Homeಮುಖಪುಟಎನ್‌ಡಿಎ ವಿರುದ್ಧ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವತ್ತ ಶಿರೋಮಣಿ ಅಕಾಲಿದಳ!

ಎನ್‌ಡಿಎ ವಿರುದ್ಧ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವತ್ತ ಶಿರೋಮಣಿ ಅಕಾಲಿದಳ!

’ದೇಶದ ರಾಜಕೀಯವನ್ನು "ಕೇಂದ್ರೀಕರಿಸುವ" ಪ್ರಯತ್ನಗಳ ವಿರುದ್ಧ ಪ್ರಾದೇಶಿಕ ಪಕ್ಷಗಳು ಒಂದಾಗುವ ಅವಶ್ಯಕತೆಯಿದೆ’- ಸಂಸದ ಪ್ರೇಮ್ ಸಿಂಗ್ ಚಂದುಮಾಜ್ರಾ

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದಿರುವ ಶಿರೋಮಣಿ ಅಕಾಲಿದಳ ಪ್ರಾದೇಶಿಕ ಪಕ್ಷಗಳ ಮುಖಂಡರ ಭೇಟಿಯನ್ನು ಮುಂದುವರೆಸಿದೆ. ಎನ್‌ಡಿಎ ವಿರುದ್ಧ ರಾಜಕೀಯ ಮೈತ್ರಿಕೂಟ ರಚಿಸುವ ಉದ್ದೇಶದಿಂದ ಅಕಾಲಿದಳದ ನಿಯೋಗ ಹಲವು ಪಕ್ಷಗಳನ್ನು ಸಂಪರ್ಕಿಸುತ್ತಿದೆ.

ತೃಣಮೂಲ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಿದ ನಂತರ ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜತೆಗೆ ಮಾತುಕತೆ ನಡೆಸಿದ್ದಾರೆ.

ರಾಜ್ಯಗಳ ಆದಾಯವನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿರುವ ಶಿರೋಮಣಿ ಅಕಾಲಿ ದಳದ ಸಂಸದ ಪ್ರೇಮ್ ಸಿಂಗ್ ಚಂದುಮಾಜ್ರಾ, ದೇಶದ ರಾಜಕೀಯವನ್ನು “ಕೇಂದ್ರೀಕರಿಸುವ” ಪ್ರಯತ್ನಗಳ ವಿರುದ್ಧ ಪ್ರಾದೇಶಿಕ ಪಕ್ಷಗಳು ಒಂದಾಗುವ ಅವಶ್ಯಕತೆಯಿದೆ ಎಂದು ಹೇಳಿದರು.

ಶಿಕ್ಷಣ, ಕೃಷಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕ್ಷೇತ್ರಗಳಲ್ಲಿ “ರಾಜ್ಯ ಸರ್ಕಾರಗಳ ಹಕ್ಕುಗಳಲ್ಲಿ” ಕೇಂದ್ರವು ಹಸ್ತಕ್ಷೇಪ ಮಾಡಿದೆ. ಈ ವಿಷಯವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡ ಒಪ್ಪುತ್ತಾರೆ ಎಂದು  ಸಂಸದ ಪ್ರೇಮ್ ಸಿಂಗ್ ಚಂದುಮಾಜ್ರಾ ಭಾನುವಾರ ಹೇಳಿದ್ದಾರೆ.

ಇದನ್ನೂ ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

ಸುದ್ದಿಗಾರರೊಂದಿಗೆ ಮಾತನಾಡಿದ ಚಂದುಮಾಜ್ರಾ,’ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರೈತರ ಪ್ರತಿಭಟನೆಯ ಬಗ್ಗೆ ಅಕಾಲಿ ದಳದ ನಿಲುವನ್ನು ಬೆಂಬಲಿಸಿದ್ದಾರೆ. ಎರಡು ವಾರಗಳ ನಂತರ ದೆಹಲಿಯಲ್ಲಿ ನಡೆಯಲಿರುವ ಸಭೆಗೂ ಬರುವುದಾಗಿ ಅವರು ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.

“ನಮ್ಮ ತಂತ್ರಗಾರಿಕೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ಸಲುವಾಗಿ ಮುಂದಿನ ವಾರ ದೆಹಲಿಯಲ್ಲಿ ಸಭೆ ಸೇರಲಿದ್ದೇವೆ. ಭವಿಷ್ಯದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ರಾಜಕೀಯ ಪಕ್ಷಗಳು ಸಭೆ ಸೇರುತ್ತಿವೆ. ದೆಹಲಿಯಲ್ಲಿ ನಡೆಯುವ ರಾಜಕೀಯ ಪಕ್ಷಗಳ ಸಭೆಯಲ್ಲಿ ಭಾಗವಹಿಸಲು ಠಾಕ್ರೆ ಒಪ್ಪಿಕೊಂಡಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಪರಿಷತ್ ಚುನಾವಣೆ: ದಶಕಗಳ ನಂತರ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಬಿಜೆಪಿಗೆ ಹೀನಾಯ ಸೋಲು

ಎನ್‌ಡಿಎ ವಿರುದ್ಧ ಪೈಪೋಟಿ ನೀಡುವ ಸಲುವಾಗಿ ಅಕಾಲಿ ದಳ ಪ್ರಾದೇಶಿಕ ಪಕ್ಷಗಳ ಮೈತ್ರಿಕೂಟ ರಚಿಸಲು ಮುಂದಾಗಿದ್ದು, ಇದಕ್ಕಾಗಿ ಬಲ್ವಿಂದರ್ ಸಿಂಗ್ ಭುಂದುರ್, ಪ್ರೇಮ್ ಸಿಂಗ್ ಚಂದುಮಜ್ರಾ ಹಾಗೂ ಸಿಕಂದರ್ ಸಿಂಗ್ ಮಲುಕಾ ಇರುವ ಮೂವರು ಸದಸ್ಯರ ನಿಯೋಗ ರಚಿಸಲಾಗಿದೆ.

ಕೇಂದ್ರದ ಹೊಸ ಕೃಷಿ  ಕಾನೂನುಗಳನ್ನು ವಿರೋಧಿಸಿ ಶಿರೋಮಣಿ ಅಕಾಲಿದಳ (ಎಸ್‌ಎಡಿ) ಈ ವರ್ಷದ ಸೆಪ್ಟೆಂಬರ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ತೊರೆದಿದೆ. ನವೆಂಬರ್ 26 ರಿಂದ ಸಾವಿರಾರು ರೈತರು ನವದೆಹಲಿಯ ವಿವಿಧ ಗಡಿಗಳಲ್ಲಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.ಕೇಂದ್ರದ ವಿವಾದಿತ ಕಾನೂನುಗಳ ವಿರುದ್ಧ ಡಿಸೆಂಬರ್ 8 ರಂದು “ಭಾರತ್ ಬಂದ್” ಗೆ ಕರೆ ನೀಡಿದ್ದಾರೆ.

ರೈತರ ಭಾರತ್ ಬಂದ್‌ಗೆ ಕಾಂಗ್ರೆಸ್, ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ಡಿಎಂಕೆ, ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್), ಆಮ್ ಆದ್ಮಿ ಪಾರ್ಟಿ ಸೇರಿ 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಗಳು ದೇಶಾದ್ಯಂತ ಮುಷ್ಕರಕ್ಕೆ ತಮ್ಮ ಬೆಂಬಲವನ್ನು ಘೋಷಿಸಿವೆ.


ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...