Homeಅಂತರಾಷ್ಟ್ರೀಯಭಾರತ ಸರ್ಕಾರದ ಆಕ್ಷೇಪ ಲೆಕ್ಕಿಸದೆ ಮತ್ತೆ ರೈತರ ಪರ ದನಿಯೆತ್ತಿದ್ದ ಕೆನಡಾ ಪ್ರಧಾನಿ!

ಭಾರತ ಸರ್ಕಾರದ ಆಕ್ಷೇಪ ಲೆಕ್ಕಿಸದೆ ಮತ್ತೆ ರೈತರ ಪರ ದನಿಯೆತ್ತಿದ್ದ ಕೆನಡಾ ಪ್ರಧಾನಿ!

"ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ. ಭಾರತದಲ್ಲಿ ಹೋರಾಟನಿರತ ರೈತರೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿರುವುದು ಒಳ್ಳೆಯ ನಡೆ" - ಜಸ್ಟಿನ್ ಟ್ರೂಡೊ

- Advertisement -
- Advertisement -

ಕೃಷಿ ಮಸೂದೆಗಳನ್ನು ವಿರೋಧಿಸಿ ಭಾರತೀಯ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ಬಹಿರಂಗ ಬೆಂಬಲ ನೀಡಿ ಭಾರತದ ಸರ್ಕಾರದ ಟೀಕೆಗೆ ಗುರಿಯಾಗಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಈಗ ಮತ್ತೊಮ್ಮೆ ರೈತರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ದೆಹಲಿಯಲ್ಲಿರುವ ಕೆನಡಾ ರಾಯಭಾರಿಯನ್ನ ಕರೆಸಿ ವಿದೇಶಾಂಗ ಇಲಾಖೆ ಎಚ್ಚರಿಕೆ ನೀಡಿತ್ತು. ಕೆನಡಾ ಪ್ರಧಾನಿ ನೀಡಿದಂಥ ಹೇಳಿಕೆಯಿಂದ ಭಾರತ ಮತ್ತು ಕೆನಡಾ ನಡುವಿನ ಸಂಬಂಧಕ್ಕೆ ಧಕ್ಕೆಯಾಗುತ್ತದೆ. ಇನ್ನುಮುಂದೆ ಇಂಥದಕ್ಕೆ ಆಸ್ಪದ ಕೊಡಬೇಡಿ ಎಂದು ಕೆನಡಾ ರಾಯಭಾರಿಗೆ ಸರ್ಕಾರ ಸೂಚಿಸಿತ್ತು.

ಆದರೆ ಇಂದು ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಸ್ಟಿನ್ ಟ್ರೂಡೊ, “ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ. ಭಾರತದಲ್ಲಿ ಹೋರಾಟನಿರತ ರೈತರೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿರುವುದು ಒಳ್ಳೆಯ ನಡೆ” ಎಂದಿದ್ದಾರೆ. ಭಾರತವು ನಿಮ್ಮ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದೆ ಎಂಬ ಪ್ರಶ್ನೆಗೆ ಅವರು ಪ್ರಪಂಚದ ಎಲ್ಲಾ ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಎಂದಿಗೂ ಬೆಂಬಲಿಸುತ್ತದೆ ಎಂದು ಪುನರುಚ್ಚರಿಸಿದ್ದಾರೆ.

“ರೈತರ ಪ್ರತಿಭಟನೆಯ ಕುರಿತು ಭಾರತದಿಂದ ಬರುತ್ತಿರುವ ಸುದ್ದಿಗಳನ್ನು ನಮ್ಮನ್ನು ಆತಂಕಕ್ಕೀಡುಮಾಡಿವೆ. ಅಲ್ಲಿನ ಪರಿಸ್ಥಿತಿಯಿಂದ ನಾವೆಲ್ಲರೂ ಕುಟುಂಬ ಮತ್ತು ಸ್ನೇಹಿತರ ಬಗ್ಗೆ ಚಿಂತಿತರಾಗಿದ್ದೇವೆ. ನಿಮ್ಮಲ್ಲಿ ಅನೇಕರಿಗೆ ಇದು ನಿಜವೆಂದು ತಿಳಿದಿದೆ. ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ಕೆನಡಾ ಯಾವಾಗಲೂ ಬೆಂಬಲಿಸುತ್ತದೆ ಎಂದು ಹೇಳಲು ಇಚ್ಛಿಸುತ್ತೇನೆ. ಸಂವಾದದಲ್ಲಿ ನಂಬಿಕೆಯುಳ್ಳವರು ನಾವು. ರೈತರ ಬಗೆಗಿನ ನಮ್ಮ ಕಾಳಜಿಯನ್ನು ನೇರವಾಗಿ ಎಲ್ಲಾ ಮಾರ್ಗಗಳಲ್ಲಿ ಭಾರತದ ಸರ್ಕಾರದ ಗಮನಕ್ಕೆ ತರುತ್ತೇವೆ. ಇದು ನಾವೆಲ್ಲರೂ ರೈತರೊಂದಿಗೆ ನಿಲ್ಲುವ ಸಮಯ” ಎಂದು ಮಂಗಳವಾರ ಗುರುನಾನಕ್ ಜಯಂತಿಯಂದು ಬಿಡುಗಡೆಗೊಳಿಸಿದ ವಿಡಿಯೋದಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಮಾತಾಡಿದ್ದರು.

ಭಾರತದ ರೈತರು ನಡೆಸುತ್ತಿರುವ ಹೋರಾಟಕ್ಕೆ ದೇಶ-ವಿದೇಶದಿಮದ ವ್ಯಾಪಕ ಬೆಂಬಲ ಹರಿದುಬರುತ್ತಿದೆ. ಇಂಗ್ಲೆಂಡ್‌‌ನ‌ ಲೇಬರ್ ಪಕ್ಷದ ತನ್ಮಂಜಿತ್ ಸಿಂಗ್ ಧೇಸಿ ನೇತೃತ್ವದ 36 ಸಂಸದರ ಬಣವು ಭಾರತದಲ್ಲಿ ನಡೆಯುತ್ತಿರುವ ರೈತರ ಆಂದೋಲನವನ್ನು ಬೆಂಬಲಿಸಿದ್ದು, ಇಂಗ್ಲೆಂಡ್‌ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್ ಅವರು ಭಾರತದೊಂದಿಗೆ ಚರ್ಚಿಸುವಂತೆ ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ದೆಹಲಿ ಚಲೋ: ರೈತ ಹೋರಾಟಕ್ಕೆ ಇಂಗ್ಲೆಂಡ್‌‌‌‌ನ 36 ಸಂಸದರ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...