Homeಕರ್ನಾಟಕತೆರದಾಳ ಪ್ರಕರಣ: ಮುಖ್ಯಮಂತ್ರಿಗಳೇ ನಿಮ್ಮ ಮನೆ ಹೆಣ್ಣು ಮಕ್ಕಳಿಗೆ ಈ ಪರಿಸ್ಥಿತಿ ಬಂದಿದ್ದರೆ ಏನು ಮಾಡುತ್ತಿದ್ದಿರಿ-ಡಿಕೆಶಿ...

ತೆರದಾಳ ಪ್ರಕರಣ: ಮುಖ್ಯಮಂತ್ರಿಗಳೇ ನಿಮ್ಮ ಮನೆ ಹೆಣ್ಣು ಮಕ್ಕಳಿಗೆ ಈ ಪರಿಸ್ಥಿತಿ ಬಂದಿದ್ದರೆ ಏನು ಮಾಡುತ್ತಿದ್ದಿರಿ-ಡಿಕೆಶಿ ಪ್ರಶ್ನೆ

ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳಾಗಲಿ, ಮಹಿಳಾ ಸಚಿವರಾಗಲಿ, ಶೋಭಾ ಕರಂದ್ಲಾಜೆ ಅವರಾಗಲಿ, ದೇಶದಲ್ಲಿರುವ ಮಹಿಳಾ ಸಂಘಟನೆಗಳಾಗಲಿ ಯಾರೊಬ್ಬರೂ ಈ ಬಗ್ಗೆ ಬಾಯಿ ಬಿಟ್ಟಿಲ್ಲ. ಇದು ಕೇವಲ ದೇಶ ಮಟ್ಟದಲ್ಲ, ಅಂತಾರಾಷ್ಟ್ರೀಯ ಮಟ್ಟದ ಪ್ರಕರಣ ಎಂದರು.

- Advertisement -
- Advertisement -

ತೆರದಾಳದ ಪುರಸಭೆಯ ಮಹಿಳಾ ಸದಸ್ಯರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣದಲ್ಲಿ ಮುಖ್ಯಮಂತ್ರಿಗಳಾಗಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಲಿ, ಬಿಜೆಪಿ ಮಹಿಳಾ ಸಂಘಟನೆಗಳಾಗಲಿ ಮೌನ ವಹಿಸಿರುವುದೇಕೆ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಅವರು, “ಭ್ರೂಣ ಹತ್ಯೆ ಎಂದರೆ ಕೊಲೆಗೆ ಸಮ. ಜತೆಗೆ ಮಹಿಳೆಯರ ಮೇಲೆ ಹಲ್ಲೆ, ದೌರ್ಜನ್ಯ ನಡೆದಿದೆ. ಇದು ಮಾನಭಂಗ ಹಾಗೂ ದೌರ್ಜನ್ಯದ ಪ್ರಕರಣ. ಮಹಾಭಾರತದಲ್ಲಿ ದುಶ್ಶಾಸನನ ದೌರ್ಜನ್ಯ ಕಣ್ಣೆದುರು ಕಂಡಂತೆ ಈ ಪ್ರಕರಣವನ್ನು ಮಾಧ್ಯಮಗಳು ತೋರಿಸಿವೆ. ಆದರೂ ಈವರೆಗೂ ಪೊಲೀಸರು ಪ್ರಕರಣ ದಾಖಲಿಸಿ, ಯಾರೊಬ್ಬರನ್ನೂ ಬಂಧಿಸಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪುರಸಭಾ ಸದಸ್ಯೆಯನ್ನು ಎಳೆದಾಡಿದ ಬಿಜೆಪಿ ಶಾಸಕ ಸಿದ್ದು ಸವದಿ

“ಮುಖ್ಯಮಂತ್ರಿಗಳಾಗಲಿ, ಮಹಿಳಾ ಸಚಿವರಾಗಲಿ, ಶೋಭಾ ಕರಂದ್ಲಾಜೆ ಅವರಾಗಲಿ, ದೇಶದಲ್ಲಿರುವ ಮಹಿಳಾ ಸಂಘಟನೆಗಳಾಗಲಿ ಯಾರೊಬ್ಬರೂ ಈ ಬಗ್ಗೆ ಬಾಯಿ ಬಿಟ್ಟಿಲ್ಲ. ಇದು ಕೇವಲ ದೇಶ ಮಟ್ಟದಲ್ಲ, ಅಂತಾರಾಷ್ಟ್ರೀಯ ಮಟ್ಟದ ಪ್ರಕರಣ. ಬಿಜೆಪಿಯವರು ದೌರ್ಜನ್ಯ ಎಸಗಿದ ತಮ್ಮ ಶಾಸಕನ ರಕ್ಷಣೆಗಾಗಿ ನಿಂತಿರುವುದು ನಾಚಿಕೆಗೇಡಿನ ವಿಚಾರ. ಮುಖ್ಯಮಂತ್ರಿಗಳೇ ಇದೇ ಪರಿಸ್ಥಿತಿ ನಿಮ್ಮ ಮನೆಯ ಹೆಣ್ಣುಮಕ್ಕಳಿಗೆ ಬಂದಿದ್ದರೆ, ಶೋಭಾ ಕರಂದ್ಲಾಜೆ ಹಾಗೂ ಶಶಿಕಲಾ ಜೊಲ್ಲೆ ಅವರೇ ನಿಮಗೆ ಈ ರೀತಿ ಆಗಿದ್ದರೆ ಏನು ಮಾಡುತ್ತಿದ್ದಿರಿ” ಎಂದು ಪ್ರಶ್ನಿಸಿದರು.

“ಈ ವಿಚಾರವಾಗಿ ನಾನು, ನಮ್ಮ ವಿರೋಧ ಪಕ್ಷದ ನಾಯಕರು ಹಾಗೂ ಮಹಿಳಾ ಶಾಸಕರು ಇಂದು ತೆರದಾಳಕ್ಕೆ ಹೋಗಿ ಸಂತ್ರಸ್ತರ ಪರ ನಿಲ್ಲಲು ನಿರ್ಧರಿಸಿದ್ದೇವೆ. ಅಧಿವೇಶನದಲ್ಲೂ ಈ ವಿಚಾರವಾಗಿ ನಮ್ಮ ಹೋರಾಟ ಮುಂದುವರಿಸುತ್ತೇವೆ. ಇದು ಮಾನವೀಯತೆ ಹಾಗೂ ಹೆಣ್ಣಿನ ಕುಲಕ್ಕೆ ಮಾಡಿರುವ ಅಪಮಾನ. ದೌರ್ಜನ್ಯಕ್ಕೆ ಒಳಗಾದ ಮಹಿಳೆಯೇ ಆ ಘಟನೆಗೆ ಕಾರಣರಾದವರ ಬಗ್ಗೆ ಹೇಳಿದ ನಂತರವೂ ಇನ್ನು ಅವರನ್ನು ಬಂಧಿಸಿಲ್ಲ ಎಂದರೆ, ಈ ಸರ್ಕಾರದಲ್ಲಿ ಮಹಿಳೆಯರಿಗೆ ಯಾವ ರೀತಿಯ ರಕ್ಷಣೆ, ಗೌರವ ಸಿಗುತ್ತದೆ ಎಂಬುದು ಗೊತ್ತಾಗುತ್ತದೆ” ಎಂದು ಹೇಳಿದರು.

ಬಾಗಲಕೋಟೆಯ ಮಹಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವೇಳೆ ತೇರದಾಳದ ಬಿಜೆಪಿ ಶಾಸಕ ಸಿದ್ದು ಸವದಿ ಅಧ್ಯಕ್ಷೆ ಸ್ಥಾನದ ಆಕಾಂಕ್ಷಿಯಾದ ಸವಿತಾ ಹುರಕಡ್ಲಿ ಅವರನ್ನು ಪೊಲೀಸರ ಸಮ್ಮುಖದಲ್ಲೇ ಎಳೆದಾಡಿ ಅಮಾನವೀಯವಾಗಿ ನಡೆಸಿಕೊಳ್ಳಲಾಗಿತ್ತು.ಇದನ್ನೂ ಓದಿ: ಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...