Homeಚಳವಳಿಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ಭಾರತ್ ಬಂದ್‌ಗೆ, ಆರ್‌ಜೆಡಿ, ತೃಣಮೂಲ ಕಾಂಗ್ರೆಸ್ ಮತ್ತು ಎಡಪಕ್ಷಗಳು, ಟಿಆರ್‌ಎಸ್, 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಗಳು ಬೆಂಬಲವನ್ನು ಘೋಷಿಸಿವೆ.

- Advertisement -
- Advertisement -

ಪ್ರತಿಭಟನಾ ನಿತರ ರೈತರು ಮತ್ತು ಸರ್ಕಾರದ ನಡುವಿನ ಐದನೇ ಸುತ್ತಿನ ಮಾತುಕತೆ ಶನಿವಾರ  ವಿಫಲವಾಗಿದ್ದರಿಂದ, ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ರೈತರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ಡಿಸೆಂಬರ್ 8 ರ ಮಂಗಳವಾರ ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ.

ಕೃಷಿ ಮಸೂದೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಕೇಂದ್ರ ಸರ್ಕಾರ ಪದೇ ಪದೇ ಆಶ್ವಾಸನೆ ನೀಡಿದೆ. ಆದರೆ ಸಭೆಗಳು ವಿಫಲವಾಗುತ್ತಿರುವುದರಿಂದ, ಡಿಸೆಂಬರ್ 8 ಕ್ಕೆ ಘೋಷಿಸಲಾದ ಭಾರತ್ ಬಂದ್ ಯೋಜಿಸಿದಂತೆ ನಡೆಯಲಿದೆ ಎಂದು ಕೃಷಿ ಒಕ್ಕೂಟದ ಮುಖಂಡರು ಹೇಳಿದ್ದಾರೆ. ರೈತರ ಪ್ರತಿಭಟನೆಗೆ  ಬಿಜೆಪಿಯೇತರ ಸರ್ಕಾರಗಳು, ಎಡ ಸಂಘಟನೆಗಳು ಮತ್ತು ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿವೆ.

ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ 2020, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ 2020 ರ ರೈತ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ- 2020 ಇವುಗಳನ್ನು ವಿರೋಧಿಸಿ ರೈತರು ಕಳೆದ 11 ದಿನಗಳಿಂದಲೂ  ಪ್ರತಿಭಟಿಸುತ್ತಿದ್ದಾರೆ.

“ಸರ್ಕಾರವು ಕೃಷಿ ಕಾನೂನುಗಳ ಸಂಬಂಧ ಕರಡನ್ನು ಸಿದ್ಧಪಡಿಸಿ ನಮಗೆ ನೀಡುತ್ತದೆ. ಈ ಕುರಿತು ಕೇಂದ್ರ ಸರ್ಕಾರ ರಾಜ್ಯಗಳನ್ನೂ ಸಂಪರ್ಕಿಸುತ್ತಾರೆ ಎಂದು ತಿಳಿಸಿದ್ದಾರೆ. ಎಂಎಸ್‌ಪಿ ಬಗ್ಗೆಯೂ ಚರ್ಚೆಗಳು ನಡೆದವು. ಆದರೆ, ನಾವು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಕುರಿತು ಮಾತನಾಡಬೇಕು ಎಂದು ಹೇಳಿದ್ದೇವೆ. ಈ ಮೊದಲು ಘೋಷಿಸಿದಂತೆ ಭಾರತ್ ಬಂದ್ ನಡೆಯಲಿದೆ” ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಹೇಳಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ 8 ರ ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ ಹೋರಾಟನಿರತ ರೈತರು

ಸರ್ಕಾರದ ಜೊತೆ ಮಾತುಕತೆಯಿಂದ ಪ್ರಯೋಜನವಿಲ್ಲ. ಅವರು ಕಾಯ್ದೆಗಳನ್ನು ವಾಪಸ್ ಪಡೆಯಲು ಮುಂದಾಗುತ್ತಿಲ್ಲ. ಹಾಗಾಗಿ ಹೋರಾಟ ತೀವ್ರಗೊಳಿಸುವುದು ಅನಿವಾರ್ಯ. ಹಾಗಾಗಿ ಮಂಗಳವಾರ ಭಾರತ್ ಬಂದ್ ನಡೆಸಲಿದ್ದೇವೆ. ದೆಹಲಿಯ ಪ್ರತಿ ರಸ್ತೆಗಳನ್ನು, ಪ್ರತಿ ಟೋಲ್‌ಗಳನ್ನು ಬಂದ್ ಮಾಡುತ್ತೇವೆ ಎಂದು ರೈತರು ಘೋಷಿಸಿದ್ದರು.

ರೈತರ ಭಾರತ್ ಬಂದ್‌ಗೆ, ಕಾಂಗ್ರೆಸ್, ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ತೃಣಮೂಲ ಕಾಂಗ್ರೆಸ್ ಮತ್ತು ಎಡಪಕ್ಷಗಳು, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಗಳು ದೇಶಾದ್ಯಂತ ಮುಷ್ಕರಕ್ಕೆ ತಮ್ಮ ಬೆಂಬಲವನ್ನು ಘೋಷಿಸಿವೆ.

ಇದನ್ನೂ ಓದಿ: ದೆಹಲಿ ಚಲೋ: ರೈತ ಹೋರಾಟಕ್ಕೆ ಇಂಗ್ಲೇಂಡ್‌‌‌‌ನ 36 ಸಂಸದರ ಬೆಂಬಲ

ಭಾರತ್ ಬಂದ್ ಕರೆಯ ಭಾಗವಾಗಿ, ರೈತರು ದೆಹಲಿಗೆ ಹೋಗುವ ಎಲ್ಲಾ ರಸ್ತೆಗಳನ್ನು ನಿರ್ಬಂಧಿಸಲು ಸಿದ್ಧರಾಗಿದ್ದಾರೆ. ಟೋಲ್ ಪ್ಲಾಜಾಗಳನ್ನು ಸಹ ಆಕ್ರಮಿಸಲಾಗುವುದು ಮತ್ತು ಕೇಂದ್ರ ಸರ್ಕಾರ ಮತ್ತು ಕಾರ್ಪೊರೇಟ್ ಸಂಸ್ಥೆಗಳ ವಿರುದ್ಧ ಪ್ರತಿಭಟನೆಗಳು ತೀವ್ರಗೊಳ್ಳಲಿದೆ.

ಎಡ ಪಕ್ಷಗಳು ಭಾರತ್ ಬಂದ್‌ಗಾಗಿ ರೈತರ ಕರೆಗೆ ತಮ್ಮ ಬೆಂಬಲವನ್ನು ಸೂಚಿಸಿದ್ದು, ರೈತರಿಗೆ ಸಹಕಾರ ನೀಡಿ ಪ್ರತಿಭಟನೆಗೆ ಬೆಂಬಲ ತೋರಿಸುವಂತೆ ಇತರ ಎಲ್ಲ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದೆ. ಸಿಪಿಐ, ಸಿಪಿಐ (ಎಂ) ಮತ್ತು ಸಿಪಿಎಂ (ಎಂಎಲ್), ಕ್ರಾಂತಿಕಾರಿ ಸಮಾಜವಾದಿ ಪಕ್ಷ ಮತ್ತು ಅಖಿಲ ಭಾರತ ಫಾರ್ವರ್ಡ್ ಬ್ಲಾಕ್ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಭಾರತೀಯ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC), ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (AITUC), ಹಿಂದ್ ಮಜ್ದೂರ್ ಸಭಾ (HMS), ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಅಖಿಲ ಭಾರತ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (AIUTUC)  ಮತ್ತು ಟ್ರೇಡ್ ಯೂನಿಯನ್ ಕೋ- ಆರ್ಡಿನೇಷನ್ ಸೆಂಟರ್ (TUCC)  ಕಾರ್ಮಿಕ ಸಂಘಟನೆಗಳು ಸಹ ರೈತರ ಹೋರಾಟಕ್ಕೆ ತಮ್ಮ ಬೆಂಬಲವನ್ನು ನೀಡಿವೆ.

ಇದನ್ನೂ ಓದಿ: ಹೋರಾಟ ಹತ್ತಿಕ್ಕಲು ಸುಪ್ರೀಂಕೋರ್ಟ್‌ ಬಳಕೆ: ರೈತ ಸಂಘಟನೆಗಳ ಒಕ್ಕೂಟ ಖಂಡನೆ

ಬಿಹಾರದ ಗಾಂಧಿ ಮೈದಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ್ದಕ್ಕಾಗಿ ಪಾಟ್ನಾ ಪೊಲೀಸರು ಆರ್‌ಜೆಡಿ ಮುಖಂಡ ತೇಜಶ್ವಿ ಯಾದವ್ ಮತ್ತು ಇತರ 18 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ದೆಹಲಿ ಚಲೋ ಆಂದೋಲನಕ್ಕೆ ಒಗ್ಗಟ್ಟಾಗಿ ಪ್ರತಿಭಟನೆ ನಡೆಸಬೇಕೆಂದು ಬಿಹಾರ ವಿಧಾನಸಭೆ ಪ್ರತಿಪಕ್ಷದ ನಾಯಕ ತೇಜಶ್ವಿ ಯಾದವ್ ಕರೆ ನೀಡಿದ್ದರು.

ಆರ್‌ಜೆಡಿ, ಎಡ ಪಕ್ಷಗಳು ಮತ್ತು ಕಾಂಗ್ರೆಸ್ ಹಿರಿಯ ಮುಖಂಡರು ಶನಿವಾರ ಧರಣಿ ನಡೆಸಿದ್ದರು. ಧರಣಿ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿದೆ ಎಂದು ಎಫ್‌ಐಆರ್‌ ದಾಖಲಿಸಲಾಗಿದೆ.

ಪಶ್ಚಿಮ ಬಂಗಾಳ, ತಮಿಳುನಾಡು, ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ರೈತರ ಭಾರತ್ ಬಂದ್ ಬೆಂಬಲಿಸಿ ಪ್ರತಿಭಟನೆಗಳು ನಡೆಯಲಿವೆ. ಪ್ರತಿಭನಟನಾ ನಿರತ ರೈತ ಸಂಘಟನೆಗಳು, ಉತ್ತರ ಪ್ರದೇಶ ಮತ್ತು ಹರಿಯಾಣ ಗಡಿಯ ರೈತರಿಗೆ ತಮ್ಮೊಂದಿಗೆ ಸೇರಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಕಳೆದ 10 ದಿನಗಳಿಂದ, ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶವನ್ನು (ಎನ್‌ಸಿಆರ್) ಸಂಪರ್ಕಿಸುವ ರಸ್ತೆಗಳು, ದೆಹಲಿ ಗಡಿ ಭಾಗಗಳು ಪಂಜಾಬ್, ಹರಿಯಾಣ ಮತ್ತು ಇತರ ರಾಜ್ಯಗಳ ಸಾವಿರಾರು ರೈತರ ಪ್ರತಿಭಟನೆಗೆ ಸಾಕ್ಷಿಯಾಗಿದೆ.


ಇದನ್ನೂ ಓದಿ: ಅನ್ನ ನೀಡುವ ರೈತರೊಂದಿಗೆ ನಿಲ್ಲುವುದು ನಮ್ಮ ಕರ್ತವ್ಯ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...