Homeಮುಖಪುಟಕಾಲದ ಕನ್ನಡಿ.. ದೇಶದ ಪರಿಸ್ಥಿತಿಯ ಒಂದು ಗಂಭೀರ ಅವಲೋಕನ.

ಕಾಲದ ಕನ್ನಡಿ.. ದೇಶದ ಪರಿಸ್ಥಿತಿಯ ಒಂದು ಗಂಭೀರ ಅವಲೋಕನ.

- Advertisement -
- Advertisement -

| ಸುರೇಶ್ ಕಂಜರ್ಪಣೆ |

ಡಬ್ಲ್ಯೂ.ಬಿ. ಯೇಟ್ಸ್ ತನ್ನ ಸುವಿಖ್ಯಾತ ದಿ ಸೆಕೆಂಡ್ ಕಮಿಂಗ್ ಕವನದಲ್ಲಿ ಡೇಗೆಯೊಂದು ಕೇಂದ್ರವೊಂದರ ಸುತ್ತ ವೃತ್ತಾಕಾರವಾಗಿ ವಿಸ್ತರಿಸುತ್ತಾ ಹಾರುವ ಚಿತ್ರ ಕೊಡುತ್ತಾನೆ. ಡೇಗೆ ಒಂದು ಕೇಂದ್ರದ ಸುತ್ತ ಸುತ್ತುತ್ತಾ ವಿಸ್ತರಿಸುತ್ತಾ ಹಾರುತ್ತದೆ. ಆದರೆ ಯಾವುದೋ ಒಂದು ಕ್ಷಣ ವೃತ್ತದ ಹೊರ ಅಂಚಿನ ಬಿಂದುವನ್ನೇ ಕೇಂದ್ರವೆಂದು ಬಗೆದು, ಈಗ ಹೊಸ ಕೇಂದ್ರದ ಸುತ್ತ ತಿರುಗುತ್ತದೆ. ಅರ್ಥಾತ್ ಮೂಲ ಕೇಂದ್ರದಿಂದ ಬಲು ದೂರ ಸಾಗಿರುತ್ತದೆ. ಈ ಸುತ್ತುವ ಕ್ರಿಯೆಯಲ್ಲಿ ಅದು ಆಗಾಗ್ಗೆ ಹಳೇ ವೃತ್ತದ ಭಾಗವನ್ನು ದಾಟುವ ಕಾರಣ ಒಂದು ಗೊಂದಲ ಇರುತ್ತದೆ. ಕೇಂದ್ರಕ್ಕೆ ಹಿಡಿಯುವ ಶಕ್ತಿ ಇಲ್ಲ. ಅದರ ಗುರುತ್ವಾಕರ್ಷಣೆ ಶಕ್ತಿಯಿಂದ ವಸ್ತುಗಳು ಕಳಚಿ ಚೆಲ್ಲಾಪಿಲ್ಲಿ ಉದುರುತ್ತವೆ ಎಂದು ಯೇಟ್ಸ್ ವಿಷಾದದಲ್ಲಿ ಹೇಳುತ್ತಾನೆ . ಅಚಿಬೆ ತನ್ನ ಜಗತ್ಪ್ರಸಿದ್ಧ ಕಾಂದಂಬರಿಗೆ ಇದೇ ಹೆಸರು ಕೊಡುತ್ತಾನೆ. (“ಥಿಂಗ್ಸ್ ಫಾಲ್ ಅಪಾರ್ಟ್”).
ಭಾಜಪದಲ್ಲಿ ನಿರ್ಗಮಿಸಿದ ನಾಯಕರನ್ನು ಕಂಡಾಗ ಇದು ನೆನಪಾಯಿತು. ಅನಂತಕುಮಾರ್ ಮತ್ತು ಪರಿಕರ್ ಭೌತಿಕವಾಗಿ ನಿರ್ಗಮಿಸಿದರೆ, ಅನಾದಿ ಕಾಲದ ನಾಯಕರಾದ ಅದ್ವಾನಿ ಮತ್ತು ಮುರಳಿ ಮನೋಹರ ಜೋಡಿ ಸಾಂಕೇತಿಕವಾಗಿ ನಿರ್ಗಮಿಸಿದ್ದಾರೆ.
ಹಿರಿಯಬ್ಬರು, ಮತ್ತು ಅವರ ಶಿಷ್ಯರಿಬ್ಬರು ಭಾಜಪದ ಕಳಚಿದ ಕೊಂಡಿಯ ಸಂಕೇತವಾಗಿದ್ದಾರೆ. ಸಾಂವಿಧಾನಿಕ ಭಾಷೆ, ಶಿಷ್ಟಾಚಾರ, ತಮಗೊಂದು ಸೈದ್ಧಾಂತಿಕ ಭೂಮಿಕೆ ಇದೆ ಎಂಬಂಥಾ ವಾದ- ಇವೆಲ್ಲಾ ಇವರಲ್ಲಿತ್ತು. ಮುರಳಿಮನೋಹರ ಜೋಷಿ ಭೌತಶಾಸ್ತ್ರದ ಪ್ರಾಧ್ಯಾಪಕ. ಕಲಿತ ಶಾಸ್ತ್ರದ ವೈಜ್ಞಾನಿಕತೆ ಅಂತರ್ಗತವಾಗಲಿಲ್ಲ ಎಂಬುದರ ಪುರಾವೆಯಾಗಿ ಉಳಿದರು. ಕಾಕತಾಳೀಯವಾಗಿ ಪರಿಕರ್ ಕೂಡಾ ಐಐಟಿಯಲ್ಲಿ ಓದಿಯೂ ಹಿಂದುತ್ವವನ್ನು ಅಪ್ಪಿಕೊಂಡರು. ಆಧುನಿಕ ಸಮಾಜಶಾಸ್ತ್ರೀಯ ವಿವರಗಳು ಅವರೊಳಗೆ ಇಳಿಯಲಿಲ್ಲ. ಇದು ಕಾಕತಾಳೀಯ ಅಲ್ಲ. ಆದರೆ ನಮ್ಮ ಸಂವಿಧಾನದ ಆಶಯಗಳು ಎಷ್ಟು ಘನವಾಗಿತ್ತೆಂದರೆ ಇವರಿಗೆ ಅದನ್ನು ಗೌರವಿಸದೇ ಔಪಚಾರಿಕ ಮನ್ನಣೆ ಸಾಧ್ಯವಿಲ್ಲ ಎಂಬ ಪ್ರಜ್ಞೆ ಇತ್ತು.
ಈಗ ಹೊಸ ಕೇಂದ್ರದ ಸುತ್ತ ಡೇಗೆ ಸುತ್ತತೊಡಗಿದೆ. ಕೇಂದ್ರ ಹಳೆಯದೇ ಎಂದು ಅದು ನಂಬಿಸಲು ನೋಡುತ್ತಿದೆ.ಮೋದಿ ಮತ್ತು ಶಾ ಜೋಡಿ ಭಾಜಪವನ್ನು ದೇಶದ ಸಾಂವಿಧಾನಿಕ ನೈತಿಕ ಕೇಂದ್ರದ ಸೆಳವಿಂದ ಬಲು ದೂರ ಒಯ್ಯುತ್ತಿದ್ದಾರೆ. ವಿಸ್ತಾರಗೊಳ್ಳುವ ಭ್ರಮಾತ್ಮಕ ಚಲನೆಯಲ್ಲಿ ಇದಕ್ಕೆ ಹಿಡಿದಿಟ್ಟುಕೊಳ್ಳುವ ಗುರುತ್ವ ಕೇಂದ್ರವೂ ಇಲ್ಲದೇ, ಕ್ರಮೇಣ ಇದೊಂದು ಅರಾಜಕ ಬಿಡಿಭಾಗಗಳ ಮೂಟೆಯಾಗಬಲ್ಲುದು.
ಒಂದಷ್ಟು ಜನ ಮೋದಿ Generationನ ನಾಯಕರ ಮಾತು ಕೇಳಿದರೆ ಅವರ್ಯಾರಿಗೂ ಈ ದೇಶದ ವೈವಿಧ್ಯತೆ, ಸಮಸ್ಯೆಗಳ ಸಂಕೀರ್ಣತೆ, ಸಾಮಾಜಿಕ ಅಸಮತೋಲನದ ಬಗ್ಗೆ ಅರಿವಿದ್ದಂತೆ ಕಾಣುತ್ತಿಲ್ಲ. ಬಿಡಿಬಿಡಿಯಾಗಿ ಗೆದ್ದು ಅಧಿಕಾರ ಬಲಪಡಿಸುವ ವಾಂಛೆಯಿಂದಾಚೆ ಇವರ ದೃಷ್ಟಿ ಚಾಚಿದಂತೆ ಕಾಣುತ್ತಿಲ್ಲ.

ಕಾಂಗ್ರೆಸ್ಸಿನ ಕಥೆಯೂ ಇದೇ. ಆದರೆ ಅದು ಹೆಚ್ಚು ನಿರ್ವೀರ್ಯ ಚಲನೆಯಲ್ಲಿ ಸುತ್ತುತ್ತಿದೆ. ಅದರ ಮೂಲ ಕೇಂದ್ರವಾದ ಸೆಕ್ಯುಲರ್ – ಸಮಪಾಲಿನ ಸಮಾಜದ ಸುತ್ತ ಸುತ್ತುತ್ತಿದ್ದೇನೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ಇದೆ. ಆದರೆ ಅದರ ಹೊಸ ಕೇಂದ್ರ ಮೂಲ ಕೇಂದ್ರದ ಅಂಚಿನ ಕ್ಷುಲ್ಲಕ ಬಿಂದು ಅಷ್ಟೇ.
ಈ ಕೇಂದ್ರದ ಸುತ್ತ ಅದು ಈಗಾಗಲೇ ಪಡಪೋಶಿಯಾದ ನುಡಿಕಟ್ಟು, ಹೇಳಿಕೆಗಳನ್ನು ಮುಂದಿಡುತ್ತಾ ಭಾಜಪಕ್ಕೆ ಪರ್ಯಾಯ ಎಂಬಂತೆ ನಟಿಸುತ್ತಿದೆ. ಭಾಜಪವನ್ನು ತಡವಿ ನಿಲ್ಲಿಸುವ ಶಕ್ತಿಯೇ ಅದಕ್ಕಿಲ್ಲ. ಅದಕ್ಕೆ ಕಾರಣ ಭಾಜಪ ಅಲ್ಲ.
ಕ್ರಿಯೆಯ ಮೂಲಕ ಶಕ್ತಿ ತುಂಬಿದರಷ್ಟೇ ತನ್ನ ನುಡಿಕಟ್ಟಗಳು, ವಾಕ್ಕುಗಳಿಗೆ ಪ್ರಭೆ ಎಂಬುದನ್ನು ಕಾಂಗ್ರೆಸ್ ಮರೆತಿದೆ. ಸ್ಥಳೀಯವಾಗಿ ಬಡ ಜಾತಿಗಳು, ಪ್ರದೇಶಗಳು ತನ್ನಿಂದ ಯಾಕೆ ದೂರವಾಗಿವೆ ಎಂಬುದು ಅದಕ್ಕೆ ಅರ್ಥವೇ ಆಗಿಲ್ಲ. ಬದಲಾದ ಕಾಲ ಸಂದರ್ಭದ ಹೊಸ ತಲೆಮಾರಿಗೆ ಹೊಸ ಮಾಹಿತಿ ಮೂಲಗಳಿಂದ ದೊರಕುವ ವಿವರಗಳು ಏನೆಂದು ಅದಕ್ಕೆ ಅರ್ಥವಾಗಿಲ್ಲ.
ಚುನಾವಣಾ ಗೆಲುವೊಂದೇ ಕಾಂಗ್ರೆಸ್ಸನ್ನೂ ಮಬ್ಬುಗೊಳಿಸಿದೆ. ಒಂದರೆ ಕ್ಷಣ ನಿಂತು, ಹೌದಲ್ಲಾ ಭ್ರಷ್ಟಾಚಾರದ ಬಗ್ಗೆ ಜನಕ್ಕೆ ಹೇವರಿಕೆ ಇದೆ ಎಂದು ಕಾಂಗ್ರೆಸ್ಸಿಗೆ ಅನ್ನಿಸಿದ್ದರೆ ಕಾರ್ತಿಯಂಥಾ ಕ್ಯಾರೆಕ್ಟರ್‍ಗೆ ಸೀಟು ಕೊಡುತ್ತಿರಲಿಲ್ಲ. ಮೋದಿಯ ಒರಟು ಶಕ್ತಿ ಪ್ರದರ್ಶನದ ವಿರುದ್ಧ ಮೊದಲು ದನಿ ಎತ್ತಿದ ಕನ್ನಯ್ಯನನ್ನು ದೂರ ಇಡುತ್ತಿರಲಿಲ್ಲ.

ಮಾಯಾ ಬಜಾರ್ ಸಿನೆಮಾದಲ್ಲಿ ಕನ್ನಡಿ ದೃಶ್ಯವೊಂದಿದೆ. ಮಾಯಾ ಕನ್ನಡಿ ಅದು. ಇಲ್ಲಿ ಇಣುಕಿದಾಗ ಕೃಷ್ಣನಿಗೆ ಶಕುನಿ ಕಾಣಿಸುತ್ತಾನೆ. ಅರ್ಥಾತ್, ಕೃಷ್ಣ ತಾನು ಜಗದೋದ್ಧಾರಕ ಎಂದುಕೊಂಡು ಕನ್ನಡಿ ನೋಡಿದರೆ ಕಾಣಿಸುವುದು ಷಡ್ಯಂತ್ರ ನಿಪುಣ ಶಕುನಿ. ಅಂದರೆ ಲೋಕೋದ್ಧಾರದ ಮಾರಲ್ ಫೈಬರ್ ಮಾಸಿ ಯುದ್ಧ ಕಾಲಕ್ಕೆ ಷಡ್ಯಂತ್ರದ ಬುದ್ಧಿಯಷ್ಟೇ ಉಳಿದಿರುವ ಕೃಷ್ಣ.
ಮತ್ತೆ ಮೋದಿಗೆ ಮರಳುವುದಾದರೆ, ತಾನೊಬ್ಬ ದೇಶೋದ್ಧಾರಕ ಎಂದು ಭಾವಿಸಿ ಮೋದಿ ಕನ್ನಡಿ ನೋಡಿದರೆ ಅಲ್ಲಿ ಕುಯುಕ್ತಿಯ ಷಡ್ಯಂತ್ರದ ದುಷ್ಟ ಮಾತ್ರಾ ಕಾಣಿಸುತ್ತಾನೆ.
ಕಾಂಗ್ರೆಸ್ಸಿಗೆ ಈ ದುಷ್ಟತನವೂ ಇಲ್ಲ. ಅದೀಗ ಹೊಟ್ಟೆ ಹೊರೆವ ಭೀತ ಹೆಜ್ಜೆಯ ಕತ್ತೆ ಕಿರುಬನಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...