Homeಮುಖಪುಟಅಯೋಧ್ಯೆ: ಮಸೀದಿ ಧ್ವಂಸದ ಅಂಗವಾಗಿ ಶೌರ್ಯ ದಿನದ ಆಚರಣೆ ಇಲ್ಲ

ಅಯೋಧ್ಯೆ: ಮಸೀದಿ ಧ್ವಂಸದ ಅಂಗವಾಗಿ ಶೌರ್ಯ ದಿನದ ಆಚರಣೆ ಇಲ್ಲ

ಸುಪ್ರೀಂ ಕೋರ್ಟ್ ರಾಮ ಮಂದಿರ ಪರವಾಗಿ ತೀರ್ಪು ನೀಡಿರುವಾ‌ಗ, ಶೌರ್ಯ ದಿವಾಸ್ ಆಚರಿಸುವುದರಲ್ಲಿ ಯಾವುದೇ ಅರ್ಥವಿಲ್ಲ - ವಿಎಚ್‌ಪಿ

- Advertisement -
- Advertisement -

ಅಯೋಧ್ಯೆಯಲ್ಲಿ ಡಿಸೆಂಬರ್‌ 6ನ್ನು ಬಾಬ್ರಿ ಮಸೀದಿ ಧ್ವಂಸದ ದಿನದ ನೆನಪಿನಲ್ಲಿ ಪ್ರತಿವರ್ಷ ಕೆಲ ಹಿಂದೂ ಸಂಘಟನೆಗಳು ಆಚರಿಸುತ್ತಿದ್ದ ಶೌರ್ಯ ದಿನವನ್ನು ಈ ವರ್ಷ ಆಚರಿಸಿಲ್ಲ. ಇತ್ತೀಚೆಗೆ ಈ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ಮತ್ತು ಆ ಜಾಗದಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವುದು ಇದಕ್ಕೆ ಕಾರಣ ಎನ್ನಲಾಗುತ್ತಿದೆ. 1992ರಲ್ಲಿ ಬಾಬ್ರಿ ಮಸೀದಿಯನ್ನು ಕರ ಸೇವಕರು ಧ್ವಂಸಗಳಿಸಿದ್ದರು.

ಹಿಂದೂಗಳ ಶೌರ್ಯ ದಿನ ಆಚರಣೆಗೆ ಪ್ರತಿಯಾಗಿ ಅಯೋಧ್ಯೆಯ ಮುಸ್ಲಿಮರು ಕಪ್ಪು ಧ್ವಜಗಳನ್ನು ಪ್ರದರ್ಶಿಸುವ ಮೂಲಕ ಮಸೀದಿ ಧ್ವಂಸ ದಿನ (ದುಃಖದ ದಿನ) ಎಂದು ಆಚರಿಸುತ್ತಿದ್ದರು. ಆದರೆ ಈ ಬಾರಿ ಆ ಆಚರಣೆ ಕೂಡ ನಡೆಸುತ್ತಿಲ್ಲ.

ಶ್ರೀ ರಾಮ್ ಜನ್ಮಭೂಮಿ ತೀರ್ತ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಾಗಿರುವ ಮಹಂತ್ ನರ್ತ್ಯ ಗೋಪಾಲ್ ದಾಸ್ ಅವರ ಉತ್ತರಾಧಿಕಾರಿ ಮಹಂತ್ ಕಮಲ್ ನಯನ್ ದಾಸ್ ಭಾನುವಾರ “ಶೌರ್ಯ ದಿವಾಸ್” ಆಚರಿಸದಂತೆ ಹಿಂದೂಗಳಿಗೆ ಮನವಿ ಮಾಡಿದ್ದಾರೆ. ಈಗಾಗಲೇ ಅಯೋಧ್ಯೆಯಲ್ಲಿ ರಾಮಮಂದಿರಕ್ಕಾಗಿ ಭೂಮಿ ಪೂಜೆಯು ನೆರವೇರಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್ ನಿರ್ದೇಶನವನ್ನೇ ಮೀರಿದ ಸಿಬಿಐ ನ್ಯಾಯಾಲಯದ ಬಾಬ್ರಿ ತೀರ್ಪು

“ಸುಪ್ರೀಂ ಕೋರ್ಟ್ ರಾಮ ಮಂದಿರ ಪರವಾಗಿ ತೀರ್ಪು ನೀಡಿರುವಾ‌ಗ, ಶೌರ್ಯ ದಿವಾಸ್ ಆಚರಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಈಗ, ರಾಮ್ ಮಂದಿರದ ಭೂಮಿ ಪೂಜೆ ಸಹ ನಡೆದಿದೆ ಮತ್ತು ರಾಮ್ ಮಂದಿರದ ಅಡಿಪಾಯದ ಕೆಲಸಗಳು ನಡೆಯುತ್ತಿವೆ ”ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಯ ಪ್ರಾದೇಶಿಕ ವಕ್ತಾರ ಶರದ್ ಶರ್ಮಾ ಹೇಳಿದ್ದಾರೆ.

“ಆದ್ದರಿಂದ, ಹಿಂದೂಗಳು ಮತ್ತು ಮುಸ್ಲಿಮರು ಇಬ್ಬರೂ ಎಲ್ಲವನ್ನು ಮರೆತು ಮುಂದುವರಿಯಬೇಕು” ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಮಸೀದಿ ಧ್ವಂಸ ದಿನವನ್ನು ಆಚರಿಸಲು ರಾಮ್ ಮಂದಿರ-ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ದಾವೆ ಹೂಡುವವರಲ್ಲಿ ಒಬ್ಬರಾದ ಹಾಜಿ ಮೆಹಬೂಬ್ ಅವರ ನಿವಾಸದಲ್ಲಿ ಒಂದು ದೊಡ್ಡ ಸಭೆ ಸೇರುತ್ತಿದ್ದರು. ಆದರೆ ಈ ಬಾರಿ ಯಾವುದೇ ಸಾಂಕೇತಿಕ ಪ್ರತಿಭಟನೆಗಳು ಕೂಡ ಅಯೋಧ್ಯೆಯಲ್ಲಿ ನಡೆದಿಲ್ಲ.

ಮತ್ತೊಂದೆಡೆ, ವಿಎಚ್‌ಪಿ ನೇತೃತ್ವದ ಸಂಸ್ಥೆಗಳು ಈ ದಿನವನ್ನು ಶೌರ್ಯ ದಿನ ಎಂದು ಆಚರಿಸುತ್ತಿದ್ದವು. ಆದರೆ, ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆ ವಹಿಸಿದ್ದ ರಾಮ್ ಮಂದಿರದ ಭೂಮಿ ಪೂಜೆ ನಂತರ ಅದು ನಿಂತಿದೆ.

ಇದನ್ನೂ ಓದಿ: ಕಾಶ್ಶೀರ ರಾಜ್ಯ ನೆಲಸಮ ಮಾಡಿದ ವಾರ್ಷಿಕ ದಿನವೇ ಬಾಬ್ರಿ ಮಸೀದಿ ನೆಲಸಮವಾದ ಸ್ಥಳದಲ್ಲಿ ಮಂದಿರ ಶಿಲಾನ್ಯಾಸ ಕಾಕತಾಳೀಯವೆ?

“ಈ ವರ್ಷ ದುಖಃದ ದಿನ ಇರುವುದಿಲ್ಲ. ಯಾವುದೇ ಕಪ್ಪು ಧ್ವಜಗಳನ್ನು ಹಾರಿಸಲಾಗುವುದಿಲ್ಲ ಮತ್ತು ಮುಸ್ಲಿಮರು ಡಿಸೆಂಬರ್ 6 ರಂದು ತಮ್ಮ ಅಂಗಡಿಗಳನ್ನು ತೆರೆಯುತ್ತಾರೆ ”ಎಂದು ಹಾಜಿ ಮೆಹಬೂಬ್ ಹೇಳಿದರು. “ಡಿಸೆಂಬರ್ 6, 1992 ರಂದು ಹಿಂಸಾಚಾರದಲ್ಲಿ ಬಲಿಯಾದವರಿಗೆ ಟೆಡಿ ಬಜಾರ್ ಮಸೀದಿಯಲ್ಲಿ ಕುರಾನ್ ಪಠಣ ಮಾತ್ರ ನಡೆಯಲಿದೆ” ಎಂದು ತಿಳಿಸಿದ್ದಾರೆ.

“ನಾವು ಹಿಂದಿನದನ್ನು ಮರೆತು ಮುಂದೆ ಸಾಗಲು ನಿರ್ಧರಿಸಿದ್ದೇವೆ ಮತ್ತು ಉತ್ತಮ ಭವಿಷ್ಯಕ್ಕಾಗಿ ಭೂತಕಾಲವನ್ನು ಮರೆಯಲು ದೇಶದಾದ್ಯಂತದ ಮುಸ್ಲಿಂ ಸಮುದಾಯಕ್ಕೆ ಸಂದೇಶವನ್ನು ತಲುಪಿಸಲು ನಿರ್ಧರಿಸಿದ್ದೇವೆ” ಎಂದು ಮೆಹಬೂಬ್ ಹೇಳಿದ್ದಾರೆ.

ಕಳೆದ ವರ್ಷ ನವೆಂಬರ್ 9 ರಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ದಶಕಗಳ ಹಳೆಯ ರಾಮ್ ಮಂದಿರ-ಬಾಬರಿ ಮಸೀದಿ ಪ್ರಕರಣವನ್ನು ರಾಮ್ ಮಂದಿರದ ಪರವಾಗಿ ತೀರ್ಪು ನೀಡುವ ಮೂಲಕ ಕೊನೆಗೊಳಿಸಿತು.

ಮತ್ತೆ, ಡಿಸೆಂಬರ್ 6, 1992ರಂದು ಬಾಬ್ರಿ ಮಸೀದಿಯ ಧ್ವಂಸಕ್ಕೆ ಕಾರಣವಾದ ಕ್ರಿಮಿನಲ್ ಸಂಚು ಹೂಡಿದ ಆರೋಪ ಹೊತ್ತಿದ್ದ ಎಲ್ಲಾ 32 ಮಂದಿಯನ್ನು ಸಿಬಿಐ ವಿಶೇಷ ನ್ಯಾಯಾಲಯವು ಆರೋಪ ಮುಕ್ತಗೊಳಿಸಿತು.


ಇದನ್ನೂ ಓದಿ: ಬಾಬ್ರಿ ಮಸೀದಿ ಕೆಡವುದರ ಹಿಂದೆ ಯಾರ ಸಂಚು ಇಲ್ಲ ಎಂಬ ತೀರ್ಮಾನಕ್ಕೆ ನ್ಯಾಯಾಧೀಶರು ಕೊಟ್ಟ10 ಕಾರಣಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...