷಿಸಿದರು. ಆ ನಂತರ 20 ನಿಮಿಷಕ್ಕೂ ಹೆಚ್ಚು ಕಾಯಿಸಿ ಭಾಷಣ ಮಾಡಿದರು. ನಿಸ್ಸಂದೇಹವಾಗಿ ದೇಶವು ಹೆಮ್ಮೆ ಪಟ್ಟುಕೊಳ್ಳಬೇಕಾದ ಒಂದು ಸಾಧನೆಯನ್ನು, ಈ ದೇಶದ ವಿಜ್ಞಾನಿಗಳ ಸಾಧನೆಯನ್ನು ಮುಂದಿಟ್ಟರು. ಆದರೆ, ಅವರ ಉದ್ದೇಶ ಅದಾಗಿರಲಿಲ್ಲ. ಮತ್ತೆ ಗೋದಿ ಮೀಡಿಯಾ ಒಂದು ವಾರ ಕಾಲ ಚರ್ಚೆಯನ್ನು ದೇಶದೊಳಗಿನ ಸಮಸ್ಯೆಗಳ ಕುರಿತು ಯಾರೂ ಮಾತಾಡದಂತೆ ನೋಡಿಕೊಳ್ಳುತ್ತದೆ ಎಂಬುದು ಅವರಿಗೆ ಗೊತ್ತು.

ಬಿಜೆಪಿಗೆ ಏಕೆ ಇಷ್ಟೊಂದು ಹೆದರಿಕೆ? ಈಗ ದೇಶದಲ್ಲಿ ಶೇ.25ರಷ್ಟು ಕಡುಬಡವರಿದ್ದು, ಅವರ ಅಕೌಂಟಿಗೆ ಹಣ ಹಾಕುತ್ತೇವೆಂದು ರಾಹುಲ್‍ಗಾಂಧಿ ಪ್ರಕಟಿಸಿದಾಗ ಅವರನ್ನು ಕೌಂಟರ್ ಮಾಡುವುದು ಕಷ್ಟವೇ? ಅಲ್ಲಾ ಕಣಪ್ಪಾ, ಈ ದೇಶದಲ್ಲಿ 40 ವರ್ಷ ನಿಮ್ಮ ಕುಟುಂಬದವರೇ ಆಳಿದ್ದೀರಿ, ಈಗಲೂ ಇಷ್ಟು ಕಡುಬಡವರು ಏಕಿದ್ದಾರೆ ಎಂದು ಕೇಳಬಹುದಲ್ಲವೇ? ನಿರುದ್ಯೋಗ, ರೈತರಿಗೆ ಒಳ್ಳೆಯ ಬೆಲೆ ಇತ್ಯಾದಿಗಳ ವಿಚಾರದಲ್ಲಿ ಕಾಂಗ್ರೆಸ್ ಈ ದೇಶಕ್ಕೆ ಅದ್ಭುತವಾದದ್ದೇನೂ ಮಾಡಿಲ್ಲ. ಆದರೆ ಅದನ್ನು ಪ್ರಶ್ನೆ ಮಾಡಲು ಹೊರಟರೆ, ಹೌದು ಕಾಂಗ್ರೆಸ್ ಅದ್ಭುತವಾದದ್ದನ್ನು ಮಾಡಿರಲಿಲ್ಲ, ಬಿಜೆಪಿ ಪರಿಸ್ಥಿತಿಯನ್ನು ಮತ್ತಷ್ಟು ಅಧ್ವಾನಗೊಳಿಸಿತು ಎಂಬುದು ಬಯಲಾಗುತ್ತದೆ. ಇದೇ ನಿಮ್ಮ ಸಮಸ್ಯೆಯೇ?

ಗಡಿಯಿಂದ ಒಳಕ್ಕೆ ಬನ್ನಿ ಬಾಹ್ಯಾಕಾಶದಿಂದ ಕೆಳಗಿಳಿದು ಬನ್ನಿ. ದೇಶದ ಅಸಲೀ ಸಮಸ್ಯೆಗಳ ಕುರಿತು ಚರ್ಚಿಸಿ. ಗಡಿಯನ್ನು ಸೈನ್ಯಕ್ಕೆ ಬಿಡಿ, ಬಾಹ್ಯಾಕಾಶವನ್ನು ವಿಜ್ಞಾನಿಗಳಿಗೆ ಬಿಡಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...