Homeಮುಖಪುಟಮಹಾರಾಷ್ಟ್ರ: ಸಾರಿಗೆ ಕಂಡಕ್ಟರ್‌ಗಳ‌ ಸಮವಸ್ತ್ರದಲ್ಲಿ ಶೀಘ್ರ ಕ್ಯಾಮೆರಾ ಅಳವಡಿಕೆ ಏಕೆ?

ಮಹಾರಾಷ್ಟ್ರ: ಸಾರಿಗೆ ಕಂಡಕ್ಟರ್‌ಗಳ‌ ಸಮವಸ್ತ್ರದಲ್ಲಿ ಶೀಘ್ರ ಕ್ಯಾಮೆರಾ ಅಳವಡಿಕೆ ಏಕೆ?

ಕರ್ತವ್ಯದಲ್ಲಿ ನಿರತರಾಗಿದ್ದ ಮಹಿಳಾ ಕಂಟಕ್ಟರ್‌ಗಳ ಜೊತೆಗೆ ಕೆಲವು ಪ್ರಯಾಣಿಕರು ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ದೂರು ಸಲ್ಲಿಸಿಲಾಗಿತ್ತು.

- Advertisement -
- Advertisement -

ಮಹಾರಾಷ್ಟ್ರದ ಔರಂಗಾಬಾದ್ ನಗರದಲ್ಲಿ ಬಸ್ ಕಂಡಕ್ಟರ್‌ಗಳು ಮತ್ತು ಟಿಕೆಟ್ ಇನ್ಸ್‌ಪೆಕ್ಟರ್‌ಗಳು ಶೀಘ್ರದಲ್ಲೇ ತಮ್ಮ ಸಮವಸ್ತ್ರದಲ್ಲಿ ಕ್ಯಾಮೆರಾ ಹೊಂದಿಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಿಂದ ಪ್ರಯಾಣ ಸಮಯದಲ್ಲಿ ಪ್ರಯಾಣಿಕರ ವರ್ತನೆ ಮತ್ತು ಇತರ ಚಟುವಟಿಕೆಗಳ ಬಗ್ಗೆ ಗಮನ ಇರಿಸಲಾಗುತ್ತದೆ.

ಕೆಲವು ದಿನಗಳ ಹಿಂದೆ, ಕರ್ತವ್ಯದಲ್ಲಿ ನಿರತರಾಗಿದ್ದ ಮಹಿಳಾ ಕಂಡಕ್ಟರ್‌ಗಳ ಜೊತೆಗೆ ಕೆಲವು ಪ್ರಯಾಣಿಕರು ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆ ಸಮವಸ್ತ್ರದಲ್ಲಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಿದೆ.

ಕರ್ತವ್ಯದ ಸಮಯದಲ್ಲಿ ಸಾರಿಗೆ ವಾಹನಗಳಲ್ಲಿನ ಚಟುವಟಿಕೆಗಳನ್ನು ದಾಖಲಿಸಲು ಔರಂಗಾಬಾದ್‌ ಸ್ಮಾರ್ಟ್ ಸಿಟಿ ಡೆವಲಪ್‌ಮೆಂಟ್ ಕಾರ್ಪೊರೇಷನ್ (ASCDCL) ಕಂಡಕ್ಟರ್‌ಗಳು ಮತ್ತು ಇನ್ಸ್‌ಪೆಕ್ಟರ್‌ಗಳ ಶರ್ಟ್‌ಗಳ ಮುಂಭಾಗದ ಜೇಬು‌ಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದೆ ಎಂದು ಎಎಸ್‌ಸಿಡಿಸಿಎಲ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಜಯ- ಬಿಜೆಪಿಗೆ ಮುಖಭಂಗ

ಕ್ಯಾಮೆರಾಗಳು ಟಿಕೆಟ್‌ಗಳ ನೈಜ-ಸಮಯದ ಪರೀಕ್ಷೆಗೆ ಸಹಾಯ ಮಾಡುತ್ತದೆ ಮತ್ತು ಬಸ್‌ಗಳಲ್ಲಿನ ಇತರ ಚಟುವಟಿಕೆಗಳ ಮೇಲೆ ಕಣ್ಣಿಡಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ಎಎಸ್ಸಿಡಿಸಿಎಲ್ ಆಡಳಿತವು ಮಾಜಿ ಯೋಧರನ್ನು ಲೈನ್ ಇನ್‌ಸ್ಪೆಕ್ಟರ್‌ಗಳಾಗಿ ನಿಯೋಜಿಸಿದೆ, ಅವರು ಪ್ರಯಾಣಿಕರ ಟಿಕೆಟ್ ಪರಿಶೀಲನೆ ಮತ್ತು ಅವರ ನಡವಳಿಕೆಯನ್ನು ಪರಿಶೀಲಿಸುತ್ತಾರೆ. ಜೊತೆಗೆ ಪ್ರಯಾಣಿಕರ ಸುರಕ್ಷತೆ ಬಗ್ಗೆಯೂ ಕಾಳಜಿ ವಹಿಸಲಿದ್ದಾರೆ ಎಂದು ಅಧಿಕಾರಿ ಹೇಳಿದರು.

ASCDCL 100 ಬಸ್‌ಗಳನ್ನು ಹೊಂದಿದ್ದು, ಅದರಲ್ಲಿ 29 ಬಸ್‌ಗಳನ್ನು ಮಾತ್ರ ನಗರದಲ್ಲಿ ಕಾರ್ಯಾಚರಣೆಗೆ ಬಿಡಲಾಗಿದ್ದು, ನಗರದ 12 ಮಾರ್ಗಗಳಲ್ಲಿ ಸಂಚರಿಸುತ್ತಿವೆ. ಪ್ರತಿದಿನ ಸುಮಾರು 5,000 ಪ್ರಯಾಣಿಕರು ಸಾರಿಗೆ ಬಳಸುತ್ತಿದ್ದಾರೆ ಎಂದು ಎಎಸ್‌ಸಿಡಿಸಿಎಲ್ ಅಧಿಕಾರಿ ತಿಳಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರನ್ನು ಈ ಬಸ್‌ಗಳ ಚಾಲಕರು ಮತ್ತು ಕಂಡಕ್ಟರ್‌ಗಳಾಗಿ ನೇಮಿಸಲಾಗಿದೆ ಎಂದು ಅವರು ಹೇಳಿದರು. ಲಾಕ್‌ಡೌನ್ ಅವಧಿಯಲ್ಲಿ, ಈ ನಾಗರಿಕ-ಚಾಲಿತ ಬಸ್‌ಗಳನ್ನು ಕೊರೊನಾ ರೋಗಿಗಳನ್ನು ಕರೆದೊಯ್ಯಲು ಬಳಸಲಾಗುತ್ತಿತ್ತು.

ಕಳೆದ ತಿಂಗಳಿನಿಂದ ASCDCL ಸಾಮಾನ್ಯ ಪ್ರಯಾಣಿಕರಿಗಾಗಿ ತನ್ನ ಬಸ್ ಸೇವೆಗಳನ್ನು ಪುನರಾರಂಭಿಸಿದೆ. ಸ್ಮಾರ್ಟ್ ಸಿಟಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಔರಂಗಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ಎಎಸ್ಸಿಡಿಸಿಎಲ್ ಅನ್ನು ರಚಿಸಿದೆ. ಔರಂಗಾಬಾದ್ ಮುನ್ಸಿಪಲ್ ಕಮಿಷನರ್ ಆಸ್ತಿಕ್ ಕುಮಾರ್ ಪಾಂಡೆ ಎಎಸ್ಸಿಡಿಸಿಎಲ್ ಮುಖ್ಯಸ್ಥರಾಗಿದ್ದಾರೆ.


ಇದನ್ನೂ ಓದಿ: ಪ್ರತಿ ಕ್ವಿಂಟಲ್ ಭತ್ತಕ್ಕೆ ಹೆಚ್ಚುವರಿ 700 ರೂ. ನೀಡಲಿರುವ ಮಹಾರಾಷ್ಟ್ರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...