Homeಅಂತರಾಷ್ಟ್ರೀಯಭಾರತದ ರೈತರ ಬೆಂಬಲಕ್ಕೆ ನಿಂತ ಸಿಖ್-ಅಮೆರಿಕನ್ನರಿಂದ ಪ್ರತಿಭಟನಾ ರ್‍ಯಾಲಿ

ಭಾರತದ ರೈತರ ಬೆಂಬಲಕ್ಕೆ ನಿಂತ ಸಿಖ್-ಅಮೆರಿಕನ್ನರಿಂದ ಪ್ರತಿಭಟನಾ ರ್‍ಯಾಲಿ

ರೈತರಿಲ್ಲದೆ, ಆಹಾರವಿಲ್ಲ. ಕೃಷಿ ಇಲ್ಲದೆ, ಪಂಜಾಬ್‌ನಲ್ಲಿ ಲಕ್ಷಾಂತರ ಜನರಿಗೆ ಜೀವನೋಪಾಯವಿಲ್ಲ, ಅವರು ಹಲವು ಪೀಳಿಗೆಯಿಂದ ಆದಾಯದ ಮೂಲವಾಗಿ ಕೃಷಿಯನ್ನು ಅವಲಂಬಿಸಿದ್ದಾರೆ

- Advertisement -
- Advertisement -

ದೇಶದಲ್ಲಿ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ರೈತರನ್ನು ಬೆಂಬಲಿಸಿ ನೂರಾರು ಸಿಖ್-ಅಮೆರಿಕನ್ನರು ಅಮೆರಿಕದಾದ್ಯಂತ ಹಲವಾರು ನಗರಗಳಲ್ಲಿ ಶಾಂತಿಯುತ ಪ್ರತಿಭಟನಾ ರ್‍ಯಾಲಿಗಳನ್ನು ನಡೆಸಿದ್ದಾರೆ.

ಕ್ಯಾಲಿಫೋರ್ನಿಯಾದ ವಿವಿಧ ಭಾಗಗಳಿಂದ ಬಂದಿದ್ದ ಪ್ರತಿಭಟನಾಕಾರರ ದಂಡು ಬೇ ಸೇತುವೆ ಮೇಲೆ ಟ್ರಾಫಿಕ್ ಜಾಮ್‌ಗೆ ಕಾರಣವಾಗಿತ್ತು. ಪ್ರತಿಭಟನಾಕಾರರು ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ರಾಯಭಾರಿ ಕಚೇರಿ ಕಡೆಗೆ ಸಾಗುತ್ತಿದ್ದರು. ಇತ್ತ ನೂರಾರು ಜನರು ಡೌನ್‌ಟೌನ್ ಇಂಡಿಯಾನಾಪೊಲಿಸ್‌ನಲ್ಲಿ ಜಮಾಯಿಸಿದ್ದರು.

ಎರಡೂ ಸ್ಥಳಗಳಲ್ಲಿ ಪ್ರತಿಭಟನಾಕಾರರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿದರು. ಈ ಕಾನೂನುಗಳು ಭಾರತೀಯ ರೈತರನ್ನು ಬಡತನದತ್ತ ತಳ್ಳುತ್ತವೆ ಮತ್ತು ಕಾರ್ಪೊರೇಟ್ ಕ್ಷೇತ್ರಗಳಿಗೆ ಏಕಸ್ವಾಮ್ಯವನ್ನು ನೀಡುತ್ತದೆ ಎಂದು ವಾದಿಸಿದ್ದಾರೆ.

ಇದನ್ನೂ ಓದಿ: ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

“ರೈತರು ಯಾವುದೇ ರಾಷ್ಟ್ರದ ಆತ್ಮ. ನಾವು ನಮ್ಮ ಆತ್ಮವನ್ನು ರಕ್ಷಿಸಬೇಕು. ಯುಎಸ್ ಮತ್ತು ಕೆನಡಾದ ಅನೇಕ ನಗರಗಳು ಒಟ್ಟಾಗಿ ಭಾರತದ ಕೃಷಿ ಮಾರುಕಟ್ಟೆಯನ್ನು ಖಾಸಗಿ ವಲಯಕ್ಕೆ ತೆರೆಯುವ ಮಸೂದೆಗಳನ್ನು ವಾಪಸ್ ಪಡೆಯಲು ಒಗ್ಗೂಡಿದ್ದಾರೆ. ಇದರಿಂದ ಸ್ವತಂತ್ರ ಕೃಷಿ ಸಮುದಾಯಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗುತ್ತದೆ ಮತ್ತು ಬೆಳೆಗಳ ಮಾರುಕಟ್ಟೆ ಮೌಲ್ಯವನ್ನು ದುರ್ಬಲಗೊಳಿಸಲಾಗುತ್ತದೆ “ಎಂದು ಇಂಡಿಯಾನದ ದ ಗುರಿಂದರ್ ಸಿಂಗ್ ಖಲ್ಸಾ ಹೇಳಿದ್ದಾರೆ.

ಇಂಡಿಯಾನಾಪೊಲಿಸ್‌ನ ಡೌನ್‌ಟೌನ್‌ನಲ್ಲಿ ನಡೆದ ರ್‍ಯಾಲಿಯ ಸಂಘಟಕರಲ್ಲಿ ಖಲ್ಸಾ ಕೂಡ ಒಬ್ಬರು. ಪತ್ರತಿಭಟನೆಯಲ್ಲಿ ಇಂಡಿಯಾನಾದ ವಿವಿಧ ಭಾಗಗಳಿಂದ ಸುಮಾರು 500 ಸಿಖ್ ಅಮೆರಿಕನ್ನರು ಭಾಗವಹಿಸಿದ್ದರು.

ಶುಕ್ರವಾರ(ಡಿ.4) ರಂದು ಚಿಕಾಗೋದಲ್ಲಿ ಸಿಖ್-ಅಮೆರಿಕನ್ನರ ಸಭೆ ಮತ್ತು ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಮುಂದೆ ಪ್ರತಿಭಟನಾ ರ್‍ಯಾಲಿ ನಡೆದಿತ್ತು.

ಬೇ ಏರಿಯಾದಲ್ಲಿ ಭಾನುವಾರ ನಡೆದ ಪ್ರತಿಭಟನೆ, ನ್ಯೂಯಾರ್ಕ್, ಹೂಸ್ಟನ್, ಮಿಚಿಗನ್, ಚಿಕಾಗೊ ಮತ್ತು ವಾಷಿಂಗ್ಟನ್ ಡಿ.ಸಿ ಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳು ಒಗ್ಗಟ್ಟಿನ ಪ್ರದರ್ಶನವಾಗಿದೆ ಎಂದು ಸಂಘಟಕರು ಹೇಳಿದ್ದಾರೆ. ಏಕೆಂದರೆ ವಿಶ್ವದಾದ್ಯಂತ ನೆಲೆಸಿರುವ ಸಿಖ್ಖರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಒತ್ತಾಯಿಸುತ್ತಿದ್ದಾರೆ ಎಂದಿದ್ದಾರೆ.

“ರೈತರಿಲ್ಲದೆ, ಆಹಾರವಿಲ್ಲ. ಕೃಷಿ ಇಲ್ಲದೆ, ಪಂಜಾಬ್‌ನಲ್ಲಿ ಲಕ್ಷಾಂತರ ಜನರಿಗೆ ಜೀವನೋಪಾಯವಿಲ್ಲ, ಅವರು ಹಲವು ಪೀಳಿಗೆಯಿಂದ ಆದಾಯದ ಮೂಲವಾಗಿ ಕೃಷಿಯನ್ನು ಅವಲಂಬಿಸಿದ್ದಾರೆ ಎಂದಿದ್ದಾರೆ.

ಭಾರತದಲ್ಲಿ ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ರೈತರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ಡಿಸೆಂಬರ್ 8 ರ ಮಂಗಳವಾರ ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ.


ಇದನ್ನೂ ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...