Homeಮುಖಪುಟಮಹಾರಾಷ್ಟ್ರ: ಸಾರಿಗೆ ಕಂಡಕ್ಟರ್‌ಗಳ‌ ಸಮವಸ್ತ್ರದಲ್ಲಿ ಶೀಘ್ರ ಕ್ಯಾಮೆರಾ ಅಳವಡಿಕೆ ಏಕೆ?

ಮಹಾರಾಷ್ಟ್ರ: ಸಾರಿಗೆ ಕಂಡಕ್ಟರ್‌ಗಳ‌ ಸಮವಸ್ತ್ರದಲ್ಲಿ ಶೀಘ್ರ ಕ್ಯಾಮೆರಾ ಅಳವಡಿಕೆ ಏಕೆ?

ಕರ್ತವ್ಯದಲ್ಲಿ ನಿರತರಾಗಿದ್ದ ಮಹಿಳಾ ಕಂಟಕ್ಟರ್‌ಗಳ ಜೊತೆಗೆ ಕೆಲವು ಪ್ರಯಾಣಿಕರು ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ದೂರು ಸಲ್ಲಿಸಿಲಾಗಿತ್ತು.

- Advertisement -
- Advertisement -

ಮಹಾರಾಷ್ಟ್ರದ ಔರಂಗಾಬಾದ್ ನಗರದಲ್ಲಿ ಬಸ್ ಕಂಡಕ್ಟರ್‌ಗಳು ಮತ್ತು ಟಿಕೆಟ್ ಇನ್ಸ್‌ಪೆಕ್ಟರ್‌ಗಳು ಶೀಘ್ರದಲ್ಲೇ ತಮ್ಮ ಸಮವಸ್ತ್ರದಲ್ಲಿ ಕ್ಯಾಮೆರಾ ಹೊಂದಿಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಿಂದ ಪ್ರಯಾಣ ಸಮಯದಲ್ಲಿ ಪ್ರಯಾಣಿಕರ ವರ್ತನೆ ಮತ್ತು ಇತರ ಚಟುವಟಿಕೆಗಳ ಬಗ್ಗೆ ಗಮನ ಇರಿಸಲಾಗುತ್ತದೆ.

ಕೆಲವು ದಿನಗಳ ಹಿಂದೆ, ಕರ್ತವ್ಯದಲ್ಲಿ ನಿರತರಾಗಿದ್ದ ಮಹಿಳಾ ಕಂಡಕ್ಟರ್‌ಗಳ ಜೊತೆಗೆ ಕೆಲವು ಪ್ರಯಾಣಿಕರು ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆ ಸಮವಸ್ತ್ರದಲ್ಲಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಿದೆ.

ಕರ್ತವ್ಯದ ಸಮಯದಲ್ಲಿ ಸಾರಿಗೆ ವಾಹನಗಳಲ್ಲಿನ ಚಟುವಟಿಕೆಗಳನ್ನು ದಾಖಲಿಸಲು ಔರಂಗಾಬಾದ್‌ ಸ್ಮಾರ್ಟ್ ಸಿಟಿ ಡೆವಲಪ್‌ಮೆಂಟ್ ಕಾರ್ಪೊರೇಷನ್ (ASCDCL) ಕಂಡಕ್ಟರ್‌ಗಳು ಮತ್ತು ಇನ್ಸ್‌ಪೆಕ್ಟರ್‌ಗಳ ಶರ್ಟ್‌ಗಳ ಮುಂಭಾಗದ ಜೇಬು‌ಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದೆ ಎಂದು ಎಎಸ್‌ಸಿಡಿಸಿಎಲ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಜಯ- ಬಿಜೆಪಿಗೆ ಮುಖಭಂಗ

ಕ್ಯಾಮೆರಾಗಳು ಟಿಕೆಟ್‌ಗಳ ನೈಜ-ಸಮಯದ ಪರೀಕ್ಷೆಗೆ ಸಹಾಯ ಮಾಡುತ್ತದೆ ಮತ್ತು ಬಸ್‌ಗಳಲ್ಲಿನ ಇತರ ಚಟುವಟಿಕೆಗಳ ಮೇಲೆ ಕಣ್ಣಿಡಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ಎಎಸ್ಸಿಡಿಸಿಎಲ್ ಆಡಳಿತವು ಮಾಜಿ ಯೋಧರನ್ನು ಲೈನ್ ಇನ್‌ಸ್ಪೆಕ್ಟರ್‌ಗಳಾಗಿ ನಿಯೋಜಿಸಿದೆ, ಅವರು ಪ್ರಯಾಣಿಕರ ಟಿಕೆಟ್ ಪರಿಶೀಲನೆ ಮತ್ತು ಅವರ ನಡವಳಿಕೆಯನ್ನು ಪರಿಶೀಲಿಸುತ್ತಾರೆ. ಜೊತೆಗೆ ಪ್ರಯಾಣಿಕರ ಸುರಕ್ಷತೆ ಬಗ್ಗೆಯೂ ಕಾಳಜಿ ವಹಿಸಲಿದ್ದಾರೆ ಎಂದು ಅಧಿಕಾರಿ ಹೇಳಿದರು.

ASCDCL 100 ಬಸ್‌ಗಳನ್ನು ಹೊಂದಿದ್ದು, ಅದರಲ್ಲಿ 29 ಬಸ್‌ಗಳನ್ನು ಮಾತ್ರ ನಗರದಲ್ಲಿ ಕಾರ್ಯಾಚರಣೆಗೆ ಬಿಡಲಾಗಿದ್ದು, ನಗರದ 12 ಮಾರ್ಗಗಳಲ್ಲಿ ಸಂಚರಿಸುತ್ತಿವೆ. ಪ್ರತಿದಿನ ಸುಮಾರು 5,000 ಪ್ರಯಾಣಿಕರು ಸಾರಿಗೆ ಬಳಸುತ್ತಿದ್ದಾರೆ ಎಂದು ಎಎಸ್‌ಸಿಡಿಸಿಎಲ್ ಅಧಿಕಾರಿ ತಿಳಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರನ್ನು ಈ ಬಸ್‌ಗಳ ಚಾಲಕರು ಮತ್ತು ಕಂಡಕ್ಟರ್‌ಗಳಾಗಿ ನೇಮಿಸಲಾಗಿದೆ ಎಂದು ಅವರು ಹೇಳಿದರು. ಲಾಕ್‌ಡೌನ್ ಅವಧಿಯಲ್ಲಿ, ಈ ನಾಗರಿಕ-ಚಾಲಿತ ಬಸ್‌ಗಳನ್ನು ಕೊರೊನಾ ರೋಗಿಗಳನ್ನು ಕರೆದೊಯ್ಯಲು ಬಳಸಲಾಗುತ್ತಿತ್ತು.

ಕಳೆದ ತಿಂಗಳಿನಿಂದ ASCDCL ಸಾಮಾನ್ಯ ಪ್ರಯಾಣಿಕರಿಗಾಗಿ ತನ್ನ ಬಸ್ ಸೇವೆಗಳನ್ನು ಪುನರಾರಂಭಿಸಿದೆ. ಸ್ಮಾರ್ಟ್ ಸಿಟಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಔರಂಗಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ಎಎಸ್ಸಿಡಿಸಿಎಲ್ ಅನ್ನು ರಚಿಸಿದೆ. ಔರಂಗಾಬಾದ್ ಮುನ್ಸಿಪಲ್ ಕಮಿಷನರ್ ಆಸ್ತಿಕ್ ಕುಮಾರ್ ಪಾಂಡೆ ಎಎಸ್ಸಿಡಿಸಿಎಲ್ ಮುಖ್ಯಸ್ಥರಾಗಿದ್ದಾರೆ.


ಇದನ್ನೂ ಓದಿ: ಪ್ರತಿ ಕ್ವಿಂಟಲ್ ಭತ್ತಕ್ಕೆ ಹೆಚ್ಚುವರಿ 700 ರೂ. ನೀಡಲಿರುವ ಮಹಾರಾಷ್ಟ್ರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...