Homeಮುಖಪುಟಪರಿಷತ್ ಚುನಾವಣೆ: ದಶಕಗಳ ನಂತರ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಬಿಜೆಪಿಗೆ ಹೀನಾಯ ಸೋಲು

ಪರಿಷತ್ ಚುನಾವಣೆ: ದಶಕಗಳ ನಂತರ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಬಿಜೆಪಿಗೆ ಹೀನಾಯ ಸೋಲು

ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆಯಲ್ಲಿಯೂ ಸಹ ಬಿಜೆಪಿ ಪಕ್ಷ ಕಳಪೆ ಸಾಧನೆ ಮಾಡಿತ್ತು.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಪ್ರತಿನಿಧಿಸುವ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬಿಜೆಪಿ ಭಾರೀ ಮುಖಭಂಗ ಅನುಭವಿಸಿದೆ. ವಿಧಾನ ಪರಿಷತ್ ಚುನಾವಣೆಯ ವಾರಣಾಸಿಯ ಪದವೀಧರ ಕ್ಷೇತ್ರ ಮತ್ತ ಶಿಕ್ಷಕರ ಕ್ಷೇತ್ರಗಳೆರಡಲ್ಲಿಯೂ 10 ವರ್ಷಗಳ ನಂತರ ಬಿಜೆಪಿ ಹೀನಾಯವಾಗಿ ಸೋತಿದ್ದು ಎರಡೂ ಕ್ಷೇತ್ರಗಳನ್ನು ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಗೆದ್ದುಕೊಂಡಿದೆ.

ಶನಿವಾರ ನಡೆದ ಮತ ಎಣಿಕೆಯಲ್ಲಿ ವಾರಣಾಸಿ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಶುತೋಷ್ ಸಿನ್ಹ ಪದವೀಧರ ಕ್ಷೇತ್ರದಲ್ಲಿ ಜಯಗಳಿಸಿದರೆ, ಲಾಲ್‌ ಬಿಹಾರಿ ಯಾದವ್ ಶಿಕ್ಷಕರ ಕ್ಷೇತ್ರದಿಂದ ಜಯಶೀಲರಾಗಿದ್ದಾರೆ.

ಡಿಸೆಂಬರ್ 1ರ ಮಂಗಳವಾರ ಉತ್ತರ ಪ್ರದೇಶದಲ್ಲಿ 5 ಪದವೀಧರ ಮತ್ತು 6 ಶಿಕ್ಷಕರ ಕ್ಷೇತ್ರದಲ್ಲಿ ಚುನಾವಣೆ ನಡೆದಿತ್ತು. ಶನಿವಾರ ಮತ ಎಣಿಕೆ ನಡೆದು 9 ಕ್ಷೇತ್ರಗಳ ಮತ ಎಣಿಕೆ ಪೂರ್ಣಗೊಂಡಿದ್ದು, ಇನ್ನು 2 ಕ್ಷೇತ್ರಗಳ ಮತ ಎಣಿಕೆ ಬಾಕಿ ಇದೆ. 9 ಕ್ಷೇತ್ರಗಳಲ್ಲಿ ಬಿಜೆಪಿ 4, ಸಮಾಜವಾದಿ ಪಕ್ಷ 3 ಮತ್ತು ಪಕ್ಷೇತರ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ಬಿಜೆಪಿ ಪ್ರಾಬಲ್ಯದ ಪ್ರದೇಶಗಳಲ್ಲಿ ಸಮಾಜವಾದಿ ಪಕ್ಷ ಅಮೋಘ ಸಾಧನೆ ಮಾಡಿದೆ.

ವಾರಣಾಸಿ ಕ್ಷೇತ್ರವು ಬಿಜೆಪಿ ಪಕ್ಷದ ಪ್ರಬಲ ಕ್ಷೇತ್ರವಾಗಿದೆ. 2014 ಕ್ಕಿಂತ ಮುಂಚೆ ಬಿಜೆಪಿಯ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 2014ರಲ್ಲಿ ನರೇಂದ್ರ ಮೋದಿ ಈ ಕ್ಷೇತ್ರದಿಂದ ಕಣಕ್ಕಿಳಿದು ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಯಗಳಿಸಿದ್ದರು. 2019 ರಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ವಿರುದ್ಧ ಭಾರೀ ಅಂತರದಿಂದ ವಿಜಯಿಯಾಗಿದ್ದರು.

ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆಯಲ್ಲಿಯೂ ಸಹ ಬಿಜೆಪಿ ಪಕ್ಷ ಕಳಪೆ ಸಾಧನೆ ಮಾಡಿತ್ತು. 6 ಕ್ಷೇತ್ರಗಳಲ್ಲಿ ಕೇವಲ 1 ರಲ್ಲಿ ಮಾತ್ರ ಜಯಗಳಿಸಲು ಶಕ್ತವಾಗಿತ್ತು. ಎಲ್ಲಕ್ಕಿಂತ ಮುಖ್ಯವಾಗಿ ಬಿಜೆಪಿ, ಆರ್‌ಎಸ್‌ಎಸ್‌ನ ಹಿಡಿತವಿರುವ ನಾಗ್ಪುರದಲ್ಲಿ ಬಿಜೆಪಿ ಹೀನಾಯವಾಗಿ ಸೋತಿತ್ತು.


ಇದನ್ನೂ ಓದಿ: ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಜಯ- ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...