Homeಮುಖಪುಟ’ಶೂ ನೆಕ್ಕಿದವನ ಹೆಸರನ್ನು ಕೇರಳ ಕಸದ ಬುಟ್ಟಿಗೆ ಎಸೆಯಬೇಕು’: ಗೋಲ್ವಾಲ್ಕರ್ ವಿರುದ್ದ ಕಿಡಿ

’ಶೂ ನೆಕ್ಕಿದವನ ಹೆಸರನ್ನು ಕೇರಳ ಕಸದ ಬುಟ್ಟಿಗೆ ಎಸೆಯಬೇಕು’: ಗೋಲ್ವಾಲ್ಕರ್ ವಿರುದ್ದ ಕಿಡಿ

ವೈಜ್ಞಾನಿಕ ಸಂಸ್ಥೆಗೆ ಆರೆಸ್ಸೆಸ್ ನಾಯಕನ ಹೆಸರಿಡುವ ಕೇಂದ್ರದ ಕ್ರಮಕ್ಕೆ ಕೇರಳದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದೆ

- Advertisement -
- Advertisement -

ತಿರುವನಂತಪುರಂನ ರಾಜೀವ್ ಗಾಂಧಿ ಸೆಂಟರ್ ಫಾರ್ ಬಯೋಟೆಕ್ನಾಲಜಿ (RGCB) ಯ ಎರಡನೇ ಕ್ಯಾಂಪಸ್‌ಗೆ ಆರೆಸ್ಸೆಸ್ ಮುಖಂಡ ಗೋಲ್ವಾಲ್ಕರ್‌ ಹೆಸರಿಡುವುದಕ್ಕೆ ಕೇರಳದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಖ್ಯಾತ ಮಲಯಾಳಂ ಚಿತ್ರ ನಟ ಹರೀಶ್ ಪೆರಾಡಿ, “ಆ ಶೂ ನೆಕ್ಕಿದವನ ಹೆಸರನ್ನು ಕೇರಳ ಕಸದ ಬುಟ್ಟಿಗೆ ಎಸೆಯಬೇಕು” ಎಂದು ಕಿಡಿಕಾರಿದ್ದಾರೆ.

ಇಂಡಿಯಾ ಇಂಟರ್‌‌ನ್ಯಾಷನಲ್ ಸೈನ್ಸ್ ಫೆಸ್ಟಿವೆಲ್(IISF)ನ ಅಧಿವೇಶನದ ವೀಡಿಯೋ ಸಂದೇಶದಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಹರ್ಷ್ ವರ್ಧನ್ ಈ ಬಗ್ಗೆ ತಿಳಿಸಿದ್ದು, ಸಂಸ್ಥೆಗೆ ಆರೆಸ್ಸೆಸ್‌‌ನ ಎರಡನೇ ನಾಯಕನಾಗಿದ್ದ ಎಂ.ಎಸ್. ಗೊಲ್ವಾಲ್ಕರ್‌ ಅವರ ಹೆಸರನ್ನು ಇಡುವುದಾಗಿ ಹೇಳಿದ್ದಾರೆ. ಅದನ್ನು ‘ಶ್ರೀ ಗೂರುಜಿ ಮಾಧವ ಸದಾಶಿವ ಗೋಲ್ವಾಲ್ಕರ್ ನ್ಯಾಷನಲ್ ಸೆಂಟರ್ ಫಾರ್ ಕಾಂಪ್ಲೆಕ್ಸ್ ಡಿಸೀಸ್ ಇನ್ ಕ್ಯಾನ್ಸರ್ ಮತ್ತು ವೈರಲ್ ಇನ್‌‌ಫೆಕ್ಷನ್’ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ವೈಜ್ಞಾನಿಕ ಸಂಸ್ಥೆಗೆ ಆರೆಸ್ಸೆಸ್ ನಾಯಕನ ಹೆಸರಿಡುವ ಕೇಂದ್ರದ ಕ್ರಮಕ್ಕೆ ಕೇರಳದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ಗೆ ಗೋಲ್ವಾಲ್ಕರ್ ಹೆಸರಿಡದಂತೆ ಕೋರಿ ಪತ್ರ ಬರೆದಿದ್ದಾರೆ. ಸಂಸ್ಥೆಗೆ ಅಂತರಾಷ್ಟ್ರೀಯ ಖ್ಯಾತಿಯ ಭಾರತೀಯ ವಿಜ್ಞಾನಿಗಳನ್ನು ಹೆಸರಿಡಬಹುದು ಮತ್ತು ಪ್ರಸ್ತುತ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ತಿಳಿಸಿದ್ದಾರೆ.

ಕೋಮುವಾದ ಸಿದ್ಧಾಂತವನ್ನು ಪ್ರತಿಪಾದಿಸಿದ ಗೋಲ್ವಾಲ್ಕರ್ ಅವರಂತಹ ವ್ಯಕ್ತಿಯ ಹೆಸರನ್ನು ವೈಜ್ಞಾನಿಕ ಸಂಶೋಧನಾ ಸಂಸ್ಥೆಗೆ ಇಡುವುದು ಸೂಕ್ತವಲ್ಲ ಎಂದು ಪಿಣರಾಯಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದಿದ್ದು, “ಇಂತಹ ಸಂಸ್ಥೆಯು ಮುಕ್ತ ಚಿಂತನೆಯನ್ನು ಕಟ್ಟಿಕೊಟ್ಟ ವ್ಯಕ್ತಿಗಳ ಇತಿಹಾಸದಿಂದ ಪ್ರೇರಿತವಾಗಬೇಕೇ ಹೊರತು ಕೋಮುವಾದವನ್ನು ಆಧರಿಸಿದ ದ್ವೇಷದ ಸಿದ್ಧಾಂತವನ್ನು ಪ್ರತಿಪಾದಿಸಿದವರದ್ದಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಜೊತೆಗೆ ಆರೆಸ್ಸೆಸ್ ಮುಖಂಡರು ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

ಕೋಮುವಾದವನ್ನು ಉತ್ತೇಜಿಸಿರುವುದರ ಹೊರತಾಗಿ ಗೋಲ್ವಾಲ್ಕರ್‌ಗೂ ವಿಜ್ಞಾನಕ್ಕೂ ಏನು ಸಂಬಂಧವಿದೆ ಎಂದು ಸಂಸದ ಶಶಿ ತರೂರ್ ಕೇಳಿದ್ದು, “ಧರ್ಮವು ವಿಜ್ಞಾನದಲ್ಲಿ ಪ್ರಾಬಲ್ಯ ಸಾಧಿಸಬೇಕು” ಎಂಬ ಉಲ್ಲೇಖಕ್ಕಾಗಿ ಹಿಟ್ಲರ್ ಅಭಿಮಾನಿ ಗೋಲ್ವಾಲ್ಕರ್ ಅವರನ್ನು ನೆನಪಿಸಿಕೊಳ್ಳಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಗೋಲ್ವಾಲ್ಕರ್ ಅತಿದೊಡ್ಡ ಕೋಮುವಾದಿ ಮತ್ತು ಅವರ ನಾಮಕರಣ ಕ್ರಮವನ್ನು ವಿರೋಧಿಸುವುದಾಗಿ ಸಿಪಿಐ (ಎಂ) ಪೊಲಿಟ್‌ಬ್ಯುರೊ ಸದಸ್ಯ ಎಂ.ಎ. ಬೇಬಿ ಹೇಳಿದ್ದು, “ಕೇರಳದ ಪ್ರಜಾಪ್ರಭುತ್ವ ಸಮುದಾಯವು ಈ ಕ್ರಮವನ್ನು ವಿರೋಧಿಸಬೇಕು. ಗಾಂಧೀಜಿಯವರ ಹತ್ಯೆಯ ಸಮಯದಲ್ಲಿ ಈ ಆರೆಸ್ಸೆಸ್ ಮುಖ್ಯಸ್ಥ ಭಾರತದಲ್ಲಿ ಕೋಮು ದ್ವೇಷದ ಹರಡುವಿಕೆಗೆ ಕಾರಣವಾಗಿದ್ದರು. 1940 ರಿಂದ 1970 ರವರೆಗೆ ಗೋಲ್ವಾಲ್ಕರ್ ಮುಖ್ಯಸ್ಥರಾಗಿದ್ದಾಗ, ಆರೆಸ್ಸೆಸ್ ಭಾರತ ಕಂಡ ಅತಿದೊಡ್ಡ ಕೋಮು ಗಲಭೆಗಳನ್ನು ನಡೆಸಿತ್ತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಣ್ಣ ಕೈಗಾರಿಕೆಗೆ ಘೋಷಿಸಿದ ಸಾಲ ಯೋಜನೆಯ ಅನುಷ್ಠಾನ ವಿಳಂಬ: ಆರೆಸ್ಸೆಸ್ ಅಂಗಸಂಸ್ಥೆ ಆರೋಪ

ಎರಡನೇ ಕ್ಯಾಂಪಸ್ ತಂತ್ರಜ್ಞಾನ ನಾವೀನ್ಯತೆಯ ಕೇಂದ್ರವಾಗಲಿದ್ದು, ಇದು ಕೋಶ ಆಧಾರಿತ ಚಿಕಿತ್ಸಾ ಸಂಶೋಧನೆಗೆ ಅತ್ಯಾಧುನಿಕ ಸೌಲಭ್ಯ ಒದಗಿಸಲಿದೆ. ಕ್ಯಾನ್ಸರ್ ಔಷಧಗಳು, ಇಮ್ಯುನೊಥೆರಪಿ ಸಂಶೋಧನೆ, ಸ್ಟೆಮ್ ಸೆಲ್ ಕಸಿ, ಜೀನ್ ಥೆರಪಿ ಮತ್ತು ಸೂಕ್ಷ್ಮಜೀವಿಯ ಕ್ಯಾನ್ಸರ್ ಪತ್ತೆ ಮತ್ತು ವಿಶ್ಲೇಷಣೆ ಕುರಿತು ಸಂಶೋಧನೆಗಳು ಇಲ್ಲಿ ನಡೆಯಲಿದೆ.

ಇದನ್ನೂ ಓದಿ: ಆಪರೇಷನ್ ಕಮಲದಲ್ಲಿ ಶುರುವಾಯ್ತು ಕೃಷ್ಣ ಗಾರುಡಿ: ಒಕ್ಕಲಿಗ ವರ್ಸಸ್ ಒಕ್ಕಲಿಗೆ! ಇದು ಆರೆಸ್ಸೆಸ್ಸಿನ ಹೊಸ ದಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...