Homeಮುಖಪುಟಪರಿಷತ್ ಚುನಾವಣೆ: ದಶಕಗಳ ನಂತರ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಬಿಜೆಪಿಗೆ ಹೀನಾಯ ಸೋಲು

ಪರಿಷತ್ ಚುನಾವಣೆ: ದಶಕಗಳ ನಂತರ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಬಿಜೆಪಿಗೆ ಹೀನಾಯ ಸೋಲು

ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆಯಲ್ಲಿಯೂ ಸಹ ಬಿಜೆಪಿ ಪಕ್ಷ ಕಳಪೆ ಸಾಧನೆ ಮಾಡಿತ್ತು.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಪ್ರತಿನಿಧಿಸುವ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬಿಜೆಪಿ ಭಾರೀ ಮುಖಭಂಗ ಅನುಭವಿಸಿದೆ. ವಿಧಾನ ಪರಿಷತ್ ಚುನಾವಣೆಯ ವಾರಣಾಸಿಯ ಪದವೀಧರ ಕ್ಷೇತ್ರ ಮತ್ತ ಶಿಕ್ಷಕರ ಕ್ಷೇತ್ರಗಳೆರಡಲ್ಲಿಯೂ 10 ವರ್ಷಗಳ ನಂತರ ಬಿಜೆಪಿ ಹೀನಾಯವಾಗಿ ಸೋತಿದ್ದು ಎರಡೂ ಕ್ಷೇತ್ರಗಳನ್ನು ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಗೆದ್ದುಕೊಂಡಿದೆ.

ಶನಿವಾರ ನಡೆದ ಮತ ಎಣಿಕೆಯಲ್ಲಿ ವಾರಣಾಸಿ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಶುತೋಷ್ ಸಿನ್ಹ ಪದವೀಧರ ಕ್ಷೇತ್ರದಲ್ಲಿ ಜಯಗಳಿಸಿದರೆ, ಲಾಲ್‌ ಬಿಹಾರಿ ಯಾದವ್ ಶಿಕ್ಷಕರ ಕ್ಷೇತ್ರದಿಂದ ಜಯಶೀಲರಾಗಿದ್ದಾರೆ.

ಡಿಸೆಂಬರ್ 1ರ ಮಂಗಳವಾರ ಉತ್ತರ ಪ್ರದೇಶದಲ್ಲಿ 5 ಪದವೀಧರ ಮತ್ತು 6 ಶಿಕ್ಷಕರ ಕ್ಷೇತ್ರದಲ್ಲಿ ಚುನಾವಣೆ ನಡೆದಿತ್ತು. ಶನಿವಾರ ಮತ ಎಣಿಕೆ ನಡೆದು 9 ಕ್ಷೇತ್ರಗಳ ಮತ ಎಣಿಕೆ ಪೂರ್ಣಗೊಂಡಿದ್ದು, ಇನ್ನು 2 ಕ್ಷೇತ್ರಗಳ ಮತ ಎಣಿಕೆ ಬಾಕಿ ಇದೆ. 9 ಕ್ಷೇತ್ರಗಳಲ್ಲಿ ಬಿಜೆಪಿ 4, ಸಮಾಜವಾದಿ ಪಕ್ಷ 3 ಮತ್ತು ಪಕ್ಷೇತರ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ಬಿಜೆಪಿ ಪ್ರಾಬಲ್ಯದ ಪ್ರದೇಶಗಳಲ್ಲಿ ಸಮಾಜವಾದಿ ಪಕ್ಷ ಅಮೋಘ ಸಾಧನೆ ಮಾಡಿದೆ.

ವಾರಣಾಸಿ ಕ್ಷೇತ್ರವು ಬಿಜೆಪಿ ಪಕ್ಷದ ಪ್ರಬಲ ಕ್ಷೇತ್ರವಾಗಿದೆ. 2014 ಕ್ಕಿಂತ ಮುಂಚೆ ಬಿಜೆಪಿಯ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 2014ರಲ್ಲಿ ನರೇಂದ್ರ ಮೋದಿ ಈ ಕ್ಷೇತ್ರದಿಂದ ಕಣಕ್ಕಿಳಿದು ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಯಗಳಿಸಿದ್ದರು. 2019 ರಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ವಿರುದ್ಧ ಭಾರೀ ಅಂತರದಿಂದ ವಿಜಯಿಯಾಗಿದ್ದರು.

ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆಯಲ್ಲಿಯೂ ಸಹ ಬಿಜೆಪಿ ಪಕ್ಷ ಕಳಪೆ ಸಾಧನೆ ಮಾಡಿತ್ತು. 6 ಕ್ಷೇತ್ರಗಳಲ್ಲಿ ಕೇವಲ 1 ರಲ್ಲಿ ಮಾತ್ರ ಜಯಗಳಿಸಲು ಶಕ್ತವಾಗಿತ್ತು. ಎಲ್ಲಕ್ಕಿಂತ ಮುಖ್ಯವಾಗಿ ಬಿಜೆಪಿ, ಆರ್‌ಎಸ್‌ಎಸ್‌ನ ಹಿಡಿತವಿರುವ ನಾಗ್ಪುರದಲ್ಲಿ ಬಿಜೆಪಿ ಹೀನಾಯವಾಗಿ ಸೋತಿತ್ತು.


ಇದನ್ನೂ ಓದಿ: ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಜಯ- ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...