Homeನಾನು ಗೌರಿಗಡಿಯನ್ನು ಸೈನ್ಯಕ್ಕೆ ಬಿಡಿ, ಬಾಹ್ಯಾಕಾಶವನ್ನು ವಿಜ್ಞಾನಿಗಳಿಗೆ ಬಿಡಿ. ಬನ್ನಿ ನಮ್ಮೊಡನೆ ಮಾತನಾಡಿ

ಗಡಿಯನ್ನು ಸೈನ್ಯಕ್ಕೆ ಬಿಡಿ, ಬಾಹ್ಯಾಕಾಶವನ್ನು ವಿಜ್ಞಾನಿಗಳಿಗೆ ಬಿಡಿ. ಬನ್ನಿ ನಮ್ಮೊಡನೆ ಮಾತನಾಡಿ

- Advertisement -
- Advertisement -

| ಡಾ. ವಾಸು ಎಚ್.ವಿ |

ದೇಶದ ಸಮಸ್ಯೆಗಳ ಸುತ್ತ ಚುನಾವಣೆ ಎದುರಿಸಲು ಹಿಂಜರಿಯುತ್ತಿರುವ ಬಿಜೆಪಿ

2019ರ ಚುನಾವಣೆಯ ಒಂದು ಅತೀ ಮುಖ್ಯ ಲಕ್ಷಣವೆಂದರೆ, ಅಧಿಕಾರಾರೂಢ ಪಕ್ಷವು ದೇಶದ ಜನರ ಅಸಲೀ ಸಮಸ್ಯೆಗಳು ಚುನಾವಣೆಯಲ್ಲಿ ಚರ್ಚೆಯಾಗಬಾರದೆಂದು ಬಯಸುತ್ತಿದೆ. ಅದಕ್ಕಾಗಿ ಇನ್ನಿಲ್ಲದ ಸರ್ಕಸ್ ಮಾಡುತ್ತಿದೆ. ಇದಕ್ಕೆ ಕಾರಣಗಳಿವೆ.

ಇನ್ನು 10 ವರ್ಷಗಳ ಕಾಲ ನಾನೇ ಪ್ರಧಾನಿ ಎಂದು ಖಚಿತವಾಗಿ ಭಾವಿಸಿಕೊಂಡಿದ್ದ ಬಿಜೆಪಿಯ ನಂಬಿಕೆ ಮೂರೂವರೆ ವರ್ಷಗಳಲ್ಲೇ ಅಲ್ಲಾಡಿತು. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬಂದರೂ ಸಂಭ್ರಮಿಸಲಾಗದಷ್ಟು ತೆಳ್ಳಗಿನ ಮಾರ್ಜಿನ್‍ನಲ್ಲಿ ಗೆದ್ದಿದ್ದರು. ಆ ನಂತರ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಎಲ್ಲಾ ಕಡೆ ಸೋತರಷ್ಟೇ ಅಲ್ಲದೇ, ಈ ಹಿಂದೆ ಅಧಿಕಾರದಲ್ಲಿದ್ದ ಮೂರು ದೊಡ್ಡ ರಾಜ್ಯಗಳನ್ನು ಕಳೆದುಕೊಂಡಿದ್ದರು. ಇಲ್ಲಿಂದ ಬಿಜೆಪಿಯ ಗ್ರಾಫ್ ಇಳಿಯುತ್ತಾ ಹೋಯಿತು. ಆದರೆ, ಪ್ರಧಾನಿ ಅಭ್ಯರ್ಥಿಯಾಗಿ ಮೋದಿಯವರ ಜನಪ್ರಿಯತೆ ರಾಹುಲ್ ಗಾಂಧಿಗಿಂತ ಎಷ್ಟೋ ಮೇಲೆ ಇತ್ತು, ಇಂದಿಗೂ ಇದೆ.

ಅದು ಕುಸಿಯಲು ಆರಂಭಿಸಿದ್ದು ರಾಫೇಲ್ ಭ್ರಷ್ಟಾಚಾರದ ಸದ್ದು ಹೆಚ್ಚಾಗುತ್ತಾ ಹೋದಂತೆ. ಜನವರಿಯ ನಂತರ ನಡೆದ ಸಮೀಕ್ಷೆಗಳಲ್ಲೆಲ್ಲಾ ಬಿಜೆಪಿಯ ಕುಸಿತವು ಕಾಣುತ್ತಾ ಬಂದಿತು. ಮೊದಮೊದಲು ಬಿಜೆಪಿಗೆ ಬಹುಮತ ಬರಲ್ಲ ಅಂತ ಇದ್ದದ್ದು, ಎನ್‍ಡಿಎಗೂ ಬಹುಮತ ಬರಲ್ಲ ಅಂತ ಖಚಿತವಾಯಿತು. ಚುನಾವಣೆ ಹೊತ್ತಿಗೆ ಈ ಗ್ರಾಫ್ ಮತ್ತಷ್ಟು ಇಳಿದರೆ ಏನು ಮಾಡೋದು ಎನ್ನುವ ಚಿಂತೆಯಲ್ಲಿದ್ದ ಅವರಿಗೆ ಪುಲ್ವಾಮಾ ನೆರವಿಗೆ ಬಂದಿತು.

ಸಿಆರ್‍ಪಿಎಫ್ ಯೋಧರು ಸತ್ತಿದ್ದಕ್ಕೆ ಇಡೀ ದೇಶವೇ ಮರುಗಿತು. ಆದರೆ ಬಿಜೆಪಿಗೆ ಒಂಥರಾ ಸಂಭ್ರಮವಿತ್ತು. ಪಾಕಿಸ್ತಾನದ ಮೇಲೆ ಒಂದು ದಾಳಿ ನಡೆಸಿ (ಈ ದಾಳಿಯ ‘ಸಾಧನೆ’ಯ ಕುರಿತ ವಿವಾದಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ) ಮಸ್ಕುಲಾರ್ ನ್ಯಾಷನಲಿಸಂ ಮೂಲಕ ಚೇತರಿಕೆ ಪಡೆದುಕೊಳ್ಳಲು ನೋಡಿದರು. ಮಸ್ಕುಲಾರ್ ನ್ಯಾಷನಲಿಸಂ ಎಂದರೆ, ದೇಶದ ಅಸಲೀ ಸಮಸ್ಯೆಗಳನ್ನು ಬಗೆಹರಿಸಿ, ಜನರನ್ನು ಸಬಲಗೊಳಿಸಿ ದೇಶ ಕಟ್ಟುವ ಬದಲಿಗೆ ಹೊರಗಿನ ಶತ್ರುವಿನ ವಿರುದ್ಧ ತೋಳೇರಿಸುತ್ತಾ ತನ್ನ ಬಲ ಹೆಚ್ಚಿಸಿಕೊಳ್ಳುವುದು. ಒಂದು ವೇಳೆ ಶತ್ರು ಇಲ್ಲದಿದ್ದರೆ ಅಂತಹ ಶತ್ರುವನ್ನು ಸೃಷ್ಟಿಸುವುದು ಇದಕ್ಕೆ ಅಗತ್ಯವಿದೆ. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗೆ ನೆರವು ನೀಡುತ್ತಿರುವ ನೆರೆಯ ಪಾಕಿಸ್ತಾನ ಇರುವುದು ಬಿಜೆಪಿಗೆ ಬಹಳ ಅನುಕೂಲ. ಬಿಜೆಪಿ ಆಡಳಿತಾವಧಿಯಲ್ಲಿ ಹಿಂದಿಗಿಂತ ಹೆಚ್ಚು ಭಯೋತ್ಪಾದಕ ಚಟುವಟಿಕೆ ನಡೆದಿದ್ದರೂ, ಹೆಚ್ಚು ಸೈನಿಕರು ಸತ್ತಿದ್ದರೂ ಲೋಪ ಎಲ್ಲಾಯಿತು ಎಂದು ನೋಡಿಕೊಳ್ಳುವ ಬದಲು, ಸೈನಿಕರ ಶವವಿಟ್ಟುಕೊಂಡು ಅದರ ದುರ್ಬಳಕೆಗೆ ಮುಂದಾಯಿತು.

ನಿಧಾನಕ್ಕೆ ಈ ಏರ್‍ಸ್ಟ್ರೈಕ್‍ಗಳು ಜನರ ತಲೆಯಿಂದ ಮರೆಯಾಗುತ್ತಾ, ಅಸಲೀ ವಿಚಾರಗಳು ಮುಂದಕ್ಕೆ ಬಂದವು. ಜನರು ಮತ್ತೆ ನಿರುದ್ಯೋಗ, ರೈತರಿಗೆ ಬೆಲೆ ಇತ್ಯಾದಿಗಳನ್ನು ಮಾತಾಡುತ್ತಾ ಬಂದರು. ಜೊತೆಗೆ ರಾಹುಲ್‍ಗಾಂಧಿ ಬಡವರ ಖಾತೆಗೆ ಸರಾಸರಿ 72,000 ರೂ ಹಾಕುವ ನ್ಯಾಯ್ ಯೋಜನೆ ಪ್ರಕಟಿಸಿದರು. ಚರ್ಚೆ ಬಡವರ ಸುತ್ತಲೂ ಶುರುವಾಯಿತು.

ಇದೀಗ ಮತ್ತೆ ಮೋದಿಯವರು ರಂಗಕ್ಕಿಳಿದರು. ಇಸ್ರೋ ಮುಖ್ಯಸ್ಥರು ಮಾಡಬೇಕಾದ ಪ್ರಕಟಣೆಯನ್ನು ತಾವೇ ಮಾಡಲು ನಿಂತರು. ಸಿನೀಮಿಯಗೊಳಿಸಲು ಬೆಳಿಗ್ಗೆ 11ಕ್ಕೆ ಒಂದು ಟ್ವೀಟ್ ಮಾಡಿ, ತಾನು 11.45ಕ್ಕೆ ರಾಷ್ಟ್ರವನ್ನುದ್ದೇಶಿಸಿ ಮಾತಾಡಲಿದ್ದೇನೆಂದು ಘೋಷಿಸಿದರು. ಆ ನಂತರ 20 ನಿಮಿಷಕ್ಕೂ ಹೆಚ್ಚು ಕಾಯಿಸಿ ಭಾಷಣ ಮಾಡಿದರು. ನಿಸ್ಸಂದೇಹವಾಗಿ ದೇಶವು ಹೆಮ್ಮೆ ಪಟ್ಟುಕೊಳ್ಳಬೇಕಾದ ಒಂದು ಸಾಧನೆಯನ್ನು, ಈ ದೇಶದ ವಿಜ್ಞಾನಿಗಳ ಸಾಧನೆಯನ್ನು ಮುಂದಿಟ್ಟರು. ಆದರೆ, ಅವರ ಉದ್ದೇಶ ಅದಾಗಿರಲಿಲ್ಲ. ಮತ್ತೆ ಗೋದಿ ಮೀಡಿಯಾ ಒಂದು ವಾರ ಕಾಲ ಚರ್ಚೆಯನ್ನು ದೇಶದೊಳಗಿನ ಸಮಸ್ಯೆಗಳ ಕುರಿತು ಯಾರೂ ಮಾತಾಡದಂತೆ ನೋಡಿಕೊಳ್ಳುತ್ತದೆ ಎಂಬುದು ಅವರಿಗೆ ಗೊತ್ತು.

ಬಿಜೆಪಿಗೆ ಏಕೆ ಇಷ್ಟೊಂದು ಹೆದರಿಕೆ? ಈಗ ದೇಶದಲ್ಲಿ ಶೇ.25ರಷ್ಟು ಕಡುಬಡವರಿದ್ದು, ಅವರ ಅಕೌಂಟಿಗೆ ಹಣ ಹಾಕುತ್ತೇವೆಂದು ರಾಹುಲ್‍ಗಾಂಧಿ ಪ್ರಕಟಿಸಿದಾಗ ಅವರನ್ನು ಕೌಂಟರ್ ಮಾಡುವುದು ಕಷ್ಟವೇ? ಅಲ್ಲಾ ಕಣಪ್ಪಾ, ಈ ದೇಶದಲ್ಲಿ 40 ವರ್ಷ ನಿಮ್ಮ ಕುಟುಂಬದವರೇ ಆಳಿದ್ದೀರಿ, ಈಗಲೂ ಇಷ್ಟು ಕಡುಬಡವರು ಏಕಿದ್ದಾರೆ ಎಂದು ಕೇಳಬಹುದಲ್ಲವೇ? ನಿರುದ್ಯೋಗ, ರೈತರಿಗೆ ಒಳ್ಳೆಯ ಬೆಲೆ ಇತ್ಯಾದಿಗಳ ವಿಚಾರದಲ್ಲಿ ಕಾಂಗ್ರೆಸ್ ಈ ದೇಶಕ್ಕೆ ಅದ್ಭುತವಾದದ್ದೇನೂ ಮಾಡಿಲ್ಲ. ಆದರೆ ಅದನ್ನು ಪ್ರಶ್ನೆ ಮಾಡಲು ಹೊರಟರೆ, ಹೌದು ಕಾಂಗ್ರೆಸ್ ಅದ್ಭುತವಾದದ್ದನ್ನು ಮಾಡಿರಲಿಲ್ಲ, ಬಿಜೆಪಿ ಪರಿಸ್ಥಿತಿಯನ್ನು ಮತ್ತಷ್ಟು ಅಧ್ವಾನಗೊಳಿಸಿತು ಎಂಬುದು ಬಯಲಾಗುತ್ತದೆ. ಇದೇ ನಿಮ್ಮ ಸಮಸ್ಯೆಯೇ?

ಗಡಿಯಿಂದ ಒಳಕ್ಕೆ ಬನ್ನಿ ಬಾಹ್ಯಾಕಾಶದಿಂದ ಕೆಳಗಿಳಿದು ಬನ್ನಿ. ದೇಶದ ಅಸಲೀ ಸಮಸ್ಯೆಗಳ ಕುರಿತು ಚರ್ಚಿಸಿ. ಗಡಿಯನ್ನು ಸೈನ್ಯಕ್ಕೆ ಬಿಡಿ, ಬಾಹ್ಯಾಕಾಶವನ್ನು ವಿಜ್ಞಾನಿಗಳಿಗೆ ಬಿಡಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....