Homeಚಳವಳಿಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ಭಾರತ್ ಬಂದ್‌ಗೆ, ಆರ್‌ಜೆಡಿ, ತೃಣಮೂಲ ಕಾಂಗ್ರೆಸ್ ಮತ್ತು ಎಡಪಕ್ಷಗಳು, ಟಿಆರ್‌ಎಸ್, 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಗಳು ಬೆಂಬಲವನ್ನು ಘೋಷಿಸಿವೆ.

- Advertisement -
- Advertisement -

ಪ್ರತಿಭಟನಾ ನಿತರ ರೈತರು ಮತ್ತು ಸರ್ಕಾರದ ನಡುವಿನ ಐದನೇ ಸುತ್ತಿನ ಮಾತುಕತೆ ಶನಿವಾರ  ವಿಫಲವಾಗಿದ್ದರಿಂದ, ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ರೈತರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ಡಿಸೆಂಬರ್ 8 ರ ಮಂಗಳವಾರ ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ.

ಕೃಷಿ ಮಸೂದೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಕೇಂದ್ರ ಸರ್ಕಾರ ಪದೇ ಪದೇ ಆಶ್ವಾಸನೆ ನೀಡಿದೆ. ಆದರೆ ಸಭೆಗಳು ವಿಫಲವಾಗುತ್ತಿರುವುದರಿಂದ, ಡಿಸೆಂಬರ್ 8 ಕ್ಕೆ ಘೋಷಿಸಲಾದ ಭಾರತ್ ಬಂದ್ ಯೋಜಿಸಿದಂತೆ ನಡೆಯಲಿದೆ ಎಂದು ಕೃಷಿ ಒಕ್ಕೂಟದ ಮುಖಂಡರು ಹೇಳಿದ್ದಾರೆ. ರೈತರ ಪ್ರತಿಭಟನೆಗೆ  ಬಿಜೆಪಿಯೇತರ ಸರ್ಕಾರಗಳು, ಎಡ ಸಂಘಟನೆಗಳು ಮತ್ತು ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿವೆ.

ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ 2020, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ 2020 ರ ರೈತ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ- 2020 ಇವುಗಳನ್ನು ವಿರೋಧಿಸಿ ರೈತರು ಕಳೆದ 11 ದಿನಗಳಿಂದಲೂ  ಪ್ರತಿಭಟಿಸುತ್ತಿದ್ದಾರೆ.

“ಸರ್ಕಾರವು ಕೃಷಿ ಕಾನೂನುಗಳ ಸಂಬಂಧ ಕರಡನ್ನು ಸಿದ್ಧಪಡಿಸಿ ನಮಗೆ ನೀಡುತ್ತದೆ. ಈ ಕುರಿತು ಕೇಂದ್ರ ಸರ್ಕಾರ ರಾಜ್ಯಗಳನ್ನೂ ಸಂಪರ್ಕಿಸುತ್ತಾರೆ ಎಂದು ತಿಳಿಸಿದ್ದಾರೆ. ಎಂಎಸ್‌ಪಿ ಬಗ್ಗೆಯೂ ಚರ್ಚೆಗಳು ನಡೆದವು. ಆದರೆ, ನಾವು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಕುರಿತು ಮಾತನಾಡಬೇಕು ಎಂದು ಹೇಳಿದ್ದೇವೆ. ಈ ಮೊದಲು ಘೋಷಿಸಿದಂತೆ ಭಾರತ್ ಬಂದ್ ನಡೆಯಲಿದೆ” ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಹೇಳಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ 8 ರ ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ ಹೋರಾಟನಿರತ ರೈತರು

ಸರ್ಕಾರದ ಜೊತೆ ಮಾತುಕತೆಯಿಂದ ಪ್ರಯೋಜನವಿಲ್ಲ. ಅವರು ಕಾಯ್ದೆಗಳನ್ನು ವಾಪಸ್ ಪಡೆಯಲು ಮುಂದಾಗುತ್ತಿಲ್ಲ. ಹಾಗಾಗಿ ಹೋರಾಟ ತೀವ್ರಗೊಳಿಸುವುದು ಅನಿವಾರ್ಯ. ಹಾಗಾಗಿ ಮಂಗಳವಾರ ಭಾರತ್ ಬಂದ್ ನಡೆಸಲಿದ್ದೇವೆ. ದೆಹಲಿಯ ಪ್ರತಿ ರಸ್ತೆಗಳನ್ನು, ಪ್ರತಿ ಟೋಲ್‌ಗಳನ್ನು ಬಂದ್ ಮಾಡುತ್ತೇವೆ ಎಂದು ರೈತರು ಘೋಷಿಸಿದ್ದರು.

ರೈತರ ಭಾರತ್ ಬಂದ್‌ಗೆ, ಕಾಂಗ್ರೆಸ್, ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ತೃಣಮೂಲ ಕಾಂಗ್ರೆಸ್ ಮತ್ತು ಎಡಪಕ್ಷಗಳು, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಗಳು ದೇಶಾದ್ಯಂತ ಮುಷ್ಕರಕ್ಕೆ ತಮ್ಮ ಬೆಂಬಲವನ್ನು ಘೋಷಿಸಿವೆ.

ಇದನ್ನೂ ಓದಿ: ದೆಹಲಿ ಚಲೋ: ರೈತ ಹೋರಾಟಕ್ಕೆ ಇಂಗ್ಲೇಂಡ್‌‌‌‌ನ 36 ಸಂಸದರ ಬೆಂಬಲ

ಭಾರತ್ ಬಂದ್ ಕರೆಯ ಭಾಗವಾಗಿ, ರೈತರು ದೆಹಲಿಗೆ ಹೋಗುವ ಎಲ್ಲಾ ರಸ್ತೆಗಳನ್ನು ನಿರ್ಬಂಧಿಸಲು ಸಿದ್ಧರಾಗಿದ್ದಾರೆ. ಟೋಲ್ ಪ್ಲಾಜಾಗಳನ್ನು ಸಹ ಆಕ್ರಮಿಸಲಾಗುವುದು ಮತ್ತು ಕೇಂದ್ರ ಸರ್ಕಾರ ಮತ್ತು ಕಾರ್ಪೊರೇಟ್ ಸಂಸ್ಥೆಗಳ ವಿರುದ್ಧ ಪ್ರತಿಭಟನೆಗಳು ತೀವ್ರಗೊಳ್ಳಲಿದೆ.

ಎಡ ಪಕ್ಷಗಳು ಭಾರತ್ ಬಂದ್‌ಗಾಗಿ ರೈತರ ಕರೆಗೆ ತಮ್ಮ ಬೆಂಬಲವನ್ನು ಸೂಚಿಸಿದ್ದು, ರೈತರಿಗೆ ಸಹಕಾರ ನೀಡಿ ಪ್ರತಿಭಟನೆಗೆ ಬೆಂಬಲ ತೋರಿಸುವಂತೆ ಇತರ ಎಲ್ಲ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದೆ. ಸಿಪಿಐ, ಸಿಪಿಐ (ಎಂ) ಮತ್ತು ಸಿಪಿಎಂ (ಎಂಎಲ್), ಕ್ರಾಂತಿಕಾರಿ ಸಮಾಜವಾದಿ ಪಕ್ಷ ಮತ್ತು ಅಖಿಲ ಭಾರತ ಫಾರ್ವರ್ಡ್ ಬ್ಲಾಕ್ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಭಾರತೀಯ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC), ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (AITUC), ಹಿಂದ್ ಮಜ್ದೂರ್ ಸಭಾ (HMS), ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಅಖಿಲ ಭಾರತ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (AIUTUC)  ಮತ್ತು ಟ್ರೇಡ್ ಯೂನಿಯನ್ ಕೋ- ಆರ್ಡಿನೇಷನ್ ಸೆಂಟರ್ (TUCC)  ಕಾರ್ಮಿಕ ಸಂಘಟನೆಗಳು ಸಹ ರೈತರ ಹೋರಾಟಕ್ಕೆ ತಮ್ಮ ಬೆಂಬಲವನ್ನು ನೀಡಿವೆ.

ಇದನ್ನೂ ಓದಿ: ಹೋರಾಟ ಹತ್ತಿಕ್ಕಲು ಸುಪ್ರೀಂಕೋರ್ಟ್‌ ಬಳಕೆ: ರೈತ ಸಂಘಟನೆಗಳ ಒಕ್ಕೂಟ ಖಂಡನೆ

ಬಿಹಾರದ ಗಾಂಧಿ ಮೈದಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ್ದಕ್ಕಾಗಿ ಪಾಟ್ನಾ ಪೊಲೀಸರು ಆರ್‌ಜೆಡಿ ಮುಖಂಡ ತೇಜಶ್ವಿ ಯಾದವ್ ಮತ್ತು ಇತರ 18 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ದೆಹಲಿ ಚಲೋ ಆಂದೋಲನಕ್ಕೆ ಒಗ್ಗಟ್ಟಾಗಿ ಪ್ರತಿಭಟನೆ ನಡೆಸಬೇಕೆಂದು ಬಿಹಾರ ವಿಧಾನಸಭೆ ಪ್ರತಿಪಕ್ಷದ ನಾಯಕ ತೇಜಶ್ವಿ ಯಾದವ್ ಕರೆ ನೀಡಿದ್ದರು.

ಆರ್‌ಜೆಡಿ, ಎಡ ಪಕ್ಷಗಳು ಮತ್ತು ಕಾಂಗ್ರೆಸ್ ಹಿರಿಯ ಮುಖಂಡರು ಶನಿವಾರ ಧರಣಿ ನಡೆಸಿದ್ದರು. ಧರಣಿ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿದೆ ಎಂದು ಎಫ್‌ಐಆರ್‌ ದಾಖಲಿಸಲಾಗಿದೆ.

ಪಶ್ಚಿಮ ಬಂಗಾಳ, ತಮಿಳುನಾಡು, ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ರೈತರ ಭಾರತ್ ಬಂದ್ ಬೆಂಬಲಿಸಿ ಪ್ರತಿಭಟನೆಗಳು ನಡೆಯಲಿವೆ. ಪ್ರತಿಭನಟನಾ ನಿರತ ರೈತ ಸಂಘಟನೆಗಳು, ಉತ್ತರ ಪ್ರದೇಶ ಮತ್ತು ಹರಿಯಾಣ ಗಡಿಯ ರೈತರಿಗೆ ತಮ್ಮೊಂದಿಗೆ ಸೇರಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಕಳೆದ 10 ದಿನಗಳಿಂದ, ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶವನ್ನು (ಎನ್‌ಸಿಆರ್) ಸಂಪರ್ಕಿಸುವ ರಸ್ತೆಗಳು, ದೆಹಲಿ ಗಡಿ ಭಾಗಗಳು ಪಂಜಾಬ್, ಹರಿಯಾಣ ಮತ್ತು ಇತರ ರಾಜ್ಯಗಳ ಸಾವಿರಾರು ರೈತರ ಪ್ರತಿಭಟನೆಗೆ ಸಾಕ್ಷಿಯಾಗಿದೆ.


ಇದನ್ನೂ ಓದಿ: ಅನ್ನ ನೀಡುವ ರೈತರೊಂದಿಗೆ ನಿಲ್ಲುವುದು ನಮ್ಮ ಕರ್ತವ್ಯ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...